AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pramod Shastri G

Pramod Shastri G

Author - TV9 Kannada

pramod.shastri@tv9.com
ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಮತ್ತೊಂದು ‘ಬ್ರೇಕ್​ಫಾಸ್ಟ್ ಮೀಟಿಂಗ್’!

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಮತ್ತೊಂದು ‘ಬ್ರೇಕ್​ಫಾಸ್ಟ್ ಮೀಟಿಂಗ್’!

ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತುಸುಮಟ್ಟಿನ ಶಮನ ದೊರೆತಿದ್ದರೂ, ದೆಹಲಿ ಮಟ್ಟದಲ್ಲಿ ಮಾತುಕತೆ ಮುಂದುವರಿದಿದೆ. ಈ ಮಧ್ಯೆ, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ‘ ಬ್ರೇಕ್ ಫಾಸ್ಟ್ ಮೀಟಿಂಗ್’ನಲ್ಲಿ ಭಾಗವಹಿಸಿದ ನಂತರ ಇದೀಗ, ಮಂಗಳವಾರ ಬೆಳಗ್ಗೆ ಡಿಕೆ ಶಿವಕುಮಾರ್ ನಿವಾಸದಲ್ಲಿ ಆಯೋಜನೆಗೊಂಡಿರುವ ‘ ಬ್ರೇಕ್ ಫಾಸ್ಟ್ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಸಿದ್ದರಾಮಯ್ಯ ಬಣದಿಂದ ಡಿಕೆ ಶಿವಕುಮಾರ್ ವಿರುದ್ಧ ಹೊಸ ದಾಳ

ಸಿದ್ದರಾಮಯ್ಯ ಬಣದಿಂದ ಡಿಕೆ ಶಿವಕುಮಾರ್ ವಿರುದ್ಧ ಹೊಸ ದಾಳ

ಸಿದ್ದರಾಮಯ್ಯ ಬಣದಿಂದ ಎಐಸಿಸಿ ಪತ್ರಿಕಾ ಪ್ರಕಟಣೆಯ ದಾಳ ಉರುಳಿಸಲಾಗಿದೆ. 2023ರ ಮೇ 18ರಂದು ಕರ್ನಾಟಕದ ಸಿಎಂ -ಡಿಸಿಎಂ ನಿಯೋಜನೆಗೊಂಡ ವೇಳೆ ಬಿಡುಗಡೆ ಮಾಡಿದ್ದ ಪ್ರೆಸ್ ನೋಟ್ ಇದೀಗ ಮತ್ತೆ ಸದ್ದು ಮಾಡುತ್ತಿದೆ. ಆಗ ಬಿಡುಗಡೆ ಮಾಡಲಾಗಿದ್ದ ಎಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮುಂದಿನ ಲೋಕಸಭಾ ಚುನಾವಣೆವರೆಗೆ ಮಾತ್ರ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿತ್ತು. ಆದರೆ, ಡಿಕೆ ಶಿವಕುಮಾರ್ 2024ರ ಲೋಕಸಭೆ ಚುನಾವಣೆ ಬಳಿಕವೂ ಅಧ್ಯಕ್ಷರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಪ್ರಶ್ನೆ ಮಾಡಿದ್ದಾರೆ. ಡಿಸಿಎಂ ಅವಧಿ ಮುಗಿದ ಬಳಿಕವೂ ಕೆಪಿಸಿಸಿ ಅಧ್ಯಕ್ಷರಾಗಿಲ್ಲವೇ? ಎಂದು ಬಹಿರಂಗವಾಗಿಯೇ ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ನೀಡಿದ್ದಾರೆ. ಇದು ಮತ್ತೆ ಚರ್ಚೆಗೆ ಕಾರಣವಾಗಿದೆ.

ಸಂಪುಟ ಪುನಾರಚನೆ ಸುತ್ತ ಪ್ರಶ್ನೆಗಳ ಹುತ್ತ: ಕಾಂಗ್ರೆಸ್​​ನಲ್ಲಿ ನವೆಂಬರ್ ಶಾಂತಿ ಕ್ರಾಂತಿಯ ಇನ್​​​ಸೈಡ್​ ಮಾಹಿತಿ

ಸಂಪುಟ ಪುನಾರಚನೆ ಸುತ್ತ ಪ್ರಶ್ನೆಗಳ ಹುತ್ತ: ಕಾಂಗ್ರೆಸ್​​ನಲ್ಲಿ ನವೆಂಬರ್ ಶಾಂತಿ ಕ್ರಾಂತಿಯ ಇನ್​​​ಸೈಡ್​ ಮಾಹಿತಿ

ಸಚಿವ ಸಂಪುಟ ಪುನಾರಚನೆ ಚರ್ಚೆ ಕರ್ನಾಟಕ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಜೋರಾಗಿದೆ. ಸಚಿವ ಸ್ಥಾನ ಆಕಾಂಕ್ಷಿಗಳು ಈಗಾಗಲೇ ಸಿಎಂ ಸಿದ್ದರಾಮಯ್ಯನವರ ಬೆನ್ನು ಬಿದ್ದಿದ್ದು ಲಾಬಿ ನಡೆಸಿದ್ದಾರೆ. ಆದರೆ ನಾಯಕರು ಅಂದುಕೊಂಡಷ್ಟು ಸುಲಭವಲ್ಲ ಈ ಪುನರ್ ರಚನೆಯ ಕಾರ್ಯ. ಯಾಕಂದ್ರೆ ಸರ್ಕಾರ ಸಂಪುಟ ಸರ್ಜರಿ ಮಾಡಬೆಕು ಅಂದ್ರೆ ಕಾಲಾವಕಾಶ ಹಿಡಿಯಲಿದೆ. ಯಾಕೆ ಅಂತೀರಾ? ಇಲ್ಲಿದೆ ನವೆಂಬರ್ ಕ್ರಾಂತಿ ಶಾಂತಿಯ ಇನ್​ಸೈಡ್ ಡಿಟೇಲ್ಸ್​

ಸಚಿವ ಸಂಪುಟ ಸರ್ಕಸ್​ ನಡುವೆ ಡಿಕೆ ಬ್ರದರ್ಸ್​ ನಡೆ ಸಸ್ಪೆನ್ಸ್​: ಕಾಂಗ್ರೆಸ್​ ಪಾಳಯದಲ್ಲಿ ಆಗ್ತಿರೋದೇನು?

ಸಚಿವ ಸಂಪುಟ ಸರ್ಕಸ್​ ನಡುವೆ ಡಿಕೆ ಬ್ರದರ್ಸ್​ ನಡೆ ಸಸ್ಪೆನ್ಸ್​: ಕಾಂಗ್ರೆಸ್​ ಪಾಳಯದಲ್ಲಿ ಆಗ್ತಿರೋದೇನು?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಸಂಪುಟ ಪುನಾರಚನೆಗೆ ಸಿಎಂ ಒಲವು ತೋರಿದರೆ, ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​ ವಿರೋಧ ವ್ಯಕ್ತಪಡಿಸಿದ್ದಾರೆ. ಖಾಲಿ ಸ್ಥಾನಗಳ ಭರ್ತಿ, ಪರಿಷತ್ ಸ್ಥಾನಗಳ ಬಗ್ಗೆಯೂ ಚರ್ಚೆಯಾಗಿದ್ದು, ಅಂತಿಮ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎನ್ನಲಾಗಿದೆ. ಈ ನಡುವೆ ಮಾಜಿ ಸಂಸದ ಡಿ.ಕೆ. ಸುರೇಶ್​ ಕೂಡ ದೆಹಲಿಗೆ ಪ್ರಯಾಣ ಬೆಳೆಸಿರೋದು ಭಾರಿ ಕುತೂಹಲ ಮೂಡಿಸಿದೆ.

SCSP, TSP ಹಣಕ್ಕಾಗಿ ಹೆಚ್​.ಸಿ. ಮಹದೇವಪ್ಪ ರೆಬೆಲ್​: ಸಚಿವ ಸಂಪುಟ ಸಭೆಯಲ್ಲಿ ಹೈಡ್ರಾಮಾ

SCSP, TSP ಹಣಕ್ಕಾಗಿ ಹೆಚ್​.ಸಿ. ಮಹದೇವಪ್ಪ ರೆಬೆಲ್​: ಸಚಿವ ಸಂಪುಟ ಸಭೆಯಲ್ಲಿ ಹೈಡ್ರಾಮಾ

ಸಚಿವ ಸಂಪುಟ ಸಭೆಯಲ್ಲಿ ಡಾ. ಹೆಚ್.ಸಿ. ಮಹದೇವಪ್ಪ SCSP, TSP ಅನುದಾನ ಹಂಚಿಕೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಮಹದೇವಪ್ಪ-ಕೆ.ಜೆ.ಜಾರ್ಜ್ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಹಿಂದುಳಿದವರಿಗೆ ಸಿಗಬೇಕಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬ ಆರೋಪದ ನಡುವೆ, ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಸಚಿವರೇ ಹೇಳಿರೋದು ಕುತೂಹಲ ಮೂಡಿಸಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಬೆನ್ನಲ್ಲೇ ಚುನಾವಣೆಗೆ ಸಿದ್ಧತೆ: ಅಧಿಕಾರಿಗಳನ್ನ ನೇಮಿಸಿದ ಆಯೋಗ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಬೆನ್ನಲ್ಲೇ ಚುನಾವಣೆಗೆ ಸಿದ್ಧತೆ: ಅಧಿಕಾರಿಗಳನ್ನ ನೇಮಿಸಿದ ಆಯೋಗ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ರಚನೆಯಾಗಿರುವ 5 ನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಹಾಗೂ ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಸದ್ಯದಲ್ಲೇ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಅಧಿಕಾರ ಹಂಚಿಕೆ ಸ್ಪಷ್ಟತೆ ಬಗ್ಗೆ ದಾಳ ಉರುಳಿಸಿದ ಸಾಹುಕಾರ್: ಯಥಾಸ್ಥಿತಿ ಕಾಯ್ದುಕೊಳ್ಳುವ ಬಗ್ಗೆ ತೆರೆಮರೆಯಲ್ಲಿ ತಂತ್ರಗಾರಿಕೆ

ಅಧಿಕಾರ ಹಂಚಿಕೆ ಸ್ಪಷ್ಟತೆ ಬಗ್ಗೆ ದಾಳ ಉರುಳಿಸಿದ ಸಾಹುಕಾರ್: ಯಥಾಸ್ಥಿತಿ ಕಾಯ್ದುಕೊಳ್ಳುವ ಬಗ್ಗೆ ತೆರೆಮರೆಯಲ್ಲಿ ತಂತ್ರಗಾರಿಕೆ

ಅಕ್ಟೋಬರ್ ಶುರುವಾಗಿ ನವೆಂಬರ್ ದಿನಗಳು ಹತ್ತಿರವಾಗುತ್ತಿರುವಂತೆಯೇ ಕರ್ನಾಟಕ ಕಾಂಗ್ರೆಸ್​​ನಲ್ಲಿ ಕ್ರಾಂತಿಯ ಲಕ್ಷಣಗಳೂ ಶುರುವಾಗಿವೆ. ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿರುವ ನಾಯಕರ ತಂಡ ತಮ್ಮದೇ ತಂತ್ರಗಾರಿಕೆ ಮೂಲಕ ಹೊಸ ದಾಳ ಉರುಳಿಸಿದೆ. ಆ ಮೂಲಕ, ಯಥಾಸ್ಥಿತಿ ಕಾಯ್ದುಕೊಳ್ಳುವ ಬಗ್ಗೆ ತೆರೆಮರೆಯಲ್ಲಿ ತಂತ್ರಗಾರಿಕೆ ಹೆಣೆಯುತ್ತಿದೆ.

ರಸ್ತೆ ಗುಂಡಿಗಳ ಮುಚ್ಚಿಸಲು ನಿಮಗೇನು ಕಷ್ಟ, ನಾಚಿಕೆ ಆಗಲ್ವೇ: ಜಿಬಿಎ ಅಧಿಕಾರಿಗಳ ಸಭೆಯಲ್ಲಿ ಸಿಎಂ ಕೆಂಡಾಮಂಡಲ, ಖಡಕ್ ಎಚ್ಚರಿಕೆ

ರಸ್ತೆ ಗುಂಡಿಗಳ ಮುಚ್ಚಿಸಲು ನಿಮಗೇನು ಕಷ್ಟ, ನಾಚಿಕೆ ಆಗಲ್ವೇ: ಜಿಬಿಎ ಅಧಿಕಾರಿಗಳ ಸಭೆಯಲ್ಲಿ ಸಿಎಂ ಕೆಂಡಾಮಂಡಲ, ಖಡಕ್ ಎಚ್ಚರಿಕೆ

ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಉದ್ಯಮಿಗಳ ಆಕ್ಷೇಪದ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ತಕ್ಷಣವೇ ಸಮಸ್ಯೆ ಬಗೆಹರಿಸಿ, ಇಲ್ಲವಾದಲ್ಲಿ ಅಧಿಕಾರಿಗಳ ತಲೆದಂಡವಾಗಲಿದೆ ಎಂದು ಖಡಕ್ ಎಚ್ಚರಿಕೆಯನ್ನೂ ನೀಡಿದ್ದಾರೆ.

ಶಾಸಕರಿಗೆ 50 ಕೋಟಿ ರೂ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ: ರಸ್ತೆ ನಿರ್ಮಾಣಕ್ಕೆ ಬಳಸುವಂತೆ ಸೂಚನೆ

ಶಾಸಕರಿಗೆ 50 ಕೋಟಿ ರೂ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ: ರಸ್ತೆ ನಿರ್ಮಾಣಕ್ಕೆ ಬಳಸುವಂತೆ ಸೂಚನೆ

ಸಿಎಂ ಸಿದ್ದರಾಮಯ್ಯ ಬೆಂಗಳೂರು ನಗರದ ಶಾಸಕರೊಂದಿಗೆ ನಡೆಸಿದ ಸಭೆಯಲ್ಲಿ, ಬೆಂಗಳೂರಿನ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದು, ಈ ಅನುದಾನವನ್ನು ರಸ್ತೆ ದುರಸ್ತಿ ಮತ್ತು ಹೊಸ ರಸ್ತೆ ನಿರ್ಮಾಣಕ್ಕೆ ಬಳಸಬೇಕೆಂದು ಸೂಚಿಸಿದ್ದಾರೆ.

ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾದ ಬಾನು ಮುಷ್ತಾಕರ ಹಳೇ ವಿಡಿಯೋ ಹರಿಬಿಟ್ಟ ಸಚಿವೆ ಶೋಭಾ

ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾದ ಬಾನು ಮುಷ್ತಾಕರ ಹಳೇ ವಿಡಿಯೋ ಹರಿಬಿಟ್ಟ ಸಚಿವೆ ಶೋಭಾ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್​ ಅವರನ್ನು ಆಹ್ವಾನಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಹಿಂದೂ ಧರ್ಮದ ಬಗ್ಗೆ ನಂಬಿಕೆ ಇಲ್ಲದವರು ದಸರಾ ಉದ್ಘಾಟನೆಗೆ ಬಂದು ಏನು ಮಾಡುತ್ತಾರೆ ಎಂಬ ಪ್ರಶ್ನೆ ಎದ್ದಿದೆ. ಶೋಭಾ ಕರಂದ್ಲಾಜೆ ಅವರು ಬಾನು ಮುಷ್ತಾಕ್​​ ಅವರು ಕಾರ್ಯಕ್ರಮದಿಂದ ಹೊರಗುಳಿಯುವಂತೆ ಮನವಿ ಮಾಡಿದ್ದಾರೆ. ಈ ವಿಷಯ ರಾಜಕೀಯ ಚರ್ಚೆಗೆ ಕಾರಣವಾಗಿದೆ.

KN Rajanna Resigns: ಸಚಿವ ಸ್ಥಾನಕ್ಕೆ ಕೆಎನ್​ ರಾಜಣ್ಣ ರಾಜೀನಾಮೆ

KN Rajanna Resigns: ಸಚಿವ ಸ್ಥಾನಕ್ಕೆ ಕೆಎನ್​ ರಾಜಣ್ಣ ರಾಜೀನಾಮೆ

ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್​ನ ರಾಷ್ಟ್ರೀಯ ಮತ್ತು ರಾಜ್ಯ ​ನಾಯಕರು ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಮಾಡಿದ್ದರು. ಈ ವಿಚಾರವಾಗಿ ಸಚಿವ ಕೆಎನ್​ ರಾಜಣ್ಣ ಹೇಳಿಕೆಯೊಂದು ನೀಡಿ ತಮ್ಮದೇ ಪಕ್ಷದ ನಾಯಕರು ಮುಜುಗುರಕ್ಕೀಡಾಗುವಂತೆ ಮಾಡಿದ್ದರು. ಕೆಎನ್​ ರಾಜಣ್ಣ ಹೇಳಿಕೆಯಿಂದ ಹೈಕಮಾಂಡ್ ತೀವ್ರ ಅಸಮಾಧಾನಗೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ

ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ

38 ವರ್ಷಗಳ ಹಿಂದೆ ಪದ್ಮಲತಾ ಎಂಬುವವರ ಅಸಹಜ ಸಾವಿನ ಪ್ರಕರಣ ಮರು ತನಿಖೆಗೆ ಒತ್ತಾಯಿಸಲಾಗಿದೆ. ಪದ್ಮಲತಾರ ಸಹೋದರಿ ಎಸ್ಐಟಿ ಕಚೇರಿಗೆ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಮತಾಂತರ ಮಾಫಿಯಾ ಮತ್ತು ನಗರ ನಕ್ಸಲರ ಕೈವಾಡವಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಆರೋಪಿಸಿದ್ದು, ಸದನದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.