AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pramod Shastri G

Pramod Shastri G

Author - TV9 Kannada

pramod.shastri@tv9.com
ಬಜೆಟ್​​ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ದೀಢೀರ್​​ ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್​​ನ ಹಿರಿಯ ಶಾಸಕರ ತಂಡ?

ಬಜೆಟ್​​ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ದೀಢೀರ್​​ ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್​​ನ ಹಿರಿಯ ಶಾಸಕರ ತಂಡ?

ಬಜೆಟ್ ಅಧಿವೇಶನದ ನಡುವೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆ ಬಳಿಕ ಹೈಕಮಾಂಡ್ ಜತೆ ಮಾತನಾಡುವುದಾಗಿ ಸಿಎಂ ಭರವಸೆ ನೀಡಿದ್ದು, ಇತ್ತ ಶಾಸಕರೂ ಏಪ್ರಿಲ್ 11 ರಂದು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಲು ಸಿದ್ಧತೆ ನಡೆಸಿರೋದಾಗಿ ತಿಳಿದುಬಂದಿದೆ.

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಏಕಕಾಲಕ್ಕೆ 8 ಹಿರಿಯ IAS ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಏಕಕಾಲಕ್ಕೆ 8 ಹಿರಿಯ IAS ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಅಧಿವೇಶನ ನಡೆಯುವಾಗ ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುವುದು ಅಥವಾ ಸಭಾತ್ಯಾಗ ಮಾಡೋದು ಹೊಸದೆನಲ್ಲ. ಆದ್ರೆ ಈ ಬಾರಿ ಅಪರೂಪದಲ್ಲಿ ಅಪರೂಪ ಎಂಬಂತೆ ಕರ್ನಾಟಕ ವಿಧಾನಸಭೆಯಲ್ಲಿ ಕಂಡು ಕೇಳರಿಯದ ಘಟನೆ ನಡೆದಿದೆ. ಸ್ಪೀಕರ್ ಯು.ಟಿ.ಖಾದರ್ ಅವರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಲಾಪ ನಡೆಸದೇ ಪೀಠದಿಂದ ಎದ್ದು ಹೋಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಇದೇ ಮೊದಲ ಬಾರಿಗೆ 8 ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಸ್ಪೀಕರ್ ಸಿಟ್ಟಿಗೆ​​ ಮೂವರು ಅಧಿಕಾರಿಗಳ ತಲೆದಂಡ: ಖಾದರ್​​ ಮನವೊಲಿಕೆ ಬಳಿಕ ಸದನ ಪುನಾರಂಭ

ಸ್ಪೀಕರ್ ಸಿಟ್ಟಿಗೆ​​ ಮೂವರು ಅಧಿಕಾರಿಗಳ ತಲೆದಂಡ: ಖಾದರ್​​ ಮನವೊಲಿಕೆ ಬಳಿಕ ಸದನ ಪುನಾರಂಭ

ವಿಧಾನಸಭೆಯಲ್ಲಿ ಸಚಿವರು ಸಮರ್ಪಕ ಉತ್ತರ ನೀಡದ ಕಾರಣ ಸ್ಪೀಕರ್ ಯು.ಟಿ. ಖಾದರ್ ಅವರ ಆಕ್ರೋಶದಿಂದಾಗಿ ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಮನವೊಲಿಕೆ ನಂತರ, ಎಲ್ಲಾ ಶಾಸಕರಿಗೆ ಪ್ರಶ್ನೆಗಳಿಗೆ ಉತ್ತರ ದೊರೆಯುವ ಬಗ್ಗೆ ಭರವಸೆ ನೀಡಿ ಕಲಾಪ ಪುನಾರಂಭವಾಗಿದೆ. ಇದೇ ರೀತಿಯ ಸಮಸ್ಯೆ ವಿಧಾನ ಪರಿಷತ್‌ನಲ್ಲೂ ಎದುರಾಗಿತ್ತು, ಅಲ್ಲಿಯೂ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಲಾಗಿದೆ.

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರಿ ಹೈಡ್ರಾಮಾ: ಶಾಸಕರ ಕಿತ್ತಾಟ, ಸಚಿವರ ನಡೆಗೆ ಅಸಮಾಧಾನ!

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರಿ ಹೈಡ್ರಾಮಾ: ಶಾಸಕರ ಕಿತ್ತಾಟ, ಸಚಿವರ ನಡೆಗೆ ಅಸಮಾಧಾನ!

ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ಅಲಭ್ಯತೆ, ಅನುದಾನ ಕೊರತೆ, ಮತ್ತು ಅಧಿಕಾರಿಗಳಿಂದ ಕಿರುಕುಳದ ಕುರಿತು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಐಎಎಸ್ ಅಧಿಕಾರಿ ರಾಜೇಂದ್ರ ಕಟಾರಿಯಾ ವಿರುದ್ಧ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆರೋಪ ಮಾಡಿದ್ದು, . ಇದೇ ವಿಚಾರಕ್ಕೆ ನಾರಾಯಣಸ್ವಾಮಿ ಮತ್ತು ಶೃಂಗೇರಿ ಶಾಸಕ ರಾಜೇಗೌಡ ನಡುವೆ ಮಾತಿನ ಚಕಮಕಿ ನಡೆದಿದೆ. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕದಲ್ಲೂ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್​​: ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ; ವಿಧಾನ ಸಭೆಯಲ್ಲೂ ಬಿಸಿ ಬಿಸಿ ಚರ್ಚೆ

ಬೆಂಗಳೂರಿಗರಿಗೆ ಜಿಬಿಎಯಿಂದ ಭರ್ಜರಿ ಶಾಕ್​​: ಹೆಚ್ಚುವರಿ ತೆರಿಗೆಗೆ ಬಿಜೆಪಿಗರು ಕೆಂಡ; ವಿಧಾನ ಸಭೆಯಲ್ಲೂ ಬಿಸಿ ಬಿಸಿ ಚರ್ಚೆ

ಬೆಂಗಳೂರಿನಲ್ಲಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ನಡೆಸಿದ ಡ್ರೋನ್ ಸರ್ವೆ ಬಳಿಕ ಹೊಸ ಹೆಚ್ಚುವರಿ ಆಸ್ತಿ ತೆರಿಗೆ ವಿಧಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಬಾಲ್ಕನಿ, ಟ್ಯಾಂಕ್ ಸೇರಿ ಮನೆಗಳ ಪೂರಕ ಕಟ್ಟಡಗಳಿಗೂ ತೆರಿಗೆ ವಿಧಿಸಿ ನೋಟಿಸ್ ನೀಡಲಾಗಿದೆ. ಬಿಜೆಪಿ ಶಾಸಕರು ಇದನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಡಿಸಿಎಂ ಡಿಕೆ ಶಿವಕುಮಾರ್, ಸಮಸ್ಯೆಯಿರುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವುದಾಗಿ ಹೇಳಿದ್ದಾರೆ.

ಮತ್ತೆ ಸಕ್ರಿಯ ರಾಜಕೀಯಕ್ಕೆ ಅನಂತ್ ಕುಮಾರ್ ಹೆಗಡೆ? ಹಿಂದೂ ಸಂಗಮದ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜು

ಮತ್ತೆ ಸಕ್ರಿಯ ರಾಜಕೀಯಕ್ಕೆ ಅನಂತ್ ಕುಮಾರ್ ಹೆಗಡೆ? ಹಿಂದೂ ಸಂಗಮದ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜು

ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕೀಯಕ್ಕೆ ಮರುಪ್ರವೇಶಿಸುತ್ತಿರುವುದಕ್ಕೆ ಸಂಬಂಧಿಸಿದ ವದಂತಿಗಳಿಗೆ ಈಗ ಮತ್ತಷ್ಟು ಪುಷ್ಟಿ ದೊರೆತಿದೆ. ಭಟ್ಕಳದಲ್ಲಿ ನಡೆಯುವ ‘ಹಿಂದೂ ಸಂಗಮ’ ಕಾರ್ಯಕ್ರಮದ ಮೂಲಕ ಅವರು ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಸಂಘ ಪರಿವಾರದ ಮನವೊಲಿಕೆಯ ನಂತರವೇ ಈ ಕಾರ್ಯಕ್ರಮ ನಿಗದಿಯಾಗಿದೆ ಎನ್ನಲಾಗಿದೆ.

60ಕ್ಕೂ ಹೆಚ್ಚು ಶಾಸಕರ ಸಂಪರ್ಕಿಸಿದ್ದ ಡಿಕೆಶಿ ಬೆಂಬಲಿಗರು! ಡಿನ್ನರ್ ಸಭೆಯಲ್ಲಿ ಏನೇನು ಚರ್ಚೆಯಾಯ್ತು? ಇಲ್ಲಿದೆ ವಿವರ

60ಕ್ಕೂ ಹೆಚ್ಚು ಶಾಸಕರ ಸಂಪರ್ಕಿಸಿದ್ದ ಡಿಕೆಶಿ ಬೆಂಬಲಿಗರು! ಡಿನ್ನರ್ ಸಭೆಯಲ್ಲಿ ಏನೇನು ಚರ್ಚೆಯಾಯ್ತು? ಇಲ್ಲಿದೆ ವಿವರ

DK Shivakumar supporters Dinner meeting: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಬೆಂಬಲಿಗ 40 ಶಾಸಕರು ಡಿನ್ನರ್ ಕೂಟ ನಡೆಸಿದ್ದು, ಸಿಎಂ ಸ್ಥಾನ ಕುರಿತು ಗಂಭೀರವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಏನೇನು ಚರ್ಚೆಯಾಗಿದೆ ಎಂಬ ಇನ್​ಸೈಡ್ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಮೊಕ್ಕಾಂ: 2 ದಿನಗಳಿಂದ ಹಿರಿಯ ಕಾಂಗ್ರೆಸ್ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್

ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಮೊಕ್ಕಾಂ: 2 ದಿನಗಳಿಂದ ಹಿರಿಯ ಕಾಂಗ್ರೆಸ್ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್

ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರ ಬೆಂಗಳೂರಿನಲ್ಲಿ ಮೊಕ್ಕಾಂ ಹೂಡಿದ್ದು, ಕಳೆದ ಎರಡು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ ಹೊಡೆಯುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ರಾಬರ್ಟ್ ವಾದ್ರಾ, ನಿನ್ನೆ (ಫೆಬ್ರವರಿ 25) ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ರಂಜಾನ್ ಮಾಸ ನಿಮಿತ್ತ ಬೆಂಗಳೂರಿನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಖಾಸಗಿ ಹೊಟೆಲ್ ನಲ್ಲಿ ಹಿರಿಯ ನಾಯಕನ ಜೊತೆ ಮಾತುಕತೆ ನಡೆಸಿದ್ದರು. ಇನ್ನು ಕೆಲ ಹಿರಿಯ ನಾಯಕರು ಭೇಟಿಗೆ ಸಮಯ ಕೇಳಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ಇದು ಕಾಂಗ್ರೆಸ್ ಮನೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ: ಪುತ್ರನಿಗೆ ಬೈ ಎಲೆಕ್ಷನ್ ಟಿಕೆಟ್‌ಗಾಗಿ ರಾಜಕೀಯ ದಾಳ?

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ: ಪುತ್ರನಿಗೆ ಬೈ ಎಲೆಕ್ಷನ್ ಟಿಕೆಟ್‌ಗಾಗಿ ರಾಜಕೀಯ ದಾಳ?

ವ್ಯವಹಾರಿಕ ಮತ್ತು ಕ್ಷೇತ್ರದ ಒತ್ತಡ ಕಾರಣ ನೀಡಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ. ಪುತ್ರನಿಗೆ ಟಿಕೆಟ್ ಕೊಡಿಸುವ ರಾಜಕೀಯ ತಂತ್ರದ ಭಾಗವಾಗಿ ಈ ನಿರ್ಧಾರ ಕೈಗೊಂಡಿರಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ಡಿಸಿಎಂ ದೆಹಲಿ ಪ್ರವಾಸ: ಡಿ.ಕೆ. ಶಿವಕುಮಾರ್​ ನಡೆಯೇ ಕುತೂಹಲ

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ಡಿಸಿಎಂ ದೆಹಲಿ ಪ್ರವಾಸ: ಡಿ.ಕೆ. ಶಿವಕುಮಾರ್​ ನಡೆಯೇ ಕುತೂಹಲ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಜೆಟ್ ಪೂರ್ವಭಾವಿ ಸಭೆಗೆ ಗೈರಾಗಿ ದೆಹಲಿಗೆ ತೆರಳುತ್ತಿರೋದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ತಮ್ಮ ಬೆಂಬಲಿಗರಿಗೆ ಮತ್ತು ಹೈಕಮಾಂಡ್‌ಗೆ ಸಂದೇಶ ರವಾನಿಸುವ ಉದ್ದೇಶದಿಂದ ಡಿಕೆಶಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಸಿದ್ಧತೆಗೆ ವಿರೋಧ ಸೂಚಿಸುವ ನಡೆ ಎನ್ನಲಾಗುತ್ತಿದೆ.

ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ!

ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ!

ಯತೀಂದ್ರ ಸಿದ್ದರಾಮಯ್ಯ ಇಂಧನ ಇಲಾಖೆಯಲ್ಲಿ ಮಾಡಿದ ಹಸ್ತಕ್ಷೇಪದಿಂದ ಬೇಸತ್ತು ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಅಂಶ ಈಗ ಬಯಲಾಗಿದೆ. ಅಧಿಕಾರಿಗಳ ವರ್ಗಾವಣೆ, ಅಮಾನತು ವಿಚಾರ ಜಾರ್ಜ್‌ಗೆ ಅಸಮಾಧಾನ ತಂದಿತ್ತು. ‘ಮಂತ್ರಿಯಾಗಿ ನನ್ನ ಮಾತಿಗೆ ಬೆಲೆ ಇಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ಪತ್ರವನ್ನೂ ಸಿಎಂಗೆ ನೀಡಿದ್ದರು. ಬಳಿಕ ಅವರ ಮನವೊಲಿಸಲಾಗಿತ್ತು ಎಂಬುದು ಬೆಳಕಿಗೆ ಬಂದಿದೆ. ಏನೇನಾಗಿತ್ತು ಎಂಬ ಪೂರ್ಣ ಮಾಹಿತಿ ಇಲ್ಲಿದೆ.

ವಿಶೇಷ ಅಧಿವೇಶನ: ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲರು? ಕುತೂಹಲ ಮೂಡಿಸಿದ ನಡೆ!

ವಿಶೇಷ ಅಧಿವೇಶನ: ಸರ್ಕಾರಕ್ಕೆ ಚೆಕ್ ಮೇಟ್ ಇಡ್ತಾರಾ ರಾಜ್ಯಪಾಲರು? ಕುತೂಹಲ ಮೂಡಿಸಿದ ನಡೆ!

ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ ಇರುವ ಕೇಂದ್ರದ ವಿರುದ್ಧದ 11 ಪ್ಯಾರಾಗಳನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಆದರೆ, ಸರ್ಕಾರ ಪಟ್ಟುಬಿಡುತ್ತಿಲ್ಲ. ಇದರಿಂದ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ರಾಜ್ಯಪಾಲರು ಮತ್ತು ಸರ್ಕಾರದ ಮುಂದೆ ಏನೇನು ಆಯ್ಕೆಗಳಿವೆ ಎಂಬ ಮಾಹಿತಿ ಇಲ್ಲಿದೆ.

ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಕಡುವಿನಹೊಸಹಳ್ಳಿಯಲ್ಲಿ ಯುಗಾದಿ ಹೊನ್ನಾರು ಸಂಭ್ರಮ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಟಾಪ್ ಗೇರ್​ನಲ್ಲಿ ವಿರಾಟ್ ಬ್ಯಾಟಿಂಗ್‌ ಅಭ್ಯಾಸ; ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?