AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pramod Shastri G

Pramod Shastri G

Author - TV9 Kannada

pramod.shastri@tv9.com
ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಮಾಜಿ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಮಾಜಿ ಸಿಎಂ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ ಬಳಿಕ 'ಮುಖ್ಯಮಂತ್ರಿ ಸಿಂಹಾಸನ ನಶ್ವರ, ಜನತೆಯ ಹೃದಯ‌ ಸಿಂಹಾಸನ ಶಾಶ್ವತ' ಎಂದು ಸಿದ್ದರಾಮಯ್ಯ ಭಾವುಕ ಎಕ್ಸ್ ಪೋಸ್ಟ್ ಹಂಚಿಕೊಂಡಿದ್ದಾರೆ. ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು ಎಂದವರು ತಿಳಿಸಿದ್ದಾರೆ.

ಸಚಿವ ಸ್ಥಾನಕ್ಕೆ ಶಾಸಕರ ಲಾಬಿ: ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ

ಸಚಿವ ಸ್ಥಾನಕ್ಕೆ ಶಾಸಕರ ಲಾಬಿ: ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ

ಡಿಕೆ ಶಿವಕುಮಾರ್  (DK Shivakumar)ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದೇ ಜೂನ್ 27ರಂದು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ (Congress High command) ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಆದ್ರೆ, ಇದೇ ಸಂಪುಟ ವಿಸ್ತರಣೆ ವಿಚಾರಕ್ಕೆ ಹೈಕಮಾಂಡ್​​​ ಜತೆ ಚರ್ಚಿಸುವ ಮುನ್ನವೇ ದೆಹಲಿಯಿಂದ ಡಿಕೆ ಶಿವಕುಮಾರ್​​​ಗೆ ಮಹತ್ವದ ಸೂಚನೆ ಬಂದಿದೆ. ಹೌದು....ಸಚಿವ ಸ್ಥಾನಕ್ಕಾಗಿ ಲಾಬಿಗೆ ಅವಕಾಶ ಕೊಡಬೇಡಿ ಎಂದ ಡಿಕೆ ಶಿವಕುಮಾರ್ ಅವರಗೆ ಹೈಕಮಾಂಡ್​​​​ ದೂರವಾಣಿ ಕರೆ ಮಾಡಿ ಸೂಚಿಸಿದೆ.

ವಿದ್ಯಾರ್ಥಿಗಳ ನೆರವಿಗೆ ನಿಂತ ಗೃಹ ಸಚಿವ: ಬೆಂಗಳೂರಿನಲ್ಲಿ ನೀಟ್ ಪರೀಕ್ಷೆ ಬರೆಯುವವರ ಸುಗಮ ಸಂಚಾರಕ್ಕೆ ಅನುವು

ವಿದ್ಯಾರ್ಥಿಗಳ ನೆರವಿಗೆ ನಿಂತ ಗೃಹ ಸಚಿವ: ಬೆಂಗಳೂರಿನಲ್ಲಿ ನೀಟ್ ಪರೀಕ್ಷೆ ಬರೆಯುವವರ ಸುಗಮ ಸಂಚಾರಕ್ಕೆ ಅನುವು

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿದ್ದ ನೀಟ್‌ ಪರೀಕ್ಷೆ ಜೂನ್​​ 21ರಂದು ನಡೆಯಲಿದೆ. ಈ ಹಿನ್ನೆಲೆ ನಗರದಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಜೊತೆಗೆ ಪರೀಕ್ಷಾರ್ಥಿಗಳು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಲು ಗೃಹ ಸಚಿವರಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸುಗಮ ಸಂಚಾರದ ಸಹಾಯಕ್ಕಾಗಿ ಟ್ರಾಫಿಕ್ ಕಂಟ್ರೋಲ್ ರೂಮ್​​ಗೆ ಸಂಪರ್ಕಿಸಬಹುದಾಗಿದೆ.

ಮಾವು ಬೆಲೆಯಲ್ಲಿ ಕುಸಿತ: ರಾಜ್ಯದ ರೈತರ ನೆರವಿಗೆ ಧಾವಿಸುವಂತೆ ಶಿವರಾಜ್ ಸಿಂಗ್ ಚೌಹಾಣ್​ಗೆ ಜೋಶಿ ಪತ್ರ

ಮಾವು ಬೆಲೆಯಲ್ಲಿ ಕುಸಿತ: ರಾಜ್ಯದ ರೈತರ ನೆರವಿಗೆ ಧಾವಿಸುವಂತೆ ಶಿವರಾಜ್ ಸಿಂಗ್ ಚೌಹಾಣ್​ಗೆ ಜೋಶಿ ಪತ್ರ

ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ತೋತಾಪುರಿ ಮಾವು ಬೆಳೆಗಾರರಿಗೆ ಪರಿಹಾರ ಕೋರಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿ ಹಲವು ಭಾಗಗಳಲ್ಲಿ ಮಾವಿನ ಬೆಲೆ ಕುಸಿತ ಮತ್ತು ಪ್ರತಿಕೂಲ ಹವಾಮಾನದಿಂದ ರೈತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಬೆಲೆ ಕೊರತೆ ಪಾವತಿ ಯೋಜನೆ ಅಡಿಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್‌ಗೆ ‘ಆತ್ಮಸಾಕ್ಷಿ’ ಮತ ಹಾಕಿದ ಎಸ್.ಟಿ.ಸೋಮಶೇಖರ್; ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ

ಕಾಂಗ್ರೆಸ್‌ಗೆ ‘ಆತ್ಮಸಾಕ್ಷಿ’ ಮತ ಹಾಕಿದ ಎಸ್.ಟಿ.ಸೋಮಶೇಖರ್; ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ತೀವ್ರ ಸಂಚಲನ ಮೂಡಿಸಿದೆ. ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್, ಮುಖ್ಯಮಂತ್ರಿಗಳ ಮನವಿ ಮೇರೆಗೆ ಕಾಂಗ್ರೆಸ್‌ಗೆ ಆತ್ಮಸಾಕ್ಷಿ ಮತ ಚಲಾಯಿಸಿದ್ದಾಗಿ ಒಪ್ಪಿಕೊಂಡರು. ಮತ್ತೊಂದೆಡೆ, ಜೆಡಿಎಸ್ ಅಭ್ಯರ್ಥಿ ಕೆ.ಎನ್. ಗೋವಿಂದರಾಜು, ಜಿ.ಟಿ. ದೇವೇಗೌಡರು ತಮಗೇ ಮತ ಹಾಕಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಗಳು ಕಾಂಗ್ರೆಸ್‌ಗೆ ಲಾಭವಾಗಿದ್ದರೆ, ಮೈತ್ರಿಕೂಟಕ್ಕೆ ಹಿನ್ನಡೆಯಾಗಿವೆ.

ಪ್ರಧಾನಿ ಮೋದಿ ಒಳಿತಿಗಾಗಿ ಅರಳಿಕಟ್ಟೆ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ವಿಪಕ್ಷ ನಾಯಕ ಅಶೋಕ್​

ಪ್ರಧಾನಿ ಮೋದಿ ಒಳಿತಿಗಾಗಿ ಅರಳಿಕಟ್ಟೆ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ವಿಪಕ್ಷ ನಾಯಕ ಅಶೋಕ್​

ವಿಧಾನಸೌಧದ ಅರಳಿಕಟ್ಟೆ ಮುನೇಶ್ವರ ದೇವಾಲಯದಲ್ಲಿ ವಿಪಕ್ಷ ನಾಯಕ ಅಶೋಕ್, ಶಾಸಕ ಚನ್ನಬಸಪ್ಪ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ನೆಹರು ಅವರ ದಾಖಲೆ ಮುರಿದ ಮೋದಿಗಾಗಿ ನಡೆದ ಈ ಪ್ರಾರ್ಥನೆಯಲ್ಲಿ ಮೋದಿ ಅವರ ಭಾವಚಿತ್ರವನ್ನು ಇರಿಸಿ ನರೇಂದ್ರ ಮೋದಿ ಅವರಿಗೆ ಜಯವಾಗಲಿ ಎಂಬ ಘೋಷಣೆಗಳನ್ನು ಕೂಗಲಾಯಿತು.

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ: ಕಡ್ಡಿ ಮುಂರಿದಂತೆ ಹೇಳಿದ ಹೈಕಮಾಂಡ್

ಮಾತುಕತೆ ಮೂಲಕ ರಾಮಲಿಂಗಾರೆಡ್ಡಿ ಮನವೊಲಿಸುವಂತೆ ಸಿಎಂ ಡಿಕೆ ಶಿವಕುಮಾರ್ ಗೆ ಸೂಚನೆ ನೀಡಿದೆ. ಆದ್ರೆ, ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಿ ಬೆಂಗಳೂರು ಅಭಿವೃದ್ಧಿ ಖಾತೆ ನೀಡಲು ಹೈಕಮಾಂಡ್ ನಿರಾಕರಿಸಿದೆ. ಯಾಕಂದ್ರೆ, ಒಬ್ಬರ ಬೇಡಿಕೆಗೆ ಸ್ಪಂದಿಸಿದರೆ ಇತರೆ ಸಚಿವರು ಸಹ ತಮ್ಮ ಖಾತೆ ಬದಲಾವಣೆ ಮಾಡುವಂತೆ ಒತ್ತಡದ ಹೇರುವ ಸಾಧ್ಯತೆಗಳಿವೆ. ಈಗ ಮಾತ್ರವಲ್ಲ ಮುಂದೆ ಸಂಪುಟ ವಿಸ್ತರಣೆ ವೇಳೆಯೂ ಬೇಡಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆಗೆ ಹೈಕಮಾಂಡ್ ಒಪ್ಪಿಗೆ ನೀಡುತ್ತಿಲ್ಲ ಎಂದು ತಿಳಿದುಬಂದಿದೆ.

ಡಿಕೆ ಶಿವಕುಮಾರ್ ಜತೆ 14 ಮಂದಿ ಪ್ರಮಾಣವಚನ ಸಾಧ್ಯತೆ: ಸಂಭಾವ್ಯ ಸಚಿವರ ಫೈನಲ್ ಲಿಸ್ಟ್ ಲಭ್ಯ

ಡಿಕೆ ಶಿವಕುಮಾರ್ ಜತೆ 14 ಮಂದಿ ಪ್ರಮಾಣವಚನ ಸಾಧ್ಯತೆ: ಸಂಭಾವ್ಯ ಸಚಿವರ ಫೈನಲ್ ಲಿಸ್ಟ್ ಲಭ್ಯ

ಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಇಂದು 14 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದ್ದು, ಡಾ. ಜಿ. ಪರಮೇಶ್ವರ್ ಅವರಿಗೆ ಮಾತ್ರ ಡಿಸಿಎಂ ಸ್ಥಾನ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎಂಬುದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಡಿಕೆ ಶಿವಕುಮಾರ್ ಜತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವವರು ಯಾರೆಲ್ಲ? ಇಲ್ಲಿದೆ ಲಿಸ್ಟ್.

ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಪಟ್ಟಿ: ಇಲ್ಲಿದೆ ಡಿಕೆಶಿ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ವಿವರ

ಹೈಕಮಾಂಡ್ ಕೈ ಸೇರಿದ ಮೊದಲ ಹಂತದ ಪಟ್ಟಿ: ಇಲ್ಲಿದೆ ಡಿಕೆಶಿ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ವಿವರ

ಡಿಕೆ ಶಿವಕುಮಾರ್ ಜೂನ್ 3ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆ 10ರಿಂದ 12 ಜನ ಶಾಸಕರು ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಡಿಕೆಶಿ ಜೊತೆ ಯಾರೆಲ್ಲಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವುದೇ ಕುತೂಹಲ ಮೂಡಿಸಿದೆ. ಈ ಸಂಬಂಧ ದೆಹಲಿಯಲ್ಲಿ ಸಭೆ ಮೇಲೆ ಸಭೆಗಳು ನಡೆಯುತ್ತಿದ್ದು, ಹೈಕಮಾಂಡ್​​​ ಕೈಸೇರಿದ ಮೊದಲ ಹಂತದ ಸಂಭಾವ್ಯ ಸಚಿವರ ಪಟ್ಟಿ ಈ ಕೆಳಗಿನಂತಿದೆ.

‘ಇಂದು ನಮಗೆ ಅತ್ಯಂತ ಭಾವುಕ ದಿನ’: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವೇಣುಗೋಪಾಲ್ ಭಾವುಕ ಮಾತು

‘ಇಂದು ನಮಗೆ ಅತ್ಯಂತ ಭಾವುಕ ದಿನ’: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವೇಣುಗೋಪಾಲ್ ಭಾವುಕ ಮಾತು

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೆಸಿ ವೇಣುಗೋಪಾಲ್ ಭಾವುಕರಾಗಿ ಸಿದ್ದರಾಮಯ್ಯರ ಕಾರ್ಯವನ್ನು ಶ್ಲಾಘಿಸಿದರು. ಸಿದ್ದರಾಮಯ್ಯನವರ ಸೇವೆ ಕರ್ನಾಟಕಕ್ಕೆ ಮಾತ್ರ ಸೀಮಿತವಾಗದೆ ರಾಷ್ಟ್ರಕ್ಕೂ ಬೇಕು ಎಂದು ವೇಣುಗೋಪಾಲ್ ಮನವಿ ಮಾಡಿದರು. ಆದರೆ, ಸಿದ್ದರಾಮಯ್ಯ ಈ ಹಿಂದೆ ರಾಷ್ಟ್ರೀಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ಕರ್ನಾಟಕದಲ್ಲಿ ಕೋಮುವಾದಿಗಳ ವಿರುದ್ಧ ಹೋರಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಆಯ್ತಾ ಹಿನ್ನಡೆ? ಪ್ರಮುಖ ಮನವಿ ತಿರಸ್ಕರಿಸಿದ ಹೈಕಮಾಂಡ್!

ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಆಯ್ತಾ ಹಿನ್ನಡೆ? ಪ್ರಮುಖ ಮನವಿ ತಿರಸ್ಕರಿಸಿದ ಹೈಕಮಾಂಡ್!

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಸರ್ಕಾರ ಮತ್ತು ಪಕ್ಷದ ಸಂಘಟನೆಯ ನಡುವೆ ಗೊಂದಲ ನಿವಾರಣೆಗೆ ಕೋರಿದ್ದ ‘ಸಮನ್ವಯ ಸಮಿತಿ’ ರಚನೆಯ ಪ್ರಸ್ತಾಪವನ್ನು ಕಾಂಗ್ರೆಸ್ ಹೈಕಮಾಂಡ್ ತಿರಸ್ಕರಿಸಿದೆ. ಒಂದೇ ಪಕ್ಷದ ಅಧಿಕಾರ ಇರುವುದರಿಂದ ಪ್ರತ್ಯೇಕ ಸಮನ್ವಯ ಸಮಿತಿ ಅಗತ್ಯವಿಲ್ಲ. ಎಲ್ಲವನ್ನೂ ಕೆಪಿಸಿಸಿ ಅಧ್ಯಕ್ಷರೇ ನೋಡಿಕೊಳ್ಳಲಿದ್ದಾರೆ ಎಂದು ಹೈಕಮಾಂಡ್ ಹೇಳಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅಧಿಕಾರ ಸ್ವೀಕರಿಸುವುದು ಬಹುತೇಕ ನಿಶ್ಚಿತ ಎನ್ನುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಆಕಾಂಕ್ಷಿಗಳ ರೇಸ್​​ ಜೋರಾಗಿದೆ. ಆರಂಭದಿಂದಲೂ ಸತೀಶ್​​ ಜಾರಕಿಹೊಳಿ ಹೆಸರು ಮುಂಚೂಣಿಯಲ್ಲಿತ್ತಾದರೂ ಈ ನಡುವೆ ಮತ್ತೊಂದು ಹೆಸರಿನ ಸರ್ಪ್ರೈಸ್​​ ಎಂಟ್ರಿಯಾಗಿದೆ. ಪಕ್ಷದ ಅಧ್ಯಕ್ಷ ಸ್ಥಾನದ ಜೊತೆ ಮಂತ್ರಿಗಿರಿಗೂ ಸತೀಶ್​​ ಬೇಡಿಕೆ ಇಟ್ಟಿರೋದೇ ಅವರಿಗೆ ಮುಳುವಾಗುತ್ತಾ ಎಂಬ ಲೆಕ್ಕಾಚಾರ ಶುರುವಾಗಿದೆ.