ಗೆಳೆಯನ ಮೊಬೈಲ್ ಬಚ್ಚಿಟ್ಟು ಮಜಾಕ್: ತಮಾಷೆಯಲ್ಲೇ ಹೋಯ್ತು ಸ್ನೇಹಿತನ ಜೀವ, ಆಗಿದ್ದೇನು?
ಮಜಾಕ್ ಮಾಡಲೆಂದು ಗೆಳಯನೋರ್ವ ತನ್ನ ಸ್ನೇಹಿತನ ಮೊಬೈಲ್ ಬಚ್ಚಿಟ್ಟಿದ್ದು, ಬಳಿಕ ಈ ತಮಾಷೆಗೆ ಓರ್ವನ ಜೀವವೇ ಹೋಗಿದೆ. ಸಣ್ಣ ಪುಟ್ಟ ತಮಾಷೆ ವಿಚಾರ ಆಗಿದ್ರೂ ಪರವಾಗಿಲ್ಲ. ಅದು ಜಸ್ಟ್ ಮಾತಿನಲ್ಲೇ ಇರಬೇಕು. ಅದರ ಬದಲು ಮಜಾಕ್ನಲ್ಲಿ ಕೈ ಮೈ ಮುಟ್ಟಿ ಜಗಳ ಮಾಡಿದರೆ ಏನಾಗುತ್ತೆ ಎನ್ನುವುದಕ್ಕೆ ಬೆಂಗಳೂರಿನಲ್ಲಿ ನಡೆದ ಈ ಘಟನೆ ಸಾಕ್ಷಿ. ಅಷ್ಟಕ್ಕೂ ಆಗಿದ್ದೇನು ಎನ್ನುವ ವಿವರ ಇಲ್ಲಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: May 15, 2026
- 10:24 pm
ಬ್ಲಾಸ್ಟ್ ಬೆದರಿಕೆ, ಜಿಲೆಟಿನ್ ಪತ್ತೆ: ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಖಾಕಿಗೆ ಟೆನ್ಷನ್ ತಂದ ಭದ್ರತೆ
ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಭದ್ರತಾ ಆತಂಕ ಸೃಷ್ಟಿಯಾದ ಪ್ರಸಂಗ ನಡೆದಿದೆ. ಬ್ಲಾಸ್ಟ್ ಬೆದರಿಕೆ ಕರೆ ಮತ್ತು ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣಗಳು ಪೊಲೀಸರಿಗೆ ತಲೆಬಿಸಿ ನೀಡಿವೆ. ಮಾನಸಿಕ ಅಸ್ವಸ್ಥನಿಂದ ಬಂದ ಬೆದರಿಕೆ ಕರೆ ಮತ್ತು ದಾರಿಯಲ್ಲಿ ಸಿಕ್ಕ ಜಿಲೆಟಿನ್ ಬಗ್ಗೆ ತನಿಖೆ ಮುಂದುವರಿದಿದ್ದು, ಬೆಂಗಳೂರು ನಗರದ ಆಗ್ನೇಯ ವಿಭಾಗ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು ಇದರ ಜವಾಬ್ದಾರಿ ಹೊತ್ತಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: May 10, 2026
- 5:59 pm
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: ತನಿಖೆ ಬಗ್ಗೆ ಕೇಂದ್ರ ವಲಯ ಡಿಐಜಿ ಮಾಹಿತಿ
ಬೆಂಗಳೂರು ಹೊರವಲಯದಲ್ಲಿ, ಪ್ರಧಾನಿ ಮೋದಿ ಭೇಟಿ ನೀಡುವ ಮುನ್ನ ಆರ್ಟ್ ಆಫ್ ಲಿವಿಂಗ್ ಆಶ್ರಮದ ಬಳಿ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಈ ಘಟನೆ ಮೋದಿ ಆಗಮನಕ್ಕೆ ಒಂದೂವರೆ ಗಂಟೆ ಮುನ್ನ ಬೆಳಕಿಗೆ ಬಂದಿದೆ. ಬೆಂಗಳೂರು ಮತ್ತು ರಾಮನಗರ ಪೊಲೀಸರು ಜಂಟಿ ತನಿಖೆ ನಡೆಸುತ್ತಿದ್ದು, ಘಟನೆಯ ಹಿಂದಿನ ಉದ್ದೇಶದ ಬಗ್ಗೆ ಶೋಧ ಮುಂದುವರಿದಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: May 10, 2026
- 4:26 pm
ಪ್ರಧಾನಿ ಮೋದಿ ಸಂಚರಿಸೋ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ವ್ಯಕ್ತಿ ಪೊಲೀಸ್ ವಶಕ್ಕೆ
ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಿದ ಬೆಂಗಳೂರು ಹೊರವಲಯದ ಕಗ್ಗಲಿಪುರದ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಈ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಒಬ್ಬ ಶಂಕಿತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ನಗರ ಮತ್ತು ರಾಮನಗರ ಪೊಲೀಸರು ಜಂಟಿ ತನಿಖೆ ಕೈಗೊಂಡಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: May 10, 2026
- 3:01 pm
ಪೂಜಾ ದತ್ತ ಸಾವಿಗೆ ಕಾರಣ ಇನ್ನೂ ನಿಗೂಢ: ಮರಣೋತ್ತರ ಪರೀಕ್ಷೆ ವರದಿಯಲ್ಲೂ ಇಲ್ಲ ಸ್ಪಷ್ಟತೆ
ಬೆಂಗಳೂರಿನಲ್ಲಿ 34 ವರ್ಷದ ಖಾಸಗಿ ಕಂಪನಿ ಉದ್ಯೋಗಿ ಪೂಜಾ ದತ್ತ ಅವರ ನಿಗೂಢ ಸಾವಿನ ತನಿಖೆಯೇ ಸವಾಲಾಗಿ ಪರಿಣಮಿಸಿದೆ. ಆಡುಗೋಡಿ ಬಾಡಿಗೆ ಮನೆಯಲ್ಲಿ ಅರೆಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೃತದೇಹದ ಮರಣೋತ್ತರ ವರದಿಯಲ್ಲೂ ಸಾವಿಗೆ ಸ್ಪಷ್ಟ ಕಾರಣ ಸಿಕ್ಕಿಲ್ಲ. ಈ ನಡುವೆ ಪೊಲೀಸರು ಆಕೆಯ ಹಣಕಾಸು ಮೂಲ ಮತ್ತು ಮೊಬೈಲ್ ಕರೆಗಳ ಬಗ್ಗೆ ತನಿಖೆ ನಡೆಸುತ್ತಿದ್ದು, FSL ವರದಿಗಾಗಿ ಕಾಯುತ್ತಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: May 7, 2026
- 11:37 am
15 ದಿನದಲ್ಲಿ 65 ಕೋಟಿ ಮೌಲ್ಯದ ಡ್ರಗ್ಸ್ ಸೀಜ್!: ಬೆಂಗಳೂರಿಗೆ ಡ್ರಗ್ಸ್ ಹರಿದು ಬರುತ್ತಿರುವುದು ಏಕೆ? ಪೊಲೀಸರು ಪತ್ತೆಹಚ್ಚಿದ 11 ಶಾಕಿಂಗ್ ಕಾರಣಗಳು!
ಬೆಂಗಳೂರಿನಲ್ಲಿ ಮಾದಕ ದ್ರವ್ಯಗಳ ಭಾರಿ ಹಾವಳಿ ಹೆಚ್ಚಿದ್ದು, ಕೇವಲ 15 ದಿನಗಳಲ್ಲಿ ₹65 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿಯಾಗಿದೆ. ಪೊಲೀಸರ ತೀವ್ರ ಕಾರ್ಯಾಚರಣೆ ನಡುವೆಯೂ ದೇಶ-ವಿದೇಶಗಳಿಂದ ಮಾದಕ ವಸ್ತುಗಳು ಸರಬರಾಜಾಗುತ್ತಿವೆ. ಐಟಿ ಉದ್ಯೋಗಿಗಳು, ಕಾಲೇಜು ವಿದ್ಯಾರ್ಥಿಗಳು ಮತ್ತು ಶ್ರೀಮಂತ ವರ್ಗದ ಯುವಜನತೆ ಈ ಜಾಲದ ಮುಖ್ಯ ಗುರಿಯಾಗಿದ್ದಾರೆ. ಯುವ ಜನತೆಯ ಅತಿಯಾದ ಬೇಡಿಕೆ, ಥೈಲ್ಯಾಂಡ್ ನಂಟು ಹಾಗೂ ಬೆಂಗಳೂರು ಟ್ರಾನ್ಸಿಟ್ ಹಬ್ ಆಗಿರುವುದು ದಂಧೆಗೆ ಪ್ರಮುಖ ಕಾರಣಗಳಾಗಿವೆ. ಪೊಲೀಸರು ಕಿಂಗ್ಪಿನ್ಗಳ ಬೇಟೆ ಮುಂದುವರಿಸಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: May 6, 2026
- 11:58 am
ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆ: ಮನೆಯ ಮೇಲ್ಚಾವಣಿ, ಸಿಮೆಂಟ್ ಇಟ್ಟಿಗೆ ಬಿದ್ದು ವ್ಯಕ್ತಿ ಸಾವು
ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಬಲಿಯಾದವರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಮನೆ ಛಾವಣಿ ಕುಸಿದ ಪರಿಣಾಮ ಮಲಗಿದ್ದ ವ್ಯಕ್ತಿ ಬಲಿಯಾಗಿದ್ದಾರೆ. ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ, ವಿದ್ಯುತ್ ಶಾಕ್ನಿಂದ ಇಬ್ಬರು ಪ್ರಾಣ ಕಳೆದುಕೊಂಡಿದ್ದ ಘಟನೆ ನಿನ್ನೆ ವರದಿಯಾಗಿತ್ತು. ನಗರದಾದ್ಯಂತ ಭಾರೀ ಮಳೆಯಿಂದ ಹಲವು ಜೀವಗಳು ಬಲಿಯಾಗಿರೋದು, ಮಳೆಗಾಲದ ಸುರಕ್ಷತೆಯ ಬಗ್ಗೆ ಆತಂಕ ಹೆಚ್ಚಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 30, 2026
- 11:46 am
ಬೆಂಗಳೂರಿನಲ್ಲಿ ಪೊಲೀಸರ ಮೆಗಾ ಡ್ರಗ್ ಬೇಟೆ: ಒಂದೇ ವಾರದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ
ಬೆಂಗಳೂರು ನಗರ ಪೊಲೀಸರು ಮಾದಕ ವಸ್ತು ಜಾಲದ ವಿರುದ್ಧ ಯುದ್ಧ ಸಾರಿದ್ದು, ಕಳೆದ ಒಂದು ವಾರದಲ್ಲಿ ಸಿಸಿಬಿ ಸೇರಿದಂತೆ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ನಡೆಸಿದ ದಾಳಿಯಲ್ಲಿ ಒಟ್ಟು 50 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಎಂಡಿಎಂಎ, ಎಲ್ಎಸ್ಡಿ ಮತ್ತು ಬ್ರೌನ್ ಶುಗರ್ ಸೇರಿದಂತೆ ಭಾರೀ ಪ್ರಮಾಣದ ಅಮಲು ಪದಾರ್ಥಗಳು ಪತ್ತೆಯಾಗಿವೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 29, 2026
- 12:43 pm
ಬೆಂಗಳೂರಿನಲ್ಲಿ ನಡೆದ ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ ಹೇಗಿತ್ತು ನೋಡಿ
ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಅಣಕು ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು. ಅಗ್ನಿಶಾಮಕ, ಗೃಹರಕ್ಷಕ ದಳ ಮತ್ತು ನಾಗರಿಕ ರಕ್ಷಣಾ ತಂಡಗಳು ದುರಂತ ಸನ್ನಿವೇಶಗಳಲ್ಲಿ ಪೀಡಿತರನ್ನು ರಕ್ಷಿಸುವ ವಿಧಾನಗಳನ್ನು ಪ್ರದರ್ಶಿಸಿದವು. ಗಾಯಾಳುಗಳನ್ನು ಎತ್ತರದಿಂದ ಸುರಕ್ಷಿತವಾಗಿ ಕೆಳಗಿಳಿಸಲು ರೋಪ್ ತಂತ್ರಗಳು, ಪ್ರಥಮ ಚಿಕಿತ್ಸೆ ಮತ್ತು ಆಸ್ಪತ್ರೆಗೆ ಸಾಗಿಸುವ ಪ್ರಕ್ರಿಯೆಗಳನ್ನು ಅಭ್ಯಾಸ ಮಾಡಲಾಯಿತು. ಈ ಡ್ರಿಲ್ ವಿಪತ್ತು ನಿರ್ವಹಣೆಗೆ ತಂಡಗಳ ಸನ್ನದ್ಧತೆಯನ್ನು ಪರಿಶೀಲಿಸಿತು.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 28, 2026
- 9:25 pm
ಎಂ.ಜಿ. ರೋಡ್ನಲ್ಲಿರುವ ಪ್ರತಿಷ್ಠಿತ ಹೋಟೆಲ್ನಲ್ಲಿ ಯುವತಿ ಮೇಲೆ ಹಲ್ಲೆ; ಮ್ಯಾನೇಜರ್ ಮೇಲೆ ಬಟ್ಟೆ ಹರಿಯಲು ಯತ್ನಿಸಿದ ಆರೋಪ
ಬೆಂಗಳೂರಿನ ಎಂಜಿ ರಸ್ತೆಯ ತಂದೂರ್ ಹೋಟೆಲ್ನಲ್ಲಿ ಯುವತಿ ಕೀರ್ತಿ ಮೇಲೆ ಹೋಟೆಲ್ ಮ್ಯಾನೇಜರ್ ರವಿ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗ್ರಾಹಕರೊಂದಿಗೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು, ಮ್ಯಾನೇಜರ್ ಯುವತಿಯ ಬಟ್ಟೆ ಹರಿಯಲು ಯತ್ನಿಸಿದ್ದಾನೆಂಬ ಆರೋಪವಿದೆ. ಹಲಸೂರು ಪೊಲೀಸರು ಮ್ಯಾನೇಜರ್ ರವಿ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ತೀವ್ರಗೊಳಿಸಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 28, 2026
- 6:44 pm
ರಾಜಸ್ಥಾನದಲ್ಲಿ ಗಲಾಟೆ, ಬೆಂಗಳೂರಲ್ಲಿ ಬೆದರಿಕೆ: ಪಾರ್ಕ್ನಲ್ಲೇ ವ್ಯಕ್ತಿ ಆತ್ಮಹತ್ಯೆ ಕೇಸ್ಗೆ ಸ್ಫೋಟಕ ಟ್ವಿಸ್ಟ್
ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ರಾಜಸ್ಥಾನದಲ್ಲಿ ಶುರುವಾದ ಜಗಳ, ಬೆಂಗಳೂರಿಗೂ ತಲುಪಿ ಕೊಲೆ ಬೆದರಿಕೆ ಹಾಗೂ ಹಲ್ಲೆ ಆರೋಪ ಕೇಳಿಬಂದಿತ್ತು. ಇದೇ ವಿಚಾರವಾಗಿ ಮನನೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಐವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 27, 2026
- 3:45 pm
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ವೈರ್ ಕಟ್ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಚ್ಚರಿಯ ಕಾರಣ ಬಹಿರಂಗ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವಣ ಏಪ್ರಿಲ್ 24 ರ ಪಂದ್ಯದ ವೇಳೆ ಸಿಸಿಟಿವಿ ಕೇಬಲ್ ಕಟ್ ಮಾಡಿದ್ದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಆರೋಪಿಗಳು ಆ ಕೃತ್ಯ ಎಸಗಲು ಕಾರಣ ಏನೆಂಬುದೂ ಪತ್ತೆಯಾಗಿದೆ. ಹಾಗಾದರೆ, ಭಾರಿ ಭದ್ರತಾ ಲೋಪ ಉಂಟಾಗಲು ಕಾರಣ ಏನು? ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದ್ದೇನು? ಇಲ್ಲಿದೆ ವಿವರ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Apr 27, 2026
- 11:38 am