ನಿರ್ದೇಶಕನ ಕಿಡ್ನಾಪ್, ಹಲ್ಲೆ: ‘ಭೀಮ’ ಚಿತ್ರ ನಟಿ ಸೇರಿ 11 ಜನ ಜೈಲುಪಾಲು
ಸಿನಿಮಾ ನಿರ್ದೇಶಕನೊಬ್ಬನನ್ನು ಕಿಡ್ನಾಪ್ ಮಾಡಿ ಮನಬಂದಂತೆ ಹಲ್ಲೆ ಮಾಡಿ ಆತನ ಬಳಿ ಇದ್ದ ಚಿನ್ನಾಭರಣ, ಹಣ ದೋಚಿದ್ದ ಹನ್ನೊಂದು ಜನರ ಗ್ಯಾಂಗ್ ಅನ್ನು ಆಡುಗೋಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದುನಿಯಾ ವಿಜಯ್ ಅಭಿನಯದ ‘ಭೀಮ’ ಸಿನಿಮಾದಲ್ಲಿ ನಟಿಸಿದ್ದ ಐಶ್ವರ್ಯಾ ಸೇರಿ ಹನ್ನೊಂದು ಜನರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 26, 2026
- 6:32 pm
GST ಆಫೀಸರ್ ಹೆಸರಲ್ಲಿ ಲಕ್ಷ ಲಕ್ಷ ದೋಚಿದ ಹೌಸ್ ಕೀಪಿಂಗ್ ಸಿಬ್ಬಂದಿ! ಗುಟ್ಕಾ ವ್ಯಾಪಾರಿಗೆ ಬೆದರಿಸಿ ವಂಚನೆ
ಬೆಂಗಳೂರಿನಲ್ಲಿ ಜಿಎಸ್ಟಿ ಅಧಿಕಾರಿಗಳ ಸೋಗಿನಲ್ಲಿ ಗುಟ್ಕಾ ವ್ಯಾಪಾರಿಗೆ ವಂಚನೆ ನಡೆದಿದೆ. ಜಿಎಸ್ಟಿ ಕಚೇರಿಯ ಹೊರಗುತ್ತಿಗೆ ಹೌಸ್ಕೀಪಿಂಗ್ ಸಿಬ್ಬಂದಿಯಾಗಿದ್ದ ದಾದಾಪೀರ್ ಮತ್ತು ನಾಗರಾಜ್ ನಕಲಿ ಗುರುತಿನ ಚೀಟಿ ಬಳಸಿ 5 ಲಕ್ಷ ರೂ. ಸುಲಿಗೆ ಮಾಡಿದ್ದಾರೆ. ಬನಶಂಕರಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಸಾರ್ವಜನಿಕರು ಇಂತಹ ಬೆದರಿಕೆಗಳಿಗೆ ಜಗ್ಗದಂತೆ ಪೊಲೀಸರು ಮನವಿ ಮಾಡಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 26, 2026
- 7:49 am
ಬೆಂಗಳೂರಿನ ಚಿಕ್ಕಪೇಟೆಯ ಹಾರ್ಡ್ವೇರ್ ಗೋಡೌನ್ಗೆ ಬೆಂಕಿ!
ಅಗ್ನಿ ಅವಘಡದ ಪರಿಣಾಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಮೂಡಿದೆ. ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ, ಕುಂಬಾರಪೇಟೆ ಪ್ರದೇಶದ ಕಿರಿದಾದ ರಸ್ತೆಗಳಿಂದಾಗಿ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಲು ಸವಾಲಾಗಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 25, 2026
- 12:38 pm
Bengaluru: ಹನಿಟ್ರ್ಯಾಪ್ ಕೇಸ್ ಆರೋಪಿ ಯುವತಿಯಿಂದ ಸಾಮೂಹಿಕ ಅತ್ಯಾಚಾರ ದೂರು
ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಪ್ರಕರಣದ ಆರೋಪಿ ಯುವತಿಯೊಬ್ಬಳು ತನ್ನ ಮೇಲೆ ಗ್ಯಾಂಗ್ರೇಪ್ ನಡೆದಿದೆ ಎಂದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ಸಂಬಂಧ ನಿಖಿಲ್ ಮತ್ತು ಡಿಕ್ಸನ್ ಸಾಂಡ್ರಾ ಎಂಬ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪಾರ್ಟಿಯೊಂದಕ್ಕೆ ಕರೆದೊಯ್ದು ಬಲವಂತವಾಗಿ ಮಾದಕವಸ್ತು ನೀಡಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಯುವತಿ ಆರೋಪಿಸಿದ್ದು, ಈ ಪ್ರಕರಣವು ನಗರದಲ್ಲಿ ಸಂಚಲನ ಮೂಡಿಸಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 23, 2026
- 2:33 pm
ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಸಿಸಿಬಿ ವಶಕ್ಕೆ
ಮುಡಾ (MUDA) ಹಗರಣ ಬಯಲಿಗೆಳೆದ ಪ್ರಸಿದ್ಧಿಯಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇದೀಗ ರಾಜ್ಯ ಸರ್ಕಾರದ ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ ಆರೋಪ ಮಾಡಿದ್ದು, ಇದು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಇದೀಗ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 20, 2026
- 4:03 pm
ರಾಜ್ಯದಲ್ಲಿ ಮ್ಯೂಲ್ ಅಕೌಂಟ್ಗಳಿಂದ ಕೋಟ್ಯಂತರ ರೂ ವ್ಯವಹಾರ: ಸೈಬರ್ ಕಾರ್ಯಚರಣೆಯಲ್ಲಿ ಸ್ಫೋಟಕ ಸತ್ಯ ಬಯಲು
ರಾಜ್ಯದಲ್ಲಿ ಮ್ಯೂಲ್ ಬ್ಯಾಂಕ್ ಅಕೌಂಟ್ಗಳ ವಿರುದ್ಧ ಸೈಬರ್ ಕಮಾಂಡ್ ವಿಭಾಗದ ಅಧಿಕಾರಿಗಳು ಸಮರ ಸಾರಿದ್ದು, ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ ಸದ್ಯ ನೂರಾರು ಮ್ಯೂಲ್ ಬ್ಯಾಂಕ್ ಅಕೌಂಟ್ಗಳನ್ನು ಪತ್ತೆ ಮಾಡಿದ್ದಾರೆ. ಈ ಅಕೌಂಟ್ಗಳಿಂದ ಕೋಟ್ಯಂತರ ರೂ ವ್ಯವಹಾರ ನಡೆದಿರುವುದು ತನಿಖೆಯಲ್ಲಿ ಬಯಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 18, 2026
- 8:32 pm
ನಾನು ಸತ್ತರೆ ನಿನ್ನ ಯಾರು ನೋಡಿಕೊಳ್ಳುತ್ತಾರೆ: ಪತ್ನಿಯನ್ನ ಕೊಂದ ಇಸ್ರೋ ನಿವೃತ್ತ ನೌಕರ
ನಿವೃತ್ತ ಇಸ್ರೋ ನೌಕರ ತಮ್ಮ ಪತ್ನಿಯನ್ನ ಉಸಿರುಗಟ್ಟಿಸಿ ಕೊಲೆ ಮಾಡಿರುವಂತಹ ಘಟನೆ ಬೆಂಗಳೂರಿನ ಆವಲಹಳ್ಳಿಯಲ್ಲಿ ನಡೆದಿದೆ. ಪ್ರಾಥಮಿಕ ವಿಚಾರಣೆ ವೇಳೆ ಪತ್ನಿಯನ್ನ ಕೊಲೆ ಮಾಡಿದ್ದೇಕೆ ಎಂದು ಭಯಾಕನ ಸತ್ಯ ಬಯಲಾಗಿದೆ. ಆಲವಲಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಘಟನೆಯ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 18, 2026
- 3:17 pm
ಬಡ್ತಿ ವಿಚಾರಕ್ಕೆ ವಿದ್ಯಾರ್ಥಿಗಳ ಮುಂದೆಯೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಶಿಕ್ಷಕಿ
ಬಸವನಗುಡಿ ಖಾಸಗಿ ಶಾಲೆಯೊಂದರಲ್ಲಿ ಪ್ರಾಂಶುಪಾಲರು (ಉಮ್ಮಿಯ ಕುಲಸುಂ) ಮತ್ತು ಶಿಕ್ಷಕಿ (ರೇಷ್ಮಾ) ನಡುವೆ ಗಂಭೀರ ಕಿತ್ತಾಟ ನಡೆದಿದೆ. ಶಿಕ್ಷಕಿಗೆ ಸಿಕ್ಕ ಬಡ್ತಿ ಮತ್ತು ಪ್ರಶಂಸೆ ಪ್ರಾಂಶುಪಾಲರ ಅಸಮಾಧಾನಕ್ಕೆ ಕಾರಣವಾಗಿತ್ತು. ವಿದ್ಯಾರ್ಥಿಗಳ ಮುಂದೆಯೇ ನಡೆದ ಮಾತಿನ ಚಕಮಕಿ ಬಳಿಕ ಹೊಡೆದಾಟಕ್ಕೆ ತಿರುಗಿದೆ. ಪ್ರಾಂಶುಪಾಲರು ಹೊರಗಿನವರನ್ನು ಕರೆಸಿ ಹಲ್ಲೆ ನಡೆಸಿದ್ದಾರೆಂದು ಶಿಕ್ಷಕಿ ಆರೋಪಿಸಿದ್ದಾರೆ. ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ, ತನಿಖೆ ನಡೆಯುತ್ತಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 17, 2026
- 7:57 pm
ನಕಲಿ ದಾಖಲೆ ಸೃಷ್ಟಿಸಿ ಕೆಎಸ್ಆರ್ಟಿಸಿ ಸಿಬ್ಬಂದಿ ವರ್ಗಾವಣೆ: ಪರಿಶೀಲನೆ ಬಳಿಕ ಅಸಲಿ ಸತ್ಯ ಬಯಲು
ಇತ್ತೀಚೆಗೆ ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಮತ್ತೊಂದು ವರ್ಗಾವಣೆ ನಡೆದಿದೆ. ವರ್ಗಾವಣೆ ಕೋರಿ ಅರ್ಜಿ ಸಲ್ಲಿಸದಿದ್ದರೂ ವರ್ಗಾವಣೆ ಮಾಡಿರುವುದು ವಿಚಿತ್ರ. ಸದ್ಯ ಈ ವಿಚಾರವಾಗಿ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 16, 2026
- 8:16 pm
ಅಕ್ರಮ ಆಸ್ತಿ ಗಳಿಕೆ: ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; ಕೋಟ್ಯಂತರ ರೂ ಪತ್ತೆ
ಕರ್ನಾಟಕದ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಇಂದು ಲೋಕಾಯುಕ್ತ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೋಟಿಗಟ್ಟಲೆ ನಗದು, ಚಿನ್ನಾಭರಣ, ಸ್ಥಿರಾಸ್ತಿ ಪತ್ತೆಯಾಗಿದೆ. ಬೆಂಗಳೂರು, ದಾವಣಗೆರೆ, ಧಾರವಾಡದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ಭಾರಿ ಸಂಪತ್ತು ಪತ್ತೆಯಾಗಿದ್ದು, ತನಿಖೆ ಮುಂದುವರೆದಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 12, 2026
- 7:04 pm
ಸಿ.ಜೆ. ರಾಯ್ ಸತ್ತಿದ್ದು ಐಟಿ ಅಧಿಕಾರಿಗಳ ಕಿರುಕುಳದಿಂದಲ್ಲ?: ರಿವೀಲ್ ಆಯ್ತು ಅಸಲಿ ಸತ್ಯ
ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಆರಂಭದಲ್ಲಿ ಐಟಿ ಅಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ಆರೋಪಿಸಲಾಗಿತ್ತಾದರೂ, ಎಸ್ಐಟಿ ತನಿಖೆಯಲ್ಲಿ ಇದಕ್ಕೆ ಯಾವುದೇ ಸಾಕ್ಷ್ಯ ದೊರೆತಿಲ್ಲ. ಡೈರಿಯಲ್ಲಿಯೂ ಉಲ್ಲೇಖವಿಲ್ಲ, ಘಟನೆ ದಿನ ವಿಚಾರಣೆಯೂ ನಡೆದಿರಲಿಲ್ಲ. ಬದಲಿಗೆ, ರಾಯ್ ಅವರ ವ್ಯಾಪಾರದಲ್ಲಿನ ಕುಸಿತ ಮತ್ತು ಆರ್ಥಿಕ ನಷ್ಟವೇ ಸಾವಿಗೆ ಮುಖ್ಯ ಕಾರಣವಿರಬಹುದು ಎಂದು ತನಿಖಾ ತಂಡ ಊಹಿಸುತ್ತಿದ್ದು, ಆ ದಿಕ್ಕಿನಲ್ಲಿ ತನಿಖೆ ಮುಂದುವರಿದಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 11, 2026
- 6:32 pm
ಬೆಂಗಳೂರಿನಲ್ಲಿ ಶಾಲಾ ಬಸ್ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ
ಬೆಂಗಳೂರಿನ ಥಣಿಸಂದ್ರ ಬಳಿ ನಡೆದ ಭೀಕರ ಶಾಲಾ ಬಸ್ ಅಪಘಾತದಲ್ಲಿ ಇಬ್ಬರು ಮಕ್ಕಳು ದುರ್ಮರಣಕ್ಕೀಡಾಗಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ತಮ್ಮ ಬೈಕ್ನಲ್ಲಿ ಹಾಲು ತರಲು ತೆರಳುವಾಗ ಶಾಲಾ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಸದ್ಯ ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Feb 11, 2026
- 3:26 pm