ಸಚಿವ ಸ್ಥಾನ ಸಿಕ್ಕವರಿಗೂ, ಸಿಗದವರಿಗೂ ತಪ್ಪದ ಚಿಂತೆ: ‘ಕೈ’ ಪಾಳಯದಲ್ಲಿ ಮುಂದುವರಿದ ಅಂತೆಕಂತೆ
ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರಚನೆಯಾದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಖಾತೆ ಹಂಚಿಕೆ ಮತ್ತು ಎರಡನೇ ಹಂತದ ಸಂಪುಟ ವಿಸ್ತರಣೆಯ ಕುರಿತು ಭಾರಿ ಚರ್ಚೆ ಶುರುವಾಗಿವೆ. ತಮ್ಮದೇ ಆದ ಲೆಕ್ಕಾಚಾರಗಳಲ್ಲಿ ನಾಯಕರಿದ್ದು, ಹೈಕಮಾಂಡ್ ನಿರ್ಣಯ ಏನಾಗಲಿದೆ ಎಂಬುದೇ ಸದ್ಯ ಭಾರಿ ಕೂತೂಹಲ ಮೂಡಿಸಿದೆ.
- Prasanna Hegde
- Updated on: Jun 4, 2026
- 12:57 pm
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್ಗೆ ಡಿಕ್ಕಿ: ತಪ್ಪಿದ ಭಾರಿ ಅನಾಹುತ
ನೆಲಮಂಗಲ ತಾಲೂಕಿನ ಕುಣಿಗಲ್ ಬೈಪಾಸ್ ಬಳಿ ಕ್ಯಾಂಟರ್ಗೆ ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಹಾಸನದಿಂದ ಬೆಂಗಳೂರಿಗೆ ಬರುತ್ತಿದ್ದ ಈ ಆ್ಯಂಬುಲೆನ್ಸ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರ ನೆರವಿನಿಂದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Prasanna Hegde
- Updated on: Jun 4, 2026
- 9:12 am
ಸಾವಿರಾರು ಮನೆಗಳಿರುವ ಅಪಾರ್ಟ್ಮೆಂಟ್ಗಿಲ್ಲ ಸುಸಜ್ಜಿತ ರಸ್ತೆ ಭಾಗ್ಯ: ಪ್ರತಿವರ್ಷ ನಿವಾಸಿಗಳ ದುಡ್ಡಲ್ಲಿಯೇ ನಡೆಯುತ್ತಿದೆ ರೋಡ್ ದುರಸ್ತಿ!
ಬೆಂಗಳೂರಿನ ಜಾಲಹಳ್ಳಿ ಪೂರ್ವದ ಅಪಾರ್ಟ್ಮೆಂಟ್ ನಿವಾಸಿಗಳು ರಸ್ತೆ ದುರಸ್ತಿಗಾಗಿ ಪ್ರತಿವರ್ಷ ತಮ್ಮದೇ ಹಣ ಖರ್ಚು ಮಾಡುತ್ತಿದ್ದಾರೆ. ಜಮೀನು ವಿವಾದದಿಂದಾಗಿ ಪಾಲಿಕೆ ರಸ್ತೆ ಅಭಿವೃದ್ಧಿಪಡಿಸದ ಹಿನ್ನೆಲೆ ಸಾರ್ವಜನಿಕರು ಹೈರಾಣಾಗಿದ್ದಾರೆ. ಕಾನೂನು ವಿವಾದ ಬಗೆಹರಿಯುವವರೆಗೂ ಕನಿಷ್ಠ ರಸ್ತೆಯನ್ನು ಸುರಕ್ಷಿತವಾಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿವಾಸಿಗಳು ಮನವಿ ಮಾಡಿದ್ದಾರೆ.
- Prasanna Hegde
- Updated on: Jun 4, 2026
- 8:41 am
ಪರೀಕ್ಷೆಗೆ ಹಾಜರಾಗದೆ ಜರ್ಮನ್ ಭಾಷಾ ಪ್ರಮಾಣಪತ್ರ ಪಡೆಯಲು ಹೋಗಿ ಲಕ್ಷಾಂತರ ಹಣ ಕಳೆದುಕೊಂಡ ವ್ಯಕ್ತಿ!
ಪರೀಕ್ಷೆ ಬರೆಯದೇ ಜರ್ಮನ್ ಭಾಷಾ ಪ್ರಮಾಣಪತ್ರ ಪಡೆಯುವ ಆಮಿಷಕ್ಕೆ ಒಳಗಾದ ಬೆಂಗಳೂರಿನ ಖಾಸಗಿ ಆಸ್ಪತ್ರೆ ಉದ್ಯೋಗಿ 3.67 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಸಂಬಂಧ ಜೆ.ಬಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫೇಸ್ಬುಕ್ ಜಾಹೀರಾತು ನೋಡಿ ಮರುಳಾಗಿ ವಂಚಕರ ಸಂಪರ್ಕಕ್ಕೆ ಬಂದಿದ್ದ ಸಂತ್ರಸ್ತ ವ್ಯಕ್ತಿ, ಹಂತ ಹಂತವಾಗಿ ಹಣ ವರ್ಗಾಯಿಸಿದ್ದರು. ಹೀಗಿದ್ದರೂ ಪ್ರಮಾಣಪತ್ರ ನೀಡುವ ಬದಲು ಮತ್ತಷ್ಟು ಹಣದ ಬೇಡಿಕೆ ಇಟ್ಟಾಗ ಅನುಮಾನಗೊಂಡ ಅವರು ತಾವು ವಂಚನೆಗೆ ಒಳಗಾಗಿರುವುದನ್ನು ಅರಿತು ದೂರು ದಾಖಲಿಸಿದ್ದಾರೆ.
- Prasanna Hegde
- Updated on: Jun 4, 2026
- 7:10 am
ಸಿಎಂ ಆಗಿ ಪ್ರಮಾಣವಚನದ ಬೆನ್ನಲ್ಲೇ ರಾಜ್ಯದ ಜನತೆಗೆ ಮಹತ್ವದ ಕರೆ ಕೊಟ್ಟ ಡಿ.ಕೆ. ಶಿವಕುಮಾರ್: ಇಲ್ಲಿದೆ ಮಾಹಿತಿ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟಲು ಕನ್ನಡಿಗರೆಲ್ಲರೂ ಒಟ್ಟಾಗಿ ಕೈಜೋಡಿಸುವಂತೆ ಪೋಸ್ಟ್ ಮೂಲಕ ಕರೆ ನೀಡಿದ್ದಾರೆ. ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿದ, ತಮ್ಮನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ಸಿಎಂ ಆಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದೇನೆ. ನಿಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸಕ್ಕೆ ತಲೆಬಾಗುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.
- Prasanna Hegde
- Updated on: Jun 3, 2026
- 7:42 pm
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆ ಶಿವಕುಮಾರ್ರಿಂದ ದೀರ್ಘದಂಡ ನಮಸ್ಕಾರ
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ವಿಧಾನಸೌಧಕ್ಕೆ ಬಂದ ಡಿ.ಕೆ. ಶಿವಕುಮಾರ್ ಅವರು ಮೆಟ್ಟಿಲುಗಳಿಗೆ ತಲೆಬಾಗಿ ನಮಸ್ಕರಿಸಿ ಒಳಗೆ ಪ್ರವೇಶಿಸಿದ್ದಾರೆ. ಪ್ರಮಾಣವಚನದ ಬಳಿಕ ಸಚಿವ ಸಂಪುಟದ ಸಹುದ್ಯೋಗಿಗಳ ಜೊತೆ ವಿಧಾನಸೌಧಕ್ಕೆ ತೆರಳಿದ್ದ ಅವರು ಚಪ್ಪಲಿ ಕಳಚಿ ನಮಸ್ಕರಿಸಿದ್ದು ಗಮನ ಸೆಳೆದಿದೆ.
- Prasanna Hegde
- Updated on: Jun 3, 2026
- 7:25 pm
Karnataka Weather Forecast: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ
Monsoon 2026: ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದಿನ ಕೆಲ ದಿನಗಳವರೆಗೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 11 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಗಾಳಿ ಇರುವ ಸಾಧ್ಯತೆ ಬಗ್ಗೆಯೂ ಎಚ್ಚರಿಸಲಾಗಿದೆ. ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಲ ಪ್ರದೇಶಗಳಲ್ಲಿಯೇ ನಾಳೆ ಹೆಚ್ಚಿನ ವರುಣಾರ್ಭಟ ನಿರೀಕ್ಷಿಸಲಾಗಿದೆ.
- Prasanna Hegde
- Updated on: Jun 3, 2026
- 6:56 pm
ಡಿಕೆಶಿ ಸಂಪುಟದಲ್ಲಿ ಅನುಭವಿ ನಾಯಕರು: ಸಚಿವರಾಗಿ ಮುನಿಯಪ್ಪ, ಎಂ.ಬಿ. ಪಾಟೀಲ್, ಜಾರ್ಜ್ ಪ್ರಮಾಣ
ಕರ್ನಾಟಕದಲ್ಲಿ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭ ನಡೆಯಿತು. ರಾಜ್ಯಪಾಲರು ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್ ಮತ್ತು ಎಂ.ಬಿ. ಪಾಟೀಲ್ ಅವರಿಗೆ ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಮತ್ತು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯಪಾಲರು ನೂತನ ಸಚಿವರನ್ನು ಅಭಿನಂದಿಸಿದರು.
- Prasanna Hegde
- Updated on: Jun 3, 2026
- 5:53 pm
ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಅಷ್ಟಕ್ಕೂ ಯಾರು ಈ ಅಜ್ಜಯ್ಯ?
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಆರಾಧ್ಯ ದೈವ ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಭಕ್ತಿಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಶೇಷ ಎಂದರೆ ಪದಗ್ರಹಣ ಸಮಾರಂಭ ಕೂಡ ಅಜ್ಜಯ್ಯನ ಮಠ ನೀಡಿರುವ ದಿನಾಂಕ ಮತ್ತು ಸಮಯದಂದೇ ನೆರವೇರಿದೆ. ಸಿಎಂ ಸ್ಥಾನ ಪಡೆಯುವ ಮೊದಲಿಗಿಂತ ಹಿಡಿದು ಪ್ರಮಾಣವಚನದವರೆಗೂ ಪ್ರತಿ ನಿರ್ಧಾರವನ್ನು ಅಜ್ಜಯ್ಯನ ಮಠದ ಈಗಿನ ಡಾ. ಕರಿವೃಷಭ ಶಿವಯೋಗಿಶ್ವರ ಶ್ರೀಗಳ ಮಾರ್ಗದರ್ಶನದನುಸಾರ ಡಿಕೆಶಿ ತೆಗೆದುಕೊಂಡಿದ್ದಾರೆ.
- Prasanna Hegde
- Updated on: Jun 3, 2026
- 5:28 pm
ಇತ್ತ ಡಿಕೆಶಿ ಪದಗ್ರಹಣದ ಬೆನ್ನಲ್ಲೇ ಅತ್ತ ವಿಧಾನಸೌಧದಲ್ಲಿ ಬದಲಾಯ್ತು ಸಿಎಂ ಕಚೇರಿಯ ನಾಮಫಲಕ
ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ವಿಧಾನಸೌಧದ ಸಿಎಂ ಕಚೇರಿಯಲ್ಲಿ ನಾಮಫಲಕ ಬದಲಾವಣೆಯಾಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವಿದ್ದು, ಇದೀಗ ಸಿಬ್ಬಂದಿ ಅದನ್ನು ತೆಗೆದು ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರಿನ ಫಲಕವನ್ನು ಅಳವಡಿಸಿದ್ದಾರೆ. ಈ ಬದಲಾವಣೆಯು ರಾಜ್ಯದ ನಾಯಕತ್ವ ಬದಲಾವಣೆಯನ್ನು ಅಧಿಕೃತವಾಗಿ ಸೂಚಿಸುತ್ತದೆ.
- Prasanna Hegde
- Updated on: Jun 3, 2026
- 5:15 pm
CM DK Shivakumar: ಡಿ.ಕೆ. ಶಿವಕುಮಾರ್ ಎಂಬ ಹೆಸರಿನವನಾದ ನಾನು…, ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನ
ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ: ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ಸಮಾರಂಭಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದರು. ಧಾರ್ಮಿಕ ನಾಯಕರು ಸೇರಿ ಬಿಜೆಪಿಯ ಉಚ್ಛಾಟಿತ ಶಾಸಕರೂ ಉಪಸ್ಥಿತರಿದ್ದರು.
- Prasanna Hegde
- Updated on: Jun 3, 2026
- 4:50 pm
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್ ಫಸ್ಟ್ ರಿಯಾಕ್ಷನ್: ಯಾರಿಗೆಲ್ಲ ಧನ್ಯವಾದ ಹೇಳಿದ್ರು ನೋಡಿ
ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ. ಜಿ. ಪರಮೇಶ್ವರ್ ಅವರು ತಮ್ಮ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸುರ್ಜೇವಾಲ ಮತ್ತು ವೇಣುಗೋಪಾಲ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ರಾಜ್ಯದ ಜನರಿಗೆ ಪಕ್ಷದ ಸಿದ್ಧಾಂತಗಳ ಹಿನ್ನೆಲೆಯಲ್ಲಿ ಕೆಲಸ ಮಾಡಲು ಇದು ಮತ್ತೊಂದು ಅವಕಾಶ ಎಂದಿರುವ ಅವರು ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೂ ಧನ್ಯವಾದ ತಿಳಿಸಿದ್ದಾರೆ.
- Prasanna Hegde
- Updated on: Jun 3, 2026
- 3:07 pm