ಸಚಿವ ಕೃಷ್ಣಭೈರೇಗೌಡ ಸೂಚನೆಗೂ ಡೋಂಟ್ ಕೇರ್: ಬಿತ್ತು ಕಾರ್ಯಪಾಲಕ ಅಭಿಯಂತರರ ವಿಕೆಟ್
ಸಚಿವ ಕೃಷ್ಣಭರೇಗೌಡ ಅವರು ಬೆಂಗಳೂರು ನಗರವನ್ನು ಕೊಂಚ ಮಟ್ಟಿಗೆ ಬದಲಾವಣೆ, ಅಭಿವೃದ್ಧಿ ಮಾಡಲು ಮುಂದಾಗಿದ್ದು, ಅಧಿಕಾರಿಗಳ ಸರಣಿ ಸಭೆ ಮೂಲಕ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಆದ್ರೆ, ಮಾತು ಕೇಳದ ಹಾಗೂ ಸಲಹೆ ಸೂಚನೆಗಳನ್ನು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇದೀಗ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಬಳಿಕ ಎರಡನೇ ವಿಕೆಟ್ ಪತನಗೊಂಡಿದೆ.
- Pramod Shastri G
- Updated on: Sep 1, 2026
- 11:19 pm
ನಾಗೇಂದ್ರ ಜತೆಗೆ ಜನಾರ್ದನ ರೆಡ್ಡಿ. ರೇಣುಕಾಚಾರ್ಯಗೂ ಸಂಕಷ್ಟ?
ಇಡಿ ಸಹ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಪತ್ರ ಬರೆದಿದೆ. ಇದಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯಪಾಲರು ಸಹ ನಾಗೇಂದ್ರ ವಿರುದ್ಧದ ಪ್ರಾಸಿಕ್ಯೂಷನ್ ಅನುನತಿಗೆ ಸಚಿವ ಸಂಪುಟ ಅಭಿಪ್ರಾಯ ಕೇಳಿದ್ದಾರೆ. ನಾಗೇಂದ್ರ ಜೊತೆ ಜನಾರ್ಧನ ರೆಡ್ಡಿ ಹಾಗೂ ರೇಣುಕಾಚಾರ್ಯ ವಿರುದ್ದದ ಕೇಸ್ ಬಗ್ಗೆ ಸಂಪುಟ ಅಭಿಪ್ರಾಯ ಕೇಳಿದೆ ಎಂದು ತಿಳಿದುಬಂದಿದೆ. ಹೀಗಾಗಿ ರಾಜ್ಯಪಾಲರ ನಡೆಗೆ ಸರ್ಕಾರ ಕೌಂಟರ್ ಕೊಡುವ ಸಾಧ್ಯತೆಗಳಿವೆ.
- Pramod Shastri G
- Updated on: Aug 29, 2026
- 3:13 pm
ಸಚಿವ ನಾಗೇಂದ್ರ ರಾಜೀನಾಮೆಗೆ ಹೈಕಮಾಂಡ್ ಸಂದೇಶ! ಒಂದೆರಡು ದಿನದಲ್ಲಿ ಪದತ್ಯಾಗ ಸಾಧ್ಯತೆ
ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ ಇದೀಗ ದೆಹಲಿ ಅಂಗಳ ತಲುಪಿದೆ. ಪಕ್ಷ ಮತ್ತು ಸರ್ಕಾರದ ಹಿತದೃಷ್ಟಿಯಿಂದ ರಾಜೀನಾಮೆ ನೀಡುವುದು ಸೂಕ್ತ ಎಂಬ ಸಂದೇಶವನ್ನು ಹೈಕಮಾಂಡ್ ರಾಜ್ಯ ನಾಯಕರಿಗೆ ರವಾನಿಸಿದೆ ಎಂಬುದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಒಂದೆರಡು ದಿನಗಳಲ್ಲಿ ನಾಗೇಂದ್ರ ಪದತ್ಯಾಗ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
- Pramod Shastri G
- Updated on: Aug 28, 2026
- 6:46 am
ನೇಪಾಳ ಪ್ರವಾಹ: ರಕ್ಷಣೆ ಸಂಬಂಧ ಪ್ರವಾಸಿಗರ ಮಾಹಿತಿ ಕೋರಿದ ಮುಖ್ಯಮಂತ್ರಿಗಳ ಕಚೇರಿ
Nepal Floods: ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರ್ಕಾರ ತುರ್ತು ಕ್ರಮ ಕೈಗೊಂಡಿದೆ. ಸಂಕಷ್ಟದಲ್ಲಿರುವ ಪ್ರವಾಸಿಗರು ಮತ್ತು ಅವರ ಸಂಬಂಧಿಕರು ವಿವರಗಳನ್ನು ಸಲ್ಲಿಸಲು ಗೂಗಲ್ ಫಾರ್ಮ್ ಹಾಗೂ ಹೆಲ್ಪ್ಲೈನ್ ಸಂಖ್ಯೆ ಸಂಬಂಧ ಮುಖ್ಯಮಂತ್ರಿ ಕಚೇರಿ ಮಾಹಿತಿ ನೀಡಿದೆ. ತೊಂದರೆಗೆ ಸಿಲುಕಿರುವ ಎಲ್ಲರನ್ನೂ ಆದಷ್ಟು ಬೇಗ ಪತ್ತೆಹಚ್ಚಿ ಕರೆತರುತ್ತೇವೆ ಎಂದು ಸಿಎಂ ಡಿಕೆಶಿ ತಿಳಿಸಿದ್ದಾರೆ.
- Pramod Shastri G
- Updated on: Aug 27, 2026
- 7:17 pm
ಶಿಕ್ಷಣ ಸುಧಾರಣೆಗೆ ಮಹತ್ವದ ಹೆಜ್ಜೆ ಇಟ್ಟ ಸರ್ಕಾರ: ಯು.ಟಿ. ಖಾದರ್ಗೆ ಮತ್ತೊಂದು ದೊಡ್ಡ ಜವಾಬ್ದಾರಿ
ಕರ್ನಾಟಕ ಸರ್ಕಾರವು ಶಿಕ್ಷಣ ಸುಧಾರಣೆ ಮತ್ತು ವಿದ್ಯಾರ್ಥಿ ಸಮಸ್ಯೆಗಳ ಕುರಿತು ಅಧ್ಯಯನ ಮಾಡಲು ಐವರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಯು.ಟಿ. ಖಾದರ್ ನೇತೃತ್ವದ ಈ ಸಮಿತಿಯು ಸರ್ಕಾರಿ ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಸುಧಾರಣೆ, ಖಾಸಗಿ ಶಾಲಾ ಶುಲ್ಕ ನಿಯಂತ್ರಣ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗಟ್ಟುವಿಕೆ ಮತ್ತು ಶಿಕ್ಷಣದ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಕುರಿತು ಒಂದು ತಿಂಗಳೊಳಗೆ ವರದಿ ಸಲ್ಲಿಸಲಿದೆ.
- Pramod Shastri G
- Updated on: Aug 27, 2026
- 12:18 pm
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ ಸಚಿವ ನಾಗೇಂದ್ರ
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತವನ್ನು ಸಚಿವ ನಾಗೇಂದ್ರ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ತಮ್ಮನ್ನು ಅನಗತ್ಯವಾಗಿ ಟಾರ್ಗೆಟ್ ಮಾಡಲಾಗುತ್ತಿದ್ದು, ಇದರಿಂದ ಪಕ್ಷಕ್ಕೆ ಮುಜುಗರವಾಗುವುದು ಬೇಡ ಎಂದು ಹೇಳಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ.
- Pramod Shastri G
- Updated on: Aug 26, 2026
- 11:14 am
ಬಿಡದಿ ಟೌನ್ಶಿಪ್ ಯೋಜನೆಗೆ ಹೈಕೋರ್ಟ್ನಿಂದ ಯಾವುದೇ ಸಾಮಾನ್ಯ ತಡೆ ಇಲ್ಲ: ಪ್ರಾಧಿಕಾರ ಸ್ಪಷ್ಟನೆ
ಬಿಡದಿ ಟೌನ್ಶಿಪ್ ಯೋಜನೆಗೆ ಹೈಕೋರ್ಟ್ ಬ್ರೇಕ್ ಹಾಕಿದೆ ಎಂಬ ವದಂತಿಗಳ ನಡುವೆ, ಭೂಸ್ವಾಧೀನ ಪ್ರಕ್ರಿಯೆಗೆ ಯಾವುದೇ ಸಾಮಾನ್ಯ ತಡೆಯಾಜ್ಞೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆದರೂ, ರಿಟ್ ಅರ್ಜಿ ಸಲ್ಲಿಸಿರುವ ರೈತರ ಜಮೀನುಗಳಿಗೆ ಮಾತ್ರ ಪ್ರತ್ಯೇಕ ಕಾನೂನು ರಕ್ಷಣೆ ಇದೆ. ಪ್ರಾಧಿಕಾರವು ಪರಿಹಾರ ಅವಾರ್ಡ್ ಸಿದ್ಧಪಡಿಸಿ ಹೈಕೋರ್ಟ್ಗೆ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ.
- Pramod Shastri G
- Updated on: Aug 26, 2026
- 11:00 am
ಸಂಪುಟಕ್ಕೆ ಮತ್ತೆ ಸರ್ಜರಿ? ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್ ಸಾಧ್ಯತೆ
ಅಂತೂ ಇಂತೂ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿ ಪೂರ್ಣ ಪ್ರಮಾಣದ ಕ್ಯಾಬಿನೆಟ್ ಅಸ್ತಿತ್ವಕ್ಕೆ ಬಂತು ಎನ್ನುವಷ್ಟರಲ್ಲೇ ಇದೀಗ ಮತ್ತೆ ಸಂಪುಟ ಸರ್ಜರಿ ಕುರಿತ ಚರ್ಚೆ ಮುನ್ನೆಲೆಗೆ ಬಂದಿದೆ. ಈ ವಿಚಾರವಾಗಿ ಹೈಕಮಾಂಡ್ ನಾಯಕರ ಜತೆ ಚರ್ಚಿಸಲು ಶೀಘ್ರದಲ್ಲೇ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಇತ್ತೀಚಿನ ಬೆಳವಣಿಗೆಗಳ ಮಾಹಿತಿ ಇಲ್ಲಿದೆ.
- Pramod Shastri G
- Updated on: Aug 25, 2026
- 9:44 am
ಸಚಿವ ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್ಗೆ ಅನುಮತಿ ರಾಜ್ಯಪಾಲರಿಗೆ ಸಿಬಿಐ ಪತ್ರ
ವಾಲ್ಮೀಕಿ ಹಗರಣ ಪ್ರಕರಣದ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ (B Nagendra) ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳು 5 ದಿನಗಳಿಂದ ವಿಧಾನ ಮಂಡಲದ ಅಧಿವೇಶನದಲ್ಲಿ ಹೋರಾಟ ಮಾಡುತ್ತಿವೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಚಿವ ಬಿ ನಾಗೇಂದ್ರಗೆ ಮತ್ತೊಂದು ಬಹುದೊಡ್ಡ ಸಂಕಷ್ಟ ಎದುರಾಗಿದೆ. ಹೌದು....ಸಚಿವ ನಾಗೇಂದ್ರ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿ ರಾಜ್ಯಪಾಲರಿಗೆ CBI ಪತ್ರ ಬರೆದಿದೆ.
- Pramod Shastri G
- Updated on: Aug 21, 2026
- 7:29 pm
ಬಿಡದಿ ಟೌನ್ಶಿಪ್ ವಿಚಾರದಲ್ಲಿ ಸರ್ಕಾರ ಮಹತ್ವದ ಹೆಜ್ಜೆ: ಸಮಿತಿ ರಚನೆ
Greater Bengaluru Suburban Project: ಗ್ರೇಟರ್ ಬೆಂಗಳೂರು ಉಪನಗರ ಯೋಜನೆ ಕುರಿತು ಸರ್ಕಾರವು ನಿವೃತ್ತ ಮುಖ್ಯ ನ್ಯಾಯಮೂರ್ತಿ ನರೇಂದ್ರ ಅಧ್ಯಕ್ಷತೆಯಲ್ಲಿ ನಾಲ್ವರು ಸದಸ್ಯರ ಸಮಿತಿ ರಚಿಸಿದೆ. 18,133 ಕೋಟಿ ರೂ ಅಂದಾಜು ವೆಚ್ಚದ ಈ ಯೋಜನೆಯನ್ನು ಎಲ್ಲಾ ಆಯಾಮಗಳಲ್ಲಿ ಸಮಿತಿ ಪರಿಶೀಲಿಸಲಿದೆ. ಸಾರ್ವಜನಿಕರ ಆಕ್ಷೇಪಗಳನ್ನು ಸಹ ಪರಿಗಣಿಸಿ 30 ದಿನಗಳಲ್ಲಿ ಸಮಗ್ರ ವರದಿ ಸಲ್ಲಿಸಲು ಸೂಚಿಸಲಾಗಿದೆ.
- Pramod Shastri G
- Updated on: Aug 21, 2026
- 7:26 pm
“ಬೆದರಿಕೆ ಹಾಕೋದು ನನ್ನತ್ರ ನಡೆಯಲ್ಲ”: ಸುಪ್ರೀಂ ಆದೇಶದಂತೆ ಬಿಲ್ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಸಾರ್ವಜನಿಕ ಮತ್ತು ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರದ ಹೊಸ ಮಸೂದೆ ಕಡ್ಡಾಯಗೊಳಿಸಿದ ಅನುಮತಿ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಇದು ಆರ್ಎಸ್ಎಸ್ ಅಥವಾ ಬಿಜೆಪಿಯನ್ನು ನಿಷೇಧಿಸುವ ಉದ್ದೇಶ ಹೊಂದಿಲ್ಲ. ಸಾರ್ವಜನಿಕ ಸ್ಥಳಗಳ ದುರುಪಯೋಗ ತಡೆಯಲು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಈ ಕಾಯ್ದೆ ಜಾರಿಗೊಳಿಸಲಾಗುತ್ತಿದೆ. ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಖರ್ಗೆ ತಿಳಿಸಿದ್ದಾರೆ.
- Pramod Shastri G
- Updated on: Aug 15, 2026
- 1:48 pm
ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಸಿಎಂ ಕ್ಲಾಸ್: ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸೂಚನೆ
ಶಾಸಕರ ಅಸಮಾಧಾನ ಮತ್ತು ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರುವ ಆತಂಕದ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ಹಿಂಪಡೆಯಲು ಸಿಎಂ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಈ ವಿಷಯ ತಮ್ಮ ಗಮನಕ್ಕೆ ತರದೆ ಆದೇಶ ಹೊರಡಿಸಿದ್ದ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಅವರು ತರಾಟೆಗೆ ತೆಗೆದುಕೊಂಡರು. ಆದೇಶ ಶೀಘ್ರದಲ್ಲೇ ರದ್ದುಗೊಳ್ಳುವ ನಿರೀಕ್ಷೆಯಿದೆ.
- Pramod Shastri G
- Updated on: Aug 14, 2026
- 1:01 pm