Karnataka Weather Forecast: ಆ.13ರ ವರೆಗೆ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ
Monsoon 2026: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ ಆಗಸ್ಟ್ 13ರವರೆಗೆ ರಾಜ್ಯಾದ್ಯಂತ ವರ್ಷಧಾರೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ ಇದ್ದು, ಹವಾಮಾನ ತಜ್ಞ ಸಿ. ಎಸ್. ಪಾಟೀಲ್ ನೀಡಿರುವ ಮಾಹಿತಿ ಇಲ್ಲಿದೆ.
- Prasanna Hegde
- Updated on: Aug 7, 2026
- 5:40 pm
ಜೋಗ ಜಲಪಾತ ವೀಕ್ಷಣೆಗೆ KSRTCಯಿಂದ ವೀಕೆಂಡ್ ಪ್ಯಾಕೇಜ್: ದರ ಎಷ್ಟು? ಸೇವೆ ಎಲ್ಲಿಂದ?; ಇಲ್ಲಿದೆ ಮಾಹಿತಿ
ಮಳೆಗಾಲದ ಮೈತುಂಬಿ ಹರಿಯುವ ಜೋಗ ಜಲಪಾತ ಹಾಗೂ ಶಿವಮೊಗ್ಗ ಸುತ್ತಮುತ್ತಲಿನ ಪ್ರವಾಸಿ ತಾಣಗಳ ವೀಕ್ಷಣೆಗೆ ಅನುಕೂಲವಾಗುವಂತೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಶಿವಮೊಗ್ಗ ವಿಭಾಗದಿಂದ ವಿಶೇಷ ವಾರಾಂತ್ಯದ (Weekend) ಪ್ಯಾಕೇಜ್ ಬಸ್ ಸೇವೆಯನ್ನು ಆರಂಭಿಸಿದೆ. ಈ ಪ್ಯಾಕೇಜ್ ಪ್ರವಾಸದ ದರ, ಸಮಯ ಹಾಗೂ ಮಾರ್ಗದ ಸಂಪೂರ್ಣ ವಿವರಗಳು ಇಲ್ಲಿವೆ.
- Prasanna Hegde
- Updated on: Aug 7, 2026
- 5:38 pm
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್ ವಿಭಾಗೀಯ ಪೀಠ
ಕಿರು ಸುರಂಗ ರಸ್ತೆ ನಿರ್ಮಾಣ ಯೋಜನೆ ಪ್ರಶ್ನಿಸಿ ಆರ್.ಕೆ. ಗುರುಪ್ರಸಾದ್ ಸಲ್ಲಿಸಿದ್ದ ಪಿಐಎಲ್ ಕುರಿತು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ. ಯೋಜನೆಯಿಂದ ಹೆಬ್ಬಾಳ ಕೆರೆಗೆ ನೀರಿನ ಹರಿವಿಗೆ ಅಡಚಣೆಯಾಗಲಿದೆಯೇ ಹಾಗೂ ಈ ಬಗ್ಗೆ ಅಧ್ಯಯನ ನಡೆಸಲಾಗಿದೆಯೇ ಎಂದು ನ್ಯಾಯಾಲಯ ಮಾಹಿತಿ ಕೇಳಿದೆ. ಬಿಡಿಎ, ಬಿಎಂಎಲ್ಟಿಎ, ಕೆರೆ ಸಂರಕ್ಷಣಾ ಪ್ರಾಧಿಕಾರ ಹಾಗೂ ರಿತ್ವಿಕ್ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ಗೆ ನೋಟಿಸ್ ಜಾರಿ ಮಾಡಲಾಗಿದೆ.
- Prasanna Hegde
- Updated on: Aug 7, 2026
- 12:29 pm
‘ಸಾಂತ್ವನ ಯೋಜನೆ’: ಅಲ್ಪಸಂಖ್ಯಾತರ ಮನೆ, ಅಂಗಡಿ ಹಾನಿಯಾದರೆ 5 ಲಕ್ಷವರೆಗೆ ಆರ್ಥಿಕ ನೆರವು
ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC) ಪ್ರಕೃತಿ ವಿಕೋಪ ಅಥವಾ ಕೋಮು ಹಿಂಸಾಚಾರದಿಂದ ಸಂಕಷ್ಟಕ್ಕೆ ಈಡಾದ ಕುಟುಂಬಗಳಿಗೆ ‘ಸಾಂತ್ವನ ಯೋಜನೆ’ ಮೂಲಕ ಆಸರೆಯಾಗಲಿದೆ. ಯೋಜನೆಯ ಪ್ರಯೋಜನ ಪಡೆಯಲು ಬೇಕಿರುವ ಅರ್ಹತೆ ಮತ್ತು ದಾಖಲೆಗಳ ಕುರಿತ ಮಾಹಿತಿ ಇಲ್ಲಿದೆ.
- Prasanna Hegde
- Updated on: Aug 6, 2026
- 7:09 pm
ಬೆಂಗಳೂರಲ್ಲಿ ಈಜೀ ಮಾಡ್ಯುಲರ್ ಸಾರ್ವಜನಿಕ ಶೌಚಾಲಯಗಳು: ಏನೆಲ್ಲ ಆಧುನಿಕ ವ್ಯವಸ್ಥೆ?
ಬೆಂಗಳೂರಿನ ಸಾರ್ವಜನಿಕರಿಗೆ ಸುಸಜ್ಜಿತ, ಸ್ವಚ್ಛ ಹಾಗೂ ಸುರಕ್ಷಿತ ನೈರ್ಮಲ್ಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ನಗರಾದ್ಯಂತ ‘Eeze’ ಹೆಸರಿನ ಆಧುನಿಕ ಮಾಡ್ಯುಲರ್ ಸಾರ್ವಜನಿಕ ಶೌಚಾಲಯಗಳನ್ನು ಪರಿಚಯಿಸಿದೆ. ಸಂಪೂರ್ಣ ಉಚಿತವಾಗಿ ದೊರೆಯಲಿರುವ ಈ ಸೌಲಭ್ಯದ ಪ್ರಮುಖ ಸೌಲಭ್ಯಗಳ ಬಗ್ಗೆ ಮಾಹಿತಿ ಇಲ್ಲಿದೆ.
- Prasanna Hegde
- Updated on: Aug 6, 2026
- 5:51 pm
ನೂತನ ಸಚಿವರಿಗೆ ಇಂದೇ ಖಾತೆ ಹಂಚಿಕೆ?: ಮಂತ್ರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದೇಕೆ ಹೈಕಮಾಂಡ್?
ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಇಂದು ರಾತ್ರಿಯೊಳಗೆ ಖಾತೆ ಹಂಚಿಕೆ ಆಗುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳು ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಖಾತೆ ಹಂಚಿಕೆಯ ನಂತರ ಅಸಮಾಧಾನ ಭುಗಿಲೇಳುವ ಸಾಧ್ಯತೆಗಳಿರುವುದರಿಂದ, ಯಾವುದೇ ಖಾತೆ ಸಿಕ್ಕರೂ ಕಾರ್ಯನಿರ್ವಹಿಸುವಂತೆ ಹೈಕಮಾಂಡ್ ಸಚಿವರಿಗೆ ಸಂದೇಶ ನೀಡಿದೆ ಎನ್ನಲಾಗಿದೆ.
- Prasanna Hegde
- Updated on: Aug 6, 2026
- 4:33 pm
ಬಿಎಂಟಿಸಿಯಲ್ಲಿ ಡಿಜಿಟಲ್ ಕ್ರಾಂತಿ: ಯುಪಿಐನಿಂದಲೇ ಶೇ.51ಕ್ಕೂ ಹೆಚ್ಚು ಟಿಕೆಟ್ ಆದಾಯ!
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ಯಶಸ್ವಿಯಾಗಿ ಜಾರಿಯಾಗಿದ್ದು, ಸಂಸ್ಥೆಯ ಒಟ್ಟು ಟಿಕೆಟ್ ಆದಾಯದಲ್ಲಿ ಯುಪಿಐಪಾಲು ಶೇಕಡಾ 51ಕ್ಕಿಂತಲೂ ಅಧಿಕ ತಲುಪಿದೆ. ಡೈನಾಮಿಕ್ QR ಕೋಡ್ ವ್ಯವಸ್ಥೆಯಿಂದ ಸಂಸ್ಥೆಗೆ ಈ ವರ್ಷ್ 313.4 ಕೋಟಿ ಆದಾಯ ಹರಿದುಬಂದಿದೆ. ಆದರೆ ನೆಟ್ವರ್ಕ್ ಸಮಸ್ಯೆಯಿಂದ ತೊಂದರೆಗಳು ಮುಂದುವರಿದಿದ್ದು, ನಗರದ ಹೊರವಲಯಗಳಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ ಎನ್ನಲಾಗಿದೆ.
- Prasanna Hegde
- Updated on: Aug 6, 2026
- 3:47 pm
ಲಾಲ್ಬಾಗ್ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ
ಸಿಎಂ ಡಿ.ಕೆ. ಶಿವಕುಮಾರ್ ಅವರು 220ನೇ ಲಾಲ್ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದಾರೆ. ಗಂಗರ ಸಾಮ್ರಾಜ್ಯದ 1,000 ವರ್ಷಗಳ ವೈಭವವನ್ನು ಹೂವಿನಲ್ಲಿ ಅನಾವರಣಗೊಳಿಸಿದ್ದು, ಶ್ರವಣಬೆಳಗೊಳದ ಬಾಹುಬಲಿ, ತಲಕಾಡು ದೇಗುಲಗಳ ಹೂವಿನ ಪ್ರತಿಕೃತಿಗಳು ಪ್ರಮುಖ ಆಕರ್ಷಣೆಯಾಗಿವೆ. ಆಗಸ್ಟ್ 17ರವರೆಗೆ ಸಾರ್ವಜನಿಕರು ಈ ಪ್ರದರ್ಶನವನ್ನು ವೀಕ್ಷಿಸಬಹುದು. ಆನ್ಲೈನ್ ಟಿಕೆಟ್ ಮತ್ತು ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
- Prasanna Hegde
- Updated on: Aug 6, 2026
- 2:50 pm
ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ ಪತ್ತೆಯಾಗದ 16.3 ಲಕ್ಷ ಮತದಾರರು, ಬೆಂಗಳೂರಲ್ಲಿ ಅತಿ ಹೆಚ್ಚು?
Karnataka Voter List Revision: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬರೋಬ್ಬರಿ 16.3 ಲಕ್ಷಕ್ಕೂ ಹೆಚ್ಚು ಮತದಾರರು ಪತ್ತೆಯಾಗಿಲ್ಲ ಎಂಬ ವಿಷಯ ಬೆಳಕಿಗೆ ಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ವಿ. ಅನ್ಬುಕುಮಾರ್ ಅವರು ನೀಡಿರುವ ಅಧಿಕೃತ ಮಾಹಿತಿ ಹಾಗೂ ಅಂಕಿ-ಅಂಶಗಳ ಸಂಪೂರ್ಣ ವಿವರಗಳು ಇಲ್ಲಿವೆ.
- Prasanna Hegde
- Updated on: Aug 5, 2026
- 7:20 pm
ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಮಹಿಳೆ ಮಾತು ನಂಬಿ ಲಕ್ಷಾಂತರ ರೂ. ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ
ಮ್ಯಾಟ್ರಿಮೋನಿಯಲ್ ವೆಬ್ಸೈಟ್ಗಳ ಮೂಲಕ ನಂಬಿಕೆ ಗಳಿಸಿ ನಕಲಿ ಕ್ರಿಪ್ಟೋಕರೆನ್ಸಿ ವೇದಿಕೆಗಳಲ್ಲಿ ಹೂಡಿಕೆ ಮಾಡಿಸುವ ಸೈಬರ್ ವಂಚನೆ ಹಗರಣಗಳು ಹೆಚ್ಚಾಗುತ್ತಿದ್ದು, ಬೆಂಗಳೂರಿನ ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಯತ್ನಿಸಿದಾಗ, ತೆರಿಗೆ ಹಾಗೂ ಇತರ ಶುಲ್ಕಗಳನ್ನು ಪಾವತಿಸಬೇಕೆಂದು ವೆಬ್ಸೈಟ್ ತಿಳಿಸಿತು. ಸೂಚನೆಯಂತೆ ಹೆಚ್ಚುವರಿ ಹಣ ಪಾವತಿಸಿದರೂ ಹಣವನ್ನು ಹಿಂಪಡೆಯಲು ಸಾಧ್ಯವಾಗದ ಕಾರಣ ಮೋಸ ಹೋಗಿರುವುದು ಗೊತ್ತಾಗಿ ದೂರು ದಾಖಲಿಸಿದ್ದಾರೆ.
- Prasanna Hegde
- Updated on: Aug 5, 2026
- 7:21 pm
ಎಸ್ಟೀಮ್ ಮಾಲ್–ಪಶುವೈದ್ಯಕೀಯ ಕಾಲೇಜು ಸುರಂಗ ಯೋಜನೆಯಿಂದ 893 ಮರಗಳಿಗೆ ಕುತ್ತು? ಪರಿಸರವಾದಿಗಳ ಆತಂಕ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಎಸ್ಟೀಮ್ ಮಾಲ್ನಿಂದ ಪಶುವೈದ್ಯಕೀಯ ಕಾಲೇಜುವರೆಗಿನ 2.2 ಕಿ.ಮೀ. ಉದ್ದದ ಸುರಂಗ ಮಾರ್ಗಯೋಜನೆಗೆ ಉತ್ತರ ಬೆಂಗಳೂರಿನ ಸುಮಾರು 893 ಮರಗಳು ಬಲಿಯಾಗುವ ಭೀತಿ ಎದುರಾಗಿದೆ. ನಗರದ ಪ್ರಮುಖ ಹಸಿರು ವಲಯಕ್ಕೆ ಉಂಟಾಗಲಿರುವ ಹಾನಿಯ ಕುರಿತು ಪರಿಸರವಾದಿಗಳು ಹಾಗೂ ವಿಜ್ಞಾನಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
- Prasanna Hegde
- Updated on: Aug 5, 2026
- 7:21 pm
ಅಸಮಾಧಾನಿತರ ಕೋಪ ಶಮನಕ್ಕೆ ಮುಂದಾದ ಕಾಂಗ್ರೆಸ್: ಶಾಸಕರ ಜೊತೆ ನಾಯಕರ ಚರ್ಚೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಚಿವ ಸ್ಥಾನ ಸಿಗದೆ ಭುಗಿಲೆದ್ದಿರುವ ಕಾಂಗ್ರೆಸ್ ಶಾಸಕರ ಬಂಡಾಯವನ್ನು ಶಮನಗೊಳಿಸಲು ಪಕ್ಷದ ಹಿರಿಯ ನಾಯಕರು ಮುಂದಾಗಿದ್ದಾರೆ. ರಾಜೀನಾಮೆ ಬೆದರಿಕೆ ಹಾಕಿರುವ ಶಾಸಕರನ್ನು ಮನವೊಲಿಸಲು ಸಿಎಂ, ಕೆಪಿಸಿಸಿ ಅಧ್ಯಕ್ಷರು ಹಾಗೂ ಹಿರಿಯ ಸಚಿವರ ಹಂತದಲ್ಲಿ ಬಿರುಸಿನ ಮಾತುಕತೆಗಳು ನಡೆಯುತ್ತಿವೆ.
- Prasanna Hegde
- Updated on: Aug 5, 2026
- 7:23 pm