ಬಿಜೆಪಿ ಭದ್ರಕೋಟೆಯೇ ಡಿಕೆ ಶಿವಕುಮಾರ್ ಟಾರ್ಗೆಟ್: ನೆಲೆ ಇಲ್ಲದಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಸಾಫ್ಟ್ ಹಿಂದುತ್ವದ ಮಂತ್ರ
ಬಿಜೆಪಿಯ ಭದ್ರಕೋಟೆ ಎನ್ನಲಾದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರಾವಳಿ ಕರ್ನಾಟಕದಲ್ಲಿ ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಓಡಾಟ ಹೆಚ್ಚಾಗಿದೆ. ಸಾಫ್ಟ್ ಹಿಂದುತ್ವದ ಮೂಲಕ ಬಿಜೆಪಿಯ ಕೋಟೆ ಬೇಧಿಸಲು ಅವರು ರಣತಂತ್ರ ಹೂಡಿದ್ದಾರೆ ಎನ್ನಲಾಗಿದೆ. ಹಾಗಾದರೆ, ಡಿಸಿಎಂ ಡಿಕೆ ಶಿವಕುಮಾರ್ ಅವರ ಕರಾವಳಿ ಶಿಕಾರಿ ರಹಸ್ಯ ಏನು? ಬಂಡೆ ಹೆಜ್ಜೆಯಲ್ಲಿನ ರಣತಂತ್ರದ ಹೆಗ್ಗುರುತುಗಳು ಹೇಗಿವೆ? ಇಲ್ಲಿದೆ ನೋಡಿ.
- Pramod Shastri G
- Updated on: Apr 19, 2025
- 1:50 pm
ಒಬಿಸಿ ವರ್ಗೀಕರಣದಲ್ಲಿ ಬದಲಾವಣೆ, ಮೀಸಲಾತಿ ಶೇ 51ಕ್ಕೆ ಹೆಚ್ಚಿಸಲು ಜಾತಿ ಗಣತಿ ವರದಿಯಲ್ಲಿ ಶಿಫಾರಸು
ಒಬಿಸಿ ವರ್ಗೀಕರಣದಲ್ಲಿ ಬದಲಾವಣೆ ಮಾಡುವುದರ ಜತೆಗೆ, ಒಬಿಸಿ ಮೀಸಲಾತಿಯನ್ನೂ ಹೆಚ್ಚು ಮಾಡಬೇಕೆಂದು ಜಾತಿ ಗಣತಿ ವರದಿಯಲ್ಲಿ ಜಯಪ್ರಕಾಶ್ ಹೆಗ್ಡೆ ಆಯೋಗ ಶಿಫಾರಸು ಮಾಡಿರುವುದು ಗೊತ್ತಾಗಿದೆ. ಇದಕ್ಕೆ ಒಕ್ಕಲಿಗರ ಸಂಘದಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹಾಗಾದರೆ, ಜಯಪ್ರಕಾಶ್ ಹೆಗ್ಡೆ ಆಯೋಗ ಮಾಡಿರುವ ಶಿಫಾರಸೇನು? ಹಾಲಿ ಮೀಸಲಾತಿ ಎಷ್ಟಿದೆ? ಇಲ್ಲಿದೆ ವಿವರ.
- Pramod Shastri G
- Updated on: Apr 12, 2025
- 11:38 am
RSS 100: ಆರ್ಎಸ್ಎಸ್ ಶತಮಾನೋತ್ಸವ ನಿಮಿತ್ತ ಹಲವು ಕಾರ್ಯಕ್ರಮ
ಶತಾಮಾನೋತ್ಸವ ವರ್ಷದ ನಿಮಿತ್ತ ಆರ್ಎಸ್ಎಸ್ 2025ರ ವಿಜಯದಶಮಿ 2026ರ ವಿಜಯದಶಮಿ ತನಕ ಹಲವು ಕಾರ್ಯ ಯೋಜನೆಗಳನ್ನು ರೂಪಿಸಿದೆ. ಮನೆ ಮನೆ ಸಂಪರ್ಕ, ಹಿಂದೂ ಸಮ್ಮೇಳನ, ಸಾಮಾಜಿಕ ಸದ್ಭಾವ ಬೈಠಕ್ಗಳು ಸೇರಿವೆ. ಇದು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುವ ಒಂದು ಪ್ರಯತ್ನವಾಗಿದೆ ಎಂದು ಆರ್ ಎಸ್ ಎಸ್ ಹೇಳಿದೆ.
- Pramod Shastri G
- Updated on: Mar 23, 2025
- 12:45 pm
ಸದನದಲ್ಲಿ ಹನಿಟ್ರ್ಯಾಪ್ ಚರ್ಚೆ ವೇಳೆ ಪರಸ್ಪರ ಕಿತ್ತಾಡಿಕೊಂಡ ಬಿಜೆಪಿ ನಾಯಕರು..!
ಹನಿಟ್ರ್ಯಾಪ್ ಪ್ರಕರಣದಲ್ಲಿ ಕೆಲ ರಾಜಕೀಯ ನಾಯಕರು, ತಮ್ಮ ಅಸ್ತಿತ್ವವೇ ಕಳೆದುಕೊಂಡಿರೋ ಉದಾಹರಣೆಗಳು ನಮ್ಮ ಕಣ್ಣ ಮುಂದಿದೆ. ಇದರ ಮಧ್ಯೆಯೇ ಇದೀಗ ಹಿರಿಯ ಸಚಿವ ಕೆಎನ್ ರಾಜಣ್ಣ ಅವರನ್ನ ಹನಿಟ್ರ್ಯಾಪ್ಗೆ ಯತ್ನಿಸಿದ್ದು, ಈ ಸಂಬಂಧ ವಿಧಾನಸಭೆ ಸದನದಲ್ಲಿ ಭಾರೀ ಚರ್ಚೆಯಾಯಿತು. ಮತ್ತೊಂದೆಡೆ ಹನಿಟ್ರ್ಯಾಪ್ ಚರ್ಚೆ ಮಧ್ಯೆಯೇ ವಿರೋಧ ಪಕ್ಷ ಬಿಜೆಪಿ ಪಾಳೆಯದಲ್ಲಿ ಜೋರು ಗಲಾಟೆಯಾಗಿದೆ.
- Pramod Shastri G
- Updated on: Mar 20, 2025
- 9:18 pm
Electricity Price Hike: ವಿದ್ಯುತ್ ದರ ಏರಿಕೆ, ಗ್ರಾಹಕರಿಗೆ ಶಾಕ್ ನೀಡಿದ ಕೆಇಆರ್ಸಿ
Power Tariff Hike in Karnataka: ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಹೆಚ್ಚಳ ಸೇರಿದಂತೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತೊಂದು ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
- Pramod Shastri G
- Updated on: Mar 20, 2025
- 11:59 am
ಗ್ಯಾರಂಟಿಗಳಿಗೆ ಎಸ್ಸಿಪಿ, ಟಿಎಸ್ಪಿ ಹಣ ನೀಡೋದಕ್ಕೆ ವಿರೋಧ: ಸಚಿವ ಮಹದೇವಪ್ಪ ನಿವಾಸದಲ್ಲಿ ದಲಿತ ನಾಯಕರ ಸಭೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭಿವೃದ್ಧಿಗೆ ಮೀಸಲಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ ಇದೀಗ ಆ ಬಗ್ಗೆ ಚರ್ಚಿಸಲು ಕಾಂಗ್ರೆಸ್ನ ದಲಿತ ನಾಯಕರು ಸಭೆ ಸೇರಿದ್ದು, ಗ್ಯಾರಂಟಿಗಳಿಗೆ ಹಣ ಬಳಸದಂತೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಒಳ ಮೀಸಲಾತಿ ಮತ್ತು ಹೆಚ್ಚಿನ ಅನುದಾನಕ್ಕಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಲು ನಿಯೋಗ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
- Pramod Shastri G
- Updated on: Mar 18, 2025
- 9:12 am
ಜಟಾಪಟಿ ನಡುವೆ ಗ್ರೇಟರ್ ಬೆಂಗಳೂರು ವಿಧೇಯಕ ಅಂಗೀಕಾರ: ವಿಪಕ್ಷಗಳಿಂದ ಸಭಾತ್ಯಾಗ
ಕರ್ನಾಟಕ ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಉದ್ವಿಗ್ನ ಚರ್ಚೆಯ ನಡುವೆ ಅಂಗೀಕಾರಗೊಂಡಿದೆ. ಡಿಸಿಎಂ ಡಿಕೆ ಶಿವಕುಮಾರ್ ಮಂಡಿಸಿದ ಮಸೂದೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತಾದರೂ, ಅಂಗೀಕಾರ ಕಂಡಿದೆ. ಈ ವೇಳೆ ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಭಾತ್ಯಾಗ ಮಾಡಿದ್ದಾರೆ.
- Pramod Shastri G
- Updated on: Mar 10, 2025
- 8:13 pm
ಕೆಂಪೇಗೌಡ ಲೇಔಟ್ಗೆ ಮೂಲಭೂತ ಸೌಕರ್ಯ ವಿಳಂಬ: ಬಿಡಿಎ ಅಧಿಕಾರಿಗಳ ವರ್ತನೆಗೆ ಅರ್ಜಿ ಸಮಿತಿ ಸದಸ್ಯರು ಸಭಾತ್ಯಾಗ
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ವಿಧಾನಸಭೆಯ ಅರ್ಜಿ ಸಮಿತಿ ಸದಸ್ಯರು ಇಂದು ಸಭೆಯಿಂದ ಸಭಾತ್ಯಾಗ ಮಾಡಿರುವಂತಹ ಘಟನೆ ನಡೆದಿದೆ. ಬಿಡಿಎ ನಿರಂತರ ವಿಳಂಬ ಮತ್ತು ಭರವಸೆಗಳ ಉಲ್ಲಂಘನೆಯಿಂದಾಗಿ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಬಿಡಿಎ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೂಲಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಲಾಗಿದೆ.
- Pramod Shastri G
- Updated on: Feb 20, 2025
- 5:16 pm
ಸಿದ್ದರಾಮೋತ್ಸವ ಮಾದರಿಯಲ್ಲೇ ಯಡಿಯೂರಪೋತ್ಸವ: ಏನಿದು ಬರ್ತ್ಡೇ ಸೀಕ್ರೆಟ್?
ನನ್ನದೇನೂ ಇಲ್ಲ.. ಎಲ್ಲವೂ ಸಮರ್ಪಣೆ..13 ದಿನಗಳಲ್ಲಿ ಮೊದಲ ಬಿಜೆಪಿ ಸರ್ಕಾರ ಉರುಳಿದಾಗ ಬಿಜೆಪಿಯ ಸರ್ವಶ್ರೇಷ್ಠ ನಾಯಕ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದ ಮಾತಿದು. ಸರ್ಕಾರವೇ ಉರುಳಿ ಬಿದ್ದರೂ ನನ್ನದೇನಿಲ್ಲ ಎಂದ ದಿನಗಳಿಂದ ಬಿಜೆಪಿ ಈಗ ಸಾಕಷ್ಟು ಮುಂದೆ ಸಾಗಿದೆ. ಹಬ್ಬ ಉತ್ಸವ ಹುಟ್ಟುಹಬ್ಬಗಳು ಶುರುವಾಗಿದೆ. ಅದರಲ್ಲೂ ರಾಜ್ಯ ಬಿಜೆಪಿಯಲ್ಲಿಗ ಹುಟ್ಟು ಹಬ್ಬ ಪಾಲಿಟಿಕ್ಸ್ ಹೊಸದೊಂದು ಸಂಚಲನ ಸೃಷ್ಠಿ ಮಾಡಿದೆ.
- Pramod Shastri G
- Updated on: Dec 17, 2024
- 10:17 pm
ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಡಿಕೆಶಿ ಬಣ ಮೇಲುಗೈ, ಎಚ್ಡಿಕೆಗೆ ಮುಖಭಂಗ
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಂದು ಮುಖಭಂಗ ಉಂಟಾಗಿದೆ. ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅವರು 21 ಮತಗಳೊಂದಿಗೆ ಗೆದ್ದಿದ್ದಾರೆ. ಕುಮಾರಸ್ವಾಮಿ ಬಣದ ಡಾ. ಆಂಜಿನಪ್ಪ ಅವರು 14 ಮತಗಳನ್ನು ಪಡೆದುಕೊಂಡಿದ್ದಾರೆ.
- Pramod Shastri G
- Updated on: Dec 15, 2024
- 7:32 pm
ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಕೋರಿ ರಾಜ್ಯಪಾಲರಿಗೆ ಕಡತ ರವಾನಿಸಿದ ಸರ್ಕಾರ
ಭ್ರಷ್ಟಾಚಾರ ದೂರಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಬಿಎಸ್ವೈ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಆದ್ರೆ, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ತಿರಸ್ಕರಿಸಿದ್ದರು. ಇದೀಗ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ.
- Pramod Shastri G
- Updated on: Dec 3, 2024
- 10:57 pm
ಬಿಎಸ್ವೈ, ಶ್ರೀರಾಮುಲು ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ರಾಜ್ಯ ಸರ್ಕಾರ ಸಿದ್ಧತೆ
ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ. ಕುನ್ಹಾ ಆಯೋಗದ ವರದಿಯು 2020ರ ಕೋವಿಡ್-19 ಹಗರಣದಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ಶ್ರೀರಾಮುಲು ಅವರ ಪಾತ್ರವನ್ನು ಖಂಡಿಸಿದೆ. ಆಯೋಗವು ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಶಿಫಾರಸು ಮಾಡಿದ್ದು, ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿದೆ.
- Pramod Shastri G
- Updated on: Nov 9, 2024
- 9:48 pm