“ಬೆದರಿಕೆ ಹಾಕೋದು ನನ್ನತ್ರ ನಡೆಯಲ್ಲ”: ಸುಪ್ರೀಂ ಆದೇಶದಂತೆ ಬಿಲ್ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಸಾರ್ವಜನಿಕ ಮತ್ತು ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರದ ಹೊಸ ಮಸೂದೆ ಕಡ್ಡಾಯಗೊಳಿಸಿದ ಅನುಮತಿ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಇದು ಆರ್ಎಸ್ಎಸ್ ಅಥವಾ ಬಿಜೆಪಿಯನ್ನು ನಿಷೇಧಿಸುವ ಉದ್ದೇಶ ಹೊಂದಿಲ್ಲ. ಸಾರ್ವಜನಿಕ ಸ್ಥಳಗಳ ದುರುಪಯೋಗ ತಡೆಯಲು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಈ ಕಾಯ್ದೆ ಜಾರಿಗೊಳಿಸಲಾಗುತ್ತಿದೆ. ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಖರ್ಗೆ ತಿಳಿಸಿದ್ದಾರೆ.
- Pramod Shastri G
- Updated on: Aug 15, 2026
- 1:48 pm
ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಸಿಎಂ ಕ್ಲಾಸ್: ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸೂಚನೆ
ಶಾಸಕರ ಅಸಮಾಧಾನ ಮತ್ತು ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರುವ ಆತಂಕದ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ಹಿಂಪಡೆಯಲು ಸಿಎಂ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಈ ವಿಷಯ ತಮ್ಮ ಗಮನಕ್ಕೆ ತರದೆ ಆದೇಶ ಹೊರಡಿಸಿದ್ದ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಅವರು ತರಾಟೆಗೆ ತೆಗೆದುಕೊಂಡರು. ಆದೇಶ ಶೀಘ್ರದಲ್ಲೇ ರದ್ದುಗೊಳ್ಳುವ ನಿರೀಕ್ಷೆಯಿದೆ.
- Pramod Shastri G
- Updated on: Aug 14, 2026
- 1:01 pm
ಅಯೋಧ್ಯೆ ರಾಮಮಂದಿರಕ್ಕೆ ಶೀಘ್ರವೇ ಸಿಇಒ ನೇಮಕ: ಕಠಿಣ ಸಂದರ್ಶನ ಪೂರ್ಣಗೊಳಿಸಿದ ಉನ್ನತ ಮಟ್ಟದ ಶೋಧ ಸಮಿತಿ
ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ನ CEO ಆಯ್ಕೆ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದೆ. ಪ್ರಬಲ ಶೋಧ ಸಮಿತಿಯು ನಡೆಸಿದ ಅಂತಿಮ ಸಂದರ್ಶನಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ರಕ್ಷಣೆ, ನ್ಯಾಯಾಂಗ ಮತ್ತು ವಿಜ್ಞಾನ ಕ್ಷೇತ್ರದ ದಿಗ್ಗಜರನ್ನು ಒಳಗೊಂಡ ಸಮಿತಿಯು, ದೇಶಾದ್ಯಂತದ ಸಾವಿರಾರು ಅರ್ಜಿಗಳಿಂದ ಕೇವಲ 16 ಅಭ್ಯರ್ಥಿಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಿತ್ತು. ಶೀಘ್ರದಲ್ಲೇ ನೂತನ CEO ಹೆಸರು ಪ್ರಕಟವಾಗುವ ಸಾಧ್ಯತೆಯಿದೆ.
- Pramod Shastri G
- Updated on: Aug 13, 2026
- 9:09 am
ಕರ್ನಾಟಕಕ್ಕೆ ಮತ್ತೆ ಮುಂಗಾರು ಮಳೆ ಬರಲು ಸಾಧ್ಯವಿಲ್ಲ: ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರದ ತೀರ್ಮಾನ
ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದೆ. ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗುವ ಭೀತಿಯಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಆದೇಶಿಸಿದೆ. ಇದನ್ನು ವಿರೋಧಿಸಲು ಕರ್ನಾಟಕ ಸರ್ಕಾರವೂ ಸಹ ಸಜ್ಜಾಗಿದೆ.
- Pramod Shastri G
- Updated on: Aug 11, 2026
- 3:37 pm
20 ಅಲ್ಲ, 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣ: ಗಾಯತ್ರಿ ಶಾಂತೇಗೌಡ ಪಾಲಿಗೆ ಕೈಗೆ ಬಂದರೂ ಬಾಯಿಗೆ ಬಾರದ ತುತ್ತು!
Karnataka Cabinet Expansion: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯ ಮಹೂರ್ತದ ವೇಳೆಗೆ ಮತ್ತೊಂದು ಹೈಡ್ರಾಮಾ ನಡೆದಿದ್ದು, ಹೈಕಮಾಂಡ್ ಪ್ರಕಟಿಸಿದ್ದ 20 ಸಚಿವರ ಪಟ್ಟಿಯಲ್ಲಿದ್ದ ಏಕೈಕ ಮಹಿಳಾ ನಾಯಕಿ ಗಾಯತ್ರಿ ಶಾಂತೇಗೌಡ ಅವರಿಗೆ ಕೊನೆ ಕ್ಷಣದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸುವ ಅವಕಾಶ ಕೈತಪ್ಪಿದೆ. ಇದರಿಂದಾಗಿ ಇಂದು ನಡೆದ ಸಮಾರಂಭದಲ್ಲಿ 20ರ ಬದಲಿಗೆ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
- Pramod Shastri G
- Updated on: Aug 3, 2026
- 6:59 pm
ಸಚಿವ ಸಂಪುಟ ವಿಸ್ತರಣೆಗೆ ಮೆಗಾ ಟ್ವಿಸ್ಟ್: ಪಟ್ಟಿಯಲ್ಲಿ ಹೆಸರಿದ್ದರೂ ಮಂಕಾಳು ವೈದ್ಯಗೆ ತಪ್ಪಿದ ಮಂತ್ರಿಗಿರಿ; ಟೈಪಿಂಗ್ ಮಿಸ್ಟೇಕ್ ಎಂದ ಎಐಸಿಸಿ!
ಸಿಎಂ ಡಿಕೆಶಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಕೊನೇ ಕ್ಷಣದಲ್ಲಿ ಭಾರಿ ಬೆಳವಣಿಗೆಗಳು ನಡೆದಿವೆ. ಲಿಸ್ಟ್ನಲ್ಲಿ ಹೆಸರಿದ್ದ ಹೊರತಾಗಿಯೂ ಭಟ್ಕಳ ಶಾಸಕ ಮಂಕಾಳು ವೈದ್ಯಗೆ ಸಚಿವ ಸ್ಥಾನ ಕೈತಪ್ಪಿದೆ. ಟೈಪಿಂಗ್ ಮಿಸ್ಟೇಕ್ನಿಂದ ಅವರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಬಗ್ಗೆ ಎಐಸಿಸಿ ಸ್ಪಷ್ಟನೆ ನೀಡಿದ್ದು, ಅವರ ಬದಲಿಗೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕರಾಗಿರುವ ಎಸ್.ಎಸ್.ಮಲ್ಲಿಕಾರ್ಜುನಗೆ ಸ್ಥಾನ ನೀಡಲಾಗಿದೆ.
- Pramod Shastri G
- Updated on: Aug 3, 2026
- 3:09 pm
ಪೊಲೀಸ್ ನೇಮಕಾತಿ ಪರೀಕ್ಷೆ ವೇಳೆ ಗೊಂದಲ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹ
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ವೇಳೆ ವಿಜಯಪುರ, ಹಾವೇರಿ ಮತ್ತು ಹಾಸನದಲ್ಲಿ ಕೆಲ ಗೊಂದಲಗಳಿಂದ ಅಭ್ಯರ್ಥಿಗಳು ರೊಚ್ಚಿಗೆದಿದ್ದರು. ಸದ್ಯ ಈ ವಿಚಾರವಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದು, ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
- Pramod Shastri G
- Updated on: Aug 2, 2026
- 8:25 pm
ಸಂಪುಟ ವಿಸ್ತರಣೆ ಕಸರತ್ತು ಕ್ಲೈಮ್ಯಾಕ್ಸ್ ಹಂತಕ್ಕೆ: ಅಂತಿಮ ಪಟ್ಟಿಗೆ ಇನ್ನೊಂದೆಜ್ಜೆ ಬಾಕಿ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ನಿವಾಸದಲ್ಲಿ ನಡೆದ ಸಭೆ ಅಂತ್ಯವಾಗಿದ್ದು, ಸಚಿವರ ಪಟ್ಟಿ ಅಂತಿಮಗೊಳಿಸಲು ಚರ್ಚಿಸಿದ್ದಾರೆ. ಆದ್ರೆ, ಸಚಿವರ ಪಟ್ಟಿ ಅಂತಿಮಕ್ಕೆ ಇನ್ನೊಂದೆಜ್ಜೆ ಬಾಕಿ ಇದ್ದು, ನಾಳೆ (ಜುಲೈ 29) ಅಧಿಕೃತ ಘೋಷಣೆಯಾಗಲಿದೆ. ಹಾಗಾದ್ರೆ, ದೆಹಲಿಯಲ್ಲಿ ಏನೆಲ್ಲಾ ಬೆಳವಣಿಗೆಗಳು ನಡೆದಿವೆ ಸಂಪೂರ್ಣ ವಿವರ ಇಲ್ಲಿದೆ.
- Pramod Shastri G
- Updated on: Jul 28, 2026
- 10:51 pm
ಸಂಪುಟ ವಿಸ್ತರಣೆ ಸರ್ಕಸ್: ಹೈಕಮಾಂಡ್ಗೆ ಒಪ್ಪಿಗೆಯಾಗದ ರಾಜ್ಯ ನಾಯಕರ ಪಟ್ಟಿ, ತಮ್ಮದೇ ಪಟ್ಟಿ ಸಿದ್ಧಪಡಿಸಿಕೊಂಡಿರೋ ರಾಹುಲ್
ಸಂಪುಟ ವಿಸ್ತರಣೆ ಸರ್ಕಸ್ ತೀವ್ರಗೊಂಡಿದ್ದು, ಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಜುಲೈ 16) ದೆಹಲಿಯಲ್ಲಿ ವರಿಷ್ಠರ ಜೊತೆಗೆ ಮಹತ್ವದ ಚರ್ಚೆ ಮಾಡಿದ್ದಾರೆ. ಮೊದಲ ಹಂತದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಪಸ್ಥಿತಿಯಲ್ಲಿ ರಾಹುಲ್ ಗಾಂಧಿ, ವೇಣುಗೋಪಾಲ್, ಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ಬಗ್ಗೆ ಮಾತುಕತೆ ನಡೆಸಿದ್ದು, ಈ ವೇಳೆ ರಾಜ್ಯ ನಾಯಕರು ನೀಡಿದ ಪಟ್ಟಿಯನ್ನು ರಾಹುಲ್ ಗಾಂಧಿ ಒಪ್ಪಿಲ್ಲ. ಹಾಗಾದ್ರೆ, ಸಭೆಯಲ್ಲಿ ಏನೇನಾಯ್ತು? ರಾಜ್ಯ ನಾಯಕರಿಗೆ ರಾಹುಲ್ ಕೊಟ್ಟ ಸಲಹೆ ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
- Pramod Shastri G
- Updated on: Jul 16, 2026
- 8:58 pm
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದ್ದ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ
ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳನ್ನು ಉಲ್ಲೇಖಿಸಿ ಈ ಕಡತವನ್ನು ವಾಪಸ್ ಕಳುಹಿಸಲಾಗಿದೆ. ಈ ಬೆಳವಣಿಗೆ ಜಮೀರ್ ಅಹ್ಮದ್ ಖಾನ್ಗೆ ತಾತ್ಕಾಲಿಕ ರಿಲೀಫ್ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
- Pramod Shastri G
- Updated on: Jul 14, 2026
- 9:38 pm
ರಾಜ್ಯ ಕಾಂಗ್ರೆಸ್ನಲ್ಲಿ ಗರಿಗೆದರಿದ ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕರ್ನಾಟಕದಲ್ಲಿ ಸಂಪುಟ ವಿಸ್ತರಣೆ ವಿಳಂಬವಾಗಿದ್ದು, ಹಲವು ಸಚಿವ ಸ್ಥಾನಗಳು ಖಾಲಿ ಇವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶೀಘ್ರದಲ್ಲೇ ದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ರಾಹುಲ್ ಗಾಂಧಿ ವಾಪಸಾದ ನಂತರ ಹೈಕಮಾಂಡ್ ಸಚಿವ ಸ್ಥಾನ ಹಂಚಿಕೆ ಕುರಿತು ಚರ್ಚೆ ನಡೆಸಲಿದ್ದು, ಜಾತಿ, ಪ್ರದೇಶ ಮತ್ತು ಪಕ್ಷ ನಿಷ್ಠೆಯನ್ನು ಸಮತೋಲನಗೊಳಿಸುವುದು ಸವಾಲಾಗಿದೆ.
- Pramod Shastri G
- Updated on: Jul 13, 2026
- 9:45 pm
ಬಿಎಂಟಿಸಿ ಬಸ್ನಲ್ಲಿ ಸಚಿವ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಬಸ್ನಿಂದ ಕೆಳಗಿಳಿಸಲು ಯತ್ನಿಸಿದ ಕಂಡಕ್ಟರ್
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಬಿಎಂಟಿಸಿ ಬಸ್ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ದಿಢೀರ್ 'ರಿಯಾಲಿಟಿ ಚೆಕ್' ನಡೆಸಿದರು. ಈ ವೇಳೆ, ಕಂಡಕ್ಟರ್ ಚಿಲ್ಲರೆ ಇಲ್ಲವೆಂದು ಸಚಿವರನ್ನೇ ಬಸ್ಸಿನಿಂದ ಇಳಿಯುವಂತೆ ತಾಕೀತು ಮಾಡಿದ ಆಘಾತಕಾರಿ ಘಟನೆ ನಡೆಯಿತು. ಈ ಪರಿಶೀಲನೆಯು ಸಾರ್ವಜನಿಕರು ಪ್ರತಿದಿನ ಬಿಎಂಟಿಸಿ ಬಸ್ ಸಮಸ್ಯೆಗಳು, ನಿರ್ವಾಹಕರ ದರ್ಪ ಹಾಗೂ ದಬ್ಬಾಳಿಕೆಯನ್ನು ಬಯಲಿಗೆಳೆಯಿತು.
- Pramod Shastri G
- Updated on: Jul 11, 2026
- 10:50 pm