AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸನ್ನ ಗಾಂವ್ಕರ್​

ಪ್ರಸನ್ನ ಗಾಂವ್ಕರ್​

ಹಿರಿಯ ವರದಿಗಾರ - TV9 Kannada

prasanna.gaonkar@tv9.com

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow On:
ಮೂರು ದಿನ ದೆಹಲಿಯಲ್ಲಿಯೇ ಉಳಿಯಲಿರುವ ಡಿಸಿಎಂ ಡಿಕೆ ಶಿವಕುಮಾರ್: ವರಿಷ್ಠರ ಅಂಗಳದಲ್ಲಿ ನಡೆಯುತ್ತಾ ಕುರ್ಚಿ ಕದನದ ಚರ್ಚೆ?

ಮೂರು ದಿನ ದೆಹಲಿಯಲ್ಲಿಯೇ ಉಳಿಯಲಿರುವ ಡಿಸಿಎಂ ಡಿಕೆ ಶಿವಕುಮಾರ್: ವರಿಷ್ಠರ ಅಂಗಳದಲ್ಲಿ ನಡೆಯುತ್ತಾ ಕುರ್ಚಿ ಕದನದ ಚರ್ಚೆ?

ಕರ್ನಾಟಕ ಕಾಂಗ್ರೆಸ್ ನಾಯಕತ್ವದ ವಿಚಾರ ದಿನಕ್ಕೊಂದು ಮಹತ್ವ ಪಡೆದುಕೊಳ್ಳುತ್ತಿದೆ. ನಾಯಕರು ಒಳಗೊಳಗೆ ತಂತ್ರ ಪ್ರತಿತಂತ್ರ ಹೆಣೆಯುತ್ತಲೇ ಇದ್ದಾರೆ. ಈ ನಡುವೆ ರಾಜ್ಯ ಕಾಂಗ್ರೆಸ್ ಪಡೆ ದೆಹಲಿಗೆ ತೆರಳುತ್ತಿದ್ದು, ವೋಟ್ ಚೋರಿ ಅಭಿಯಾನದ ಜೊತೆಗೆ ಕುರ್ಚಿ ಚರ್ಚೆಯೂ ನಡೆಯಲಿದೆಯಾ ಎಂಬ ಸಂಶಯ ಮೂಡಿದೆ. ಡಿಸಿಎಂ ಡಿಕೆ ಶಿವಕುಮಾರ್ ಮೂರು ದಿನ ದೆಹಲಿಯಲ್ಲಿಯೇ ಉಳಿಯಲಿರುವುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ? ಆಪ್ತರ ಬಳಿ ಸ್ಫೋಟಕ ಮಾಹಿತಿ ಹಂಚಿಕೊಂಡಿರುವ ಡಿಸಿಎಂ!

ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ? ಆಪ್ತರ ಬಳಿ ಸ್ಫೋಟಕ ಮಾಹಿತಿ ಹಂಚಿಕೊಂಡಿರುವ ಡಿಸಿಎಂ!

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲೇ ಕಾಂಗ್ರೆಸ್ ಮತ್ತೆ ಇಭ್ಭಾಗವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಪ್ರತ್ಯೇಕ ಡಿನ್ನರ್ ಮೀಟಿಂಗ್ ನಡೆಸಿದ ನಂತರ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಶಾಸಕರು ತಮ್ಮೊಂದಿಗಿದ್ದಾರೆ ಎಂದು ಆಪ್ತರ ಬಳಿ ಡಿಕೆ ಶಿವಕುಮಾರ್ ಹೇಳಿಕೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಕಷ್ಟಪಟ್ಟಿದ್ದ ಡಿ.ಕೆ. ಶಿವಕುಮಾರ್​​ಗೆ​​ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?

ಕಷ್ಟಪಟ್ಟಿದ್ದ ಡಿ.ಕೆ. ಶಿವಕುಮಾರ್​​ಗೆ​​ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಬಗ್ಗೆ ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನದ ನಂತರ ಅವರಿಗೆ ಈ ಅವಕಾಶ ಸಿಗಲಿದೆ . ಡಿನ್ನರ್​​ ಮೀಟಿಂಗ್​​ ಶಕ್ತಿ ಪ್ರದರ್ಶನವಲ್ಲ, ಸೌಹಾರ್ದಯುತ ಭೋಜನಕೂಟ ಎಂದಿರುವ ಶಾಸಕ, ಕಾಂಗ್ರೆಸ್ ಪಕ್ಷದಲ್ಲಿ ವರಿಷ್ಠರ ನಿರ್ಧಾರವೇ ಅಂತಿಮ ಎಂದು ತಿಳಿಸಿದ್ದಾರೆ.

ಒಳ ಮೀಸಲಾತಿ ಬಡ್ತಿಗೆ ಒಪ್ಪಿಗೆ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸುವುದಕ್ಕೆ ಸಂಪುಟ ಅಸ್ತು

ಒಳ ಮೀಸಲಾತಿ ಬಡ್ತಿಗೆ ಒಪ್ಪಿಗೆ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸುವುದಕ್ಕೆ ಸಂಪುಟ ಅಸ್ತು

ಬೆಳಗಾವಿ ಅಧಿವೇಶನದ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಡಿಸೆಂಬರ್ 11) ಸುವರ್ಣ ಸೌಧದಲ್ಲೇ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ವಿಧೇಯಕಗಳ ಮಂಡನೆ ಬಗ್ಗೆ ಚರ್ಚೆ ಆಯ್ತು. ಅದರಲ್ಲೂ ಮುಖ್ಯವಾಗಿ ಒಳ ಮೀಸಲಾತಿ ಅಡಿಯಲ್ಲಿ ಬಡ್ತಿ ನೀಡಲು ಒಪ್ಪಿಗೆ ಸೂಚಿಸಿದೆ. ಅಷ್ಟೇ ಅಲ್ಲದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವುದಕ್ಕೆ ಸಂಪುಟ ಅಸ್ತು ಎಂದಿದೆ. ಆದ್ರೆ, ಕೆಲ ಷರತ್ತುಗಳನ್ನು ವಿಧಿಸಿದೆ. ಇನ್ನು ಸಂಪುಟ ಸಭೆ ತೆಗೆದುಕೊಂಡು ತೀರ್ಮಾನಗಳು ಈ ಕೆಳಗಿನಂತಿವೆ.

ಹೊರಟ್ಟಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಕಾಂಗ್ರೆಸ್​ ಎಂಎಲ್​​​ಸಿ, ಅವಿಶ್ವಾಸ ನಿರ್ಣಯದ ತಂತ್ರವೇ?

ಹೊರಟ್ಟಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಕಾಂಗ್ರೆಸ್​ ಎಂಎಲ್​​​ಸಿ, ಅವಿಶ್ವಾಸ ನಿರ್ಣಯದ ತಂತ್ರವೇ?

ಬಸವರಾಜ ಹೊರಟ್ಟಿ ಅಜಾತ ಶತ್ರುವಾಗಿ ಗುರುತಿಸಿಕೊಂಡಿರುವ ಹಿರಿಯ ನಾಯಕ. ದಾಖಲೆಯ ಅವಧಿಗೆ ಎಂಎಲ್ಸಿಯಾಗಿ ಜನಸೇವೆ ಮಾಡುತ್ತಿರುವ ಬಸವರಾಜ ಹೊರಟ್ಟಿ ಸಭಾಪತಿಯಾಗಿಗೂ ಗಮನ ಸೆಳೆದವರು. ಎಲ್ಲ ಪಕ್ಷಗಳಲ್ಲೂ ತಮ್ಮದೇ ಸ್ನೇಹಿತರ ವರ್ಗವನ್ನು ಹೊಂದಿರುವ ಬಸವರಾಜ ಹೊರಟ್ಟಿ ವಿರುದ್ದ ಕಾಂಗ್ರೆಸ್​​ ಎಂಎಲ್ಸಿ ನಾಗರಾಜ್ ಯಾದವ್ ಸಾಲು ಸಾಲು ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಹೊರಟ್ಟಿ ಸಹ ಸವಾಲು ಹಾಕಿದ್ದಾರೆ.

ಪರಿಷತ್​​ ಸದಸ್ಯ ನಾಗರಾಜ್​​ ಯಾದವ್​​ಗೆ ಸಭಾಪತಿ ಹೊರಟ್ಟಿ ಸವಾಲು: ಕಾರಣ ಏನು​​ ಗೊತ್ತಾ?

ಪರಿಷತ್​​ ಸದಸ್ಯ ನಾಗರಾಜ್​​ ಯಾದವ್​​ಗೆ ಸಭಾಪತಿ ಹೊರಟ್ಟಿ ಸವಾಲು: ಕಾರಣ ಏನು​​ ಗೊತ್ತಾ?

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಸದಸ್ಯ ನಾಗರಾಜ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ. ಹೊರಟ್ಟಿ ಪಕ್ಷಾತೀತವಾಗಿಲ್ಲ, ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ದೂರಿದ್ದಾರೆ. ಇತ್ತ, ತಮ್ಮ ಮೇಲಿನ ಆರೋಪ ಸಾಬೀತಾದರೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೊರಟ್ಟಿ ಸವಾಲು ಹಾಕಿದ್ದಾರೆ.

Belagavi Session: ಇಂದಿನಿಂದ ಚಳಿಗಾಲದ ಅಧಿವೇಶನ, ಬೆಳಗಾವಿಯಲ್ಲಿ ಬೀಡುಬಿಟ್ಟ ಇಡೀ ಸರ್ಕಾರ, ವಿಪಕ್ಷಗಳು

Belagavi Session: ಇಂದಿನಿಂದ ಚಳಿಗಾಲದ ಅಧಿವೇಶನ, ಬೆಳಗಾವಿಯಲ್ಲಿ ಬೀಡುಬಿಟ್ಟ ಇಡೀ ಸರ್ಕಾರ, ವಿಪಕ್ಷಗಳು

ಬೆಳಗಾವಿಯಲ್ಲಿ ಕರ್ನಾಟಕದ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದೆ. ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪಗಳೊಂದಿಗೆ ವಿಪಕ್ಷಗಳು ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾಗಿವೆ. ಬಿಜೆಪಿ 20,000 ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಕಾಂಗ್ರೆಸ್ ಕೇಂದ್ರದ ಮೇಲೆ ಆರೋಪ ಹೊರಿಸಿ, ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಳ್ಳಲು ಸಿದ್ಧವಾಗಿದೆ.

ಸೋನಿಯಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜಕೀಯ ಬಗ್ಗೆ ಚರ್ಚೆ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್!

ಸೋನಿಯಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜಕೀಯ ಬಗ್ಗೆ ಚರ್ಚೆ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್!

ಇಂದು ದೆಹಲಿಯ 10 ಜನಪತ್ ರಸ್ತೆಯಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಮಹತ್ವದ ಸಭೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸತತ ಎರಡು ಗಂಟೆಗಳ ಕಾಲ ಕಾಂಗ್ರೆಸ್ ನಾಯಕರ ಮೀಟಿಂಗ್‌ ಮಾಡಿದ್ದಾರೆ. ಕರ್ನಾಟಕ ರಾಜಕೀಯ ವಿದ್ಯಮಾನಗಳ ಬಗ್ಗೆ ಕೂಡ ಚರ್ಚೆ ನಡೆದಿದ್ದು, ಆದರೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.

ಸಚಿವ ಸತೀಶ್​ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗೋದು ಖಚಿತವೇ? ತೀವ್ರ ಕುತೂಹಲ ಹುಟ್ಟು ಹಾಕಿದ ನಡೆ

ಸಚಿವ ಸತೀಶ್​ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗೋದು ಖಚಿತವೇ? ತೀವ್ರ ಕುತೂಹಲ ಹುಟ್ಟು ಹಾಕಿದ ನಡೆ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಚರ್ಚೆ ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಾಲೂರು ಮುಖಂಡರ ಪಕ್ಷ ಸೇರ್ಪಡೆ ಈಗ ಗಮನ ಸೆಳೆದಿದೆ. ಈಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಸಾಮಾಜಿಕ ಬಹಿಷ್ಕಾರ ಹಾಕುವ ಮುನ್ನ ಜೋಕೆ!: ಹೊಸ ಕಾನೂನು ತರಲು ಮುಂದಾಗಿದೆ ರಾಜ್ಯ ಸರ್ಕಾರ

ಸಾಮಾಜಿಕ ಬಹಿಷ್ಕಾರ ಹಾಕುವ ಮುನ್ನ ಜೋಕೆ!: ಹೊಸ ಕಾನೂನು ತರಲು ಮುಂದಾಗಿದೆ ರಾಜ್ಯ ಸರ್ಕಾರ

ಸಾಮಾಜಿಕ ಬಹಿಷ್ಕಾರ ತಡೆಗಟ್ಟಲು ಹೊಸ ಕಾನೂನು ತರಲು ಕರ್ನಾಟಕ ಸರ್ಕಾರ ಸಿದ್ಧತೆ ನಡೆಸಿದೆ. 'ಕರ್ನಾಟಕ ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ ವಿಧೇಯಕ-2025'ಕ್ಕೆ ಸಚಿವ ಸಂಪುಟದ ಅನುಮೋದನೆ ಸಿಗುವ ಸಾಧ್ಯತೆ ಇದೆ. ಈ ಕಾನೂನಿನಡಿ ಏನೆಲ್ಲ ವಿಷಯಗಳು ಬರಲಿವೆ? ಶಿಕ್ಷೆ ಏನಿರಲಿದೆ? ಎನ್ನುವ ಮಾಹಿತಿ ಇಲ್ಲಿದೆ.

ಗುಂಪುಗಾರಿಕೆ ಇಲ್ಲ ಎನ್ನುತ್ತಲೇ ಗೇಮ್ ಪ್ಲ್ಯಾನ್: ಕರ್ನಾಟಕ ಕಾಂಗ್ರೆಸ್​ ಬಗ್ಗೆ ದೆಹಲೀಲಿ ಸೋನಿಯಾ, ರಾಹುಲ್ ಚರ್ಚೆ?

ಗುಂಪುಗಾರಿಕೆ ಇಲ್ಲ ಎನ್ನುತ್ತಲೇ ಗೇಮ್ ಪ್ಲ್ಯಾನ್: ಕರ್ನಾಟಕ ಕಾಂಗ್ರೆಸ್​ ಬಗ್ಗೆ ದೆಹಲೀಲಿ ಸೋನಿಯಾ, ರಾಹುಲ್ ಚರ್ಚೆ?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ‘ಕೊಟ್ಟ ಮಾತು’ ಕುರಿತ ವಿವಾದ ತೀವ್ರಗೊಂಡಿದೆ. ಹೈಕಮಾಂಡ್‌ಗೆ ಬಿಸಿತುಪ್ಪವಾಗಿರುವ ಈ ಚರ್ಚೆ, 2023ರ ಸಿಎಂ ಆಯ್ಕೆ ವೇಳೆ ನಡೆದ ಒಪ್ಪಂದದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ದೆಹಲಿಯಲ್ಲಿ ಸೋನಿಯಾ, ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಪಟ್ಟಕ್ಕಾಗಿ ಫೈಟ್​​: ಡಿಕೆಶಿ ಅಸ್ತ್ರಕ್ಕೆ ಸಿದ್ದರಾಮಯ್ಯ ಬಣದಿಂದ ‘ಅಹಿಂದ’ ಬ್ರಹ್ಮಾಸ್ತ್ರ

ಪಟ್ಟಕ್ಕಾಗಿ ಫೈಟ್​​: ಡಿಕೆಶಿ ಅಸ್ತ್ರಕ್ಕೆ ಸಿದ್ದರಾಮಯ್ಯ ಬಣದಿಂದ ‘ಅಹಿಂದ’ ಬ್ರಹ್ಮಾಸ್ತ್ರ

ಸಿಎಂ ಕುರ್ಚಿ ವಿಚಾರಕ್ಕೆ ರಾಜ್ಯ ಕಾಂಗ್ರೆಸ್​​ನಲ್ಲಿ ತಿಕ್ಕಾಟ ಜೋರಾಗಿದೆ. ಇರೋ ಹುದ್ದೆಯನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೋಡುತಿದ್ದರೆ, ಶತಾಯ ಗತಾಯ ಆ ಸ್ಥಾನ ಪಡೆಯಲೇ ಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಪ್ರಯತ್ನ ಮಾಡುತ್ತಿದ್ದಾರೆ. ಈ ನಡುವೆ ಡಿಕೆಶಿ ಅಸ್ತ್ರಕ್ಕೆ ಸಿದ್ದರಾಮಯ್ಯ ಬಣ ಪ್ರಬಲ ಬ್ರಹ್ಮಾಸ್ತ್ರವೊಂದನ್ನ ಸಿದ್ಧಪಡಿಸಿದೆ. ಹೈಕಮಾಂಡ್​​ ಮೇಲೂ ಇದನ್ನೇ ಬಳಸಿ ಒತ್ತಡ ತರುವ ತಂತ್ರ ಹೆಣೆದಿದೆ.