Chennamma Deve Gowda Death: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ
ಚೆನ್ನಮ್ಮ ದೇವೇಗೌಡ ನಿಧನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ (85) ಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದ ಹಿನ್ನೆಲೆ ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
- Prasanna Hegde
- Updated on: Jul 18, 2026
- 5:49 pm
ಲಂಚ ಪಡೆಯುವಾಗಲೇ ರೇಡ್: ಕಲಬುರಗಿ, ಚಿತ್ರದುರ್ಗದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು
Lokayukta Raid: ಕಲಬುರಗಿ ಮತ್ತು ಚಿತ್ರದುರ್ಗದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ಮತ್ತು ಕಲಬುರಗಿಯ 5ನೇ ಜೆಎಂಎಫ್ಸಿ ಕೋರ್ಟ್ ಎಪಿಪಿಯನ್ನು ಖೆಡ್ಡಾಕ್ಕೆ ಕೆಡವಲಾಗಿದೆ. ಅಲ್ಲದೆ, ಭ್ರಷ್ಟಾಚಾರದ ದೂರುಗಳ ಹಿನ್ನೆಲೆಯಲ್ಲಿ ಶಿರಾ ನಗರಸಭೆ ಕಚೇರಿಯ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.
- Prasanna Hegde
- Updated on: Jul 17, 2026
- 6:03 pm
Bangalore Rains: ಸತತ ಎರಡನೇ ದಿನವೂ ಬೆಂಗಳೂರಲ್ಲಿ ವರ್ಷಧಾರೆ, ರಾಜ್ಯದ ಹಲವೆಡೆ ಕೆಲ ದಿನ ಮಳೆ
Karnataka Weather Latest Update: ಬೆಂಗಳೂರಿನಲ್ಲಿ ಸತತ ಎರಡನೇ ದಿನವೂ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಈ ನಡುವೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯದ ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತದ ಎಚ್ಚರಿಕೆಯನ್ನೂ ನೀಡಲಾಗಿದೆ.
- Prasanna Hegde
- Updated on: Jul 17, 2026
- 5:58 pm
ಅಮೃತ್ ಯೋಜನೆಯಡಿ ನವೀಕೃತಗೊಂಡ ಕರ್ನಾಟಕದ 4 ರೈಲ್ವೇ ನಿಲ್ದಾಣಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿದ ಮೋದಿ
ಪ್ರಧಾನಿ ಮೋದಿ ಅವರು ಅಮೃತ ಭಾರತ್ ಯೋಜನೆಯಡಿ ನವೀಕೃತಗೊಂಡ ದೇಶದ 75 ರೈಲ್ವೇ ನಿಲ್ದಾಣಗಳನ್ನು ಉದ್ಘಾಟಿಸಿದ್ದು, ಇದರಲ್ಲಿ ಕರ್ನಾಟಕದ ಬಾದಾಮಿ, ಅಳ್ನಾವರ, ಕೊಪ್ಪಳ ಹಾಗೂ ಬಂಟ್ವಾಳ ನಿಲ್ದಾಣಗಳು ಕೂಡ ಸೇರಿವೆ. ಸ್ಥಳೀಯ ಸಂಸ್ಕೃತಿ ಮತ್ತು ವಾಸ್ತುಶಿಲ್ಪದಿಂದ ಪ್ರೇರಿತವಾಗಿ ನಿಲ್ದಾಣಗಳ ಕಟ್ಟದ ವಿನ್ಯಾಸ ಮಾಡಲಾಗಿದ್ದು, ವಿಶ್ವ ದರ್ಜೆಯ ಮತ್ತು ಪ್ರಯಾಣಿಕ ಸ್ನೇಹಿ ಸೌಲಭ್ಯಗಳನ್ನು ಇವು ಹೊಂದಿವೆ. ಜೊತೆಗೆ ಡಿಜಿಟಲ್ ಸ್ಪರ್ಶ ಪಡೆದಿವೆ.
- Prasanna Hegde
- Updated on: Jul 17, 2026
- 6:52 pm
ಪ್ರತ್ಯೇಕ ರಸ್ತೆ ಅಪಘಾತ: ನವ ವಿವಾಹಿತೆ ಸೇರಿ ಮೂವರು ದಾರುಣ ಸಾವು; ಹಲವರಿಗೆ ಗಂಭೀರ ಗಾಯ
ತುಮಕೂರು, ಮೈಸೂರು ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನವವಿವಾಹಿತೆ ಸೇರಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿಯಾಗಿ, ಬೈಕ್ ಸ್ಕಿಡ್ ಆಗಿ ಮತ್ತು ಬಸ್ನ ಆ್ಯಕ್ಸೆಲ್ ಕಟ್ ಆಗಿ ಅಪಘಾತಗಳು ಸಂಭವಿಸಿವೆ.
- Prasanna Hegde
- Updated on: Jul 17, 2026
- 4:19 pm
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಶೇ.60ರಷ್ಟು ಹೊಸ ಮುಖಗಳಿಗೆ ಮಣೆಹಾಕಲು ಹೈಕಮಾಂಡ್ ನಿರ್ಧಾರ
Karnataka Politics: ಮುಂದಿನ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಕರ್ನಾಟಕ ಸಂಪುಟ ವಿಸ್ತರಣೆಯಲ್ಲಿ ಶೇ.60ರಷ್ಟು ಹೊಸ ಮುಖಗಳಿಗೆ ಅವಕಾಶ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಜಾತಿ, ಸಮಾಜದ ಸ್ಥಿತಿಗತಿಗಳು, ಶಿಕ್ಷಣ ಮತ್ತು ಹಿನ್ನಲೆಯನ್ನು ಆಧರಿಸಿ ಆಯ್ಕೆ ನಡೆಯಲಿದ್ದು, ಹೊಸ ನಾಯಕತ್ವವು ಪಕ್ಷಕ್ಕೆ ಆಸ್ತಿಯಾಗಲಿದೆ ಎಂಬ ಅಭಿಪ್ರಾಯ ವರಿಷ್ಠರದ್ದು ಎನ್ನಲಾಗಿದೆ.
- Prasanna Hegde
- Updated on: Jul 17, 2026
- 3:18 pm
ಒಡಿಐನಿಂದಲೂ ರೋಹಿತ್ ಶರ್ಮಾ ನಿವೃತ್ತಿ? ಜುಲೈ 19ರಂದು ಲಾರ್ಡ್ಸ್ನಲ್ಲಿ ಹಿಟ್ಮ್ಯಾನ್ ಕೊನೆಯ ಪಂದ್ಯ?
Rohit Sharma: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದ ಬೆನ್ನಲ್ಲೇ ರೋಹಿತ್ ಶರ್ಮಾ ಒಡಿಐ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಜುಲೈ 19ರ ಲಾರ್ಡ್ಸ್ ಪಂದ್ಯವೇ ಹಿಟ್ಮ್ಯಾನ್ ಕೊನೆಯ ಪಂದ್ಯವಾಗುವ ಸಾಧ್ಯತೆಯಿದೆ. ಇದೇ ವೇಳೆ, ರೋಹಿತ್ ಶರ್ಮಾ ಅವರ ಪೋಷಕರಾದ ಗುರುನಾಥ್ ಶರ್ಮಾ ಮತ್ತು ಪೂರ್ಣಿಮಾ ಶರ್ಮಾ ಅವರು ಕೂಡ ಲಂಡನ್ಗೆ ಆಗಮಿಸಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿರೋದು ಅನುಮಾನ ಹೆಚ್ಚಿಸಿದೆ.
- Prasanna Hegde
- Updated on: Jul 17, 2026
- 1:01 pm
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಎಸ್ಕೇಪ್!: ಶಿವಕಾಳಿ ಸ್ವಾಮೀಜಿ ವಿರುದ್ಧ ಆರೋಪ
ಬಾಗಲಗುಂಟೆಯಲ್ಲಿ ಗೀತಾ ಎಂಬುವರ ಮನೆಯಲ್ಲಿ ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನಾಭರಣ ಹಾಗೂ 1.33 ಲಕ್ಷ ರೂಪಾಯಿ ನಗದು ಕಳ್ಳತನ ನಡೆದಿದೆ. ಮಗಳ ಸಂಸಾರದಲ್ಲಿ ಬಿರುಕು ಮೂಡಿದ್ದರಿಂದ ಪರಿಹಾರಕ್ಕಾಗಿ ಸ್ವಾಮೀಜಿಯ ಮೊರೆ ಹೋಗಿದ್ದರು. ಪೂಜೆ ಮಾಡುವ ನೆಪದಲ್ಲಿ ಸ್ವಾಮೀಜಿ ಮಹಿಳೆಗೆ ಮೂರ್ಛೆ ಬರುವಂತೆ ಮಾಡಿ ಚಿನ್ನ, ನಗದು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Prasanna Hegde
- Updated on: Jul 16, 2026
- 6:49 pm
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಜಿ. ಪರಮೇಶ್ವರ್ ಪತ್ರ, ತಕ್ಷಣ ನೆರವಿಗೆ ಮನವಿ
ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಕರ್ನಾಟಕದಲ್ಲಿನ ಭೀಕರ ಬರಗಾಲದ ಪರಿಸ್ಥಿತಿಯ ಕುರಿತು ಕೇಂದ್ರದ ನೆರವಿಗೆ ಮನವಿ ಮಾಡಿದ್ದಾರೆ. ರಾಜ್ಯಕ್ಕೆ ವಿಶೇಷ ಅನುದಾನ ಹಾಗೂ ಎನ್ಡಿಆರ್ಎಫ್ನಿಂದ ಮುಂಗಡ ಪರಿಹಾರ ಒದಗಿಸುವಂತೆ ಅವರು ಕೇಳಿಕೊಂಡಿದ್ದು, ಕುಡಿಯುವ ನೀರಿನ ಸಮಸ್ಯೆ ಮತ್ತು ಬೆಳೆ ಹಾನಿಯಿಂದ ಜನ ತತ್ತರಿಸಿರುವ ಬಗ್ಗೆ ಪ್ರಮುಖವಾಗಿ ಗಮನ ಸೆಳೆದಿದ್ದಾರೆ.
- Prasanna Hegde
- Updated on: Jul 16, 2026
- 5:36 pm
Karnataka Weather Update: ಬೆಂಗಳೂರಿಗರಿಗೆ ಕೊನೆಗೂ ತಂಪೆರೆದ ವರುಣ; ರಾಜ್ಯದ ಹಲವೆಡೆಯೂ ಮಳೆ ಮುನ್ಸೂಚನೆ
Monsoon 2026: ಬೆಂಗಳೂರಿನಲ್ಲಿ ದಾಖಲೆಯ ತಾಪಮಾನದ ಬಳಿಕ ವರುಣನ ತಂಪೆರೆದಿದ್ದು, ಕೆಲ ಏರಿಯಾಗಳಲ್ಲಿ ಮಳೆಯಾಗಿದೆ. ಏಕಾಏಕಿ ಸುರಿದ ಮಳೆ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ್ದು, ವಾಹನ ಸವಾರರು ಪರದಾಡಿದ್ದಾರೆ. ಈ ನಡುವೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕೆಲವೆಡೆ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
- Prasanna Hegde
- Updated on: Jul 16, 2026
- 5:18 pm
ಕಲಬುರಗಿ ಜೈಲಿಂದ ಕೈದಿಗಳು ಪರಾರಿ ಕೇಸ್: ಪ್ರಿಯಾಂಕ್-ವಿಜಯೇಂದ್ರ ನಡುವೆ ಸೋಷಿಯಲ್ ಮೀಡಿಯಾ ಪೋಸ್ಟ್ ವಾರ್
Karnataka Politcs: ಕಲಬುರಗಿ ಜೈಲಿನಿಂದ ಕೈದಿಗಳು ಪರಾರಿಯಾದ ಪ್ರಕರಣ ಇದೀಗ ರಾಜಕೀಯ ಕೆಸರೆರೆಚಾಟಗಳಿಗೆ ಕಾರಣವಾಗಿದೆ. ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪರಸ್ಪರ ವಾಗ್ದಾಳಿ ನಡೆಸಿದ್ದು, ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Prasanna Hegde
- Updated on: Jul 15, 2026
- 7:37 pm
ಕೋಲ್ಕತ್ತಾದಿಂದ ಬೆಂಗಳೂರು ಸೇರಿ ನಾಲ್ಕು ಮಹಾನಗರಗಳಿಗೆ ಐಷಾರಾಮಿ ಬಸ್ ಸೇವೆ ಆರಂಭ: ಪ್ರಯಾಣದ ಸಮಯ, ಟಿಕೆಟ್ ದರದ ಬಗ್ಗೆ ಇಲ್ಲಿದೆ ಮಾಹಿತಿ
ಕೋಲ್ಕತ್ತಾದಿಂದ ಬೆಂಗಳೂರು, ದೆಹಲಿ, ಚೆನ್ನೈ ಹಾಗೂ ಪುರಿಗೆ ಐಷಾರಾಮಿ ಬಸ್ ಸೇವೆ ಆರಂಭವಾಗಿದೆ. ಈ ಬಸ್ಗಳು ಕರುಣಾಮಯಿ ಬಸ್ ಟರ್ಮಿನಸ್ನಿಂದ ಸಂಚಾರ ಆರಂಭಿಸಲಿದ್ದು, ಬಯೋ ಟಾಯ್ಲೆಟ್, ಒಟಿಟಿ ಸ್ಕ್ರೀನ್ ಸೇರಿದಂತೆ ಹಲವು ಸೌಲಭ್ಯಗಳು ಪ್ರಯಾಣಿಕರಿಗೆ ದೊರೆಯಲಿವೆ. ಟಿಕೆಟ್ ದರ ಮತ್ತು ಪ್ರಯಾಣದ ಸಮಯದ ಮಾಹಿತಿ ಇಲ್ಲಿದೆ.
- Prasanna Hegde
- Updated on: Jul 15, 2026
- 5:34 pm