AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pramod Shastri G

Pramod Shastri G

Author - TV9 Kannada

pramod.shastri@tv9.com
ಸಂಪುಟ ವಿಸ್ತರಣೆ ಸರ್ಕಸ್: ಹೈಕಮಾಂಡ್‌ಗೆ ಒಪ್ಪಿಗೆಯಾಗದ ರಾಜ್ಯ ನಾಯಕರ ಪಟ್ಟಿ, ತಮ್ಮದೇ ಪಟ್ಟಿ ಸಿದ್ಧಪಡಿಸಿಕೊಂಡಿರೋ ರಾಹುಲ್

ಸಂಪುಟ ವಿಸ್ತರಣೆ ಸರ್ಕಸ್: ಹೈಕಮಾಂಡ್‌ಗೆ ಒಪ್ಪಿಗೆಯಾಗದ ರಾಜ್ಯ ನಾಯಕರ ಪಟ್ಟಿ, ತಮ್ಮದೇ ಪಟ್ಟಿ ಸಿದ್ಧಪಡಿಸಿಕೊಂಡಿರೋ ರಾಹುಲ್

ಸಂಪುಟ ವಿಸ್ತರಣೆ ಸರ್ಕಸ್ ತೀವ್ರಗೊಂಡಿದ್ದು, ಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಜುಲೈ 16) ದೆಹಲಿಯಲ್ಲಿ ವರಿಷ್ಠರ ಜೊತೆಗೆ ಮಹತ್ವದ ಚರ್ಚೆ ಮಾಡಿದ್ದಾರೆ. ಮೊದಲ ಹಂತದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಪಸ್ಥಿತಿಯಲ್ಲಿ ರಾಹುಲ್ ಗಾಂಧಿ, ವೇಣುಗೋಪಾಲ್, ಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ಬಗ್ಗೆ ಮಾತುಕತೆ ನಡೆಸಿದ್ದು, ಈ ವೇಳೆ ರಾಜ್ಯ ನಾಯಕರು ನೀಡಿದ ಪಟ್ಟಿಯನ್ನು ರಾಹುಲ್ ಗಾಂಧಿ ಒಪ್ಪಿಲ್ಲ. ಹಾಗಾದ್ರೆ, ಸಭೆಯಲ್ಲಿ ಏನೇನಾಯ್ತು? ರಾಜ್ಯ ನಾಯಕರಿಗೆ ರಾಹುಲ್ ಕೊಟ್ಟ ಸಲಹೆ ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ

ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ಈ ಕಡತವನ್ನು ವಾಪಸ್ ಕಳುಹಿಸಲಾಗಿದೆ. ಈ ಬೆಳವಣಿಗೆ ಜಮೀರ್ ಅಹ್ಮದ್ ಖಾನ್‌ಗೆ ತಾತ್ಕಾಲಿಕ ರಿಲೀಫ್ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ರಾಜ್ಯ ಕಾಂಗ್ರೆಸ್​​ನಲ್ಲಿ ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ರಾಜ್ಯ ಕಾಂಗ್ರೆಸ್​​ನಲ್ಲಿ ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕರ್ನಾಟಕದಲ್ಲಿ ಸಂಪುಟ ವಿಸ್ತರಣೆ ವಿಳಂಬವಾಗಿದ್ದು, ಹಲವು ಸಚಿವ ಸ್ಥಾನಗಳು ಖಾಲಿ ಇವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶೀಘ್ರದಲ್ಲೇ ದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ರಾಹುಲ್ ಗಾಂಧಿ ವಾಪಸಾದ ನಂತರ ಹೈಕಮಾಂಡ್ ಸಚಿವ ಸ್ಥಾನ ಹಂಚಿಕೆ ಕುರಿತು ಚರ್ಚೆ ನಡೆಸಲಿದ್ದು, ಜಾತಿ, ಪ್ರದೇಶ ಮತ್ತು ಪಕ್ಷ ನಿಷ್ಠೆಯನ್ನು ಸಮತೋಲನಗೊಳಿಸುವುದು ಸವಾಲಾಗಿದೆ.

ಬಿಎಂಟಿಸಿ ಬಸ್‌ನಲ್ಲಿ ಸಚಿವ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಸಲು ಯತ್ನಿಸಿದ ಕಂಡಕ್ಟರ್

ಬಿಎಂಟಿಸಿ ಬಸ್‌ನಲ್ಲಿ ಸಚಿವ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಸಲು ಯತ್ನಿಸಿದ ಕಂಡಕ್ಟರ್

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಬಿಎಂಟಿಸಿ ಬಸ್‌ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ದಿಢೀರ್ 'ರಿಯಾಲಿಟಿ ಚೆಕ್' ನಡೆಸಿದರು. ಈ ವೇಳೆ, ಕಂಡಕ್ಟರ್ ಚಿಲ್ಲರೆ ಇಲ್ಲವೆಂದು ಸಚಿವರನ್ನೇ ಬಸ್ಸಿನಿಂದ ಇಳಿಯುವಂತೆ ತಾಕೀತು ಮಾಡಿದ ಆಘಾತಕಾರಿ ಘಟನೆ ನಡೆಯಿತು. ಈ ಪರಿಶೀಲನೆಯು ಸಾರ್ವಜನಿಕರು ಪ್ರತಿದಿನ ಬಿಎಂಟಿಸಿ ಬಸ್ ಸಮಸ್ಯೆಗಳು, ನಿರ್ವಾಹಕರ ದರ್ಪ ಹಾಗೂ ದಬ್ಬಾಳಿಕೆಯನ್ನು ಬಯಲಿಗೆಳೆಯಿತು.

ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಮಾಜಿ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಮಾಜಿ ಸಿಎಂ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ ಬಳಿಕ 'ಮುಖ್ಯಮಂತ್ರಿ ಸಿಂಹಾಸನ ನಶ್ವರ, ಜನತೆಯ ಹೃದಯ‌ ಸಿಂಹಾಸನ ಶಾಶ್ವತ' ಎಂದು ಸಿದ್ದರಾಮಯ್ಯ ಭಾವುಕ ಎಕ್ಸ್ ಪೋಸ್ಟ್ ಹಂಚಿಕೊಂಡಿದ್ದಾರೆ. ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು ಎಂದವರು ತಿಳಿಸಿದ್ದಾರೆ.

ಸಚಿವ ಸ್ಥಾನಕ್ಕೆ ಶಾಸಕರ ಲಾಬಿ: ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ

ಸಚಿವ ಸ್ಥಾನಕ್ಕೆ ಶಾಸಕರ ಲಾಬಿ: ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ

ಡಿಕೆ ಶಿವಕುಮಾರ್  (DK Shivakumar)ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದೇ ಜೂನ್ 27ರಂದು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ (Congress High command) ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಆದ್ರೆ, ಇದೇ ಸಂಪುಟ ವಿಸ್ತರಣೆ ವಿಚಾರಕ್ಕೆ ಹೈಕಮಾಂಡ್​​​ ಜತೆ ಚರ್ಚಿಸುವ ಮುನ್ನವೇ ದೆಹಲಿಯಿಂದ ಡಿಕೆ ಶಿವಕುಮಾರ್​​​ಗೆ ಮಹತ್ವದ ಸೂಚನೆ ಬಂದಿದೆ. ಹೌದು....ಸಚಿವ ಸ್ಥಾನಕ್ಕಾಗಿ ಲಾಬಿಗೆ ಅವಕಾಶ ಕೊಡಬೇಡಿ ಎಂದ ಡಿಕೆ ಶಿವಕುಮಾರ್ ಅವರಗೆ ಹೈಕಮಾಂಡ್​​​​ ದೂರವಾಣಿ ಕರೆ ಮಾಡಿ ಸೂಚಿಸಿದೆ.

ವಿದ್ಯಾರ್ಥಿಗಳ ನೆರವಿಗೆ ನಿಂತ ಗೃಹ ಸಚಿವ: ಬೆಂಗಳೂರಿನಲ್ಲಿ ನೀಟ್ ಪರೀಕ್ಷೆ ಬರೆಯುವವರ ಸುಗಮ ಸಂಚಾರಕ್ಕೆ ಅನುವು

ವಿದ್ಯಾರ್ಥಿಗಳ ನೆರವಿಗೆ ನಿಂತ ಗೃಹ ಸಚಿವ: ಬೆಂಗಳೂರಿನಲ್ಲಿ ನೀಟ್ ಪರೀಕ್ಷೆ ಬರೆಯುವವರ ಸುಗಮ ಸಂಚಾರಕ್ಕೆ ಅನುವು

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿದ್ದ ನೀಟ್‌ ಪರೀಕ್ಷೆ ಜೂನ್​​ 21ರಂದು ನಡೆಯಲಿದೆ. ಈ ಹಿನ್ನೆಲೆ ನಗರದಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಜೊತೆಗೆ ಪರೀಕ್ಷಾರ್ಥಿಗಳು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಲು ಗೃಹ ಸಚಿವರಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸುಗಮ ಸಂಚಾರದ ಸಹಾಯಕ್ಕಾಗಿ ಟ್ರಾಫಿಕ್ ಕಂಟ್ರೋಲ್ ರೂಮ್​​ಗೆ ಸಂಪರ್ಕಿಸಬಹುದಾಗಿದೆ.

ಮಾವು ಬೆಲೆಯಲ್ಲಿ ಕುಸಿತ: ರಾಜ್ಯದ ರೈತರ ನೆರವಿಗೆ ಧಾವಿಸುವಂತೆ ಶಿವರಾಜ್ ಸಿಂಗ್ ಚೌಹಾಣ್​ಗೆ ಜೋಶಿ ಪತ್ರ

ಮಾವು ಬೆಲೆಯಲ್ಲಿ ಕುಸಿತ: ರಾಜ್ಯದ ರೈತರ ನೆರವಿಗೆ ಧಾವಿಸುವಂತೆ ಶಿವರಾಜ್ ಸಿಂಗ್ ಚೌಹಾಣ್​ಗೆ ಜೋಶಿ ಪತ್ರ

ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ತೋತಾಪುರಿ ಮಾವು ಬೆಳೆಗಾರರಿಗೆ ಪರಿಹಾರ ಕೋರಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿ ಹಲವು ಭಾಗಗಳಲ್ಲಿ ಮಾವಿನ ಬೆಲೆ ಕುಸಿತ ಮತ್ತು ಪ್ರತಿಕೂಲ ಹವಾಮಾನದಿಂದ ರೈತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಬೆಲೆ ಕೊರತೆ ಪಾವತಿ ಯೋಜನೆ ಅಡಿಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್‌ಗೆ ‘ಆತ್ಮಸಾಕ್ಷಿ’ ಮತ ಹಾಕಿದ ಎಸ್.ಟಿ.ಸೋಮಶೇಖರ್; ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ

ಕಾಂಗ್ರೆಸ್‌ಗೆ ‘ಆತ್ಮಸಾಕ್ಷಿ’ ಮತ ಹಾಕಿದ ಎಸ್.ಟಿ.ಸೋಮಶೇಖರ್; ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ತೀವ್ರ ಸಂಚಲನ ಮೂಡಿಸಿದೆ. ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್, ಮುಖ್ಯಮಂತ್ರಿಗಳ ಮನವಿ ಮೇರೆಗೆ ಕಾಂಗ್ರೆಸ್‌ಗೆ ಆತ್ಮಸಾಕ್ಷಿ ಮತ ಚಲಾಯಿಸಿದ್ದಾಗಿ ಒಪ್ಪಿಕೊಂಡರು. ಮತ್ತೊಂದೆಡೆ, ಜೆಡಿಎಸ್ ಅಭ್ಯರ್ಥಿ ಕೆ.ಎನ್. ಗೋವಿಂದರಾಜು, ಜಿ.ಟಿ. ದೇವೇಗೌಡರು ತಮಗೇ ಮತ ಹಾಕಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಗಳು ಕಾಂಗ್ರೆಸ್‌ಗೆ ಲಾಭವಾಗಿದ್ದರೆ, ಮೈತ್ರಿಕೂಟಕ್ಕೆ ಹಿನ್ನಡೆಯಾಗಿವೆ.

ಪ್ರಧಾನಿ ಮೋದಿ ಒಳಿತಿಗಾಗಿ ಅರಳಿಕಟ್ಟೆ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ವಿಪಕ್ಷ ನಾಯಕ ಅಶೋಕ್​

ಪ್ರಧಾನಿ ಮೋದಿ ಒಳಿತಿಗಾಗಿ ಅರಳಿಕಟ್ಟೆ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ವಿಪಕ್ಷ ನಾಯಕ ಅಶೋಕ್​

ವಿಧಾನಸೌಧದ ಅರಳಿಕಟ್ಟೆ ಮುನೇಶ್ವರ ದೇವಾಲಯದಲ್ಲಿ ವಿಪಕ್ಷ ನಾಯಕ ಅಶೋಕ್, ಶಾಸಕ ಚನ್ನಬಸಪ್ಪ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ನೆಹರು ಅವರ ದಾಖಲೆ ಮುರಿದ ಮೋದಿಗಾಗಿ ನಡೆದ ಈ ಪ್ರಾರ್ಥನೆಯಲ್ಲಿ ಮೋದಿ ಅವರ ಭಾವಚಿತ್ರವನ್ನು ಇರಿಸಿ ನರೇಂದ್ರ ಮೋದಿ ಅವರಿಗೆ ಜಯವಾಗಲಿ ಎಂಬ ಘೋಷಣೆಗಳನ್ನು ಕೂಗಲಾಯಿತು.

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್

ಮಾತುಕತೆ ಮೂಲಕ ರಾಮಲಿಂಗಾರೆಡ್ಡಿ ಮನವೊಲಿಸುವಂತೆ ಸಿಎಂ ಡಿಕೆ ಶಿವಕುಮಾರ್ ಗೆ ಸೂಚನೆ ನೀಡಿದೆ. ಆದ್ರೆ, ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಿ ಬೆಂಗಳೂರು ಅಭಿವೃದ್ಧಿ ಖಾತೆ ನೀಡಲು ಹೈಕಮಾಂಡ್ ನಿರಾಕರಿಸಿದೆ. ಯಾಕಂದ್ರೆ, ಒಬ್ಬರ ಬೇಡಿಕೆಗೆ ಸ್ಪಂದಿಸಿದರೆ ಇತರೆ ಸಚಿವರು ಸಹ ತಮ್ಮ ಖಾತೆ ಬದಲಾವಣೆ ಮಾಡುವಂತೆ ಒತ್ತಡದ ಹೇರುವ ಸಾಧ್ಯತೆಗಳಿವೆ. ಈಗ ಮಾತ್ರವಲ್ಲ ಮುಂದೆ ಸಂಪುಟ ವಿಸ್ತರಣೆ ವೇಳೆಯೂ ಬೇಡಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆಗೆ ಹೈಕಮಾಂಡ್ ಒಪ್ಪಿಗೆ ನೀಡುತ್ತಿಲ್ಲ ಎಂದು ತಿಳಿದುಬಂದಿದೆ.

ಡಿಕೆ ಶಿವಕುಮಾರ್ ಜತೆ 14 ಮಂದಿ ಪ್ರಮಾಣವಚನ ಸಾಧ್ಯತೆ: ಸಂಭಾವ್ಯ ಸಚಿವರ ಫೈನಲ್ ಲಿಸ್ಟ್ ಲಭ್ಯ

ಡಿಕೆ ಶಿವಕುಮಾರ್ ಜತೆ 14 ಮಂದಿ ಪ್ರಮಾಣವಚನ ಸಾಧ್ಯತೆ: ಸಂಭಾವ್ಯ ಸಚಿವರ ಫೈನಲ್ ಲಿಸ್ಟ್ ಲಭ್ಯ

ಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಇಂದು 14 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದ್ದು, ಡಾ. ಜಿ. ಪರಮೇಶ್ವರ್ ಅವರಿಗೆ ಮಾತ್ರ ಡಿಸಿಎಂ ಸ್ಥಾನ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎಂಬುದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಡಿಕೆ ಶಿವಕುಮಾರ್ ಜತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವವರು ಯಾರೆಲ್ಲ? ಇಲ್ಲಿದೆ ಲಿಸ್ಟ್.