ಮನ್ ಕಿ ಬಾತ್ 135ನೇ ಸಂಚಿಕೆ: ಮೇಕ್ ಇನ್ ಇಂಡಿಯಾ ಸಾಧನೆ ಬಣ್ಣಿಸಿದ ಮೋದಿ
Mann Ki Baat: ತಮ್ಮ 135ನೇ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಕ್ಷಣಾ ಮತ್ತು ವಿಮಾನಯಾನ ಕ್ಷೇತ್ರದಲ್ಲಿ 'ಮೇಕ್ ಇನ್ ಇಂಡಿಯಾ' ಅಡಿ ಸಾಧಿಸಿದ ಐತಿಹಾಸಿಕ ಮೈಲಿಗಲ್ಲುಗಳನ್ನು ಪ್ರಶಂಸಿಸಿದ್ದಾರೆ. ನೀರಿನ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು ಎಂದು ಕರೆ ನೀಡಿರುವ ಅವರು, ನಾಗಾಲ್ಯಾಂಡ್ನಲ್ಲಿ ನಡೆಸಲಾಗುತ್ತಿರುವ 'ಬೇಬಿ ಲೀಗ್' ಫುಟ್ಬಾಲ್ ಟೂರ್ನಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- Prasanna Hegde
- Updated on: Jun 28, 2026
- 2:42 pm
ವೆನೆಜುವೆಲಾ ಭೂಕಂಪ: ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
Venezuela Quake: ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಫುಟ್ಬಾಲ್ ಆಟಗಾರ ಹೆಕ್ಟರ್ ಬೆಲ್ಲೊ ಅವರ ಪತ್ನಿ ಆಂಡ್ರಿಯಾ ಬೆಲ್ಲೊ ಮೃತಪಟ್ಟಿದ್ದಾರೆ. ತಮ್ಮ ಒಂದು ವರ್ಷದ ಮಗಳು ಅಲಾನಾಳನ್ನು ಅವಶೇಷಗಳಡಿ ರಕ್ಷಿಸಲು ಆಂಡ್ರಿಯಾ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ತಾಯಿಯ ಮಡಿಲಲ್ಲಿ ಅಲಾನಾ ಪವಾಡ ಸದೃಶವಾಗಿ ಪಾರಾಗಿದ್ದು, ಈ ಘಟನೆ ಇಡೀ ಜಗತ್ತನ್ನೇ ಭಾವುಕಗೊಳಿಸಿದೆ.
- Prasanna Hegde
- Updated on: Jun 28, 2026
- 10:35 am
ರಾಜ್ಯದ ರೈತರ ಆರ್ಟಿಸಿಗಳಲ್ಲಿ ವಕ್ಫ್ ಉಲ್ಲೇಖ: ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದ ವಿಪಕ್ಷ ನಾಯಕ ಅಶೋಕ್
Waqf Row: ರಾಜ್ಯದಲ್ಲಿ 1.80 ಲಕ್ಷಕ್ಕೂ ಹೆಚ್ಚು ರೈತರ ಆರ್ಟಿಸಿಗಳಲ್ಲಿ (RTC) ವಕ್ಫ್ ಹೆಸರು ಉಲ್ಲೇಖವಾಗಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಓಲೈಕೆ ಮತ್ತು ತುಷ್ಟೀಕರಣದ ರಾಜಕಾರಣ ಈಗ ನಾಡಿನ ರೈತರ ಅಸ್ತಿತ್ವಕ್ಕೇ ಕುತ್ತು ತರುವ ಹಂತಕ್ಕೆ ತಲುಪಿದೆ. ಅನ್ನ ನೀಡುವ ರೈತನನ್ನು ತನ್ನದೇ ಭೂಮಿಯ ಹಕ್ಕಿಗಾಗಿ ಸರ್ಕಾರಿ ಕಚೇರಿಗಳ ಮುಂದೆ ನಿಲ್ಲಿಸಿದರೆ ಅವರ ಶಾಪ ತಟ್ಟದೇ ಇರದು ಎಂದೂ ಅವರು ಎಚ್ಚರಿಸಿದ್ದಾರೆ.
- Prasanna Hegde
- Updated on: Jun 28, 2026
- 10:45 am
ಓಣಂ ಸ್ಪೆಷಲ್: ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಬೋಗಿಗಳ ಹೆಚ್ಚಳಕ್ಕೆ ನಿರ್ಧಾರ
Vande Bharat Express: ಓಣಂ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಬೋಗಿಗಳನ್ನು 8 ರಿಂದ 16ಕ್ಕೆ ಹೆಚ್ಚಿಸಲು ರೈಲ್ವೆ ಇಲಾಖೆ ನಿರ್ಧರಿಸಿದ್ದು, ಇದರಿಂದ ಪ್ರತಿ ಪ್ರಯಾಣದಲ್ಲಿ 598 ಹೆಚ್ಚುವರಿ ಆಸನಗಳು ಲಭ್ಯವಾಗಲಿವೆ. 630 ಕಿಲೋಮೀಟರ್ ದೂರದ ಬೆಂಗಳೂರು–ಎರ್ನಾಕುಲಂ ಮಾರ್ಗವನ್ನು ಈ ವಂದೇ ಭಾರತ್ ರೈಲು 8 ಗಂಟೆ 40 ನಿಮಿಷಗಳಲ್ಲಿ ಕ್ರಮಿಸುತ್ತಿದ್ದು, ಹಬ್ಬದ ದಿನಗಳು ಹಾಗೂ ದೀರ್ಘ ವಾರಾಂತ್ಯಗಳಲ್ಲಿ ಈ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಭಾರಿ ಏರಿಕೆ ಕಂಡಿದೆ ಎನ್ನಲಾಗಿದೆ.
- Prasanna Hegde
- Updated on: Jun 28, 2026
- 9:38 am
ಶಾಂತಿ ಒಪ್ಪಂದದ ಬಳಿಕವೂ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ಇರಾನ್ ಮೇಲೆ ಮತ್ತೆ ವೈಮಾನಿಕ ದಾಳಿ ನಡೆಸಿದ ಅಮೆರಿಕ
US-Iran Conflict: ಶಾಂತಿ ಒಪ್ಪಂದದ ಬೆನ್ನಲ್ಲೇ ತೈಲ ಟ್ಯಾಂಕರ್ ಮೇಲಿನ ಡ್ರೋನ್ ದಾಳಿಗೆ ಪ್ರತಿಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶದಂತೆ ಇರಾನ್ನ 10 ಸೇನಾ ನೆಲೆಗಳ ಮೇಲೆ ಅಮೆರಿಕನ್ ಪಡೆಗಳು ಭೀಕರ ವೈಮಾನಿಕ ದಾಳಿ ನಡೆಸಿವೆ. ಅಮೆರಿಕ ತಾಳ್ಮೆ ಕಳೆದುಕೊಂಡರೆ, ನಾವು ಆರಂಭಿಸಿದ ಕಾರ್ಯಾಚರಣೆಯನ್ನು ಸೇನಾ ರೀತಿಯಲ್ಲಿ ಪೂರ್ಣಗೊಳಿಸಬೇಕಾಗಬಹುದು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಖಡಕ್ ಎಚ್ಚರಿಕೆಯನ್ನೂ ನೀಡಿದ್ದಾರೆ.
- Prasanna Hegde
- Updated on: Jun 28, 2026
- 7:53 am
ಜಿಬಿಎಯಿಂದ ಮಹತ್ವದ ನಿರ್ಣಯ: ಸಮಸ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಇನ್ಮುಂದೆ ಸಂಜೆ ವೇಳೆಯಲ್ಲೂ ಕಸ ಸಂಗ್ರಹ
Evening Garbage Collection: ಬೆಂಗಳೂರಿನ ಕಸದ ಸಮಸ್ಯೆಗೆ ಬ್ರೇಕ್ ಹಾಕಲು ಜಿಬಿಎ ಮಹತ್ವದ ನಿರ್ಧಾರ ಕೈಗೊಂಡಿದ್ದು, ತ್ಯಾಜ್ಯ ಸಮಸ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಇನ್ಮುಂದೆ ಸಂಜೆ ವೇಳೆಯೂ ಆಟೋ ಟಿಪ್ಪರ್ಗಳ ಮೂಲಕ ಕಸ ಸಂಗ್ರಹಿಸಲು ಮುಖ್ಯ ಆಯುಕ್ತರು ಸೂಚಿಸಿದ್ದಾರೆ. ಕಸದ ನಿರ್ವಹಣೆಯಲ್ಲಿ ಸಹಕರಿಸುವಂತೆ ಸಾರ್ವಜನಿಕರಿಗೂ ಮನವಿ ಮಾಡಿರುವ ಅವರು, ಯಾವುದೇ ಪ್ರದೇಶದಲ್ಲಿ ಕಸ ರಾಶಿಯಾಗಿದ್ದರೆ ಅಥವಾ ಆಟೋ ಟಿಪ್ಪರ್ ಸಮಯಕ್ಕೆ ಬಾರದಿದ್ದರೆ ತಕ್ಷಣ ನಿಗಮಕ್ಕೆ ಮಾಹಿತಿ ನೀಡಿ ಎಂದು ತಿಳಿಸಿದ್ದಾರೆ.
- Prasanna Hegde
- Updated on: Jun 28, 2026
- 6:43 am
Karnataka Weather Forecast: ನಾಳೆಯಿಂದ 2 ದಿನ ಕರ್ನಾಟಕದ ಉತ್ತರ ಭಾಗದಲ್ಲೂ ಮಳೆಯಬ್ಬರ
Monsoon 2026: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 27ರಿಂದ ಎರಡು ದಿನಗಳ ಕಾಲ ಉತ್ತರ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ವಿಜಯಪುರ ಜಿಲ್ಲೆಯ ಚಡಚಣದಲ್ಲಿ ಅತ್ಯಧಿಕ ಮಳೆಯಾಗಿದೆ ಎಂದೂ ಇಲಾಖೆ ತಿಳಿಸಿದೆ.
- Prasanna Hegde
- Updated on: Jun 26, 2026
- 5:56 pm
72,000 ಹುದ್ದೆಗಳ ನೇಮಕಾತಿಗೆ ಕ್ರಮ: ಮಹತ್ವದ ಘೋಷಣೆ ಮಾಡಿದ ಡಿಸಿಎಂ ಪರಮೇಶ್ವರ್
Government Recruitment: ಸರ್ಕಾರದಲ್ಲಿ ಖಾಲಿ ಇರುವ 72,000 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ಡಿಸಿಎಂ ಮತ್ತು ಕಂದಾಯ ಸಚಿವರಾಗಿರುವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಆಂತರಿಕ ಮೀಸಲಾತಿ ಸಮಸ್ಯೆಯನ್ನು ಬಗೆಹರಿಸಿದ ನಂತರ ಈ ಬೃಹತ್ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗವನ್ನು ನಿವಾರಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದವರು ತಿಳಿಸಿದ್ದಾರೆ.
- Prasanna Hegde
- Updated on: Jun 26, 2026
- 12:59 pm
ಆನೆಗಳ ವಾಸಸ್ಥಳಕ್ಕೆ ಧಕ್ಕೆ ಆತಂಕ: ಶಿವನಸಮುದ್ರದ ಮೇಲ್ಭಾಗದಲ್ಲಿ ಮಿನಿ ಜಲವಿದ್ಯುತ್ ಯೋಜನೆಗೆ ವಿರೋಧ
Mandya News: ಶಿವನಸಮುದ್ರದ ಸತ್ತೇಗಾಲ ಪರಿಸರ ಸೂಕ್ಷ್ಮ ವಲಯದಲ್ಲಿ ಪ್ರಸ್ತಾಪಿಸಲಾದ ಮಿನಿ ಜಲವಿದ್ಯುತ್ ಯೋಜನೆಗೆ ಅರಣ್ಯ ಇಲಾಖೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದರಿಂದ ಆನೆಗಳ ವಾಸಸ್ಥಳಕ್ಕೆ ಧಕ್ಕೆಯಾಗಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಲಿದೆ ಎಂದು ಎಚ್ಚರಿಸಿದೆ. ಇಲ್ಲಿ ಯಾವುದೇ ಹೊಸ ನಿರ್ಮಾಣ ಚಟುವಟಿಕೆ ಕೈಗೊಂಡರೆ ಈಗಾಗಲೇ ಸೂಕ್ಷ್ಮವಾಗಿರುವ ಮಾನವ-ವನ್ಯಜೀವಿ ಸಂಘರ್ಷ ಪರಿಸ್ಥಿತಿಗೆ ಮತ್ತಷ್ಟು ಹೆಚ್ಚಲಿದೆ ಎಂದು ತಿಳಿಸಲಾಗಿದೆ.
- Prasanna Hegde
- Updated on: Jun 26, 2026
- 11:30 am
ವೈ. ಮಂಜುನಾಥ್ ಮತ್ತು ಆಪ್ತರ ಮನೆಗಳ ಮೇಲೆ ಇಡಿ ದಾಳಿ ಕೇಸ್: ರೇಡ್ ವೇಳೆ ಲಂಚದ ಹಣ ಹಂಚಿಕೆಯ ಲೆಕ್ಕ ಪುಸ್ತಕವೇ ಪತ್ತೆ!
ED Raid: ಬೆಳಗಾವಿ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಹಾಗೂ ಅವರ ಆಪ್ತರ ಮನೆಗಳ ಮೇಲಿನ ಇಡಿ ದಾಳಿಯಲ್ಲಿ 13.3 ಕೋಟಿ ರೂ. ಮೌಲ್ಯದ ನಗದು-ಚಿನ್ನದೊಂದಿಗೆ, ಲಂಚ ಹಂಚಿಕೆಯ ಲೆಕ್ಕ ಪುಸ್ತಕ ಕೂಡ ಪತ್ತೆಯಾಗಿದೆ. ಈ ಕುರಿತು ಪ್ರಕಟಣೆ ಮೂಲಕ ಇಡಿ ಮಾಹಿತಿ ನೀಡಿದ್ದು, ಬೆಂಗಳೂರು, ಮೈಸೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿರುವ ಒಟ್ಟು 14 ಸ್ಥಳಗಳಲ್ಲಿ ದಾಳಿ ನಡೆಸಿದ್ದ ಬಗ್ಗೆ ತಿಳಿಸಿದೆ.
- Prasanna Hegde
- Updated on: Jun 25, 2026
- 6:38 pm
Karnataka Weather Forecast: ಜುಲೈ ಆರಂಭದವರೆಗೂ ರಾಜ್ಯದಲ್ಲಿ ಮಳೆ ಅಬ್ಬರ; ಕರಾವಳಿಯಲ್ಲಿ ವರುಣಾರ್ಭಟ
Monsoon 2026: ಕರ್ನಾಟಕದಲ್ಲಿ ಜುಲೈ 1 ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಜೂನ್ 29 ರಂದು ಕರಾವಳಿ ಹಾಗೂ ಮಲೆನಾಡಿನ 6 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು 'ಆರೆಂಜ್ ಅಲರ್ಟ್' ಘೋಷಿಸಿದೆ. ಮುಂದಿನ 24 ಗಂಟೆಗಳಲ್ಲಿಯೂ ರಾಜ್ಯದ ಹಲವೆಡೆ ಮಳೆ ನಿರೀಕ್ಷಿಸಲಾಗಿದ್ದು, ವಾತಾವರಣ ಸಂಬಂಧಿತ ಮಾಹಿತಿ ಇಲ್ಲಿದೆ.
- Prasanna Hegde
- Updated on: Jun 25, 2026
- 5:38 pm
ಮಾವು ಬೆಳೆಗಾರರ ಸಂಕಷ್ಟಕ್ಕೆ ಕೆಂದ್ರದಿಂದ ಸ್ಪಂದನೆ: ತೋತಾಪುರಿ ಮಾವಿಗೆ ಸಹಾಯಧನ ಘೋಷಣೆ
Karnataka News: ಕರ್ನಾಟಕದ ತೋತಾಪುರಿ ಮಾವು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದ್ದು, ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (MIS) ಅಡಿಯಲ್ಲಿ 1.30 ಲಕ್ಷ ಮೆಟ್ರಿಕ್ ಟನ್ ಮಾವಿಗೆ ಪ್ರತಿ ಕ್ವಿಂಟಾಲ್ಗೆ 1,750 ರೂ. ಸಹಾಯಧನ ಘೋಷಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದು, ಪ್ರಧಾನಿ ಮೋದಿ ಮತ್ತು ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣ್ ಅವರಿಗೆ ಕರ್ನಾಟಕದ ಸಮಸ್ತ ರೈತರ ಪರವಾಗಿ ಧನ್ಯವಾದ ತಿಳಿಸಿದ್ದಾರೆ.
- Prasanna Hegde
- Updated on: Jun 25, 2026
- 1:13 pm