AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ

Senior Sub Editor - TV9 Kannada

prasannamanjunath.hegde@tv9.com

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow On:
ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಸಿನಿಮಾ ಸ್ಟೈಲ್​​ನಲ್ಲಿ ಪ್ರಯಾಣಿಕರ ರಕ್ಷಣೆ

ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ಸಿನಿಮಾ ಸ್ಟೈಲ್​​ನಲ್ಲಿ ಪ್ರಯಾಣಿಕರ ರಕ್ಷಣೆ

ತಿರುವನಂತಪುರಂ-ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಬಿ-1 ಕೋಚ್‌ನಲ್ಲಿ ಲೂನಿ ರಿಚ್ಛಾ-ವಿಕ್ರಮ್‌ಗಢ್ ಅಲೋಟ್ ನಡುವೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೆಂಕಿಯ ತೀವ್ರತೆಗೆ ಬೋಗಿ ಹೊತ್ತಿ ಉರಿದಿದ್ದು, ಕೂಡಲೇ ಎಚ್ಚೆತ್ತ ಸಿಬ್ಬಂದಿ ತಕ್ಷಣ ಪ್ರಯಾಣಿಕರನ್ನು ರಕ್ಷಿಸಿ ಕೋಚ್ ಬೇರ್ಪಡಿಸಿದ ಪರಿಣಾಮ ಸಂಭವನೀಯ ಹೆಚ್ಚಿನ ಅನಾಹುತ ತಪ್ಪಿದೆ.

ಆಟೋ, ಟ್ಯಾಕ್ಸಿ​ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: CNG ದರ ಕೆಜಿಗೆ 1 ರೂ. ಹೆಚ್ಚಳ

ಆಟೋ, ಟ್ಯಾಕ್ಸಿ​ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: CNG ದರ ಕೆಜಿಗೆ 1 ರೂ. ಹೆಚ್ಚಳ

ಕೇಂದ್ರ ಸರ್ಕಾರ ಮತ್ತೆ CNG ದರವನ್ನು ಕೆಜಿಗೆ 1 ರೂಪಾಯಿ ಹೆಚ್ಚಳ ಮಾಡಿದೆ. ಕೇವಲ 48 ಗಂಟೆಗಳಲ್ಲಿ ಇದು ಎರಡನೇ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಕೆಜಿ CNG ದರ 80.09 ರೂಪಾಯಿಗೆ ತಲುಪಿದೆ. ಈ ನಿರಂತರ ಏರಿಕೆಯಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇಂಧನ ವೆಚ್ಚ ಸಮತೋಲನಗೊಳಿಸಲು ದರ ಪರಿಷ್ಕರಣೆಯ ಅನಿವಾರ್ಯತೆ ಎದುರಾಗಿದೆ ಎಂದವರು ಅಲವತ್ತುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೆದರ್‌ಲ್ಯಾಂಡ್ಸ್ ಭೇಟಿಯಿಂದ ಭಾರತಕ್ಕೆ ಏನೆಲ್ಲ ಲಾಭ? ಇಲ್ಲಿದೆ ಮಾಹಿತಿ

ಪ್ರಧಾನಿ ನರೇಂದ್ರ ಮೋದಿ ನೆದರ್‌ಲ್ಯಾಂಡ್ಸ್ ಭೇಟಿಯಿಂದ ಭಾರತಕ್ಕೆ ಏನೆಲ್ಲ ಲಾಭ? ಇಲ್ಲಿದೆ ಮಾಹಿತಿ

ಪ್ರಧಾನಿ ಮೋದಿ ನೆದರ್‌ಲ್ಯಾಂಡ್ಸ್ ಭೇಟಿ ಭಾರತಕ್ಕೆ ದ್ವಿಪಕ್ಷೀಯ ಸಂಬಂಧಗಳನ್ನು ತಂತ್ರಾತ್ಮಕ ಸಹಭಾಗಿತ್ವಕ್ಕೆ ಏರಿಸಿದೆ. ಸೆಮಿಕಂಡಕ್ಟರ್, ಹಸಿರು ಇಂಧನ, ಶಿಕ್ಷಣ, ಕೃಷಿ, ಆರೋಗ್ಯ ಮತ್ತು ಸಾಂಸ್ಕೃತಿಕ ವಿನಿಮಯ ಕ್ಷೇತ್ರಗಳಲ್ಲಿ ಭಾರತಕ್ಕೆ ಗಣನೀಯ ಲಾಭ ತಂದಿದೆ. ಭಾರತೀಯ ವಿದ್ಯಾರ್ಥಿಗಳಿಗೆ ಮತ್ತು ವೃತ್ತಿಪರರಿಗೆ ಹೊಸ ಅವಕಾಶಗಳು ಸೃಷ್ಟಿಯಾಗಿವೆ.

ನಿಟ್​​ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಕ್ಕೆ ರಾಹುಲ್​​ ಆಗ್ರಹ

ನಿಟ್​​ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಕ್ಕೆ ರಾಹುಲ್​​ ಆಗ್ರಹ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ 22 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣ ವಜಾಗೊಳಿಸುವಂತೆ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ರಾಹುಲ್ ಒತ್ತಿ ಹೇಳಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮೇ 3ರಂದು ನಡೆದಿದ್ದ NEET-UG 2026 ಪರೀಕ್ಷೆಯನ್ನು ಮಂಗಳವಾರ ರದ್ದುಗೊಳಿಸಿತ್ತು.

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ NTAನಲ್ಲಿ ಮಹತ್ವದ ಬದಲಾವಣೆ

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ NTAನಲ್ಲಿ ಮಹತ್ವದ ಬದಲಾವಣೆ

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಸಂಸ್ಥೆಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು ಮತ್ತು ಇಬ್ಬರು ಜಂಟಿ ನಿರ್ದೇಶಕರ ನೇಮಕಕ್ಕೆ ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ. ಈ ಬಗ್ಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಪೋಕ್ಸೋ ಕೇಸ್​​ನಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿ ಅರೆಸ್ಟ್​​

ಪೋಕ್ಸೋ ಕೇಸ್​​ನಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿ ಅರೆಸ್ಟ್​​

ಪೋಕ್ಸೋ ಕೇಸ್​​ ಸಂಬಂಧ ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದರಾಗಿರುವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚವರು, ತನ್ನ ಮಗ ತಪ್ಪು ಮಾಡಿಲ್ಲ ಎಂದು ಹೇಳುತ್ತಿದ್ದಾನೆ. ಹೀಗಾಗಿ ಪ್ರಕರಣ ಸಂಬಂಧ ನ್ಯಾಯ ಸಿಗುವ ವಿಶ್ವಾಸವಿದೆ ಎಂದಿದ್ದಾರೆ. ಮತ್ತೊಂದೆಡೆ ಇದೊಂದು ಹನಿ ಟ್ರ್ಯಾಪ್ ಯತ್ನಎಂದು ಅವರ ಪುತ್ರ ಭಗೀರಥ್ ಸಾಯಿ ಗಂಭೀರ ಆರೋಪ ಮಾಡಿದ್ದಾರೆ.

Karnataka Weather Forecast: ಮುಂದಿನ 3 ದಿನ ಮಳೆ ಅಬ್ಬರ, ಮುಕ್ಕಾಲು ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​​

Karnataka Weather Forecast: ಮುಂದಿನ 3 ದಿನ ಮಳೆ ಅಬ್ಬರ, ಮುಕ್ಕಾಲು ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​​

Monsoon 2026: ಮುಂದಿನ 3 ದಿನ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಗಂಟೆಗೆ 40-50 ಕಿಮೀ ಗಾಳಿ ಸಹಿತ ಭಾರಿ ಮಳೆಯಾಗಲಿದೆ. ಬಂಗಾಳ ಕೊಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಕ್ಕಾಲು ಕರ್ನಾಟಕಕ್ಕೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೋದಿ ಮಿತವ್ಯಯದ ಕರೆಗೆ ಕಾಂಗ್ರೆಸ್​​ನಲ್ಲಿ ಭಿನ್ನರಾಗ: ಒಬ್ಬರು ಪ್ರಧಾನಿ ಹೇಳಿದ್ದು ಸರಿ ಎಂದರೆ, ಮತ್ತೊಬ್ಬರಿಂದ ವಿರೋಧ!

ಮೋದಿ ಮಿತವ್ಯಯದ ಕರೆಗೆ ಕಾಂಗ್ರೆಸ್​​ನಲ್ಲಿ ಭಿನ್ನರಾಗ: ಒಬ್ಬರು ಪ್ರಧಾನಿ ಹೇಳಿದ್ದು ಸರಿ ಎಂದರೆ, ಮತ್ತೊಬ್ಬರಿಂದ ವಿರೋಧ!

ಜಾಗತಿಕ ತೈಲ ಸಂಕಷ್ಟದ ಹಿನ್ನೆಲೆಯಲ್ಲಿ ಮೋದಿ ಮಿತವ್ಯಯ ಕರೆಗೆ ಕಾಂಗ್ರೆಸ್‌ನಲ್ಲಿಯೇ ಭಿನ್ನರಾಗ ಕೇಳಿಬಂದಿದೆ. ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಪೆಟ್ರೋಲ್ ಮತ್ತು ಚಿನ್ನ ಬಳಕೆ ಕಡಿಮೆ ಮಾಡಲು ಬೆಂಬಲಿಸಿದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಬೆಲೆ ಏರಿಕೆಗೆ ಮೋದಿಯೇ ಕಾರಣ ಎಂದು ತಿರುಗೇಟು ನೀಡಿದ್ದಾರೆ. ದೇಶ ದೊಡ್ಡ ದುರಂತದ ಸ್ಥಿತಿಗೆ ಬಂದಿದೆ ಎಂದು ಆರೋಪಿಸಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ ವಿದೇಶಿಗರಿಂದ ಮತಚಲಾವಣೆ?: 10ಕ್ಕೂ ಹೆಚ್ಚು ಮಂದಿ ಬಂಧನ; ಫೇಲ್​​ ಆಯ್ತಾ SIR?

ತಮಿಳುನಾಡು ಚುನಾವಣೆಯಲ್ಲಿ ವಿದೇಶಿಗರಿಂದ ಮತಚಲಾವಣೆ?: 10ಕ್ಕೂ ಹೆಚ್ಚು ಮಂದಿ ಬಂಧನ; ಫೇಲ್​​ ಆಯ್ತಾ SIR?

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿದೇಶಿ ಪ್ರಜೆಗಳು ಅಕ್ರಮವಾಗಿ ಮತ ಚಲಾಯಿಸಿರುವ ಅನುಮಾನ ವ್ಯಕ್ತವಾಗಿದೆ. ವಿದೇಶಿ ಪಾಸ್‌ಪೋರ್ಟ್ ಹೊಂದಿದ್ದರೂ ಭಾರತೀಯ ಮತದಾರರ ಗುರುತಿನ ಚೀಟಿ ಹೊಂದಿರುವ ಆರೋಪದ ಮೇಲೆ ಚೆನ್ನೈ ಮತ್ತು ಮಧುರೈ ವಿಮಾನ ನಿಲ್ದಾಣಗಳಲ್ಲಿ 10ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ತಪಾಸಣೆಯ ವೇಳೆ ಪ್ರಯಾಣಿಕರ ತೋರು ಬೆರಳಿನಲ್ಲಿ ಮತದಾನ ಗುರುತಿನ ಮಸಿಯೂ ಕಂಡು ಬಂದಿರೋದು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ತಾಯಿ ಆಸ್ತಿ ಬೇಕು, ಆಕೆ ಬೇಡ ಎಂದ ಮಗಳಿಗೆ ಹೈಕೋರ್ಟ್​​ ತಪರಾಕಿ: ಮಹತ್ವದ ಆದೇಶ ನೀಡಿದ ಕೋರ್ಟ್​

ತಾಯಿ ಆಸ್ತಿ ಬೇಕು, ಆಕೆ ಬೇಡ ಎಂದ ಮಗಳಿಗೆ ಹೈಕೋರ್ಟ್​​ ತಪರಾಕಿ: ಮಹತ್ವದ ಆದೇಶ ನೀಡಿದ ಕೋರ್ಟ್​

ತಾಯಿ ಬೇಡ, ಆಕೆಯ ಆಸ್ತಿ ಮಾತ್ರ ಬೇಕು ಎಂಬ ಮಗಳಿಗೆ ಕರ್ನಾಟಕ ಹೈಕೋರ್ಟ್​​ ಬಿಗ್​​ ಶಾಕ್​​ ಕೊಟ್ಟಿದೆ. ತಾಯಿ ನೀಡಿದ್ದ ಗಿಫ್ಟ್ ಡೀಡ್ ರದ್ದುಗೊಳಿಸಿದ್ದ ಹಿರಿಯ ನಾಗರಿಕ ನಿರ್ವಹಣಾ ನ್ಯಾಮಂಡಳಿ ಮತ್ತು ಉಪವಿಭಾಗಾಧಿಕಾರಿಗಳ ಆದೇಶವನ್ನು ಎತ್ತಿ ಹಿಡಿದಿರುವ ಉಚ್ಚನ್ಯಾಯಾಲಯ, ಮಗಳು ಸ್ವಂತ ಮನೆ ಹೊಂದಿದ್ದರೂ ತಮ್ಮ ವಯೋವೃದ್ಧ ತಾಯಿಯನ್ನು ಬಾಡಿಗೆ ಮನೆಯಲ್ಲಿ ವಾಸಿಸಲು ಬಿಟ್ಟಿರುವುದು ನೈತಿಕ ಮತ್ತು ಕಾನೂನುಬದ್ಧ ಕರ್ತವ್ಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಹವಾಮಾನ ವರದಿ: ವಾರಾಂತ್ಯಕ್ಕೆ ಬೆಂಗಳೂರಲ್ಲಿ ವರುಣನ ಅಬ್ಬರ, ಮೇ 17ರ ವರೆಗೆ ರಾಜ್ಯದ ವಿವಿಧೆಡೆ ಮಳೆ

ಹವಾಮಾನ ವರದಿ: ವಾರಾಂತ್ಯಕ್ಕೆ ಬೆಂಗಳೂರಲ್ಲಿ ವರುಣನ ಅಬ್ಬರ, ಮೇ 17ರ ವರೆಗೆ ರಾಜ್ಯದ ವಿವಿಧೆಡೆ ಮಳೆ

Karnataka Weather Update: ಬೆಂಗಳೂರಿನಲ್ಲಿ ಈ ವಾರಾಂತ್ಯ ಮುಂಗಾರು ಪೂರ್ವ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದೆ. ಮೇ 15ರಿಂದ 17ರವರೆಗೆ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ ಜನರಿಗೆ ವರುಣ ತಂಪೆರೆಯಲಿದ್ದಾನೆ. KSNDMC ಸಹ ರಾಜ್ಯದ ಹಲವೆಡೆ ಮೇ 17ರವರೆಗೆ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಿದೆ.

ಮೇ 30ರಿಂದ 3ನೇ ಹಂತದ SIR: ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ

ಮೇ 30ರಿಂದ 3ನೇ ಹಂತದ SIR: ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ

ಚುನಾವಣಾ ಆಯೋಗವು ಮೇ 30ರಿಂದ 3ನೇ ಹಂತದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಆರಂಭಿಸಲಿದೆ. ಇದರ ಅನ್ವಯ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮನೆಮನೆಗೆ ಭೇಟಿ ನೀಡಿ ಮತದಾರರ ಪರಿಶೀಲನೆ ನಡೆಯಲಿದೆ. ಮೊದಲ ಎರಡು ಹಂತಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ 13 ಕಡೆ SIR ಪೂರ್ಣಗೊಂಡಿದ್ದು, ಸುಮಾರು 5.18 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿತ್ತು.