ಲೋಕಾಯುಕ್ತ ದಾಳಿ ವೇಳೆ ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆ
ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ಮನೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಇದರಲ್ಲಿ ಸ್ಥಿರಾಸ್ತಿ, ಚರಾಸ್ತಿ, ನಾಲ್ಕು ಮನೆಗಳು, ಕೃಷಿ ಜಮೀನು, ಚಿನ್ನ, ನಗದು ಮತ್ತು ಎಫ್ಡಿ ಸೇರಿವೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ 13 ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 24, 2025
- 10:37 pm
ಬಿಕ್ಲು ಶಿವ ಕೊಲೆ ಕೇಸ್ನಲ್ಲಿ BJP ಶಾಸಕ ಭೈರತಿ ಬಸವರಾಜ್ಗೆ ಮತ್ತಷ್ಟು ಸಂಕಷ್ಟ?
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ಕೋಕಾ ಕಾಯ್ದೆಯನ್ನು ತಿರಸ್ಕರಿಸಿದರೂ ಗೃಹ ಇಲಾಖೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿದ್ಧವಾಗಿದೆ. ಸುಪ್ರೀಂ ಕೋರ್ಟ್ ಕೋಕಾ ಕಾಯ್ದೆಯನ್ನು ಅನ್ವಯಿಸಿದರೆ ಭೈರತಿ ಬಸವರಾಜ್ಗೆ ಜಾಮೀನುರಹಿತ ಕಠಿಣ ಶಿಕ್ಷೆ ಎದುರಾಗಲಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 24, 2025
- 7:12 pm
ಬೆಂಗಳೂರಿಗೆ ಬ್ರೆಡ್ನಲ್ಲಿ ಬರುತ್ತಿತ್ತು ಡ್ರಗ್ಸ್! ನೈಜಿರಿಯಾ ಮಹಿಳೆಯ ಬಂಧನ
ಬೆಂಗಳೂರಿನಲ್ಲಿ ಡ್ರಗ್ ಮಾರಾಟ ಮಾಡುವವರು ದಿನಕ್ಕೊಂದು ದಾರಿ ಹುಡುಕುತ್ತಿದ್ದಾರೆ. ಟೀ ಪೌಡರ್ ಪಾಕೆಟ್, ಚಾಕೊಲೇಟ್ಗಳನ್ನು ಡ್ರಗ್ಸ್ ಪೂರೈಕೆ ಮಾಡುತ್ತಿದ್ದುದು ಈ ಹಿಂದೆ ಬಯಲಾಗಿತ್ತು. ಇದೀಗ ಬ್ರೆಡ್ನಲ್ಲೂ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ಖತರ್ನಾಕ್ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ಇಬ್ಬರು ಕಿಲಾಡಿ ಕಳ್ಳರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 24, 2025
- 7:57 am
ಬೆಳ್ಳಂ ಬೆಳಿಗ್ಗೆ ಬಿರಿಯಾನಿ ತಿನ್ನಲು ಹೋದವರಿಗೆ ಭರ್ಜರಿ ಶಾಕ್: ಕಾಲೇಜು ವಿದ್ಯಾರ್ಥಿಗಳ ಅಡ್ಡಗಟ್ಟಿ ದರೋಡೆ
ಹೊಸಕೋಟೆ ಬಿರಿಯಾನಿ ತಿನ್ನಲು ಹೋಗಿದ್ದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ದರೋಡೆ ಮಾಡಿದ್ದಾರೆ. ಮೊಬೈಲ್ ಬೈಕ್ ಕಿತ್ತುಕೊಂಡು ಅಟ್ಟಹಾಸ ಮೆರೆದಿದ್ದಾರೆ. ಯುಪಿಐ ಮೂಲಕ ಹಣ ವರ್ಗಾಯಿಸಿಕೊಂಡಿದ್ದಲ್ಲದೆ, ಅವರನ್ನು ಒಂದು ಗಂಟೆ ಕಾಲ ಒತ್ತೆಯಾಳಾಗಿ ಕೂಡ ಇಟ್ಟುಕೊಂಡಿದ್ದರು ಎನ್ನಲಾಗಿದೆ. ದರೋಡೆಕೋರರ ಪೈಕಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದವರಿಗಾಗಿ ಶೋಧ ನಡೆಯುತ್ತಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 23, 2025
- 3:23 pm
Bengaluru: ವೀಕ್ಡೇಸ್ನಲ್ಲಿ ಪ್ರೊಫೆಸರ್, ವಾರಾಂತ್ಯ ಬಂತಂದ್ರೆ ಖತರ್ನಾಕ್ ಕಳ್ಳಿ!
ಮದುವೆ ಚೌಟ್ರಿಗಳನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಕನ್ನಡ ಪ್ರಾಧ್ಯಾಪಕಿಯನ್ನ ಬೆಂಗಳೂರಲ್ಲಿ ಪೊಲೀಸರು ಬಂಧಿಸಿದ್ದಾರೆ. ವಾರಪೂರ್ತಿ ಖಾಸಗಿ ಕಾಲೇಜಿನಲ್ಲಿ ಕನ್ನಡ ಪಾಠ ಮಾಡುತ್ತಿದ್ದ ಈಕೆ, ವಾರಾಂತ್ಯದಲ್ಲಿ ಮಾತ್ರ ಕಳ್ಳತನ ನಡೆಸುತ್ತಿದ್ದಳು ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ವಿಚಾರಣೆ ವೇಳೆ ಒಟ್ಟು ಮೂರು ಪ್ರಕರಣಗಳಲ್ಲಿ ಈಕೆ ಭಾಗಿಯಾಗಿರೋದು ಗೊತ್ತಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 23, 2025
- 1:06 pm
ಇರುಳು ಕುರುಡು ಸಮಸ್ಯೆ ಎಂದು ಹಗಲಿನಲ್ಲೇ ಕಿರುತೆರೆ ನಟನ ಮನೆಗೆ ಕನ್ನ ಹಾಕಿದ ಅಂತಾರಾಜ್ಯ ಕಳ್ಳ!
ಬೆಂಗಳೂರಿನಲ್ಲಿ ಇರುಳು ಕುರುಡು ಸಮಸ್ಯೆಯಿದ್ದ ಕಳ್ಳನೊಬ್ಬ ಹಗಲಲ್ಲೇ ಬೀಗ ಹಾಕಿದ ಮನೆಗಳನ್ನು ದೋಚುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಕಿರುತೆರೆ ನಟ ಪ್ರವೀಣ್ ಮನೆಯಲ್ಲಿ ಕನ್ನ ಹಾಕಿದ್ದ ಈತ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ವಿಚಾರಣೆ ವೇಳೆ, ಈತ ಅಂತಾರಾಜ್ಯ ಕಳ್ಳನಾಗಿದ್ದು, ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿ ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ದೋಚಿದ್ದು ಬೆಳಕಿಗೆ ಬಂದಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 23, 2025
- 12:59 pm
ಬೆಂಗಳೂರು ಚಂದ್ರಾಲೇಔಟ್ನಲ್ಲಿ ಪುಂಡರ ಹಾವಳಿ: ರಸ್ತೆ ಅಡ್ಡಗಟ್ಟಿ ಬರ್ತ್ಡೇ ಆಚರಣೆ, ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸಕ್ಕೆ ಮಿತಿಯಿಲ್ಲದಾಗಿದೆ. ಚಂದ್ರಾಲೇಔಟ್ ವ್ಯಾಪ್ತಿಯಲ್ಲಿ ಕೆಲ ಪುಂಡರು ನಡು ರಸ್ತೆಯಲ್ಲೇ ಬೈಕ್ಗಳನ್ನು ನಿಲ್ಲಿಸಿ ಬರ್ತ್ಡೆ ಆಚರಿಸಿದ್ದಲ್ಲದೆ, ವಾಹನ ಸವಾರರನ್ನು ತಡೆದಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಘಟನೆಯ ವಿಡಿಯೋ ಇದೀಗ ವೈರಲ್ ಆಗುತ್ತಿದ್ದು, ಪುಂಡರನ್ನು ಗುರುತಿಸಿ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 23, 2025
- 8:08 am
ಪೂರ್ತಿ ವಿಡಿಯೋ ಬೇಕಾದ್ರೆ ಫಾಲೋ- ಲೈಕ್ ಮಾಡುವಂತೆ ಪೋಸ್ಟ್ ಹಾಕುವವರೇ ಹುಷಾರ್
ಸೋಶಿಯಲ್ ಮಿಡೀಯಾದಲ್ಲಿ ಇತ್ತೀಚಿಗೆ ಲೈಕ್, ಕಾಮೆಂಟ್, ಫಾಲೋಗೋಸ್ಕರ ಹಲವಾರು ಅನೇಕ ರೀತಿಯ ಸರ್ಕಸ್, ರಿಸ್ಕ್ ಗಳನ್ನ ತೆಗೆದುಕೊಳ್ಳುತ್ತಿದ್ದಾರೆ.ಇದರಲ್ಲಿ ಒಂದಷ್ಟು ಜನ ಅಡ್ಡದಾರಿ ಕೂಡ ಹಿಡಿದ್ದಾರೆ. ಅಂತಹ ಸೋಷಿಯಲ್ ಮೀಡಿಯಾ ಅಕೌಂಟ್ ಗಳ ಬಳಕೆ ಮಾಡುವ ಕೆಲವರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲು ಮಾಡಿ ಶಾಕ್ ಕೊಟ್ಟಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 21, 2025
- 7:30 pm
ಬೆಂಗಳೂರಿನಲ್ಲೊಂದು ಘೋರ ದುರಂತ: ನಿರ್ಮಾಣ ಹಂತದ ಕಟ್ಟಡದಿಂದ ಬ್ರಿಕ್ಸ್ ಬಿದ್ದು ಮಗು ಸಾವು
ಬೆಂಗಳೂರಿನ ಎಚ್ಎಎಲ್ನ ಚಿನ್ನಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಹಾಲೋ ಬ್ರಿಕ್ಸ್ ಬಿದ್ದು 4 ವರ್ಷದ ಮಗು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿವೆ. ನಾಲ್ಕನೇ ಮಹಡಿಯಿಂದ ಇಟ್ಟಿಗೆಗಳು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಸದ್ಯ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 18, 2025
- 9:19 pm
ಹುಡುಗಿಯರ ಮೊಬೈಲ್ ನಂಬರ್ ಕೇಳಿದ್ದಕ್ಕೆ ಫೈಟ್: ಪೊಲೀಸ್ ಠಾಣೆ ಮೆಟ್ಟಿಲೇರಿದ ಪಬ್ ಗಲಾಟೆ
ಹುಡುಗಿಯರ ಬಳಿ ಮೊಬೈಲ್ ನಂಬರ್ ಕೇಳಿದ ವಿಚಾರಕ್ಕೆ ಶುರುವಾದ ಕಿರಿಕ್ ಫೈಟ್ ಹಂತಕ್ಕೆ ಹೋಗಿರುವ ಘಟನೆ ಬೆಂಗಳೂರಿನ ನಾಗರಭಾವಿ ರಸ್ತೆಯಲ್ಲಿರುವ ಪಬ್ನಲ್ಲಿ ನಡೆದಿದೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ದೊಡ್ಡ ಗಲಾಟೆ ಹಂತಕ್ಕೆ ಹೋಗಿದ್ದ ಸಂದರ್ಭ ಪಬ್ ಸಿಬ್ಬಂದಿ ಮತ್ತು ಪೊಲೀಸರು ಎಲ್ಲವನ್ನು ತಿಳಿಗೊಳಿಸುವ ಯತ್ನ ಮಾಡಿದ್ದಾರೆ. ಬಳಿಕ ಘಟನೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು-ಪ್ರತಿದೂರುಗಳು ದಾಖಲಾಗಿವೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 18, 2025
- 7:13 pm
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಬೆಚ್ಚಿಬಿದ್ದ ಕೈದಿಗಳು: ಮೊಬೈಲ್, ಗಾಂಜಾ, ಆಯುಧಗಳು ಜಪ್ತಿ
ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಕರ್ನಾಟಕದ ಜೈಲುಗಳಲ್ಲಿ ಮೆಗಾ ಕಾರ್ಯಾಚರಣೆ ನಡೆಸಲಾಗಿದೆ. ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ವಿವಿಧ ಜೈಲುಗಳಲ್ಲಿ ಮೊಬೈಲ್ ಫೋನ್ಗಳು, ಚಾಕುಗಳು ಮತ್ತು ಗಾಂಜಾ ಸೇರಿದಂತೆ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 36 ಗಂಟೆಗಳ ಕಾಲ ನಡೆದ ಈ ದಾಳಿಯಲ್ಲಿ ಕೈದಿಗಳು ನಡೆಸುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 17, 2025
- 12:53 pm
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
IT Raid on Shilpa Shetty Pub; ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿರುವ, ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಬ್ಯಾಸ್ಟಿಯನ್ ಪಬ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ದಾಳಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಈಗಾಗಲೇ ಕೆಲವು ಪ್ರಕರಣಗಳನ್ನು ಎದುರಿಸುತ್ತಿರುವುದರಿಂದ, ಈ ದಾಳಿಯು ಅವುಗಳ ಮುಂದುವರಿದ ಭಾಗವೇ ಎಂಬ ಪ್ರಶ್ನೆ ಮೂಡಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 17, 2025
- 12:08 pm