Lokayukta Raid: ಆದಾಯಕ್ಕೂ ಮೀರಿ ಗಳಿಕೆ ಆರೋಪ; ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ
ಕರ್ನಾಟಕದ ವಿವಿಧೆಡೆ ಬುಧವಾರ ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆದಾಯ ಗಳಿಕೆ ಆರೋಪ ಕೇಳಿಬಂದ ಹಿನ್ನಲ್ಲೆ ಐಎಎಸ್ ಸೇರಿದಂತೆ ಹಲವು ಅಧಿಕಾರಿ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಆ ಮೂಲಕ ಬೆಳ್ಳಂ ಬೆಳಗ್ಗೆ ಶಾಕ್ ನೀಡಲಾಗಿದೆ. ಎಲ್ಲೆಲ್ಲಿ ಮತ್ತು ಯಾರ ಯಾರ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ ಎಂಬ ಮಾಹಿತಿ ಇಲ್ಲಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jul 23, 2025
- 10:24 am
ಬಿಕ್ಲು ಶಿವ ಕೊಲೆ ಕೇಸ್: ಹತ್ಯೆಗೆ ಪ್ರಮುಖ ಕಾರಣ ಪತ್ತೆ ಮಾಡಿದ ಪೊಲೀಸರು! ಮತ್ತಷ್ಟು ರೋಚಕ ಅಂಶ ಬಯಲು
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಪೊಲೀಸರು ಶಾಸಕರ ಸುತ್ತಲಿನ ಸಾಕ್ಷ್ಯ ಪತ್ತೆಗೆ ಮುಂದಾಗಿದ್ದಾರೆ. ಇವತ್ತು ಮತ್ತೆ ಭೈರತಿ ವಿಚಾರಣೆಗೆ ಹಾಜರಾಗಬೇಕಿದ್ದು, ಬಂಧನ ಭೀತಿಯೂ ಇದೆ. ಇದರ ಜೊತೆಗೆ ಕೊಲೆಗೆ ಪ್ರಮುಖ ಕಾರಣ ಪತ್ತೆಯಾಗಿದ್ದು, ಪ್ರಕರಣದ ಮತ್ತಷ್ಟು ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jul 23, 2025
- 6:56 am
ಶುಶ್ರುತಿ ಸಹಕಾರ ಸೌಹಾರ್ದ ಬ್ಯಾಂಕ್ ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಇಡಿ ಎಂಟ್ರಿ: ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲಿಗೆ
Shushruti Souhardha Bank Fraud: ಅದು ಒಬ್ಬ ವ್ಯಕ್ತಿ ಸ್ಥಾಪಿಸಿದ ಸಹಕಾರ ಸೌಹಾರ್ದ ಬ್ಯಾಂಕ್. ಅದನ್ನು ನಂಬಿದ್ದ ಜನರು ನೂರಾರು ಕೋಟಿ ರೂಪಾಯಿ ಹೂಡಿಕೆ ಮಾಡಿದ್ದರು. ಕೊನೆಗೆ ಆತ ಕುಟುಂಬ ಸಹಿತ ಮೋಸಮಾಡಿಬಿಟ್ಟ. ಈಗ ಅದೇ ಪ್ರಕರಣಕ್ಕೆ ಜಾರಿ ನಿರ್ದೇಶನಾಲಯ ಪ್ರವೇಶಿಸಿದ್ದು, ಕೇಸ್ ದಾಖಲಿಸಿ ಒಂದೇ ದಿನ 15ಕ್ಕೂ ಹೆಚ್ಚು ಕಡೆ ದಾಳಿ ಮಾಡಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jul 18, 2025
- 7:32 am
ಮಂಗಳೂರು: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆಂಗಳೂರಿನಲ್ಲಿ ಮೂವರ ಬಂಧನ
ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿದ್ದಾರೆ. ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡು ನಂತರ ಬ್ಲ್ಯಾಕ್ಮೇಲ್ ಮಾಡಿ ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ಮಾರತಹಳ್ಳಿ ಪೊಲೀಸರಿಗೆ ಸಂತ್ರಸ್ತೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jul 15, 2025
- 2:20 pm
ಉಗ್ರ ನಾಸಿರ್ನನ್ನು ಪೊಲೀಸ್ ಬಟ್ಟೆಯಲ್ಲಿ ಬಾಂಗ್ಲಾಕ್ಕೆ ಕಳುಹಿಸಲು ಪ್ಲಾನ್ ಮಾಡಿದ್ದ ASI ಪಾಷಾ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಲಷ್ಕರ್-ಎ-ತೊಯ್ಬಾ ಉಗ್ರ ನಾಸಿರ್ಗೆ ಸಹಾಯ ಮಾಡಿದ ಆರೋಪದ ಮೇಲೆ ಮೂವರನ್ನು ಎನ್ಐಎ ಬಂಧಿಸಿದೆ. ಆರೋಪಿಗಳು ನಾಸಿರ್ ಅವರನ್ನು ಜೈಲಿನಿಂದ ಪರಾರಿ ಮಾಡಲು ಯೋಜನೆ ರೂಪಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಅವರು ಪೊಲೀಸ್ ಯೂನಿಫಾರ್ಮ್ ಖರೀದಿಸಿ, ಪರಾರಿ ಯೋಜನೆ ರೂಪಿಸಿದ್ದರು. ನ್ಯಾಯಾಲಯವು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jul 14, 2025
- 6:03 pm
ಅಸಭ್ಯವಾಗಿ ಕಾಣುವಂತೆ ಯುವತಿಯರ ಫೋಟೋ, ವಿಡಿಯೋ ಚಿತ್ರೀಕರಿಸಿ ಪೋಸ್ಟ್: ವ್ಯಕ್ತಿಯ ಬಂಧನ
ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರ ಫೋಟೋ ಮತ್ತು ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಗೆ ಟ್ಯಾಗ್ ಮಾಡಿ ಯುವತಿಯೋರ್ವಳು ನೀಡಿದ್ದ ದೂರಿನ ಮೆರೆಗೆ ಸುಮೋಟೋ ಕೇಸ್ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jul 10, 2025
- 11:23 am
ಶಾಪಿಂಗ್ ಹೋಗಿದ್ದಕ್ಕೆ ಕೆಂಡಾಮಂಡಲ: ಪತ್ನಿಯನ್ನು ತುಳಿದು ಕೊಂದ ಪತಿ..!
ಗಂಡ ಹೆಂಡ್ತಿ ಇಬ್ಬರೂ ಬಿಇ ಪದದೀಧರರಾಗಿದ್ದು, ಇಬ್ಬರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದ್ರೆ, ಪತಿ ಇತ್ತೀಚೆಗೆ ಕೆಲಸ ಬಿಟ್ಟು ಮನೆಯಲ್ಲಿದ್ದ. ಹೆಂಡ್ತಿ ಮಾತ್ರ ಕೆಲಸಕ್ಕೆ ಹೋಗುತ್ತಿದ್ದಳು. ಹೀಗಿರುವಾಗ ಅದೇನಾಯ್ತೋ ಏನೋ ಪತ್ನಿ ಶಾಪಿಂಗ್ ಹೋಗಿದ್ದಕ್ಕೆ ಪತಿ ಕೆಂಡಾಮಂಡಲವಾಗಿದ್ದು, ಇದೇ ವಿಚಾರಕ್ಕೆ ಜಗಳ ಮಾಡಿ ಕೊನೆಗೆ ಆಕೆಯನ್ನು ತುಳಿದು ಭೀಕರವಾಗಿ ಕೊಲೆ ಮಾಡಿದ್ದಾನೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jul 9, 2025
- 4:42 pm
ಕರ್ನಾಟಕದ ಮೂವರು ಶಂಕಿತ ಉಗ್ರರನ್ನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ಎಲ್ಇಟಿ ಭಯೋತ್ಪಾದಕ ಟಿ ನಾಸೀರ್ಗೆ ನೆರವು ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರನ್ನ ಎನ್ಐಎ (NIA) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಬೆಂಗಳೂರು ಮತ್ತು ಕೋಲಾರದಲ್ಲಿ 5 ಕಡೆ ದಾಳಿ ನಡೆಸಿ ಮೂವರನ್ನ ಬಂಧಿಸಿ ವಿಚಾರಣೆಗೊಳಪಡಿಸಿದಾಗ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಹೀಗಾಗಿ ಇನ್ನಷ್ಟು ಹೆಚ್ಚಿನ ತನಿಖೆಗಾಗಿ ಮೂವರನ್ನು ಕೋರ್ಟ್ ಗೆ ಹಾಜರುಪಡಿಸಿ ವಶಕ್ಕೆ ನೀಡುವಂತೆ ಎನ್ಐಎ ಮನವಿ ಮಾಡಿದ್ದು, ಕೋರ್ಟ್ ಸಹ ಮೂವರನ್ನ ಎನ್ಐಎ ವಶಕ್ಕೆ ನೀಡಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jul 9, 2025
- 2:21 pm
ರೆಡಿಮೇಡ್ ಬಟ್ಟೆಗಳ ಪ್ಯಾಕ್ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ
ಅವರು ವಿದೇಶಿ ಪ್ರಜೆಗಳು. ಮೆಡಿಕಲ್ ವಿಸಾದಲ್ಲಿ ಭಾರತಕ್ಕೆ ಬಂದಿದ್ದರು. ಬಂದ ಕೆಲಸ ಮುಗಿಸಿಕೊಂಡು ಹೋಗುವುದು ಬಿಟ್ಟು ಅಕ್ರಮ ಎಸಗಿ ಸಿಕ್ಕಿಬಿದ್ದಿದ್ದಾರೆ. ನೈಜೀರಿಯಾ ಪ್ರಜೆಗಳಿಬ್ಬರು ಹೊಲಸು ಬುದ್ದಿ ತೋರಿಸಿ ಪೊಲೀಸರ ವಶವಾಗಿದ್ದಾರೆ. ರೆಡಿಮೇಡ್ ಬಟ್ಟೆಗಳ ಪ್ಯಾಕ್ಗಳಲ್ಲಿ ಬಚ್ಚಿಟ್ಟು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಗಳಿಂದ ಪೊಲೀಸರು ದಾಖಲೆ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jul 8, 2025
- 9:24 am
ಕೆಲಸದಾಕೆ ಜತೆ ಚಕ್ಕಂದ ಆಡ್ತಾನೆಂದು ಪತಿಗೆ ಚಟ್ಟ ಕಟ್ಟಿದ ಪತ್ನಿ: ಶವಕ್ಕೆ ಸ್ನಾನ ಮಾಡಿ ಮಲಗಿಸಿ ನಾಟಕ!
ಗಂಡ ಮದ್ಯಪಾನ ಮಾಡಿ ಬಂದು ಬಾತ್ರೂಮ್ನಲ್ಲಿ ಬಿದ್ದು ಗಾಯಗೊಂಡಿದ್ದ, ಸ್ನಾನ ಮಾಡಿ ಮಲಗಿಸಿದ್ದೆ, ಅಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಮಹಿಳೆಯ ಮಾತು ಕೇಳಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದ ಸುದ್ದಗುಂಟೆಪಾಳ್ಯ ಪೊಲೀಸರಿಗೆ ಮರಣೋತ್ತರ ಪರೀಕ್ಷೆ ವರದಿ ನೋಡಿದಾಗ ಆಘಾತ ಎದುರಾಗಿತ್ತು. ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಅಸಲಿ ಸತ್ಯ ಬಹಿರಂಗವಾಗಿದೆ. ಮನೆ ಕೆಲಸದಾಕೆ ಜತೆ ಸಲುಗೆಯಿಂದ ಇದ್ದುದಕ್ಕೆ ಪತ್ನಿಯೇ ಪತಿಯ ಕೊಲೆ ಮಾಡಿದ್ದು ಗೊತ್ತಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jul 4, 2025
- 2:30 pm
ಬ್ಯಾಂಕ್ನ ಡ್ರಾಫ್ಟ್ ಬಾಕ್ಸ್ನಲ್ಲಿದ್ದ ಚೆಕ್ಗಳು ಮಂಗಮಾಯ: ಕದ್ದ ಚೆಕ್ ಏನು ಮಾಡ್ತಾರೆ ಗೊತ್ತಾ? ನಿಜಕ್ಕೂ ಶಾಕ್ ಆಗ್ತೀರಾ
ಬಿಹಾರ, ಮಹಾರಾಷ್ಟ್ರದಲ್ಲಿ ವರದಿಯಾಗಿದ್ದ ಚೆಕ್ ಕಳ್ಳತನ ಪ್ರಕರಣ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ನಗರದ ಐಸಿಸಿಐ ಬ್ಯಾಂಕ್ನ ಎರಡು ಶಾಖೆಗಳಲ್ಲಿ ಚೆಕ್ ಹಾಕುವ ನೆಪದಲ್ಲಿ ಬಂದು ಗ್ರಾಹಕರ ಸುಮಾರು 50ಕ್ಕೂ ಹೆಚ್ಚು ಚೆಕ್ ಕಳ್ಳತನ ಮಾಡಿದ್ದಾರೆ. ಕದ್ದ ಚೆಕ್ಗಳಿಂದ ಕಳ್ಳರು ಹಣ ಹೇಗೆ ವಿತ್ ಡ್ರಾ ಮಾಡಿಕೊಳ್ಳುತ್ತಾರಾ ಅಂತ ಕೇಳಿದರೆ ದಂಗಾಗುತ್ತೀರಾ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jul 4, 2025
- 12:13 pm
357 ಬ್ಯಾಂಕ್ ಖಾತೆ ಸೈಬರ್ ವಂಚಕರಿಗೆ ಮಾರಾಟ ಮಾಡಿದ್ದ ಬೆಂಗಳೂರಿನ ಗ್ಯಾಂಗ್ ಪತ್ತೆ
ಕರ್ನಾಟಕ ಸರ್ಕಾರವು ಸೈಬರ್ ಕ್ರೈಂ ಅನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಪಣ ತೊಟ್ಟಿದೆ. ಅದರಲ್ಲಂತು, ಬೆಂಗಳೂರು ಪೊಲೀಸರು ಸೈಬರ್ ವಂಚಕರ ಮೇಲೆ ಹದ್ದಿನ ಕಣ್ಣು ಇಟ್ಟಿದ್ದಾರೆ. ಇದೀಗ, ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಅತಿದೊಡ್ಡ ಸೈಬರ್ ವಂಚರಕ ಗ್ಯಾಂಗ್ ಪತ್ತೆ ಹಚ್ಚಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Jul 3, 2025
- 9:43 am