ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.
ವಿಧಾನಸಭೆ ಅಧಿವೇಶನಕ್ಕೆ ಇನ್ನೆರಡೇ ದಿನ ಬಾಕಿ: ಇಂದಾದರೂ ಹೊರಬೀಳುತ್ತಾ ಖಾತೆ ಹಂಚಿಕೆ ಪಟ್ಟಿ?
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮುಗಿದರೂ ಖಾತೆ ಹಂಚಿಕೆ ಇನ್ನೂ ಕಗ್ಗಂಟಾಗಿದೆ. ಅಧಿವೇಶನ ಆರಂಭಕ್ಕೆ ಎರಡು ದಿನ ಬಾಕಿ ಇರುವುದರಿಂದ ಇಂದಾದರೂ ಪಟ್ಟಿ ಹೊರಬೀಳುತ್ತಾ ಎಂಬ ಕುತೂಹಲ ಮೂಡಿದೆ. ಸಂಪುಟ ಸಭೆಯನ್ನೂ ಗುರುವಾರಕ್ಕೆ ಮುಂದೂಡಲಾಗಿದೆ. ಹೀಗಾಗಿ ಅದಕ್ಕೂ ಮುನ್ನ ಖಾತೆ ಹಂಚಿಕೆಯಾಗಬಹುದು ಎಂಬ ನಿರೀಕ್ಷೆ ಮೂಡಿದೆ.
- Prasanna Gaonkar
- Updated on: Aug 11, 2026
- 8:12 am
ಖಾತೆ ಹಂಚಿಕೆ ಕಗ್ಗಂಟು: ದೆಹಲಿಯಲ್ಲಿ ತಡರಾತ್ರಿ ಖರ್ಗೆ ಭೇಟಿಯಾದ ಡಿಕೆಶಿ, ಇಂದು ಸಂಜೆಯೇ ಪಟ್ಟಿ ಫೈನಲ್ ಸಾಧ್ಯತೆ
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಬಳಿಕ ಖಾತೆ ಹಂಚಿಕೆ ಕಗ್ಗಂಟಾಗಿದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಡಿ.ಕೆ. ಶಿವಕುಮಾರ್ ಭಾನುವಾರ ತಡರಾತ್ರಿ ಭೇಟಿಯಾಗಿ ಚರ್ಚಿಸಿದ್ದು, ಎರಡು-ಮೂರು ಸಚಿವರ ಬದಲಾವಣೆ ಹಾಗೂ ಖಾತೆಗಳ ಅದಲು-ಬದಲು ಸಾಧ್ಯತೆಯೂ ಚರ್ಚೆಯಲ್ಲಿದೆ. ರಾಹುಲ್ ಗಾಂಧಿ ಒಪ್ಪಿಗೆ ಸಿಕ್ಕಿದರೆ ಇಂದು ಸಂಜೆಯೇ ಖಾತೆ ಹಂಚಿಕೆ ಫೈನಲ್ ಆಗುವ ನಿರೀಕ್ಷೆ ಇದೆ.
- Prasanna Gaonkar
- Updated on: Aug 10, 2026
- 6:47 am
ಸಚಿವ ಯತೀಂದ್ರಗೆ ಮತ್ತೊಂದು ಜಾಕ್ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ಸಿಗುವುದು ಬಹುತೇಕ ಖಚಿತವಾಗಿದೆ. ಖಾಲಿ ಇರುವ ವಿಧಾನ ಪರಿಷತ್ ಸಭಾ ನಾಯಕನ ಹೊಣೆ ಯತೀಂದ್ರ ಸಿದ್ದರಾಮಯ್ಯನವರ ಹೆಗಲಿಗೆ ಬೀಳುವ ಸಾಧ್ಯತೆ ಇದ್ದು, ಪರಿಷತ್ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿರೋದೆ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎನ್ಎಸ್ ಬೋಸರಾಜ್ ಅವರು ಸಚಿವರಾಗಿದ್ದರು. ಜೊತೆಗೆ ವಿಧಾನಪರಿಷತ್ ಸಭಾನಾಯಕರಾಗಿದ್ದರು. ಅದರಂತೆ ಇದೀಗ ಯತೀಂದ್ರ ಸಿದ್ದರಾಮಯ್ಯನವರಿಗೆ ಸಭಾನಾಯಕ ಸ್ಥಾನ ಒಲಿಯಲಿದೆ.
- Prasanna Gaonkar
- Updated on: Aug 9, 2026
- 3:51 pm
ಯತೀಂದ್ರ ಸಿದ್ದರಾಮಯ್ಯಗೆ ಮತ್ತೊಂದು ಮಹತ್ವದ ಸ್ಥಾನ?: ಸಿಗಲಿದ್ಯಾ ವಿಧಾನ ಪರಿಷತ್ ಸಭಾ ನಾಯಕನ ಹೊಣೆ?
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಯತ್ತು ಸಚಿವ ಯತೀಂದ್ರ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ಸಿಗುವುದು ಬಹುತೇಕ ಕನ್ಫರ್ನ್ ಆಗಿದೆ. ಖಾಲಿ ಇರುವ ವಿಧಾನ ಪರಿಷತ್ ಸಭಾ ನಾಯಕನ ಹೊಣೆ ಅವರ ಹೆಗಲಿಗೆ ಬೀಳುವ ಸಾಧ್ಯತೆ ಇದ್ದು, ಪರಿಷತ್ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿರೋದೆ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಆಗಸ್ಟ್ 13 ರಿಂದ ಆಗಸ್ಟ್ 27ರವರೆಗೆ ವಿಧಾನಮಂಡಲದ ಮುಂಗಾರು ಅಧಿವೇಶನ ನಿಗದಿಯಾಗಿದೆ.
- Prasanna Gaonkar
- Updated on: Aug 9, 2026
- 12:59 pm
ರಾಜ್ಯ ಕಾಂಗ್ರೆಸ್ನಲ್ಲಿ ಸಂಪುಟ ವಿಸ್ತರಣೆ ಕಿಚ್ಚು: ರಾಹುಲ್ ಗಾಂಧಿಗೆ ನಿಷ್ಠಾವಂತ ಕಾರ್ಯಕರ್ತರ ಪತ್ರ
ಕರ್ನಾಟಕದಲ್ಲಿ ಇತ್ತೀಚಿನ ಸಚಿವ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್ನಲ್ಲಿ ಭಾರಿ ಅಸಮಾಧಾನ ಸ್ಫೋಟಗೊಂಡಿದೆ. ನಿಷ್ಠಾವಂತ ಕಾರ್ಯಕರ್ತರು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ, ನಾಯಕರು ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ಲಾಭ ಗಳಿಸುತ್ತಿದ್ದಾರೆ ಮತ್ತು ಅರ್ಹರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರಿಗೆ ಸಚಿವ ಸ್ಥಾನ ನೀಡಿರುವುದನ್ನು ಖಂಡಿಸಿ, ಭವಿಷ್ಯದಲ್ಲಿ ಪಕ್ಷದ ಅಸ್ತಿತ್ವಕ್ಕೆ ಧಕ್ಕೆ ಎಂದು ಎಚ್ಚರಿಕೆ ನೀಡಿದ್ದಾರೆ.
- Prasanna Gaonkar
- Updated on: Aug 8, 2026
- 11:04 am
ಪುತ್ರಿಗಾಗಿ ಮಂತ್ರಿ ತ್ಯಾಗ: ಅಂತೆ ಕಂತೆಗಳಿಗೆ ಸ್ಪಷ್ಟನೆ ನಿಡಿದ ಸಚಿವ ಕೆ.ಹೆಚ್. ಮುನಿಯಪ್ಪ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಸಮಾಧಾನಗೊಂಡಿರುವ ಶಾಸಕರು ಹಾಗೂ ನಾಯಕರನ್ನು ಸಮಾಧಾನಪಡಿಸಲು ಸಂಪುಟದಲ್ಲಿ ಕೆಲ ಸಣ್ಣ ಬದಲಾವಣೆ ಮಾಡುವ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚಿಂತನೆ ಆರಂಭಗೊಂಡಿದೆ ಎನ್ನಲಾಗಿದೆ. ಅದರಲ್ಲೂ ಮುಖ್ಯವಾಗಿ ಕೆಎಚ್ ಮುನಿಯಪ್ಪ ಕೈಬಿಟ್ಟು ಪುತ್ರಿ ರೂಪಾಗೆ ಸಚಿವ ಸ್ಥಾನ ನೀಡಲಾಗುತ್ತೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಈ ಬಗ್ಗೆ ಖುದ್ದು ಮುನಿಯಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ.
- Prasanna Gaonkar
- Updated on: Aug 7, 2026
- 4:51 pm
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ಮತ್ತೆ ದಿಲ್ಲಿಯತ್ತ ಡಿಕೆ ಶಿವಕುಮಾರ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಶಾಸಕರ ಮನವೊಲಿಕೆ ಕಸರತ್ತು ನಡೆದಿದೆ. ಇದರ ಮಧ್ಯೆ ಇದೀಗ ನೂತನ ಸಚಿವರ ಖಾತೆ ಕ್ಯಾತೆ ಶುರುವಾಗಿದೆ. ಮೊದಲು ಮಂತ್ರಿ ಸ್ಥಾನ ಸಿಕ್ಕರೆ ಸಾಕಪ್ಪ ಎನ್ನುತ್ತಿದ್ದವರು ಇದೀಗ ಸಚಿವರಾಗುತ್ತಿದ್ದಂತೆಯೇ ಇಂತಹದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಯಾರಿಗೆ ಯಾವ ಖಾತೆ ನೀಡಬೇಕೆಂದು ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ದೆಹಲಿಯತ್ತ ಮುಖ ಮಾಡಿದ್ದಾರೆ. ಹೌದು...ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಹೈಕಮಾಂಡ್ ನಾಯಕರ ಚರ್ಚಿಸಲು ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 07) ಅಥವಾ ನಾಳೆ (ಆ.08) ದೆಹಲಿಗೆ ತೆರಳಲಿದ್ದಾರೆ.
- Prasanna Gaonkar
- Updated on: Aug 7, 2026
- 3:08 pm
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದರಲ್ಲಿ, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ(Basavaraj Horatti) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ ಸತತ ಮನವಿ ಬಳಿಕ ಹೊರಟ್ಟಿ ಅವರು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಹೊರಟ್ಟಿ ರಾಜೀನಾಮೆ ಬಗ್ಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಹೊರಟ್ಟಿಯವರ ಜತೆ ಚರ್ಚೆ ಮಾಡಿದ್ವಿ. ನನಗೆ ರಾಜಕೀಯದ ವಾಸ್ತವಾಂಶದ ಅರಿವು ಇದೆ. ಅವರು ರಾಜೀನಾಮೆ ಸಲ್ಲಿಸಿದ್ದಾರೆ. ನಾನೇ ಅವರಿಗೆ ಮನವಿ ಮಾಡಿಕೊಂಡೆ. ಪ್ರೋಟೆಮ್ ಸಭಾಪತಿಯಾಗಿ ಅವರೇ ಮುಂದುವರೆಯುತ್ತಾರೆ ಎಂದು ಸ್ಪಷ್ಟಪಡಿಸಿದರು.
- Prasanna Gaonkar
- Updated on: Aug 7, 2026
- 2:51 pm
ಸಭಾಪತಿ ಹೊರಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ಸಿದ್ಧತೆ: ಇಂದೇ ನಿಲುವಳಿ ನೋಟಿಸ್?
ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ಗೊಂದಲ ಮತ್ತಷ್ಟು ತೀವ್ರಗೊಂಡಿದ್ದು, ಕಾಂಗ್ರೆಸ್ ಸರ್ಕಾರ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಿದ್ಧತೆ ನಡೆಸಿದೆ. ಈ ನಡುವೆ ಸಿಎಂ ಡಿಕೆಶಿಯನ್ನು ಹೊರಟ್ಟಿ ಭೇಟಿಯಾಗಿದ್ದು, ಅವರು ಅವಿಶ್ವಾಸ ನಿರ್ಣಯ ಮಂಡಿಸಿದ್ರೆ ಮಂಡಿಸಲಿ. ಕಾನೂನು ಪ್ರಕಾರ ಏನು ಬೇಕಾದರೂ ಮಾಡಲಿ ಎಂದಿದ್ದಾರೆ.
- Prasanna Gaonkar
- Updated on: Aug 7, 2026
- 11:58 am
ಸಚಿವ ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಸಚಿವ ಭೈರತಿ ಸುರೇಶ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಆರೋಪದ ಮೇಲೆ ಸಿದ್ದರಾಮಯ್ಯ ಅಭಿಮಾನಿ ಜಯಕುಮಾರ್ ಅವರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರ್.ಟಿ.ನಗರ ಠಾಣೆಯಲ್ಲಿ ಈ ಸಂಬಂಧ ಎಫ್.ಐ.ಆರ್. ದಾಖಲಾಗಿದ್ದು, ಇಬ್ಬರು ಆರೋಪಿಗಳ ಪೈಕಿ ವಿಲ್ಸನ್ ಗಾರ್ಡನ್ ನಿವಾಸಿ ಜಯಕುಮಾರ್ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
- Prasanna Gaonkar
- Updated on: Aug 6, 2026
- 6:15 pm
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ, ಅಷ್ಟಕ್ಕೂ ಆಗಿದ್ದೇನು?
ಸಂಪುಟ ಪುನಾರಚನೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಸಿಕ್ಕಿಲ್ಲವೆಂದು ಹಲವು ಹಿರಿಯ-ಕಿರಿಯ ಶಾಸಕರು ಬೇಸರಗೊಂಡಿದ್ದು, ಅವರನ್ನ ಮನವೊಲಿಸುವ ಯತ್ನವೂ ಸಹ ನಡೆದಿದೆ. ಇದರ ಮಧ್ಯೆ ಇನ್ನೊಂದೆಡೆ ಅಹಿಂದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಅಸಮಾಧಾನಗೊಂಡಿದ್ದಾರೆ. ಅದರಲ್ಲೂ ಮುಖ್ಯವಾಗಿ ತೀವ್ರ ಬೇಸರಗೊಂಡಿರುವ ಹೆಚ್ ಸಿ ಮಹದೇವಪ್ಪ ಅವರು ದೆಹಲಿಗೆ ಹಾರಿದ್ದಾರೆ.
- Prasanna Gaonkar
- Updated on: Aug 6, 2026
- 4:25 pm
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ಸಚಿವ ಸಂಪುಟ ವಿಸ್ತರಣೆಯ ಬಳಿಕ ಅಹಿಂದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಮುನಿಸಿಕೊಂಡಿದ್ದಾರೆ. ಚಿವ ಸ್ಥಾನ ಕೈತಪ್ಪಿದ್ದರಿಂದ ಸಿದ್ದರಾಮಯ್ಯ ಆಪ್ತರಾದ ಎಚ್.ಸಿ. ಮಹದೇವಪ್ಪ ತೀವ್ರ ಅಸಮಾಧಾನಗೊಂಡಿದ್ದಾರೆ. ಈ ನಡುವೆ ಅವರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದು, ಇದರಿಂದ ಕಾಂಗ್ರೆಸ್ ಪಾಳಯದಲ್ಲಿ ಗೊಂದಲಗಳು ಹೆಚ್ಚಾಗಿವೆ.
- Prasanna Gaonkar
- Updated on: Aug 6, 2026
- 11:54 am