ನಾಳೆಯಿಂದ ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್: 100ಕ್ಕೂ ಹೆಚ್ಚು ದೇಶಗಳಲ್ಲಿ ಪ್ರಸಾರ
ನಾಳೆಯಿಂದ ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ ಆರಂಭವಾಗಲಿದೆ. ಡಿಸೆಂಬರ್ 17-20ರವರೆಗೆ ನಡೆಯುವ ಈ ಮೊದಲ ಭಾರತ ಆವೃತ್ತಿಯು 100ಕ್ಕೂ ಹೆಚ್ಚು ದೇಶಗಳಲ್ಲಿ ನೇರ ಪ್ರಸಾರವಾಗಲಿದೆ. ಡೇನಿಯಲ್ ಮೆಡ್ವೆಡೆವ್, ನಿಕ್ ಕಿರ್ಗಿಯೊಸ್ ಮತ್ತು ರೋಹನ್ ಬೋಪಣ್ಣ ಸೇರಿದಂತೆ ವಿಶ್ವದ ಅಗ್ರಮಾನ್ಯ ಆಟಗಾರರು ಬೆಂಗಳೂರಿನ ಎಸ್.ಎಂ. ಕೃಷ್ಣ ಟೆನಿಸ್ ಸ್ಟೇಡಿಯಂನಲ್ಲಿ ಸೆಣಸಲಿದ್ದಾರೆ.
- Prasanna Hegde
- Updated on: Dec 16, 2025
- 7:05 pm
ನಾಳೆಯ ಹವಾಮಾನ: ಉತ್ತರ ಒಳನಾಡನ್ನು ಬೆಂಬಿಡದ ಚಳಿ; ಕಲ್ಯಾಣ ಕರ್ನಾಟಕದ 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
Karnataka Weather Tomorrow: ಕಳೆದ ವಾರದಿಂದ ಕರ್ನಾಟಕದಲ್ಲಿ ತೀವ್ರ ಚಳಿ ಆವರಿಸಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಹೆಚ್ಚಾಗಿದೆ. ಫೆಸಿಪಿಕ್ ಮಹಾಸಾಗರದಲ್ಲಿನ ಲ್ಯಾನಿನೋ ಈ ಚಳಿಗೆ ಕಾರಣ. ಬೀದರ್, ಕಲಬುರಗಿ, ವಿಜಯಪುರದಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 17ರಿಂದ 23ರೊಳಗೆ ರಾಜ್ಯದಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- Prasanna Hegde
- Updated on: Dec 16, 2025
- 5:47 pm
ಲೋಕಾಯುಕ್ತ ಸಿಬ್ಬಂದಿ ಕಂಡು ಕಕ್ಕಾಬಿಕ್ಕಿ: ಧಾರವಾಡದಲ್ಲಿ ಕಮೋಡ್ಗೆ ಹಣ ಸುರಿದ ಅಧಿಕಾರಿ
ಲೋಕಾಯುಕ್ತ ಪೊಲೀಸರು ರಾಜ್ಯದಾದ್ಯಂತ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಧಾರವಾಡದ ಅಧಿಕಾರಿಯೊಬ್ಬರು ಲೋಕಾಯುಕ್ತ ಸಿಬ್ಬಂದಿ ಕಂಡು ಕಕ್ಕಾಬಿಕ್ಕಿಯಾಗಿದ್ದು ಹಣವನ್ನು ಕಮೋಡ್ಗೆ ಸುರಿದು ಫ್ಲಶ್ ಮಾಡಿದ್ದಾರೆ. ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆದಿದೆ.
- Prasanna Hegde
- Updated on: Dec 16, 2025
- 12:22 pm
ನಾಳೆಯ ಹವಾಮಾನ: ಚಳಿಗೆ ತತ್ತರಿಸಲಿದೆ ಕರ್ನಾಟಕದ ಉತ್ತರ; ಬೆಂಗಳೂರಲ್ಲೂ ಶೀತ ಗಾಳಿಯ ಅಬ್ಬರ
Karnataka Weather Tomorrow: ರಾಜ್ಯದಲ್ಲಿ ತಾಪಮಾನ ಗಣನೀಯವಾಗಿ ಇಳಿದಿದ್ದು, ನಾಳೆಯೂ ಭಾರಿ ಚಳಿ ಮುಂದುವರಿಯಲಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಬೆಂಗಳೂರು ಸೇರಿದಂತೆ ಹಲವೆಡೆ ಶೀತ ಗಾಳಿ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ 14-18 ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿಸಲಾಗಿದೆ. ಉಳಿದೆಡೆ ಒಣ ಹವೆ ಅಥವಾ ಸಾಧಾರಣ ಚಳಿ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- Prasanna Hegde
- Updated on: Dec 15, 2025
- 4:42 pm
ರೆಬೆಲ್ ನಾಯಕನ ನೇತೃತ್ವ: ಕರ್ನಾಟಕದಲ್ಲಿ ಮತ್ತೊಂದು ಪ್ರಾದೇಶಿಕ ಪಕ್ಷ; ಜನವರಿ 24ಕ್ಕೆ ಮುಹೂರ್ತ
ರಾಜ್ಯದಲ್ಲಿ ಮತ್ತೊಂದು ಪ್ರಾದೇಶಿಕ ಪಕ್ಷದ ಉದಯಕ್ಕೆ ಮುಹೂರ್ತ ನಿಗದಿಯಾಗಿದೆ. ರೆಬೆಲ್ ನಾಯಕನ ನೇತೃತ್ವದಲ್ಲಿ ಹೊಸ ಪೊಲಿಟಿಕಲ್ ಪಾರ್ಟಿ ಅಸ್ತಿತ್ವಕ್ಕೆ ಬರುತ್ತಿದ್ದು, ಪಕ್ಷದ ಲೋಗೋ ಇನ್ನಷ್ಟೇ ಫೈನಲ್ ಆಗಬೇಕಿದೆ. ಬಸವಣ್ಣ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳ ಆಧಾರದಲ್ಲಿ ಪಕ್ಷ ಸ್ಥಾಪಿಸಲು ಸಮಾನ ಮನಸ್ಕರು ಉದ್ದೇಶಿಸಿದ್ದಾರೆ.
- Prasanna Hegde
- Updated on: Dec 15, 2025
- 3:59 pm
ರಾಜ್ಯದಲ್ಲಿ ಮಿತಿ ಮೀರಿದ ನದಿ ಮಾಲಿನ್ಯ: ಜನ ಕುಡಿತೀರೋ ನೀರು ಹೇಗಿದೆ ಗೊತ್ತಾ?
ರಾಜ್ಯದ ಬಹುತೇಕ ನದಿಗಳು ತೀವ್ರವಾಗಿ ಮಾಲಿನ್ಯಗೊಂಡಿದ್ದು, ಕುಡಿಯುವ ನೀರಿಗೆ ಗಂಭೀರ ಅಪಾಯ ತಂದೊಡ್ಡಿವೆ. ನಗರ ಮತ್ತು ಗ್ರಾಮೀಣ ಪ್ರದೇಶಗಳ ಶುದ್ಧೀಕರಿಸದ ತ್ಯಾಜ್ಯ ನೀರು ನದಿಗಳನ್ನು ಸೇರುತ್ತಿರುವುದೇ ಇದಕ್ಕೆ ಪ್ರಮುಖ ಕಾರಣ. ಅರ್ಕಾವತಿ, ಕಾವೇರಿ, ಕೃಷ್ಣಾ ಸೇರಿದಂತೆ ಹಲವು ನದಿಗಳ ನೀರು ಕಲುಷಿತಗೊಂಡಿದ್ದು, ಇದೇ ನೀರನ್ನು ಹಲವು ನಗರ, ಪಟ್ಟಣಗಳಿಗೆ ಪೂರೈಸಲಾಗುತ್ತಿದೆ ಎಂಬ ಆತಂಕಕಾರಿ ವಿಚಾರ ಬಹಿರಂಗಗೊಂಡಿದೆ.
- Prasanna Hegde
- Updated on: Dec 15, 2025
- 11:44 am
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಸೋಶಿಯಲ್ ಮೀಡಿಯಾಗಳಲ್ಲೀಗ ಇದೇ ಚರ್ಚೆ!
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ AOZ (ನೈಟ್ರೋಫ್ಯುರಾನ್) ಅಂಶ ಪತ್ತೆಯಾಗಿದೆ ಎಂಬ ಸಾಮಾಜಿಕ ಜಾಲತಾಣದ ಚರ್ಚೆ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದು, ಸತ್ಯಾಂಶ ಹೊರಬಂದ ನಂತರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
- Prasanna Hegde
- Updated on: Dec 14, 2025
- 1:44 pm
ವಿಮಾನದಲ್ಲಿ ಅಮೆರಿಕಾ ಮಹಿಳೆ ಜೀವ ಉಳಿಸಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್: ಆಗಿದ್ದೇನು?
ಗೋವಾ-ದೆಹಲಿ ವಿಮಾನದಲ್ಲಿ ತುರ್ತು ವೈದ್ಯಕೀಯ ನೆರವು ಬೇಕಾದ ಅಮೆರಿಕನ್ ಮಹಿಳೆಯ ಜೀವ ಉಳಿಸುವ ಮೂಲಕ ಮಾಜಿ ಶಾಸಕಿ ಹಾಗೂ ವೈದ್ಯೆ ಡಾ. ಅಂಜಲಿ ನಿಂಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಪಕ್ಷದ ನಾಯಕಿಯ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರಿಂದಲೂ ಪ್ರಶಂಸೆ ವ್ಯಕ್ತವಾಗಿದೆ.
- Prasanna Hegde
- Updated on: Dec 14, 2025
- 1:04 pm
ಸಮುದ್ರ ತೀರ, ದೇಗುಲಗಳ ನಗರಿ ಕುಮಟಾ: ಇಲ್ಲಿವೆ ಸುಂದರ ಚಿತ್ರಗಳು
ಉತ್ತರ ಕನ್ನಡ ಜಿಲ್ಲೆಯ ಸುಂದರ ಕರಾವಳಿ ಪಟ್ಟಣ ಕುಮಟಾ, ಅದರ ಕಡಲತೀರಗಳು, ಐತಿಹಾಸಿಕ ತಾಣಗಳು ಮತ್ತು ಸಾಂಸ್ಕೃತಿಕ ವೈಭವಕ್ಕೆ ಹೆಸರುವಾಸಿ. ಗೋಕರ್ಣ ಮಹಾಬಲೇಶ್ವರ, ಯಾಣ, ಧಾರೇಶ್ವರದಂತಹ ಧಾರ್ಮಿಕ ಕೇಂದ್ರಗಳು ಹಾಗೂ ಮಿರ್ಜಾನ್ ಕೋಟೆ, ವನ್ನಳ್ಳಿ, ಕಡ್ಲೆ, ರಾಮನಗಿಂಡಿ ಬೀಚ್ಗಳು ಪ್ರವಾಸಿಗರನ್ನು ಆಕರ್ಷಿಸುತ್ತವೆ. ಅರಬ್ಬರ ಕಾಲದಿಂದಲೂ ಪ್ರಮುಖ ವ್ಯಾಪಾರ ಕೇಂದ್ರವಾಗಿದ್ದ ಈ ಸ್ಥಳ, ತನ್ನದೇ ಆದ ಇತಿಹಾಸ ಹೊಂದಿದೆ.
- Prasanna Hegde
- Updated on: Dec 14, 2025
- 9:31 am
Karnataka Weather: ರಾಜ್ಯದಲ್ಲಿ ಚಳಿ ಅಬ್ಬರ; ಕನಿಷ್ಠ ತಾಪಮಾನಕ್ಕೆ ನಲುಗಿದ ಬೆಂಗಳೂರು
ಡಿಸೆಂಬರ್ 14, 15 ಮತ್ತು 16ರಂದು ರಾಜ್ಯಾದ್ಯಂತ ಚಳಿ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14-15 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದ್ದು, HAL ವ್ಯಾಪ್ತಿಯಲ್ಲಿ 13 ಡಿಗ್ರಿ ದಾಖಲಾಗಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸುಮಾರು 12 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- Prasanna Hegde
- Updated on: Dec 14, 2025
- 9:06 am
ಪ್ರಯಾಣಿಕರೇ ಗಮನಿಸಿ: ಕ್ರಿಸ್ಮಸ್, ಹೊಸ ವರ್ಷದ ಹಿನ್ನೆಲೆ ಈ ಮಾರ್ಗಗಳಲ್ಲಿ ವಿಶೇಷ ರೈಲು
ಕ್ರಿಸ್ಮಸ್ ಮತ್ತು ಹೊಸ ವರ್ಷಕ್ಕೆ ಸೌತ್ ವೆಸ್ಟರ್ನ್ ರೈಲ್ವೇ ವಿಶೇಷ ರೈಲುಗಳನ್ನು ಘೋಷಿಸಿದೆ. ಹುಬ್ಬಳ್ಳಿ-ಯಶವಂತಪುರ-ವಿಜಯಪುರ ಮಾರ್ಗದಲ್ಲಿ ಡಿಸೆಂಬರ್ 24ರಂದು ವಿಶೇಷ ರೈಲು ಸಂಚರಿಸಲಿದೆ. ಇದೇ ವೇಳೆ, ಎಂಜಿನಿಯರಿಂಗ್ ಕಾಮಗಾರಿಯಿಂದಾಗಿ ಡಿಸೆಂಬರ್ 17, 20, 21, 24 ರಂದು ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ, ಮಾರ್ಗ ಬದಲಾವಣೆ ಆಗಲಿದ್ದರೆ ಇನ್ನು ಕೆಲವು ರದ್ದಾಗಿವೆ ಎಂದು ಪ್ರಕಟಣೆ ತಿಳಿಸಿದೆ.
- Prasanna Hegde
- Updated on: Dec 14, 2025
- 7:22 am
ಕರ್ನಾಟಕದ ರೈಲ್ವೇ ಯೋಜನೆಗಳ ಸ್ಥಿತಿಗತಿ ಏನು?: ರಾಜ್ಯಸಭೆಯಲ್ಲಿ ಸಚಿವ ಅಶ್ವಿನಿ ವೈಷವ್ ಮಾಹಿತಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜ್ಯಸಭೆಯಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳ ಸ್ಥಿತಿಗತಿ ಕುರಿತು ಮಾಹಿತಿ ನೀಡಿದ್ದಾರೆ. ಬೆಂಗಳೂರು ಉಪನಗರ ರೈಲು ಯೋಜನೆ (BSRP)ಗೆ 21,576 ಕೋಟಿ ರೂ. ಮಂಜೂರಾಗಿದ್ದು, ಕೇಂದ್ರ, ರಾಜ್ಯ ಮತ್ತು ಸಾಲದ ಮೂಲಕ ಹಣಕಾಸು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ತುಮಕೂರು-ಚಿತ್ರದುರ್ಗ-ದಾವಣಗೆರೆ ಹಾಗೂ ಹುಬ್ಬಳ್ಳಿ-ಅಂಕೋಲಾ ಹೊಸ ಮಾರ್ಗಗಳ ಪ್ರಗತಿ ಮತ್ತು ಸವಾಲುಗಳ ಕುರಿತು ವಿವರ ನೀಡಿದ್ದಾರೆ.
- Prasanna Hegde
- Updated on: Dec 12, 2025
- 7:38 pm