ಬೆಂಗಳೂರಿನಲ್ಲಿ ನಡೆದ ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ ಹೇಗಿತ್ತು ನೋಡಿ
ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಅಣಕು ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು. ಅಗ್ನಿಶಾಮಕ, ಗೃಹರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ತಂಡಗಳು ದುರಂತ ಸನ್ನಿವೇಶಗಳಲ್ಲಿ ಪೀಡಿತರನ್ನು ರಕ್ಷಿಸುವ ವಿಧಾನಗಳನ್ನು ಪ್ರದರ್ಶಿಸಿದವು. ಗಾಯಾಳುಗಳನ್ನು ಎತ್ತರದಿಂದ ಸುರಕ್ಷಿತವಾಗಿ ಕೆಳಗಿಳಿಸಲು ರೋಪ್ ತಂತ್ರಗಳು, ಪ್ರಥಮ ಚಿಕಿತ್ಸೆ ಮತ್ತು ಆಸ್ಪತ್ರೆಗೆ ಸಾಗಿಸುವ ಪ್ರಕ್ರಿಯೆಗಳನ್ನು ಅಭ್ಯಾಸ ಮಾಡಲಾಯಿತು. ಈ ಡ್ರಿಲ್ ವಿಪತ್ತು ನಿರ್ವಹಣೆಗೆ ತಂಡಗಳ ಸನ್ನದ್ಧತೆಯನ್ನು ಪರಿಶೀಲಿಸಿತು.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 28, 2026
- 9:25 pm
ಎಂ.ಜಿ. ರೋಡ್ನಲ್ಲಿರುವ ಪ್ರತಿಷ್ಠಿತ ಹೋಟೆಲ್ನಲ್ಲಿ ಯುವತಿ ಮೇಲೆ ಹಲ್ಲೆ; ಮ್ಯಾನೇಜರ್ ಮೇಲೆ ಬಟ್ಟೆ ಹರಿಯಲು ಯತ್ನಿಸಿದ ಆರೋಪ
ಬೆಂಗಳೂರಿನ ಎಂಜಿ ರಸ್ತೆಯ ತಂದೂರ್ ಹೋಟೆಲ್ನಲ್ಲಿ ಯುವತಿ ಕೀರ್ತಿ ಮೇಲೆ ಹೋಟೆಲ್ ಮ್ಯಾನೇಜರ್ ರವಿ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗ್ರಾಹಕರೊಂದಿಗೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು, ಮ್ಯಾನೇಜರ್ ಯುವತಿಯ ಬಟ್ಟೆ ಹರಿಯಲು ಯತ್ನಿಸಿದ್ದಾನೆಂಬ ಆರೋಪವಿದೆ. ಹಲಸೂರು ಪೊಲೀಸರು ಮ್ಯಾನೇಜರ್ ರವಿ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ತೀವ್ರಗೊಳಿಸಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 28, 2026
- 6:44 pm
ರಾಜಸ್ಥಾನದಲ್ಲಿ ಗಲಾಟೆ, ಬೆಂಗಳೂರಲ್ಲಿ ಬೆದರಿಕೆ: ಪಾರ್ಕ್ನಲ್ಲೇ ವ್ಯಕ್ತಿ ಆತ್ಮಹತ್ಯೆ ಕೇಸ್ಗೆ ಸ್ಫೋಟಕ ಟ್ವಿಸ್ಟ್
ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ರಾಜಸ್ಥಾನದಲ್ಲಿ ಶುರುವಾದ ಜಗಳ, ಬೆಂಗಳೂರಿಗೂ ತಲುಪಿ ಕೊಲೆ ಬೆದರಿಕೆ ಹಾಗೂ ಹಲ್ಲೆ ಆರೋಪ ಕೇಳಿಬಂದಿತ್ತು. ಇದೇ ವಿಚಾರವಾಗಿ ಮನನೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಐವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 27, 2026
- 3:45 pm
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ವೈರ್ ಕಟ್ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಚ್ಚರಿಯ ಕಾರಣ ಬಹಿರಂಗ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವಣ ಏಪ್ರಿಲ್ 24 ರ ಪಂದ್ಯದ ವೇಳೆ ಸಿಸಿಟಿವಿ ಕೇಬಲ್ ಕಟ್ ಮಾಡಿದ್ದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಆರೋಪಿಗಳು ಆ ಕೃತ್ಯ ಎಸಗಲು ಕಾರಣ ಏನೆಂಬುದೂ ಪತ್ತೆಯಾಗಿದೆ. ಹಾಗಾದರೆ, ಭಾರಿ ಭದ್ರತಾ ಲೋಪ ಉಂಟಾಗಲು ಕಾರಣ ಏನು? ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದ್ದೇನು? ಇಲ್ಲಿದೆ ವಿವರ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 27, 2026
- 11:38 am
ಆರ್ಸಿಬಿ vs ಜಿಟಿ ಪಂದ್ಯದ ವೇಳೆ ನಡೆದಿತ್ತು ಆಘಾತಕಾರಿ ಘಟನೆ: ಕಂಗೆಟ್ಟು ಕುಳಿತಿದ್ದ ಪೊಲೀಸರು!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಆರ್ಸಿಬಿ vs ಜಿಟಿ ಪಂದ್ಯದ ವೇಳೆ ಭಾರೀ ಭದ್ರತಾ ಲೋಪ ಬೆಳಕಿಗೆ ಬಂದಿದ್ದು, ದುಷ್ಕರ್ಮಿಗಳು 240 ಸಿಸಿಟಿವಿಗಳ ಸಂಪರ್ಕ ಕಡಿತಗೊಳಿಸಿದ ಘಟನೆ ಬಹಿರಂಗವಾಗಿದೆ. ಈ ಹಿನ್ನೆಲೆ ಇಬ್ಬರನ್ನು ಬಂಧಿಸಲಾಗಿದೆ. ಅಷ್ಟೇ ಅಲ್ಲದೆ ಅದೇ ಪಂದ್ಯದ ವೇಳೆ ಟಿಕೆಟ್ಗಳನ್ನು ಬ್ಲ್ಯಾಕ್ನಲ್ಲಿ ಮಾರುತ್ತಿದ್ದ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 27, 2026
- 10:26 am
ಪೊಲೀಸ್ ಠಾಣೆ ಮೆಟ್ಟಿಲೇರಿದ ಜನಿವಾರ ದಂಗಲ್: ವಿವಾದ ಬೆನ್ನಲ್ಲೇ ಮೂವರು ವಶಕ್ಕೆ
ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಸದ್ಯ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವಿದ್ಯಾರ್ಥಿ ನೀಡಿದ ದೂರಿನ ಅನ್ವಯ ಮಡಿವಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಸದ್ಯ ಮೂವರು ಸಿಬ್ಬಂದಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೊಂದೆಡಡೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ರನ್ನು ಭೇಟಿ ಮಾಡಿ ವಿಪಕ್ಷ ನಾಯಕ ಆರ್. ಅಶೋಕ್ ಕೂಡ ದೂರು ನೀಡಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 24, 2026
- 7:07 pm
ಬೆಂಗಳೂರು: ನಡುರಸ್ತೆಯಲ್ಲೇ ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಬೆಂಗಳೂರಿನ ಕೋರಮಂಗಲದಲ್ಲಿ ಪಬ್ ಒಳಗೆ ಕಿರಿಕಿರಿ ಮಾಡಿದ ಎಂಬ ಆರೋಪದ ಮೇಲೆ ಯುವಕನಿಗೆ ಇಬ್ಬರು ಯುವತಿಯರು ನಡುರಸ್ತೆಯಲ್ಲೇ ಹಲ್ಲೆ ಮಾಡಿದ್ದಾರೆ. ಪೊಲೀಸರು ಬಿಡಿಸಲು ಪ್ರಯತ್ನಿಸಿದರೂ ಕೇಳದೆ ಯುವತಿಯರು ಯುವಕನಿಗೆ ಹೊಡೆದಿದ್ದು, ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 24, 2026
- 2:54 pm
ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ಮನೆಗೆ ನುಗ್ಗಿ ಅಟ್ಯಾಕ್ ಮಾಡಿದ ಗ್ಯಾಂಗ್!
ದಾವಣಗೆರೆ ಉಪಚುನಾವಣೆಯ ಅಭ್ಯರ್ಥಿ, ಯಂಗ್ ಸ್ಟಾರ್ ಎಂಪೋರಿಯಂ ಪಕ್ಷದ ಅಧ್ಯಕ್ಷ ಶಹಬಾಜ್ ಖಾನ್ ಬೆಂಗಳೂರಿನಲ್ಲಿ ಹಲ್ಲೆಗೆ ಒಳಗಾಗಿದ್ದಾರೆ. ಪಕ್ಷದಿಂದ ವಜಾಗೊಳಿಸಿದ್ದಕ್ಕೆ ಓರ್ವ ಮಹಿಳೆ ಸೇರಿ 5-6 ಜನರ ಗ್ಯಾಂಗ್ ದಾಳಿ ನಡೆಸಿದೆ ಎನ್ನಲಾಗಿದೆ. ಈ ಘಟನೆಗೆ ಮುನ್ನ ಬೆದರಿಕೆ ಕರೆಗಳೂ ಬಂದಿದ್ದರಿಂದ ಈ ಬಗ್ಗೆ ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ಗ್ಯಾಂಗ್ ಅಭ್ಯರ್ಥಿಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 24, 2026
- 12:52 pm
ಬೆನ್ನಿಗೆ ಚೂರಿ ಹಾಕಿದ ಬೆಸ್ಟ್ ಫ್ರೆಂಡ್: ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು
ಬೆಂಗಳೂರಿನ ಜಿಮ್ ಟ್ರೈನರ್ ನಿತೇಶ್ ಅವರ ಪತ್ನಿ, ಸ್ನೇಹಿತ ನವೀನ್ ಜೊತೆ ನಾಪತ್ತೆಯಾಗಿದ್ದಾರೆ. ಈ ಹಿಂದೆ ನಿತೇಶ್ ಎಚ್ಚರಿಸಿದ್ದರೂ ಪತ್ನಿ ಸಂಪರ್ಕ ಮುಂದುವರಿಸಿದ್ದರು. ಪೊಲೀಸರು ಪತ್ತೆಹಚ್ಚಿದಾಗಲೂ, ಪತ್ನಿ ಗಂಡನ ಬಳಿ ಹೋಗಲು ನಿರಾಕರಿಸಿ, ಪಿಜಿಗೆ ಹೋಗುವುದಾಗಿ ಹೇಳಿದ್ದಾರೆ. ಇದರಿಂದ ಕಂಗಾಲಾಗಿರುವ ನಿತೇಶ್, ತನಗೆ ಮೋಸವಾಗಿದೆ ಎಂದು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಈ ಘಟನೆ ಸಂಚಲನ ಮೂಡಿಸಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 22, 2026
- 3:54 pm
ಕಾಂಗ್ರೆಸ್ ಶಾಸಕ ಹ್ಯಾರಿಸ್ ಕುಟುಂಬಕ್ಕೆ ಇ.ಡಿ ಶಾಕ್: ನಲಪಾಡ್ಗೆ ಉರುಳಾಯ್ತಾ ಬಿಟ್ ಕಾಯಿನ್ ಹಗರಣ!
ಬಿಟ್ಕಾಯಿನ್ ಹಗರಣದ ತನಿಖೆ ತೀವ್ರಗೊಂಡಿದ್ದು, ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಮತ್ತು ನಲಪಾಡ್ ನಿವಾಸಗಳಲ್ಲಿ ಇಡಿ ಅಧಿಕಾರಿಗಳು 15 ಗಂಟೆಗಳ ಕಾಲ ಶೋಧ ನಡೆಸಿದ್ದಾರೆ. ಹ್ಯಾಕರ್ ಶ್ರೀಕಿ ಜೊತೆಗಿನ ಅಕ್ರಮ ಹಣಕಾಸು ನಂಟು ಮತ್ತು 10 ಲಕ್ಷ ರೂ. ವರ್ಗಾವಣೆಯ ಕುರಿತು ಡಿಜಿಟಲ್ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶಾಸಕರ ಪುತ್ರನಿಗೆ ವಿಚಾರಣೆಯ ಭೀತಿ ಎದುರಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 21, 2026
- 7:13 am
ಬಿಟ್ ಕಾಯಿನ್ ಹಗರಣಕ್ಕೂ ಶಾಸಕ ಹ್ಯಾರಿಸ್ಗೂ ಏನು ಸಂಬಂಧ? ಕಾಂಗ್ರೆಸ್ ಶಾಸಕರ, ನಲಪಾಡ್ ಮನೆ ಮೇಲೆ ಇಡಿ ದಾಳಿ ಮಾಡಿದ್ದೇಕೆ?
ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹ್ಯಾಕರ್ ಶ್ರೀಕಿ ಜೊತೆಗಿನ ಅಕ್ರಮ ಹಣಕಾಸು ನಂಟು ಆರೋಪ ಮತ್ತು ಬಿಟ್ಕಾಯಿನ್ ಕಳವು ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ 12 ಕಡೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 20, 2026
- 6:11 pm
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್ಕಾಯಿನ್ ನಂಟು!
ಬಿಟ್ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನಲ್ಲಿ ದಾಳಿ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಡ್ ಮಾತ್ರವಲ್ಲದೇ ಮಾಜಿ ಕೇಂದ್ರ ಸಚಿವ ಕೆ. ರೆಹಮಾನ್ ಖಾನ್ ಅವರ ಮೊಮ್ಮಗ ಮಹಮ್ಮದ್ ಹಕೀಬ್ ಖಾನ್ ಅವರ ನಿವಾಸಗಳ ಮೇಲೆ ಶೋಧ ಕಾರ್ಯಾಚರಣೆ ನಡೆದಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 20, 2026
- 4:47 pm