AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pramod Shastri G

Pramod Shastri G

Author - TV9 Kannada

pramod.shastri@tv9.com
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ: ಕಾಂಗ್ರೆಸ್​ನಲ್ಲಿ ಸದ್ಯಕ್ಕಿಲ್ಲ ಕ್ರಾಂತಿ!

ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ: ಕಾಂಗ್ರೆಸ್​ನಲ್ಲಿ ಸದ್ಯಕ್ಕಿಲ್ಲ ಕ್ರಾಂತಿ!

ರಾಹುಲ್ ಗಾಂಧಿ ‘ಕಮ್ ಟು ದೆಹಲಿ’ ಎಂದರೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಭೇಟಿ ಕಷ್ಟಕರವಾಗಿದೆ. ಮುಖ್ಯಮಂತ್ರಿಗಳು ವಿಶೇಷ ಅಧಿವೇಶನ ಕರೆದಿರುವುದು ಅವರ ದೆಹಲಿ ಭೇಟಿಗೆ ಅಡ್ಡಿಯಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಸಮಸ್ಯೆ ಪರಿಹಾರ ಅನಿಶ್ಚಿತವಾಗಿದೆ.

ರೆಡ್ಡಿಗಳ ದಂಗಲ್​​ಗೆ ಖಾಕಿ ತಲೆದಂಡ: ಸಚಿವ ಜಮೀರ್​​ ಎದುರು ದಕ್ಷ ಅಧಿಕಾರಿ ಕಣ್ಣೀರು!

ರೆಡ್ಡಿಗಳ ದಂಗಲ್​​ಗೆ ಖಾಕಿ ತಲೆದಂಡ: ಸಚಿವ ಜಮೀರ್​​ ಎದುರು ದಕ್ಷ ಅಧಿಕಾರಿ ಕಣ್ಣೀರು!

ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ರೆಡ್ಡಿಗಳ ನಡುವಿನ ದಂಗಲ್​​ ಸಂಬಂಧ ಎಸ್ಪಿ ಅಮಾನತು ಬೆನ್ನಲ್ಲೇ ಡಿಐಜಿಪಿಯನ್ನೂ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ವಿಚಾರವಾಗಿ ಹಿರಿಯ ಅಧಿಕಾರಿ ವರ್ತಿಕಾ ಕಟಿಯಾರ್ ಸಚಿವ ಜಮೀರ್​​ ಅಹ್ಮದ್​​ ಮುಂದೆ ಕಣ್ಣಿರು ಹಾಕಿ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಎಸ್ಪಿಯಾಗಿದ್ದ ಪವನ್ ನೆಜ್ಜೂರು ಕೂಡ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ ಎಂಬ ಸುದ್ದಿ ರಾಜ್ಯವ್ಯಾಪಿ ಚರ್ಚೆಗೆ ಕಾರಣವಾಗಿರುವ ನಡುವೆಯೇ ಮತ್ತೋರ್ವ ಅಧಿಕಾರಿ ಘಟನೆಯಿಂದ ನೊಂದಿರೋದು ಬೆಳಕಿಗೆ ಬಂದಿದೆ.

ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸುಮ್ನೆ ಭಾಷಣ ಮಾಡಿ ಹೋಗಿಲ್ಲ: ಖರ್ಗೆ ನಿವಾಸದ ಎದುರೇ ಡಿಕೆಶಿ ಖಡಕ್ ಮಾತು

ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸುಮ್ನೆ ಭಾಷಣ ಮಾಡಿ ಹೋಗಿಲ್ಲ: ಖರ್ಗೆ ನಿವಾಸದ ಎದುರೇ ಡಿಕೆಶಿ ಖಡಕ್ ಮಾತು

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಣ ಅಧಿಕಾರ ಹಂಚಿಕೆ ಕಲಹ ಸದ್ಯಕ್ಕೆ ಬಗೆಹರಿಯುವಂತೆ ಕಾಣಿಸುತ್ತಿಲ್ಲ. ಇದಕ್ಕೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಮುಂದೆಯೇ ಡಿಕೆ ಶಿವಕುಮಾರ್ ಅಸಮಾಧಾನದ ಮಾತುಗಳನ್ನಾಡಿರುವುದು ಪುಷ್ಟಿ ನೀಡಿದೆ. ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೆ ಡಿಕೆಶಿಗೆ ಆಹ್ವಾನವಿಲ್ಲದಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು

ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು

ಕರ್ನಾಟಕ ಕಾಂಗ್ರೆಸ್‌ ಅಧಿಕಾರ ಹಂಚಿಕೆ ಚರ್ಚೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಆಪ್ತ ನಾಯಕನನ್ನು ಸೆಳೆಯಲು ಯತ್ನಿಸಿರುವುದು ಸ್ಪಷ್ಟವಾಗಿದೆ. ಹಾಗಾದರೆ, ಸಿದ್ದರಾಮಯ್ಯ ಆಪ್ತ ನಾಯಕನ ಜತೆ ಡಿಕೆ ಶಿವಕುಮಾರ್ ಹೇಳಿದ್ದೇನು? ಮೇಲಿಂದ ಮೇಲೆ ಆ ನಾಯಕನ ಭೇಟಿಯಾಗುತ್ತಿರುವುದೇಕೆ? ಈ ಪ್ರಶ್ನೆಗಳಿಗೆ ಉತ್ತರ ಈಗ ಸಿಕ್ಕಿದೆ.

ಡಿಕೆ ಶಿವಕುಮಾರ್ ದಿಢೀರ್ ಡಿನ್ನರ್ ಮೀಟಿಂಗ್: ರಹಸ್ಯ ಸಭೆಯಲ್ಲಿ 30ಕ್ಕೂ ಹೆಚ್ಚು ಶಾಸಕರು, ಐವರು ಸಚಿವರು ಭಾಗಿ

ಡಿಕೆ ಶಿವಕುಮಾರ್ ದಿಢೀರ್ ಡಿನ್ನರ್ ಮೀಟಿಂಗ್: ರಹಸ್ಯ ಸಭೆಯಲ್ಲಿ 30ಕ್ಕೂ ಹೆಚ್ಚು ಶಾಸಕರು, ಐವರು ಸಚಿವರು ಭಾಗಿ

ಬೆಳಗಾವಿಯ ಚಳಿಗಾಲ ಅಧಿವೇಶನದ ನಡುವೆ ಕಾಂಗ್ರೆಸ್‌ನಲ್ಲಿ ಡಿನ್ನರ್ ರಾಜಕೀಯ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಬಣದ ಭೋಜನಕೂಟದ ನಂತರ, ಡಿಸಿಎಂ ಡಿ.ಕೆ. ಶಿವಕುಮಾರ್ ಆಪ್ತ ಶಾಸಕರು ಮತ್ತು ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಈ ಡಿನ್ನರ್ ಮೀಟಿಂಗ್​ನಲ್ಲಿ ಏನೇನು ಚರ್ಚೆಯಾಯ್ತು? ಶಾಸಕರು, ಸಚಿವರು ಡಿಕೆಶಿಗೆ ಏನಂದ್ರು ಎಂಬ ಮಾಹಿತಿ ಇಲ್ಲಿದೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಮತ್ತೊಂದು ‘ಬ್ರೇಕ್​ಫಾಸ್ಟ್ ಮೀಟಿಂಗ್’!

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಮತ್ತೊಂದು ‘ಬ್ರೇಕ್​ಫಾಸ್ಟ್ ಮೀಟಿಂಗ್’!

ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತುಸುಮಟ್ಟಿನ ಶಮನ ದೊರೆತಿದ್ದರೂ, ದೆಹಲಿ ಮಟ್ಟದಲ್ಲಿ ಮಾತುಕತೆ ಮುಂದುವರಿದಿದೆ. ಈ ಮಧ್ಯೆ, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ‘ ಬ್ರೇಕ್ ಫಾಸ್ಟ್ ಮೀಟಿಂಗ್’ನಲ್ಲಿ ಭಾಗವಹಿಸಿದ ನಂತರ ಇದೀಗ, ಮಂಗಳವಾರ ಬೆಳಗ್ಗೆ ಡಿಕೆ ಶಿವಕುಮಾರ್ ನಿವಾಸದಲ್ಲಿ ಆಯೋಜನೆಗೊಂಡಿರುವ ‘ ಬ್ರೇಕ್ ಫಾಸ್ಟ್ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಸಿದ್ದರಾಮಯ್ಯ ಬಣದಿಂದ ಡಿಕೆ ಶಿವಕುಮಾರ್ ವಿರುದ್ಧ ಹೊಸ ದಾಳ

ಸಿದ್ದರಾಮಯ್ಯ ಬಣದಿಂದ ಡಿಕೆ ಶಿವಕುಮಾರ್ ವಿರುದ್ಧ ಹೊಸ ದಾಳ

ಸಿದ್ದರಾಮಯ್ಯ ಬಣದಿಂದ ಎಐಸಿಸಿ ಪತ್ರಿಕಾ ಪ್ರಕಟಣೆಯ ದಾಳ ಉರುಳಿಸಲಾಗಿದೆ. 2023ರ ಮೇ 18ರಂದು ಕರ್ನಾಟಕದ ಸಿಎಂ -ಡಿಸಿಎಂ ನಿಯೋಜನೆಗೊಂಡ ವೇಳೆ ಬಿಡುಗಡೆ ಮಾಡಿದ್ದ ಪ್ರೆಸ್ ನೋಟ್ ಇದೀಗ ಮತ್ತೆ ಸದ್ದು ಮಾಡುತ್ತಿದೆ. ಆಗ ಬಿಡುಗಡೆ ಮಾಡಲಾಗಿದ್ದ ಎಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮುಂದಿನ ಲೋಕಸಭಾ ಚುನಾವಣೆವರೆಗೆ ಮಾತ್ರ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿತ್ತು. ಆದರೆ, ಡಿಕೆ ಶಿವಕುಮಾರ್ 2024ರ ಲೋಕಸಭೆ ಚುನಾವಣೆ ಬಳಿಕವೂ ಅಧ್ಯಕ್ಷರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಪ್ರಶ್ನೆ ಮಾಡಿದ್ದಾರೆ. ಡಿಸಿಎಂ ಅವಧಿ ಮುಗಿದ ಬಳಿಕವೂ ಕೆಪಿಸಿಸಿ ಅಧ್ಯಕ್ಷರಾಗಿಲ್ಲವೇ? ಎಂದು ಬಹಿರಂಗವಾಗಿಯೇ ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ನೀಡಿದ್ದಾರೆ. ಇದು ಮತ್ತೆ ಚರ್ಚೆಗೆ ಕಾರಣವಾಗಿದೆ.

ಸಂಪುಟ ಪುನಾರಚನೆ ಸುತ್ತ ಪ್ರಶ್ನೆಗಳ ಹುತ್ತ: ಕಾಂಗ್ರೆಸ್​​ನಲ್ಲಿ ನವೆಂಬರ್ ಶಾಂತಿ ಕ್ರಾಂತಿಯ ಇನ್​​​ಸೈಡ್​ ಮಾಹಿತಿ

ಸಂಪುಟ ಪುನಾರಚನೆ ಸುತ್ತ ಪ್ರಶ್ನೆಗಳ ಹುತ್ತ: ಕಾಂಗ್ರೆಸ್​​ನಲ್ಲಿ ನವೆಂಬರ್ ಶಾಂತಿ ಕ್ರಾಂತಿಯ ಇನ್​​​ಸೈಡ್​ ಮಾಹಿತಿ

ಸಚಿವ ಸಂಪುಟ ಪುನಾರಚನೆ ಚರ್ಚೆ ಕರ್ನಾಟಕ ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಜೋರಾಗಿದೆ. ಸಚಿವ ಸ್ಥಾನ ಆಕಾಂಕ್ಷಿಗಳು ಈಗಾಗಲೇ ಸಿಎಂ ಸಿದ್ದರಾಮಯ್ಯನವರ ಬೆನ್ನು ಬಿದ್ದಿದ್ದು ಲಾಬಿ ನಡೆಸಿದ್ದಾರೆ. ಆದರೆ ನಾಯಕರು ಅಂದುಕೊಂಡಷ್ಟು ಸುಲಭವಲ್ಲ ಈ ಪುನರ್ ರಚನೆಯ ಕಾರ್ಯ. ಯಾಕಂದ್ರೆ ಸರ್ಕಾರ ಸಂಪುಟ ಸರ್ಜರಿ ಮಾಡಬೆಕು ಅಂದ್ರೆ ಕಾಲಾವಕಾಶ ಹಿಡಿಯಲಿದೆ. ಯಾಕೆ ಅಂತೀರಾ? ಇಲ್ಲಿದೆ ನವೆಂಬರ್ ಕ್ರಾಂತಿ ಶಾಂತಿಯ ಇನ್​ಸೈಡ್ ಡಿಟೇಲ್ಸ್​

ಸಚಿವ ಸಂಪುಟ ಸರ್ಕಸ್​ ನಡುವೆ ಡಿಕೆ ಬ್ರದರ್ಸ್​ ನಡೆ ಸಸ್ಪೆನ್ಸ್​: ಕಾಂಗ್ರೆಸ್​ ಪಾಳಯದಲ್ಲಿ ಆಗ್ತಿರೋದೇನು?

ಸಚಿವ ಸಂಪುಟ ಸರ್ಕಸ್​ ನಡುವೆ ಡಿಕೆ ಬ್ರದರ್ಸ್​ ನಡೆ ಸಸ್ಪೆನ್ಸ್​: ಕಾಂಗ್ರೆಸ್​ ಪಾಳಯದಲ್ಲಿ ಆಗ್ತಿರೋದೇನು?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಸಂಪುಟ ಪುನಾರಚನೆಗೆ ಸಿಎಂ ಒಲವು ತೋರಿದರೆ, ಇದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​ ವಿರೋಧ ವ್ಯಕ್ತಪಡಿಸಿದ್ದಾರೆ. ಖಾಲಿ ಸ್ಥಾನಗಳ ಭರ್ತಿ, ಪರಿಷತ್ ಸ್ಥಾನಗಳ ಬಗ್ಗೆಯೂ ಚರ್ಚೆಯಾಗಿದ್ದು, ಅಂತಿಮ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎನ್ನಲಾಗಿದೆ. ಈ ನಡುವೆ ಮಾಜಿ ಸಂಸದ ಡಿ.ಕೆ. ಸುರೇಶ್​ ಕೂಡ ದೆಹಲಿಗೆ ಪ್ರಯಾಣ ಬೆಳೆಸಿರೋದು ಭಾರಿ ಕುತೂಹಲ ಮೂಡಿಸಿದೆ.

SCSP, TSP ಹಣಕ್ಕಾಗಿ ಹೆಚ್​.ಸಿ. ಮಹದೇವಪ್ಪ ರೆಬೆಲ್​: ಸಚಿವ ಸಂಪುಟ ಸಭೆಯಲ್ಲಿ ಹೈಡ್ರಾಮಾ

SCSP, TSP ಹಣಕ್ಕಾಗಿ ಹೆಚ್​.ಸಿ. ಮಹದೇವಪ್ಪ ರೆಬೆಲ್​: ಸಚಿವ ಸಂಪುಟ ಸಭೆಯಲ್ಲಿ ಹೈಡ್ರಾಮಾ

ಸಚಿವ ಸಂಪುಟ ಸಭೆಯಲ್ಲಿ ಡಾ. ಹೆಚ್.ಸಿ. ಮಹದೇವಪ್ಪ SCSP, TSP ಅನುದಾನ ಹಂಚಿಕೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಮಹದೇವಪ್ಪ-ಕೆ.ಜೆ.ಜಾರ್ಜ್ ನಡುವೆ ಮಾತಿನ ಚಕಮಕಿಯೂ ನಡೆದಿದೆ. ಹಿಂದುಳಿದವರಿಗೆ ಸಿಗಬೇಕಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬ ಆರೋಪದ ನಡುವೆ, ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಸಚಿವರೇ ಹೇಳಿರೋದು ಕುತೂಹಲ ಮೂಡಿಸಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಬೆನ್ನಲ್ಲೇ ಚುನಾವಣೆಗೆ ಸಿದ್ಧತೆ: ಅಧಿಕಾರಿಗಳನ್ನ ನೇಮಿಸಿದ ಆಯೋಗ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಬೆನ್ನಲ್ಲೇ ಚುನಾವಣೆಗೆ ಸಿದ್ಧತೆ: ಅಧಿಕಾರಿಗಳನ್ನ ನೇಮಿಸಿದ ಆಯೋಗ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ರಚನೆಯಾಗಿರುವ 5 ನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಹಾಗೂ ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಸದ್ಯದಲ್ಲೇ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಅಧಿಕಾರ ಹಂಚಿಕೆ ಸ್ಪಷ್ಟತೆ ಬಗ್ಗೆ ದಾಳ ಉರುಳಿಸಿದ ಸಾಹುಕಾರ್: ಯಥಾಸ್ಥಿತಿ ಕಾಯ್ದುಕೊಳ್ಳುವ ಬಗ್ಗೆ ತೆರೆಮರೆಯಲ್ಲಿ ತಂತ್ರಗಾರಿಕೆ

ಅಧಿಕಾರ ಹಂಚಿಕೆ ಸ್ಪಷ್ಟತೆ ಬಗ್ಗೆ ದಾಳ ಉರುಳಿಸಿದ ಸಾಹುಕಾರ್: ಯಥಾಸ್ಥಿತಿ ಕಾಯ್ದುಕೊಳ್ಳುವ ಬಗ್ಗೆ ತೆರೆಮರೆಯಲ್ಲಿ ತಂತ್ರಗಾರಿಕೆ

ಅಕ್ಟೋಬರ್ ಶುರುವಾಗಿ ನವೆಂಬರ್ ದಿನಗಳು ಹತ್ತಿರವಾಗುತ್ತಿರುವಂತೆಯೇ ಕರ್ನಾಟಕ ಕಾಂಗ್ರೆಸ್​​ನಲ್ಲಿ ಕ್ರಾಂತಿಯ ಲಕ್ಷಣಗಳೂ ಶುರುವಾಗಿವೆ. ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿರುವ ನಾಯಕರ ತಂಡ ತಮ್ಮದೇ ತಂತ್ರಗಾರಿಕೆ ಮೂಲಕ ಹೊಸ ದಾಳ ಉರುಳಿಸಿದೆ. ಆ ಮೂಲಕ, ಯಥಾಸ್ಥಿತಿ ಕಾಯ್ದುಕೊಳ್ಳುವ ಬಗ್ಗೆ ತೆರೆಮರೆಯಲ್ಲಿ ತಂತ್ರಗಾರಿಕೆ ಹೆಣೆಯುತ್ತಿದೆ.