ಕೆಯುಡಬ್ಲ್ಯೂಜೆ ಸಂಸ್ಥಾಪಕ ಡಿವಿಜಿ ಜನ್ಮ ದಿನಾಚರಣೆ: ಇತಿಹಾಸ ಸ್ಮರಿಸಿದ ಶಿವಾನಂದ ತಗಡೂರು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸಂಸ್ಥಾಪಕ ಡಿ.ವಿ. ಗುಂಡಪ್ಪನವರ ಜನ್ಮದಿನಾಚರಣೆಯನ್ನು ಬೆಂಗಳೂರಿನಲ್ಲಿ ಆಚರಿಸಲಾಯಿತು. 95 ವರ್ಷಗಳ ಹಿಂದೆ ಪತ್ರಕರ್ತರ ಹಿತರಕ್ಷಣೆಗಾಗಿ ಡಿವಿಜಿ ಸಂಘಟನೆಯನ್ನು ಕಟ್ಟಿದ್ದು, ಇಂದು ಕೆಯುಡಬ್ಲ್ಯೂಜೆ 10,000 ಸದಸ್ಯರೊಂದಿಗೆ ಹೆಮ್ಮರವಾಗಿ ಬೆಳೆದಿದೆ. ಡಿವಿಜಿ ಅವರ ದೂರದರ್ಶಿತ್ವ ಅಂತಹುದ್ದಾಗಿತ್ತು ಎಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಗಣ್ಯರು ಬಣ್ಣಿಸಿದ್ದಾರೆ.
- Prasanna Hegde
- Updated on: Mar 17, 2026
- 5:59 pm
ಪಾಳು ಮನೆಯಲ್ಲಿ ಅಪ್ರಾಪ್ತೆಯ ಭೀಕರ ಕೊಲೆ: ಭಾವಿ ಪತಿಯಿಂದಲೇ ನಡೀತು ಹತ್ಯೆ!; ಕಾರಣ ನಿಗೂಢ
ಬೆಂಗಳೂರಿನ ಡಿ.ಜೆ.ಹಳ್ಳಿ ಸಕ್ಕರೆ ಮಂಡಿಯ ಪಾಳುಮನೆಯಲ್ಲಿ ನಿಶ್ಚಿತಾರ್ಥ ಆಗಿದ್ದ ಅಪ್ರಾಪ್ತೆಯನ್ನು ಆಕೆಯ ಭಾವಿ ಪತಿಯೇ ಕತ್ತುಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾನೆ. ಬೆಳಗ್ಗೆ 6.30ರ ಸುಮಾರಿಗೆ ನಡೆದ ಈ ಘಟನೆ ಬೆಳಗ್ಗೆ 11 ಗಂಟೆಗೆ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿ ಬಂಧನಕ್ಕೆ ಶೋಧ ನಡೆಸುತ್ತಿದ್ದು, ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮತ್ತೊಂದೆಡೆ ಯುವತಿ ಜೊತೆ ಮದುವೆ ವಿಚಾರಕ್ಕೆ ತಮ್ಮನನ್ನೇ ಅಣ್ಣ ಕೊಲೆಗೈದಿರುವ ಘಟನೆ ಗದಗದಲ್ಲಿ ನಡೆದಿದೆ. ಹತ್ಯೆ ಬಳಿಕ ಕತೆ ಕಟ್ಟಿದ್ದ ಆರೋಪಿಯ ನಿಜ ಬಣ್ಣ ತನಿಖೆ ವೇಳೆ ಬಯಲಾಗಿದೆ.
- Prasanna Hegde
- Updated on: Mar 17, 2026
- 2:30 pm
ನೆಲಮಂಗಲ ಬಳಿ ಭೀಕರ ಅಪಘಾತ: ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್
ನೆಲಮಂಗಲದ ಗೊಲ್ಲರಹಟ್ಟಿ ಕ್ರಾಸ್ ಬಳಿ ನಡೆದ ಬಿಎಂಟಿಸಿ ಬಸ್ ಅಪಘಾತದಲ್ಲಿ ಯಾದಗಿರಿ ಮೂಲದ 30 ವರ್ಷದ ಗೃಹಿಣಿ ಲಕ್ಷ್ಮಿ ಮೃತಪಟ್ಟಿದ್ದಾರೆ. ಮಗನಿಗೆ ಅನಾರೋಗ್ಯವಿದ್ದ ಕಾರಣ ಆಸ್ಪತ್ರೆಗೆ ಕರೆದೊಯ್ದು ಮನೆಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಿ ಕುಟುಂಬಕ್ಕೆ ಆಧಾರವಾಗಿದ್ದರು. ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Prasanna Hegde
- Updated on: Mar 17, 2026
- 1:03 pm
ಇಂಡಿಯಾ ಪೋಸ್ಟ್ನಿಂದ ನೆಕ್ಸ್ಟ್-ಡೇ ಡೆಲಿವರಿ ಸೇವೆ: ಬೆಂಗಳೂರು ಸೇರಿ ಲಿಸ್ಟ್ನಲ್ಲಿರುವ ನಗರಗಳ ಪಟ್ಟಿ ಇಲ್ಲಿದೆ
ಇಂಡಿಯಾ ಪೋಸ್ಟ್ '24 ಸ್ಪೀಡ್ ಪೋಸ್ಟ್' ಹೆಸರಿನ ಹೊಸ ನೆಕ್ಸ್ಟ್-ಡೇ ಡೆಲಿವರಿ ಸೇವೆಯನ್ನು ಮಾರ್ಚ್ 17ರಿಂದ ಆರಂಭಿಸಲಿದೆ. ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ, ಹೈದರಾಬಾದ್ ಸೇರಿದಂತೆ ಆರು ಮಹಾನಗರಗಳಲ್ಲಿ ಈ ಸೇವೆ ಲಭ್ಯವಾಗಲಿದೆ. ತುರ್ತು ಪಾರ್ಸೆಲ್ಗಳನ್ನು 24 ಗಂಟೆಯೊಳಗೆ ತಲುಪಿಸುವ ಗುರಿ ಹೊಂದಿದ್ದು, OTP ಆಧಾರಿತ ಸುರಕ್ಷಿತ ಡೆಲಿವರಿ, ಎಂಡ್-ಟು-ಎಂಡ್ ಟ್ರ್ಯಾಕಿಂಗ್, SMS ಅಲರ್ಟ್ ಮತ್ತು ವಿಳಂಬವಾದರೆ ಮನಿ-ಬ್ಯಾಕ್ ಗ್ಯಾರಂಟಿ ಸೌಲಭ್ಯಗಳನ್ನು ಒಳಗೊಂಡಿದೆ.
- Prasanna Hegde
- Updated on: Mar 16, 2026
- 7:12 pm
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ: ಕರಡು ಮತಪಟ್ಟಿ ಮತ್ತು ಮತಚೋರಿಯ ಸತ್ಯ ಅನಾವರಣ
ರಾಜ್ಯ ಚುನಾವಣೆ ಆಯೋಗ ಬಿಡುಗಡೆ ಮಾಡಿದ ಬೆಂಗಳೂರು ಕರಡು ಮತಪಟ್ಟಿ ಕಾಂಗ್ರೆಸ್ನ ಮತಚೋರಿ ಆರೋಪಗಳ ಸುಳ್ಳುತನವನ್ನು ಬಯಲುಮಾಡಿದೆ. ಹೆಸರುಗಳು ಮಾಯವಾಗಿರುವುದು ಹಾಗೂ ವೈಯಕ್ತಿಕ ಮಾಹಿತಿ ಬದಲಾಗಿರುವುದು ರಾಜ್ಯ ಆಯೋಗದ ಲೋಪಗಳನ್ನು ಎತ್ತಿ ತೋರಿಸುತ್ತದೆ.2023ರ ಪಟ್ಟಿಯ ಮರುಬಳಕೆ ಅನುಮಾನದ ಜೊತೆಗೆ ಮಾಹಿತಿ ಹುಡುಕಾಟಕ್ಕೆ ನಿರ್ಬಂಧವು ಮತದಾರರಲ್ಲಿ ಗೊಂದಲ ಮೂಡಿಸಿದ್ದು, ನಿದ್ದೆಯಲ್ಲಿರುವ ನಾಯಕರಿಗೆ ಇಂತಹ ಸೂಕ್ಷ್ಮಗಳು ಗೊತ್ತಾಗುವಷ್ಟರಲ್ಲಿ ಜಿಬಿಎ ಚುನಾವಣೆ ಮುಗಿಯದಿದ್ದರೆ ಸಾಕು ಎಂದು ಹಿರಿಯ ಪತ್ರಕರ್ತ ರಾಜೀವ್ ಹೆಗಡೆ ಅಭಿಪ್ರಾಯಪಟ್ಟಿದ್ದಾರೆ.
- Prasanna Hegde
- Updated on: Mar 16, 2026
- 7:17 pm
ಹಬ್ಬಕ್ಕೆಂದು ಊರಿಗೆ ತೆರಳುವವರಿಗೆ ಗುಡ್ನ್ಯೂಸ್: ಕೆಎಸ್ಆರ್ಟಿಸಿಯಿಂದ 2,000 ಹೆಚ್ಚುವರಿ ಬಸ್ ವ್ಯವಸ್ಥೆ
ಯುಗಾದಿ ಮತ್ತು ಈದ್ ಹಬ್ಬಗಳ ನಿಮಿತ್ತ ಬೆಂಗಳೂರಿನಿಂದ ರಾಜ್ಯಾದ್ಯಂತ ಹಾಗೂ ಅಂತಾರಾಜ್ಯಗಳಿಗೆ ಒಟ್ಟು 2,000 ಹೆಚ್ಚುವರಿ KSRTC ಬಸ್ಗಳು ಸಂಚಾರ ನಡೆಸಲಿವೆ. ಮಾರ್ಚ್ 18-20ರ ವರೆಗೆ ತೆರಳಲು ಮತ್ತು ಮಾರ್ಚ್ 22ರಂದು ವಾಪಸ್ ಬರಲು ವಿಶೇಷ ಬಸ್ ಸೇವೆ ಲಭ್ಯವಿರಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ವ್ಯವಸ್ಥೆ ಮಾಡಲಾಗಿದ್ದು, ಆನ್ಲೈನ್ನಲ್ಲಿ ಅಥವಾ ಕೌಂಟರ್ಗಳಲ್ಲಿ ಮುಂಗಡ ಬುಕ್ಕಿಂಗ್ ಮಾಡಬಹುದು. ವಿಶೇಷ ರಿಯಾಯಿತಿ ಸಹ ಪ್ರಯಾಣಿಕರಿಗೆ ಸಿಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
- Prasanna Hegde
- Updated on: Mar 15, 2026
- 8:58 pm
Karnataka Weather: ರಾಜ್ಯದ ಹಲವೆಡೆ ತಂಪೆರೆದ ವರುಣ; ನಾಳೆಯೂ ಈ ಭಾಗಗಳಲ್ಲಿ ಮಳೆ ಸಾಧ್ಯತೆ
ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗಿದ್ದು, ಸುಡುಬಿಸಿಲಿನಿಂದ ತತ್ತರಿಸಿದ ಜನರಿಗೆ ತಂಪೆರೆದಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- Prasanna Hegde
- Updated on: Mar 15, 2026
- 6:08 pm
ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ಹೆಚ್.ವೈ.ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಈ ಕ್ಷೇತ್ರಗಳು ತೆರವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಲ್ಲಿಯೂ ಟಕೆಟ್ ಆಕಾಂಕ್ಷಿಗಳ ಕಾದಾಟ ಜೋರಾಗಿದೆ. ಈ ನಡುವೆಯೇ ಉಪ ಚುನಾವಣೆಯ ದಿನಾಂಕ ಘೋಷಣೆಯಾಗಿರೋದು, ಬೈ ಎಲೆಕ್ಷನ್ ಅಖಾಡವನ್ನು ಮತ್ತಷ್ಟು ರಂಗೇರಿಸಿದೆ.
- Prasanna Hegde
- Updated on: Mar 15, 2026
- 5:09 pm
ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ: ಸೋಮವಾರದಿಂದಲೇ ಖರೀದಿ ಆರಂಭದ ಭರವಸೆ
ಕೇಂದ್ರ ಸರ್ಕಾರವು ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದೆ. ಸಚಿವ ಕುಮಾರಸ್ವಾಮಿ ಅವರ ಮನವಿ ಮೇರೆಗೆ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸ್ಪಂದಿಸಿದ್ದಾರೆ. ಸೋಮವಾರದಿಂದಲೇ ತಂಬಾಕು ಖರೀದಿ ಆರಂಭವಾಗಲಿದ್ದು, ವಿದೇಶಿ ಮಾರುಕಟ್ಟೆಗಳಿಗೆ ರಫ್ತು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳೆಗಾರರು ಎದುರಿಸುತ್ತಿರುವ ಬಿಕ್ಕಟ್ಟನ್ನು ಶಮನಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
- Prasanna Hegde
- Updated on: Mar 13, 2026
- 4:35 pm
ಪೂರೈಕೆ ವ್ಯತ್ಯಯದ ನಡುವೆ LPG ಸಿಲಿಂಡರ್ಗೆ ಕಳ್ಳರ ಕಾಟ: ಮನೆಯ ಕಾಂಪೌಂಡ್ಗೆ ನುಗ್ಗಿ ಕದ್ದು ಎಸ್ಕೇಪ್!
ಮಧ್ಯಪ್ರಾಚ್ಯದ ಯುದ್ಧದಿಂದ ಕರ್ನಾಟಕದಲ್ಲಿ ಎಲ್ಪಿಜಿ ಸಿಲಿಂಡರ್ ಅಭಾವ ತೀವ್ರಗೊಂಡಿದೆ. ಹೋಟೆಲ್, ಪಿಜಿ, ಶಾಲೆಗಳು ಸಂಕಷ್ಟದಲ್ಲಿವೆ. ಈ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡ ಕೆಲವರು ಸಿಲಿಂಡರ್ಗಳನ್ನು ಬ್ಲ್ಯಾಕ್ ಮಾರ್ಕೆಟ್ನಲ್ಲಿ ಮಾರಾಟ ಮಾಡುತ್ತಿದ್ದರೆ, ಇನ್ನೂ ಕೆಲವರು ಮನೆಗಳಿಂದ ಸಿಲಿಂಡರ್ ಕದಿಯಲು ಮುಂದಾಗಿದ್ದಾರೆ. ಚನ್ನಪಟ್ಟಣದಲ್ಲಿ ಮನೆಯ ಕಾಂಪೌಂಡ್ನಿಂದ ಗೃಹಬಳಕೆಯ ಸಿಲಿಂಡರ್ ಕದ್ದ ಘಟನೆ ವರದಿಯಾಗಿದೆ. ಪೂರೈಕೆ ವ್ಯತ್ಯಯದ ಜೊತೆ ಕಳ್ಳರ ಕಾಟವೂ ಹೆಚ್ಚಾಗಿ ನಿವಾಸಿಗಳಿಗೆ ಹೊಸ ತಲೆನೋವಾಗಿದೆ.
- Prasanna Hegde
- Updated on: Mar 13, 2026
- 3:30 pm
ರಾಜ್ಯದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ: ಸನ್ನಡತೆ ಆಧಾರದಲ್ಲಿ ರಿಲೀಸ್
ರಾಜ್ಯ ಸರ್ಕಾರವು 30 ಜೀವಾವಧಿ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಲು ಆದೇಶಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ, ಸಂವಿಧಾನದ ಆರ್ಟಿಕಲ್ 161ರ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಪರಿಶೀಲನಾ ಸಮಿತಿಯ ಶಿಫಾರಸಿನ ಮೇರೆಗೆ, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಜೈಲುಗಳಿಂದ ಮೂವರು ಮಹಿಳೆಯರೂ ಸೇರಿದಂತೆ ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ.
- Prasanna Hegde
- Updated on: Mar 13, 2026
- 2:27 pm
ಪುಸ್ತಕ ಅನುವಾದಕ್ಕೂ ಬಂತು AI: ತಂತ್ರಜ್ಞಾನದ ಮೂಲಕ ಭಾಷಾಂತರಗೊಂಡ ಮೊದಲ ಬುಕ್ ಮಾ.15ರಂದು ಬಿಡುಗಡೆ
ಕೃತಕ ಬುದ್ಧಿಮತ್ತೆ (AI) ಈಗ ಪುಸ್ತಕ ಅನುವಾದ ಕ್ಷೇತ್ರಕ್ಕೂ ಕಾಲಿಟ್ಟಿದೆ. ನಾವ್ AI ಕಂಪನಿಯು ಅಭಿವೃದ್ಧಿಪಡಿಸಿದ ತಂತ್ರಜ್ಞಾನದಿಂದ ಅನುವಾದಗೊಂಡ 'ನನ್ನ ಹೆಸರು ಗೌಹರ್ ಜಾನ್' ಪುಸ್ತಕ ಮಾರ್ಚ್ 15ರಂದು ಬಿಡುಗಡೆಯಾಗಲಿದೆ. ಇದು ಇಂಗ್ಲಿಷ್ನಿಂದ ಕನ್ನಡಕ್ಕೆ AI ಮೂಲಕ ಅನುವಾದಗೊಂಡ ಮೊದಲ ಪುಸ್ತಕ. AI ಅನುವಾದ ಪ್ರಕ್ರಿಯೆಯನ್ನು ಗಣನೀಯವಾಗಿ ವೇಗಗೊಳಿಸಿದರೂ, ನಿಖರತೆ ಹಾಗೂ ಸಾಂಸ್ಕೃತಿಕ ಸೂಕ್ಷ್ಮತೆಗಳಿಗಾಗಿ ಮಾನವ ಪರಿಶೀಲನೆ ಅವಶ್ಯಕ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
- Prasanna Hegde
- Updated on: Mar 13, 2026
- 12:40 pm