ಪೂರ್ತಿ ವಿಡಿಯೋ ಬೇಕಾದ್ರೆ ಫಾಲೋ- ಲೈಕ್ ಮಾಡುವಂತೆ ಪೋಸ್ಟ್ ಹಾಕುವವರೇ ಹುಷಾರ್
ಸೋಶಿಯಲ್ ಮಿಡೀಯಾದಲ್ಲಿ ಇತ್ತೀಚಿಗೆ ಲೈಕ್, ಕಾಮೆಂಟ್, ಫಾಲೋಗೋಸ್ಕರ ಹಲವಾರು ಅನೇಕ ರೀತಿಯ ಸರ್ಕಸ್, ರಿಸ್ಕ್ ಗಳನ್ನ ತೆಗೆದುಕೊಳ್ಳುತ್ತಿದ್ದಾರೆ.ಇದರಲ್ಲಿ ಒಂದಷ್ಟು ಜನ ಅಡ್ಡದಾರಿ ಕೂಡ ಹಿಡಿದ್ದಾರೆ. ಅಂತಹ ಸೋಷಿಯಲ್ ಮೀಡಿಯಾ ಅಕೌಂಟ್ ಗಳ ಬಳಕೆ ಮಾಡುವ ಕೆಲವರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲು ಮಾಡಿ ಶಾಕ್ ಕೊಟ್ಟಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 21, 2025
- 7:30 pm
ಬೆಂಗಳೂರಿನಲ್ಲೊಂದು ಘೋರ ದುರಂತ: ನಿರ್ಮಾಣ ಹಂತದ ಕಟ್ಟಡದಿಂದ ಬ್ರಿಕ್ಸ್ ಬಿದ್ದು ಮಗು ಸಾವು
ಬೆಂಗಳೂರಿನ ಎಚ್ಎಎಲ್ನ ಚಿನ್ನಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಹಾಲೋ ಬ್ರಿಕ್ಸ್ ಬಿದ್ದು 4 ವರ್ಷದ ಮಗು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿವೆ. ನಾಲ್ಕನೇ ಮಹಡಿಯಿಂದ ಇಟ್ಟಿಗೆಗಳು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಸದ್ಯ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 18, 2025
- 9:19 pm
ಹುಡುಗಿಯರ ಮೊಬೈಲ್ ನಂಬರ್ ಕೇಳಿದ್ದಕ್ಕೆ ಫೈಟ್: ಪೊಲೀಸ್ ಠಾಣೆ ಮೆಟ್ಟಿಲೇರಿದ ಪಬ್ ಗಲಾಟೆ
ಹುಡುಗಿಯರ ಬಳಿ ಮೊಬೈಲ್ ನಂಬರ್ ಕೇಳಿದ ವಿಚಾರಕ್ಕೆ ಶುರುವಾದ ಕಿರಿಕ್ ಫೈಟ್ ಹಂತಕ್ಕೆ ಹೋಗಿರುವ ಘಟನೆ ಬೆಂಗಳೂರಿನ ನಾಗರಭಾವಿ ರಸ್ತೆಯಲ್ಲಿರುವ ಪಬ್ನಲ್ಲಿ ನಡೆದಿದೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ದೊಡ್ಡ ಗಲಾಟೆ ಹಂತಕ್ಕೆ ಹೋಗಿದ್ದ ಸಂದರ್ಭ ಪಬ್ ಸಿಬ್ಬಂದಿ ಮತ್ತು ಪೊಲೀಸರು ಎಲ್ಲವನ್ನು ತಿಳಿಗೊಳಿಸುವ ಯತ್ನ ಮಾಡಿದ್ದಾರೆ. ಬಳಿಕ ಘಟನೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು-ಪ್ರತಿದೂರುಗಳು ದಾಖಲಾಗಿವೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 18, 2025
- 7:13 pm
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಬೆಚ್ಚಿಬಿದ್ದ ಕೈದಿಗಳು: ಮೊಬೈಲ್, ಗಾಂಜಾ, ಆಯುಧಗಳು ಜಪ್ತಿ
ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಕರ್ನಾಟಕದ ಜೈಲುಗಳಲ್ಲಿ ಮೆಗಾ ಕಾರ್ಯಾಚರಣೆ ನಡೆಸಲಾಗಿದೆ. ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ವಿವಿಧ ಜೈಲುಗಳಲ್ಲಿ ಮೊಬೈಲ್ ಫೋನ್ಗಳು, ಚಾಕುಗಳು ಮತ್ತು ಗಾಂಜಾ ಸೇರಿದಂತೆ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 36 ಗಂಟೆಗಳ ಕಾಲ ನಡೆದ ಈ ದಾಳಿಯಲ್ಲಿ ಕೈದಿಗಳು ನಡೆಸುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 17, 2025
- 12:53 pm
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
IT Raid on Shilpa Shetty Pub; ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿರುವ, ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಬ್ಯಾಸ್ಟಿಯನ್ ಪಬ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ದಾಳಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಈಗಾಗಲೇ ಕೆಲವು ಪ್ರಕರಣಗಳನ್ನು ಎದುರಿಸುತ್ತಿರುವುದರಿಂದ, ಈ ದಾಳಿಯು ಅವುಗಳ ಮುಂದುವರಿದ ಭಾಗವೇ ಎಂಬ ಪ್ರಶ್ನೆ ಮೂಡಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 17, 2025
- 12:08 pm
ಡಿಜಿಟಲ್ ಅರೆಸ್ಟ್ ವಂಚನೆಗೆ ಹೆದರಿ ಫ್ಲಾಟ್, ಸೈಟ್ ಮಾರಿದ್ದಲ್ಲದೆ ಸಾಲ ಮಾಡಿ 2 ಕೋಟಿ ರೂ. ಕಳೆದುಕೊಂಡ ಮಹಿಳಾ ಟೆಕ್ಕಿ
ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆಗೆ ಬಲಿಯಾಗಿ 2 ಕೋಟಿ ರೂ. ಕಳೆದುಕೊಂಡಿದ್ದಾರೆ. ನಕಲಿ ಮುಂಬೈ ಪೊಲೀಸರು ಬ್ಲೂ ಡಾರ್ಟ್ ಹೆಸರಲ್ಲಿ ಕರೆ ಮಾಡಿದ್ದರಿಂದ ಹೆದರಿ ಫ್ಲಾಟ್, ಸೈಟ್ಗಳನ್ನು ಮಾರಿದ್ದಲ್ಲದೆ ಸಾಲ ಮಾಡಿ ಹಣ ನೀಡಿದ ನಂತರ ವಂಚನೆ ಅರಿತಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 16, 2025
- 12:39 pm
Bengaluru: ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್; ದರೋಡೆಗಿಳಿದಿದ್ದ ಗ್ಯಾಂಗ್ ಅರೆಸ್ಟ್
ದರೋಡೆ ಮತ್ತು ಬೆದರಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಕಲಿ ಪಿಎಸ್ಐ ಹಾಗೂ ಆತನ ಗ್ಯಾಂಗ್ನ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ವೇಷದಲ್ಲಿ ಮನೆಗೆ ನುಗ್ಗಿ ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ್ದ ನಾಲ್ವರ ತಂಡ ಹಣ ದರೋಡೆ ಮಾಡಿತ್ತು. ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳಿಂದ 1.37 ಲಕ್ಷ ನಗದು ಮತ್ತು ನಕಲಿ ಪೊಲೀಸ್ ಸಮವಸ್ತ್ರ ವಶಪಡಿಸಿಕೊಂಡಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 14, 2025
- 10:27 am
ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಫೈರಿಂಗ್: ಕೂದಲೆಳೆ ಅಂತರದಲ್ಲಿ ಬಚಾವ್!
ಬೆಂಗಳೂರಿನ ಬಸವನಗುಡಿಯ ಕೃಷ್ಣರಾವ್ ಪಾರ್ಕ್ನಲ್ಲಿ ಗುರುವಾರ ರಾತ್ರಿ ಉದ್ಯಮಿ ಮೇಲೆ ಏರ್ ಗನ್ನಿಂದ ದುಷ್ಕರ್ಮಿಗಳು ಫೈರಿಂಗ್ ಮಾಡಿರುವಂತಹ ಘಟನೆ ನಡೆದಿದೆ. ಸ್ನೇಹಿತರ ಭೇಟಿಗೆ ಬಂದಿದ್ದ ವೇಳೆ ದುರಂತ ನಡೆದಿದೆ. ಸದ್ಯ ಬಸವನಗುಡಿ ಹಾಗೂ ಸಿಸಿಬಿ ತಂಡದಿಂದ ಪ್ರಕರಣದ ತನಿಖೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 12, 2025
- 4:28 pm
ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಕೊಲೆ ಕೇಸ್ ಆರೋಪಿ ಪಲ್ಲವಿ ಕಾಟಕ್ಕೆ ಜೈಲು ಸಿಬ್ಬಂದಿಯೇ ಸುಸ್ತು
ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಕೊಲೆ ಆರೋಪಿ ಪತ್ನಿ ಪಲ್ಲವಿ ಪರಪ್ಪನ ಅಗ್ರಹಾರ ಜೈಲು ಸೇರಿ ಮುಕ್ಕಾಲು ವರ್ಷ ಕಳೆದಿದೆ. ಕೊಲೆ ಬಗ್ಗೆ ಕಿಂಚಿತ್ತೂ ಪಶ್ಚಾತ್ತಾಪವಿಲ್ಲದ ಆಕೆ, ತನ್ನ ವರ್ತನೆಯಿಂದ ಜೈಲು ಸಿಬ್ಬಂದಿಗೆ ತಲೆನೋವಾಗಿದ್ದಾರೆ. ಜೈಲಿನಿಂದ ಬಿಡುವಂತೆ ಆಗಾಗ ಕೂಗಾಡುತ್ತಿದ್ದು, ಪಲ್ಲವಿ ಕಾಟಕ್ಕೆ ಜೈಲಿನ ಮಹಿಳಾ ಸಿಬ್ಬಂದಿಯೇ ಸುಸ್ತಾಗಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 11, 2025
- 2:09 pm
ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್
ಬೆಂಗಳೂರು ಟೆಕ್ಕಿಯೊಬ್ಬರನ್ನು ಲೈಂಗಿಕ ಸಮಸ್ಯೆ ಪರಿಹಾರದ ನೆಪದಲ್ಲಿ ನಕಲಿ ಗುರೂಜಿ ವಿಜಯ್ ಮತ್ತು ಆತನ ಸಹಚರ 48 ಲಕ್ಷ ರೂ. ವಂಚಿಸಿದ್ದರು.ವಿಜಯ್ ಗುರೂಜಿಯನ್ನು ಈಗಾಗಲೇ ಬಂಧಿಸಿದ್ದ ಜ್ಞಾನ ಭಾರತಿ ಪೊಲೀಸರು ಇದೀಗ ಇನ್ನೋರ್ವನನ್ನೂ ತೆಲಂಗಾಣದಲ್ಲಿ ಬಂಧಿಸಿದ್ದಾರೆ. ಬಂಧಿತರು ಬೆಂಗಳೂರು, ತುಮಕೂರು ಸೇರಿದಂತೆ ಹಲವೆಡೆ ಈ ವಂಚನೆಯ ಜಾಲವನ್ನು ಹರಡಿಸಿದ್ದು, ಎಚ್ಚರದಿಂದಿರುವಂತೆ ಪೊಲೀಸ್ ಕಮಿಶ್ನರ್ ಸಲಹೆ ನೀಡಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 10, 2025
- 12:55 pm
ಚಾಲಕನ ಜೊತೆ ಸ್ನೇಹ, ಗೆಳೆಯನ ಮೇಲೂ ಮೋಹ: ಅತ್ಯಾಚಾರ ಕತೆ ಹೇಳಿ ಸಿಕ್ಕಿಬಿದ್ದಳಾ ಯುವತಿ?
ಬೆಂಗಳೂರಿನಲ್ಲಿ ಕ್ಯಾಬ್ ಚಾಲಕ ಮತ್ತು ಆತನ ಸ್ನೇಹಿತರಿಂದ ಗ್ಯಾಂಗ್ ರೇಪ್ ಆರೋಪ ಮಾಡಿದ ಕೇರಳ ಯುವತಿಯ ದೂರು ಹಲವು ತಿರುವು ಪಡೆದಿದೆ. ಕ್ಯಾಬ್ ಚಾಲಕನ ವಿಚಾರಣೆ ವೇಳೆ ಕೆಲ ಸ್ಫೋಟಕ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಆತನೂ ಕೇರಳ ಮೂಲದವನಾಗಿದ್ದು, ಇವರಿಬ್ಬರಿಗೂ ಪರಿಚಯವಿತ್ತು. ಬಾಯ್ ಫ್ರೆಂಡ್ ಬಳಿ ಸತ್ಯ ಮುಚ್ಚಿಡಲು ಹೋಗಿ ಯುವತಿ ಅತ್ಯಾಚಾರ ಆರೋಪ ಮಾಡಿದಳಾ ಎನ್ನುವ ಅನುಮಾನವೀಗ ಮೂಡಿದ್ದು, ತನಿಖೆ ಮುಂದುವರಿದಿದೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 8, 2025
- 7:16 pm
ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ಬೆಂಗಳೂರಿನ ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ.ಪಾಳ್ಯದಲ್ಲಿ ದಾರುಣ ಘಟನೆಯೊಂದು ನಡೆದಿದೆ. 14 ವರ್ಷದ ಮಗನನ್ನು ಕೊಂದು ಬಳಿಕ ತಾಯಿ ಮತ್ತು ಅಜ್ಜಿಯೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸಾಲ ಹೆಚ್ಚಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
- ಪ್ರಜ್ವಲ್ ಕುಮಾರ್ ಎನ್ ವೈ
- Updated on: Dec 8, 2025
- 3:01 pm