ಶಾಸಕ ಸ್ಥಾನವನ್ನೂ ತ್ಯಜಿಸುವ ಮಾತನಾಡಿದ ಬಿ. ನಾಗೇಂದ್ರ: ಬಿಜೆಪಿಗರಿಗೆ ‘ಕೈ’ ನಾಯಕನಿಂದ ಬಹಿರಂಗ ಸವಾಲು
B Nagendra Resignation: ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಿಸಿದ್ದು, ಈ ವೇಲೆ ಭಾವುಕರಾಗಿ ಕಣ್ಣೀರಿಟ್ಟಿರುವ ಪ್ರಸಂಗ ನಡೆದಿದೆ. ಶಾಸಕ ಹುದ್ದೆಗೂ ರಾಜೀನಾಮೆ ನೀಡುವುದಾಗಿ ತಿಳಿಸಿದ ಅವರು, ಆರೋಪ ಮುಕ್ತನಾಗಿ ಬರುತ್ತೇನೆ ಎಂಬ ನಂಬಿಕೆ ಇದೆ ಎಂಬ ವಿಶ್ವಾಸವನ್ನೂ ಇದೇ ವೇಳೆ ವ್ಯಕ್ತಪಡಿಸಿದ್ದಾರೆ.
- Prasanna Hegde
- Updated on: Aug 28, 2026
- 7:13 pm
B. Nagendra Resignation: ವಾಲ್ಮೀಕಿ ನಿಗಮದ ಹಗರಣ; ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ. ನಾಗೇಂದ್ರ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ತೀವ್ರ ಪ್ರತಿಭಟನೆಯ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಆ ಮೂಲಕ ಒಂದೇ ಹಗರಣ ಸಂಬಂಧ ಅವರು ಎರಡು ಬಾರಿ ಸಚಿವ ಸ್ಥಾನ ಕಳೆದುಕೊಂಡಂತಾಗಿದೆ. ಆ ಮೂಲಕ ರಾಜ್ಯದ ಪರಿಶಿಷ್ಟ ಪಂಗಡಗಳ (ST) ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣವನ್ನು ಕಾನೂನುಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವ ಭಾರಿ ಆರ್ಥಿಕ ವಂಚನೆ ಪ್ರಕರಣ ಮತ್ತೆ ನಾಗೆಂದ್ರ ಪಾಲಿಗೆ ಕಂಟವಾಗಿದೆ.
- Prasanna Hegde
- Updated on: Aug 28, 2026
- 7:11 pm
Live: ದೆಹಲಿಯಿಂದ ಹಿಂದಿರುಗಿದ ಬೆನ್ನಲ್ಲೇ ಸಚಿವ ಬಿ. ನಾಗೇಂದ್ರ ಮಹತ್ವದ ಸುದ್ದಿಗೋಷ್ಠಿ
ದೆಹಲಿಯಿಂದ ವಾಪಸಾದ ಸಚಿವ ಬಿ. ನಾಗೇಂದ್ರ ಅವರು ವಿಧಾನಸೌಧದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣ ವಿಪಕ್ಷಗಳಿಂದ ರಾಜೀನಾಮೆಗೆ ಒತ್ತಡ ಹೆಚ್ಚಿರುವ ನಡುವೆ ಅವರ ಈ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ. ಸುದ್ದಿಗೋಷ್ಠಿ ವೇಳೆ ಕೆಲ ಸಚಿವರು, ನಾಯಕರು ನಾಗೇಂದ್ರಗೆ ಸಾಥ್ ನೀಡಿದ್ದಾರೆ.
- Prasanna Hegde
- Updated on: Aug 28, 2026
- 6:34 pm
ಹೊಸಪೇಟೆ- ಅರಸೀಕೆರೆ ನಡುವೆ ಡಿಇಎಂಯು ವಿಶೇಷ ರೈಲು ಸೇವೆ ಆರಂಭ: ಇಲ್ಲಿದೆ ಮಾಹಿತಿ
ಹೊಸಪೇಟೆ ಜಂಕ್ಷನ್ ಹಾಗೂ ಅರಸೀಕೆರೆ ಜಂಕ್ಷನ್ ನಡುವೆ 5 ದಿನಗಳ ಅನ್ರಿಸರ್ವ್ಡ್ ಡಿಇಎಂಯು ವಿಶೇಷ ರೈಲು ಸೇವೆ ಆರಂಭವಾಗಿದ್ದು, ವಿಜಯನಗರ ಹಾಗೂ ಮಧ್ಯ ಕರ್ನಾಟಕದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ವಿಜಯನಗರ ರೈಲ್ವೆ ಬಳಕೆದಾರರ ಸಂಘ ಹಾಗೂ ಹಗರಿಬೊಮ್ಮನಹಳ್ಳಿ-ಕೊಟ್ಟೂರು ರೈಲ್ವೆ ಸಮಿತಿಗಳು ಹಲವು ವರ್ಷಗಳಿಂದ ರೈಲು ಸಂಪರ್ಕ ಸುಧಾರಣೆಗೆ ಒತ್ತಾಯಿಸುತ್ತಿದ್ದವು. ಅದಕ್ಕೀಗ ಫಲ ಸಿಕ್ಕಿದೆ.
- Prasanna Hegde
- Updated on: Aug 28, 2026
- 2:17 pm
ಸಿದ್ದರಾಮಯ್ಯ ಜೊತೆ ಕೆಲ ನಾಯಕರ ಅಸಮಾಧಾನ: ತಂದೆ ಪರ ಅಖಾಡಕ್ಕಿಳಿದ ಸಚಿವ ಯತೀಂದ್ರ
ತಂದೆ ಸಿದ್ದರಾಮಯ್ಯನವರ ಪರವಾಗಿ ರಾಜಕೀಯ ಅಖಾಡಕ್ಕಿಳಿದಿರುವ ಯತೀಂದ್ರ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯನವರಿಂದ ದೂರವಾಗಿದ್ದ ನಾಯಕರನ್ನು ಮತ್ತೆ ಹತ್ತಿರ ತರುವ ಮೂಲಕ ಅವರ ರಾಜಕೀಯ ಶಕ್ತಿ ವೃದ್ಧಿಸಲು ಯತೀಂದ್ರ ಪ್ರಯತ್ನಿಸುತ್ತಿದ್ದಾರೆ. ಈ ಸಭೆಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.
- Prasanna Hegde
- Updated on: Aug 28, 2026
- 1:49 pm
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರಿನ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ಸಾವು
ಮಧ್ಯಪ್ರದೇಶದ ರಾಜ್ಗಢದಲ್ಲಿ ಬಸ್ ಸೇತುವೆಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯವಾಗಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸರ ಪ್ರಕಾರ ಡಿಕ್ಕಿಯ ರಭಸಕ್ಕೆ ಬಸ್ನಲ್ಲಿದ್ದ ಸುಮಾರು ನಾಲ್ವರು ಪ್ರಯಾಣಿಕರು ಹೊರಕ್ಕೆ ಎಸೆಯಲ್ಪಟ್ಟು, 30 ಅಡಿ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ.
- Prasanna Hegde
- Updated on: Aug 28, 2026
- 1:28 pm
ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ 34ನೇ ವಾರ್ಷಿಕ ಘಟಿಕೋತ್ಸವ ರದ್ದು: ಕಾರಣ ಇಲ್ಲಿದೆ
ಬೆಂಗಳೂರಿನ ಎನ್ಎಲ್ಎಸ್ಐಯು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ ರದ್ದಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ಭಾಗವಹಿಸುವಿಕೆಗೆ ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ.
- Prasanna Hegde
- Updated on: Aug 27, 2026
- 6:44 pm
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ: ಸ್ವತಃ ಮಾಹಿತಿ ಹಂಚಿಕೊಂಡ MLA
ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಅವರು ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್ ಓಡಿಸಿದ್ದಕ್ಕಾಗಿ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಜನಪ್ರತಿನಿಧಿಗಳು ಜನರಿಗೆ ಮಾದರಿಯಾಗಬೇಕು ಎಂಬ ಸಂದೇಶ ನೀಡುವ ನಿಟ್ಟಿನಲ್ಲಿ ಪೊಲೀಸರ ಈ ಕ್ರಮ ಶ್ಲಾಘನೀಯವಾಗಿದೆ. ನಿಯಮ ಎಲ್ಲರಿಗೂ ಸಮಾನ ಎಂಬುದು ಇದರಿಂದ ಸಾಬೀತಾಗಿದೆ.
- Prasanna Hegde
- Updated on: Aug 26, 2026
- 4:17 pm
ಸಕ್ಕರೆ ಬೆನ್ನಲ್ಲೇ ಬೆಲ್ಲದ ಬೆಲೆಯೂ ಗಗನಕ್ಕೆ: ಹಬ್ಬದ ಸೀಸನ್ಗೂ ಮುನ್ನವೇ ಕೆಜಿಗೆ 80 ರೂ. ಗಡಿ ತಲುಪಿದ ದರ
ಚಿಲ್ಲರೆ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಏರಿಕೆ ಬೆನ್ನಲ್ಲೇ ಬೆಲ್ಲದ ಬೆಲೆಯೂ ಕೆಜಿಗೆ ₹80 ಗಡಿ ತಲುಪಿದೆ. ಮಹಾಲಿಂಗಪುರ ಎಪಿಎಂಸಿಯಲ್ಲಿ ಕಬ್ಬಿನ ಕೊರತೆ ಹಾಗೂ ಎಥೆನಾಲ್ ಉತ್ಪಾದನೆಯಿಂದಾಗಿ ಬೆಲ್ಲದ ಬೆಲೆ ತೀವ್ರ ಏರಿಕೆ ಕಂಡಿದೆ. ಈ ಹಿಂದೆ ಪ್ರತಿದಿನ ಸರಾಸರಿ 15ರಿಂದ 20 ಲೋಡ್ ಬೆಲ್ಲವನ್ನು ಇತರ ರಾಜ್ಯಗಳಿಗೆ ರಫ್ತು ಮಾಡಲಾಗುತ್ತಿತ್ತು. ಆದರೆ ಇದೀಗ ಅದು ಒಂದೆರಡು ಲೋಡ್ಗೆ ಕುಸಿದಿದೆ ಎನ್ನಲಾಗಿದೆ.
- Prasanna Hegde
- Updated on: Aug 26, 2026
- 7:40 pm
SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಮುಖ್ಯ ಚುನಾವಣಾ ಆಯುಕ್ತರಿಗೆ ಸಿಎಂ ಡಿಕೆಶಿ ಪತ್ರ
ಮತದಾರರ ಪಟ್ಟಿ ಪರಿಷ್ಕರಣೆ (SIR) ವೇಳೆ ಕರ್ನಾಟಕದಲ್ಲಿ 1.08 ಕೋಟಿಗೂ ಅಧಿಕ ಮತದಾರರು ಎಎಸ್ಡಿಡಿಒ ಪಟ್ಟಿಗೆ ಸೇರಿದ ಹಿನ್ನೆಲೆ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ವಿಸ್ತರಣೆ ಸೇರಿ ಹಲವು ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಅಗತ್ಯ ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧವಾಗಿರೋದಾಗಿ ತಿಳಿಸಿದ್ದಾರೆ.
- Prasanna Hegde
- Updated on: Aug 25, 2026
- 6:47 pm
ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ದರ: ಕೆಜಿಗೆ ನೂರು ರೂಪಾಯಿಯತ್ತ ಮುನ್ನುಗ್ಗುತ್ತಿದೆ ಬೆಲೆ!
ಕರ್ನಾಟಕದಲ್ಲಿ ಈರುಳ್ಳಿ ಬೆಲೆ ದಿಢೀರ್ ಏರಿಕೆಯಾಗಿದ್ದು, ಗ್ರಾಹಕರ ಕಣ್ಣೀರಿಗೆ ಕಾರಣವಾಗಿದೆ. ಪ್ರಸ್ತುತ ಕೆ.ಜಿ.ಗೆ 60-75 ರೂಪಾಯಿ ತಲುಪಿರುವ ದರ ಕೆಲವೇ ದಿನಗಳಲ್ಲಿ 100ರ ಗಡಿ ಮುಟ್ಟುವ ಸಾಧ್ಯತೆಯಿದೆ. ಮಳೆ ಕೊರತೆ ಮತ್ತು ಇಳುವರಿ ಕುಸಿತದಿಂದಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಅಭಾವ ಸೃಷ್ಟಿಯಾಗಿದೆ. ಕೋಲ್ಡ್ ಸ್ಟೋರೇಜ್ ಕೊರತೆಯೂ ಸಮಸ್ಯೆಗೆ ಕಾರಣ ಎನ್ನಲಾಗಿದೆ.
- Prasanna Hegde
- Updated on: Aug 25, 2026
- 5:37 pm
ಮೈಸೂರು: ಟಿವಿ9 ಸ್ವೀಟ್ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ 2ನೇ ದಿನಕ್ಕೂ ಉತ್ತಮ ಸ್ಪಂದನೆ
ಸಾಂಸ್ಕೃತಿಕ ನಗರಿ ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ನಡೆಯುತ್ತಿರುವ ‘ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ’ಗೆ ಎರಡನೇ ದಿನವೂ ಭಾರಿ ಜನಸ್ಪಂದನೆ ವ್ಯಕ್ತವಾಗಿದ್ದು, ಮನೆ ಖರೀದಿ ಸೇರಿ 100ಕ್ಕೂ ಹೆಚ್ಚು ಪ್ರಾಜೆಕ್ಟ್ಗಳಿಗೆ ಹೂಡಿಕೆಗೆ ಅವಕಾಶ ಇದೆ. ಎಕ್ಸ್ಪೋ ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಪಾರ್ಕಿಂಗ್ ಸೌಲಭ್ಯ ಕೂಡ ಇರಲಿದೆ.
- Prasanna Hegde
- Updated on: Aug 23, 2026
- 12:01 pm