AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸನ್ನ ಗಾಂವ್ಕರ್​

ಪ್ರಸನ್ನ ಗಾಂವ್ಕರ್​

ಹಿರಿಯ ವರದಿಗಾರ - TV9 Kannada

prasanna.gaonkar@tv9.com

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow On:
ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ಕೌಂಟರ್: ಕಲ್ಯಾಣ ಕರ್ನಾಟಕದ ನಾಯಕರ ಮಹತ್ವದ ಸಭೆ ಕರೆದ ಕೆಪಿಸಿಸಿ

ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ಕೌಂಟರ್: ಕಲ್ಯಾಣ ಕರ್ನಾಟಕದ ನಾಯಕರ ಮಹತ್ವದ ಸಭೆ ಕರೆದ ಕೆಪಿಸಿಸಿ

ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭಿಸುತ್ತಿರುವ ಬೆನ್ನಲ್ಲೇ, ಬಿಜೆಪಿ ನಾಯಕರಿಗೆ ರಾಜಕೀಯವಾಗಿ ಕೌಂಟರ್ ನೀಡಲು ಕಾಂಗ್ರೆಸ್ ಸಜ್ಜಾಗಿದೆ. ಕಲ್ಯಾಣ ಕರ್ನಾಟಕದ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರ ಸಭೆ ಕರೆದು, ಪಾದಯಾತ್ರೆಯಲ್ಲಿ ಬಿಜೆಪಿ ಪ್ರಸ್ತಾಪಿಸುವ ಪ್ರತಿಯೊಂದು ವಿಚಾರಕ್ಕೂ ತಿರುಗೇಟು ನೀಡಲು ತಂತ್ರ ರೂಪಿಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ ಇದೀಗ.

ನೇಪಾಳ ಪ್ರವಾಹ, ದುರಂತ: ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ, ಸಿಎಂ ವಿಶೇಷ ಕರ್ತವ್ಯಾಧಿಕಾರಿ ಅಭಿಜಿತ್ ಗೌಡಗೆ ಹೊಣೆ

ನೇಪಾಳ ಪ್ರವಾಹ, ದುರಂತ: ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ, ಸಿಎಂ ವಿಶೇಷ ಕರ್ತವ್ಯಾಧಿಕಾರಿ ಅಭಿಜಿತ್ ಗೌಡಗೆ ಹೊಣೆ

ನೇಪಾಳ ಪ್ರವಾಹ ಮತ್ತು ಅದರಿಂದಾಗಿ ಸಂಭವಿಸಿದ ದುರಂತದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದವರ ಪತ್ತೆ ಹಾಗೂ ರಕ್ಷಣೆಗೆ ಸರ್ಕಾರ ವಿಶೇಷ ನೋಡಲ್ ಅಧಿಕಾರಿ ಅಭಿಜಿತ್ ಗೌಡ ಅವರನ್ನು ನೇಮಿಸಿದೆ. 33 ಕನ್ನಡಿಗರ ಪೈಕಿ 14 ಮಂದಿ ಇನ್ನೂ ಪತ್ತೆಯಾಗಬೇಕಿದ್ದು, ಸುರಕ್ಷಿತ ವಾಪಸಾತಿಗೆ ಕ್ರಮ ಮುಂದುವರಿದಿದೆ.

B Nagendra Resigns: ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ

B Nagendra Resigns: ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ

ವಾಲ್ಮೀಕಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅದನ್ನು ಅಂಗೀಕರಿಸಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ರವಾನಿಸಲಾಗಿದೆ. ಒಂದೇ ವಿಚಾರಕ್ಕೆ ಎರಡನೇ ಬಾರಿಗೆ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದು, ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಂದಿನ ಕಾನೂನು ಪ್ರಕ್ರಿಯೆಗಳ ಕುರಿತು ಕುತೂಹಲ ಮೂಡಿದೆ.

ಮಂಗಳೂರು KRIDL ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಆಗ್ರಹಿಸಿ ಸಿಎಂಗೆ ಶಾಸಕ ಅಶೋಕ್​​ ಕುಮಾರ್​​ ರೈ ಪತ್ರ

ಮಂಗಳೂರು KRIDL ಅಧಿಕಾರಿಗಳ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಆಗ್ರಹಿಸಿ ಸಿಎಂಗೆ ಶಾಸಕ ಅಶೋಕ್​​ ಕುಮಾರ್​​ ರೈ ಪತ್ರ

ಮಂಗಳೂರು KRIDL ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಸಮಗ್ರ ಇಲಾಖಾ ತನಿಖೆಗೆ ಆಗ್ರಹಿಸಿ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಸಿಎಂ ಡಿ.ಕೆ. ಶಿವಕುಮಾರ್‌ಗೆ ಪತ್ರ ಬರೆದಿದ್ದಾರೆ. ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡಿ, ಶೇ.7ರಷ್ಟು ವರೆಗೆ ಹೆಚ್ಚುವರಿ ಹಣವನ್ನು ಪಡೆಯಲಾಗುತ್ತಿದೆ. ಈ ಬಗ್ಗೆ ಪ್ರಶ್ನಿಸಿದ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡಿರುವ ಬಗ್ಗೆ ಗಂಭೀರ ಆರೋಪಗಳು ಹಾಗೂ ದೂರುಗಳು ಬಂದಿರುತ್ತವೆ ಎಂದವರು ಪತ್ರದಲ್ಲಿ ತಿಳಿಸಿದ್ದಾರೆ.

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಖಾಲಿ ಆಗಿರುವ ಸಚಿವ ಸ್ಥಾನ ಯಾರ ಪಾಲು? ಕಾಂಗ್ರೆಸ್​​ ಲೆಕ್ಕಾಚಾರಗಳೇನು?

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಖಾಲಿ ಆಗಿರುವ ಸಚಿವ ಸ್ಥಾನ ಯಾರ ಪಾಲು? ಕಾಂಗ್ರೆಸ್​​ ಲೆಕ್ಕಾಚಾರಗಳೇನು?

ಬಿ. ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಭಾರಿ ಪೈಪೋಟಿ ಶುರುವಾಗಿದೆ. ಎಸ್ಟಿ ಕೋಟಾ, ಮಹಿಳಾ ಪ್ರಾತಿನಿಧ್ಯ ಹಾಗೂ ಸಿದ್ದರಾಮಯ್ಯ ಬೆಂಬಲಿಗರನ್ನು ಸರಿದೂಗಿಸಲು ಹೈಕಮಾಂಡ್ ವಿಭಿನ್ನ ಲೆಕ್ಕಾಚಾರಗಳನ್ನು ನಡೆಸುತ್ತಿದೆ. ಹೀಗಿದ್ದರೂ ಫೈನಲ್​​ ಆಗಿ ಮಂತ್ರಿಗಿರಿ ಯಾರ ಪಾಲಾಗುತ್ತೆ ಅನ್ನೋದನ್ನು ಕಾದು ನೋಡಬೇಕಿದೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

‘ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ’: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ!

‘ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ’: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ!

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಒಳ ಮೀಸಲಾತಿ ವಿಚಾರ ಸಂಕಿರಣದಲ್ಲಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. 'ಆರಂಭದಲ್ಲಿ 4-5 ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು, ಆದರೆ ಒಬ್ಬರಿಗಷ್ಟೇ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಜಿ. ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ' ಎಂದು ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ.

ಮನೆ ಮುಂದೆ ನಿಲ್ಲಿಸುವ ವಾಹನಗಳಿಗೂ ಪಾರ್ಕಿಂಗ್​​ ಶುಲ್ಕ ವಿವಾದ: ಸಿಎಂಗೆ ಪತ್ರ ಬರೆದ ಸಚಿವ ರಾಮಲಿಂಗಾರೆಡ್ಡಿ

ಮನೆ ಮುಂದೆ ನಿಲ್ಲಿಸುವ ವಾಹನಗಳಿಗೂ ಪಾರ್ಕಿಂಗ್​​ ಶುಲ್ಕ ವಿವಾದ: ಸಿಎಂಗೆ ಪತ್ರ ಬರೆದ ಸಚಿವ ರಾಮಲಿಂಗಾರೆಡ್ಡಿ

ಮನೆ ಮುಂದೆ ನಿಲ್ಲಿಸುವ ವಾಹನಗಳಿಗೂ ಪಾರ್ಕಿಂಗ್ ಶುಲ್ಕ ವಿಧಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಹೊಸ ನಿಯಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ನಿಯಮ ಹಿಂಪಡೆಯುವಂತೆ ಸಚಿವ ರಾಮಲಿಂಗಾರೆಡ್ಡಿ ಅವರು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನ ಶಾಸಕರು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮುಂದಿನ ತೀರ್ಮಾನ ‌ಮಾಡುವಂತೆಯೂ ಮನವಿ ಮಾಡಿದ್ದಾರೆ.

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ: ಬಿಜೆಪಿ ಸದಸ್ಯರಿಗೆ ಖಡಕ್​​ ವಾರ್ನಿಂಗ್​​ ಕೊಟ್ಟ ಸಭಾಪತಿ ಸಲೀಂ ಅಹ್ಮದ್​

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ: ಬಿಜೆಪಿ ಸದಸ್ಯರಿಗೆ ಖಡಕ್​​ ವಾರ್ನಿಂಗ್​​ ಕೊಟ್ಟ ಸಭಾಪತಿ ಸಲೀಂ ಅಹ್ಮದ್​

ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಈ ವೇಳೆ ಸಭಾಪತಿ ಸಲೀಂ ಅಹ್ಮದ್ ಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಸದಸ್ಯರಿಗೆ ಹಾಗೂ ತಡವಾಗಿ ಬರುವ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆ ಕುರಿತ ಮಾಹಿತಿ ಇಲ್ಲಿದೆ.

ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ

ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ

ಸಚಿವ ನಾಗೇಂದ್ರ ಅವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಭಾರಿ ಪ್ರತಿಭಟನೆ ನಡೆಯುತ್ತಿರುವಾಗಲೇ, ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ವಿಧಾನ ಪರಿಷತ್‌ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯೇ ಈ ಸಚಿವಾಲಯವನ್ನು ನೋಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯವರು ತಾಕತ್ತಿದ್ದರೆ RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಬಿ.ಕೆ.ಹರಿಪ್ರಸಾದ್

ಬಿಜೆಪಿಯವರು ತಾಕತ್ತಿದ್ದರೆ RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಬಿ.ಕೆ.ಹರಿಪ್ರಸಾದ್

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸದನ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ಆರೋಪಿಸಿ, ಬಿಜೆಪಿ ನಾಯಕರನ್ನು "ಹೇಡಿಗಳು" ಎಂದು ಕರೆದಿದ್ದಾರೆ. ವಂದೇ ಮಾತರಂ ಗೀತೆ ಸಂಬಂಧ ಕಾಂಗ್ರೆಸ್​​ ನಿರ್ಣಯದ ಬಗ್ಗೆಯೂ ಸ್ಪಷ್ಟಪಡಿಸಿದ ಅವರು, ಇವರು ನಮ್ಮನ್ನು ಗಲ್ಲಿಗಾದರೂ ಹಾಕಲಿ, ಜೈಲಿಗಾದರೂ ಹಾಕಲಿ. ನಾವು ಹಾಡುವುದು ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಎಂದು ಪುನರುಚ್ಛರಿಸಿದ್ದಾರೆ.

ಕ್ಯಾಪನ್ ಅಭಿಮನ್ಯು ಆನೆಗೆ ಗೌರವಯುತ ಬೀಳ್ಕೊಡಿಗೆ ನೀಡುವಂತೆ ಈಶ್ವರ್ ಖಂಡ್ರೆ ಪತ್ರ

ಕ್ಯಾಪನ್ ಅಭಿಮನ್ಯು ಆನೆಗೆ ಗೌರವಯುತ ಬೀಳ್ಕೊಡಿಗೆ ನೀಡುವಂತೆ ಈಶ್ವರ್ ಖಂಡ್ರೆ ಪತ್ರ

ಮೈಸೂರು ದಸರಾ (Mysuru Dasara) ಅಂದರೆ ಕಣ್ಮುಂದೆ ಬರುವುದು ರಾಜ ಗಾಂಭೀರ್ಯದಲ್ಲಿ ಹೆಜ್ಜೆ ಹಾಕುವ ಗಜಪಡೆ. ಅದರಲ್ಲೂ ಚಿನ್ನದ ಅಂಬಾರಿ ಹೊತ್ತು ಮೈಸೂರು ರಾಜಬೀದಿಯಲ್ಲಿ ಹೆಜ್ಜೆ ಹಾಕಿದ್ದ ಅಭಿಮನ್ಯುಗೆ ವಿಶೇಷ ಸ್ಥಾನ.‌ ಆದರೆ, ವಯಸ್ಸಿನ ಕಾರಣಕ್ಕೆ ಈ ಬಾರಿ ಅಭಿಮನ್ಯು ದಸರಾ ಆನೆಗಳ ಪಟ್ಟಿಯಿಂದ ಹೊರಗುಳಿದಿದ್ದಾನೆ. 60 ವರ್ಷ ಆಗಿರುವುದರಿಂದ ಸತತ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಈ ಗಜರಾಜ ದಸರಾ ಕರ್ತವ್ಯದಿಂದ ನಿವೃತ್ತಿಯಾಗಿದ್ದಾನೆ. ಆದ್ರೆ, ಕ್ಯಾಪ್ಟರ್​​​​​ ಅಭಿಮನ್ಯುಗೆ ಗೌರಯುತವಾಗಿ ಬೀಳ್ಕೊಡಿಗೆ ನೀಡಲು ಮಾಜಿ ಅರಣ್ಯ ಸಚಿವರು ಮನವಿ ಮಾಡಿದ್ದಾರೆ.

‘ಇದೆಲ್ಲ ಮನುವಾದಿಗಳ ಹುನ್ನಾರ’: ವಿಪಕ್ಷಗಳ ಪ್ರತಿಭಟನೆ ಬೆನ್ನಲ್ಲೇ ದಲಿತ ದಾಳ ಉರುಳಿಸಿದ ಸಚಿವ ನಾಗೆಂದ್ರ

‘ಇದೆಲ್ಲ ಮನುವಾದಿಗಳ ಹುನ್ನಾರ’: ವಿಪಕ್ಷಗಳ ಪ್ರತಿಭಟನೆ ಬೆನ್ನಲ್ಲೇ ದಲಿತ ದಾಳ ಉರುಳಿಸಿದ ಸಚಿವ ನಾಗೆಂದ್ರ

ವಾಲ್ಮೀಕಿ ನಿಗಮದ ಹಗರಣ ಸಂಬಂಧ ಕ್ಲೀನ್​​ಚಿಟ್​​ ಸಿಗದ ಹೊರತಾಗಿಯೂ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದನ್ನು ಖಂಡಿಸಿ ಉಭಯ ಸದನಗಳಲ್ಲಿ ವಿಪಕ್ಷಗಳ ಹೋರಾಟ ತೀವ್ರಗೊಂಡಿದೆ. ಈ ನಡುವೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ನಾಗೇಂದ್ರ, ಇವೆಲ್ಲವೂ ಮನುವಾದಿಗಳು ಮಾಡ್ತಿರುವ ಹುನ್ನಾರ ಎಂದು ಗಂಭೀರ ಆರೋಪ ಮಾಡಿದ್ದಾರೆ. ನನಗೆ ಶಿಕ್ಷೆ ಪ್ರಕಟ ಆಗಿದ್ದರೆ ರಾಜ್ಯಪಾಲರು ಮಂತ್ರಿಯಾಗಿ ಪ್ರಮಾಣವಚನಕ್ಕೆ ಅವಕಾಶ ನೀಡುತ್ತಿದ್ದರಾ ಎಂದೂ ಪ್ರಶ್ನಿಸಿದ್ದಾರೆ.