ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: BJP ಶಾಸಕಿ ರತ್ನ ದೇವನಾಥ್ ಮನೆ ಬಳಿಯೇ ಬಾಂಬ್ ಸ್ಫೋಟ
ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣಾ ಫಲಿತಾಂಶದ ಬಳಿಕ ಹಿಂಸಾಚಾರ ತೀವ್ರಗೊಂಡಿದೆ. ಆರ್.ಜಿ ಕರ್ ಆಸ್ಪತ್ರೆಯಲ್ಲಿನ ಅತ್ಯಾಚಾರ ಸಂತ್ರಸ್ತೆ ತಾಯಿ, ಪಾನಿಹಾಟಿ ಬಿಜೆಪಿ ಶಾಸಕಿ ರತ್ನ ದೇವನಾಥ್ ಮನೆ ಬಳಿ ಬಾಂಬ್ ಸ್ಫೋಟಗೊಂಡಿರೋದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಘಟನೆಯಲ್ಲಿ ಐವರು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕನನ್ನೂ ಗುಂಡಿಕ್ಕಿ ಕೊಂದಿರುವ ಘಟನೆ ಕೂಡ ದೇಶಾದ್ಯಂತ ಸುದ್ದಿಯಾಗಿದೆ.
- Pramod Shastri G
- Updated on: May 7, 2026
- 12:40 pm
ಸುವೇಂದು ಅಧಿಕಾರಿಯೇ ದುಷ್ಕರ್ಮಿಗಳ ಗುರಿ? ಹೆಚ್ಚಾಯ್ತು ಅನುಮಾನ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ ಸುವೆಂದು ಅಧಿಕಾರಿಯ ಆಪ್ತ ಚಂದ್ರನಾಥ್ ರಥ್ ಎಂಬುವವರನ್ನು ಎಂಟು ಮಂದಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ ಅಡ್ಡಗಟ್ಟಿ ಈ ಕೃತ್ಯ ಎಸಗಲಾಗಿದ್ದು, ಘಟನೆಯಿಂದ ಬಂಗಾಳದ ರಾಜಕೀಯ ವಲಯದಲ್ಲಿ ಆತಂಕ ಮನೆಮಾಡಿದೆ. ಸುವೇಂದು ಅಧಿಕಾರಿಯೇ ದುಷ್ಕರ್ಮಿಗಳ ಗುರಿಯಾಗಿದ್ದರಾ ಎಂಬ ಅನುಮಾನವೂ ಇದೀಗ ಬಲವಾಗಿದೆ.
- Pramod Shastri G
- Updated on: May 7, 2026
- 10:33 am
ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಕಾಳಿಘಾಟ್ ನಿವಾಸದ ಭದ್ರತೆ ಕಡಿತ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ಬೆನ್ನಲ್ಲೇ, ಕೋಲ್ಕತ್ತಾದ ಕಾಳಿಘಾಟ್ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದ ಭದ್ರತೆ ಕಡಿತಗೊಂಡಿದೆ. ಮುಖ್ಯಮಂತ್ರಿಗಳ ಭದ್ರತೆ ಹಿಂಪಡೆಯಲಾಗಿದ್ದು, ರಸ್ತೆಯಲ್ಲಿದ್ದ ಬ್ಯಾರಿಕೇಡ್ಗಳನ್ನು ತೆರವುಗೊಳಿಸಲಾಗಿದೆ. ಹಿಂದೆ ಕಾರ್ಯಕರ್ತರಿಂದ ತುಂಬಿ ತುಳುಕುತ್ತಿದ್ದ ರಸ್ತೆ ಈಗ ಬಿಕೋ ಎನ್ನುತ್ತಿದೆ.
- Pramod Shastri G
- Updated on: May 6, 2026
- 12:27 pm
ದೆಹಲಿಯಲ್ಲಿ ಡಿಕೆ ಸಹೋದರರ ಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಕರ್ನಾಟಕ ರಾಜಕಾರಣದಲ್ಲಿ ಮೇ ಮೊದಲ ವಾರದಲ್ಲಿ ದೊಡ್ಡ ಹೈಡ್ರಾಮಾ ನಡೆಯುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಗೆ ಭೇಟಿ ನೀಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರೊಂದಿಗೆ ಒಂದುವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಣ ಕೂಡ ಸಕ್ರಿಯವಾಗಿದ್ದು, ಮುಂದಿನ ನಡೆ ಕುರಿತು ಚರ್ಚೆ ನಡೆಯುತ್ತಿದೆ.
- Pramod Shastri G
- Updated on: Apr 25, 2026
- 11:34 am
ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಅನುದಾನದ ವಿವರ ಕೇಳಿದ ಆಯೋಗ
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆ ಮಾಡಿದ್ದು, ಈ ಮೂಲಕ ಮತದಾರರನ್ನು ಸೆಳೆಯುವ ಯತ್ನ ಮಾಡಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಈ ಸಂಬಂಧ ಪರ ವಿರೋಧದ ಚರ್ಚೆ ಜೋರಾಗಿರುವ ಮಧ್ಯೆ ಚುನಾವಣಾ ಆಯೋಗ ಮಧ್ಯೆ ಪ್ರವೇಶಿಸಿದ್ದು, ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಗಳಲ್ಲಿ ಬಿಡುಗಡೆಯಾಗಿರುವ ಗ್ಯಾರಂಟಿ ಯೋಜನೆಗಳ ಅನುದಾನದ ವಿವರ ಕೇಳಿದೆ.
- Pramod Shastri G
- Updated on: Apr 7, 2026
- 9:04 pm
ಏಕವಚನದಲ್ಲಿ ಬೈದಿದ್ದ ಸಚಿವ ಎಸ್ಎಸ್ ಮಲ್ಲಿಕಾರ್ಜುರನ್ನು ಕ್ಷಮಿಸಿ ಪ್ರಚಾರಕ್ಕೆ ಬಂದ ಜಮೀರ್
ಜಮೀರ್ ಅವರಿಂದ ಮುಸ್ಲಿಂ ಮತಗಳು ವಿಭನೆಯಾಗುವ ಆತಂಕಕ್ಕೂ ಕಾರಣವಾಗಿತ್ತು. ಹೀಗಾಗಿ ಹೈಕಮಾಂಡ್, ಜಮೀರ್ ಅವರನ್ನ ದಾವಣಗೆರೆ ತೆರಳು ಸೂಚಿಸಿದೆ. ಅದರಂತೆ ಇಂದು (ಏಪ್ರಿಲ್ 05) ಜಮೀರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಅಖಾಡಕ್ಕಿಳಿದಿದ್ದಾರೆ. ಇನ್ನು ಇದೇ ವೇಳೆ ಮಲ್ಲಿಕಾರ್ಜುನ ಅವರು ಬೈದಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನಿಗೆ ಉತ್ತರಿಸಿದ ಜಮೀರ್, ಮಲ್ಲಿಕಾರ್ಜುನ ಅವರು ನನ್ನ ಅಣ್ಣ, ಸಿಟ್ಟಿನಲ್ಲಿ ಏನೋ ಬೈದಿದ್ದಾರೆ ಎಂದಿದ್ದಾರೆ. ಈ ಮೂಲಕ ಮಲ್ಲಿಕಾರ್ಜುನ ಅವರನ್ನ ಕ್ಷಮಿಸಿ ಅವರ ಪುತ್ರನ ಪರ ಪ್ರಚಾರಕ್ಕಿಳಿದಿದ್ದಾರೆ.
- Pramod Shastri G
- Updated on: Apr 5, 2026
- 3:51 pm
ದಾವಣಗೆರೆ ಬೈ ಎಲೆಕ್ಷನ್: ಅಸಮಾಧಾನದ ಆರೋಪಕ್ಕೆ ಸಚಿವ ಜಮೀರ್ ಫಸ್ಟ್ ರಿಯಾಕ್ಷನ್
ಸಚಿವ ಜಮೀರ್ ಅಹ್ಮದ್ ಖಾನ್ ದಾವಣಗೆರೆ ದಕ್ಷಿಣ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದು, ಟಿಕೆಟ್ ಅಸಮಾಧಾನದ ಆರೋಪ ನಿರಾಕರಿಸಿದ್ದಾರೆ. ಶಾಮನೂರು ಶಿವಶಂಕರಪ್ಪನವರು 2023ರಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವ ಭರವಸೆ ನೀಡಿದ್ದರೂ, ಕುಟುಂಬದವರಿಗೆ ಟಿಕೆಟ್ ನೀಡುವ ಪಕ್ಷದ ನಿರ್ಧಾರವನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿಯವರ ಸೂಚನೆಯಂತೆ ಪ್ರಚಾರಕ್ಕೆ ಆಗಮಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
- Pramod Shastri G
- Updated on: Apr 5, 2026
- 12:48 pm
ಬಿಜೆಪಿಗರಿಗೆ ನಾನೇ ಟಾರ್ಗೆಟ್ ಎಂದ ಸಿಎಂ: ಕಾರಣವನ್ನೂ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
ಉಪಚುನಾವಣೆ ಪ್ರಚಾರದ ಮಧ್ಯೆ ಟಿವಿ9 ಜೊತೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಡವರ ಪರ ನಿಲುವಿನ ಕಾರಣ ಬಿಜೆಪಿ ತನ್ನನ್ನು ಟಾರ್ಗೆಟ್ ಮಾಡುತ್ತಿದೆ ಎಂದು ದೂರಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ಕಾರ್ಯಕ್ರಮಗಳು ಮತ್ತು ಸಾಧನೆಗಳನ್ನು ಜನರಿಗೆ ತಿಳಿಸುತ್ತಿದ್ದು, ಜನ ಅವುಗಳನ್ನು ವಿಮರ್ಶಿಸಲಿದ್ದಾರೆ. ಬಿಜೆಪಿಗರು ನನ್ನ ಮೇಲೆ ಮಾತಿನ ದಾಳಿ ಮಾಡೋದನ್ನು ಬಿಟ್ಟು ಮತ್ತೇನನ್ನು ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.
- Pramod Shastri G
- Updated on: Apr 4, 2026
- 8:27 pm
ಬಜೆಟ್ ಅಧಿವೆಶನದ ನಡುವೆ ಮಹತ್ವದ ಬೆಳವಣಿಗೆ: ದೀಢೀರ್ ಸಿಎಂ ಭೇಟಿಯಾಗಿದ್ದೇಕೆ ಕಾಂಗ್ರೆಸ್ನ ಹಿರಿಯ ಶಾಸಕರ ತಂಡ?
ಬಜೆಟ್ ಅಧಿವೇಶನದ ನಡುವೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಿರಿಯ ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಚಿವ ಸಂಪುಟ ಪುನಾರಚನೆ ವೇಳೆ ಕನಿಷ್ಠ 20 ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಆಗ್ರಹ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆ ಬಳಿಕ ಹೈಕಮಾಂಡ್ ಜತೆ ಮಾತನಾಡುವುದಾಗಿ ಸಿಎಂ ಭರವಸೆ ನೀಡಿದ್ದು, ಇತ್ತ ಶಾಸಕರೂ ಏಪ್ರಿಲ್ 11 ರಂದು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಲು ಸಿದ್ಧತೆ ನಡೆಸಿರೋದಾಗಿ ತಿಳಿದುಬಂದಿದೆ.
- Pramod Shastri G
- Updated on: Mar 17, 2026
- 4:33 pm
ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಏಕಕಾಲಕ್ಕೆ 8 ಹಿರಿಯ IAS ಅಧಿಕಾರಿಗಳಿಗೆ ಶೋಕಾಸ್ ನೋಟಿಸ್
ಅಧಿವೇಶನ ನಡೆಯುವಾಗ ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುವುದು ಅಥವಾ ಸಭಾತ್ಯಾಗ ಮಾಡೋದು ಹೊಸದೆನಲ್ಲ. ಆದ್ರೆ ಈ ಬಾರಿ ಅಪರೂಪದಲ್ಲಿ ಅಪರೂಪ ಎಂಬಂತೆ ಕರ್ನಾಟಕ ವಿಧಾನಸಭೆಯಲ್ಲಿ ಕಂಡು ಕೇಳರಿಯದ ಘಟನೆ ನಡೆದಿದೆ. ಸ್ಪೀಕರ್ ಯು.ಟಿ.ಖಾದರ್ ಅವರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಲಾಪ ನಡೆಸದೇ ಪೀಠದಿಂದ ಎದ್ದು ಹೋಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಇದೇ ಮೊದಲ ಬಾರಿಗೆ 8 ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
- Pramod Shastri G
- Updated on: Mar 16, 2026
- 10:30 pm
ಸ್ಪೀಕರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ: ಖಾದರ್ ಮನವೊಲಿಕೆ ಬಳಿಕ ಸದನ ಪುನಾರಂಭ
ವಿಧಾನಸಭೆಯಲ್ಲಿ ಸಚಿವರು ಸಮರ್ಪಕ ಉತ್ತರ ನೀಡದ ಕಾರಣ ಸ್ಪೀಕರ್ ಯು.ಟಿ. ಖಾದರ್ ಅವರ ಆಕ್ರೋಶದಿಂದಾಗಿ ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಮನವೊಲಿಕೆ ನಂತರ, ಎಲ್ಲಾ ಶಾಸಕರಿಗೆ ಪ್ರಶ್ನೆಗಳಿಗೆ ಉತ್ತರ ದೊರೆಯುವ ಬಗ್ಗೆ ಭರವಸೆ ನೀಡಿ ಕಲಾಪ ಪುನಾರಂಭವಾಗಿದೆ. ಇದೇ ರೀತಿಯ ಸಮಸ್ಯೆ ವಿಧಾನ ಪರಿಷತ್ನಲ್ಲೂ ಎದುರಾಗಿತ್ತು, ಅಲ್ಲಿಯೂ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಲಾಗಿದೆ.
- Pramod Shastri G
- Updated on: Mar 16, 2026
- 2:14 pm
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾರಿ ಹೈಡ್ರಾಮಾ: ಶಾಸಕರ ಕಿತ್ತಾಟ, ಸಚಿವರ ನಡೆಗೆ ಅಸಮಾಧಾನ!
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ಅಲಭ್ಯತೆ, ಅನುದಾನ ಕೊರತೆ, ಮತ್ತು ಅಧಿಕಾರಿಗಳಿಂದ ಕಿರುಕುಳದ ಕುರಿತು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಐಎಎಸ್ ಅಧಿಕಾರಿ ರಾಜೇಂದ್ರ ಕಟಾರಿಯಾ ವಿರುದ್ಧ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಆರೋಪ ಮಾಡಿದ್ದು, . ಇದೇ ವಿಚಾರಕ್ಕೆ ನಾರಾಯಣಸ್ವಾಮಿ ಮತ್ತು ಶೃಂಗೇರಿ ಶಾಸಕ ರಾಜೇಗೌಡ ನಡುವೆ ಮಾತಿನ ಚಕಮಕಿ ನಡೆದಿದೆ. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕದಲ್ಲೂ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.
- Pramod Shastri G
- Updated on: Mar 12, 2026
- 8:00 am