AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸನ್ನ ಗಾಂವ್ಕರ್​

ಪ್ರಸನ್ನ ಗಾಂವ್ಕರ್​

ಹಿರಿಯ ವರದಿಗಾರ - TV9 Kannada

prasanna.gaonkar@tv9.com

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow On:
SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ? ಬಲವಾಯ್ತು ಅನುಮಾನ, ಕಾರಣ ಇಲ್ಲಿದೆ

SIRಗೆ ಕೌಂಟರ್ ಕೊಡುತ್ತಾ ಗೃಹ ಜ್ಯೋತಿ ಪರಿಶೀಲನೆ? ಬಲವಾಯ್ತು ಅನುಮಾನ, ಕಾರಣ ಇಲ್ಲಿದೆ

ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಂದ ಎಪಿಕ್ ಕಾರ್ಡ್ ಹಾಗೂ ಜಾತಿ ವಿವರ ಸಂಗ್ರಹಿಸಲು ಸರ್ಕಾರ ಮುಂದಾಗಿದ್ದು, ಇದು ಚುನಾವಣಾ ಆಯೋಗ ನಡೆಸುತ್ತಿರುವ ‘ಎಸ್‌ಐಆರ್’ ಪ್ರಕ್ರಿಯೆಗೆ ಕೌಂಟರ್ ಕೊಡುವ ತಂತ್ರವೇ ಎಂಬ ಬಲವಾದ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಹಾಗಾದರೆ, ಈ ಕ್ರಮದಿಂದ ಸರ್ಕಾರಕ್ಕೆ ಏನು ಲಾಭ? ಇಲ್ಲಿದೆ ವಿವರ.

ಎತ್ತಿನಹೊಳೆ ಯೋಜನೆಗೆ 4,708 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿ

ಎತ್ತಿನಹೊಳೆ ಯೋಜನೆಗೆ 4,708 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿ

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಲು ಕರ್ನಾಟಕ ಸರ್ಕಾರ ಕೇಂದ್ರದ ನೆರವು ಕೋರಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರು, ಕೇಂದ್ರದ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿ 4,708 ಕೋಟಿ ರೂ. ಅನುದಾನವನ್ನು 'ಜಲ ಜೀವನ್ ಮಿಷನ್' ಅಡಿಯಲ್ಲಿ ನೀಡಲು ಮನವಿ ಮಾಡಿದ್ದಾರೆ. ಇದು 7 ಜಿಲ್ಲೆಗಳ ಸುಮಾರು 75 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲಿದೆ.

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್​​ ಈಶ್ವರ್​​ ಕಣ್ಣೀರು

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್​​ ಈಶ್ವರ್​​ ಕಣ್ಣೀರು

Pradeep Eshwar: ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ್ದಾರೆ. ಈ ವೇಳೆ ಮಾಜಿ ಸಿಎಂ ಧೈರ್ಯ ಹೇಲಿದ್ದು, ಘಟನೆ ಸಂಬಂಧ ಗೃಹ ಸಚಿವರ ಜೊತೆಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ಪ್ರದೀಪ್​​ ಬೆಂಬಲಿಸಿ ಸಿಎಂ ಡಿಕೆಶಿ ಕೂಡ ಪೋಸ್ಟ್​​ ಮಾಡಿದ್ದು, ವಿಪಕ್ಷಗಳ ವಿರುದ್ಧ ತೀವ್ರ ಆಕ್ರೋಶವನ್ನವರು ವ್ಯಕ್ತಪಡಿಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್​​ ಶಾಸಕರ ಪೈಪೋಟಿ ನಡುವೆ ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್​​ ಶಾಸಕರ ಪೈಪೋಟಿ ನಡುವೆ ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವಕಾಶ ಸಿಕ್ಕರೂ ತಮಗೆ ಸಚಿವ ಸ್ಥಾನ ಬೇಡವೆಂದು ಹೇಳಿದ್ದು, ಜನಪರ ಆಡಳಿತಕ್ಕೆ ಒತ್ತು ನೀಡಿದ್ದಾರೆ. ತಾನು ಎರಡು ವರ್ಷ ಮಂತ್ರಿ ಕೆಲಸವನ್ನು ಪ್ರಾಮಾಣಿಕವಾಗಿ ಮತ್ತು ದಕ್ಷತೆಯಿಂದ ಮಾಡಿದ್ದು, ಈಗ ಬೇರೆಯವರಿಗೂ ಅವಕಾಶ ಕೊಡಲಿ ಎಂದವರು ಹೇಳಿದ್ದಾರೆ.

ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಕರ್ನಾಟಕ ಸರ್ಕಾರವು ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಅಭಿರಾಮ್ ಜಿ. ಶಂಕರ್, ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಸೇರಿದಂತೆ ಪ್ರಮುಖ ಅಧಿಕಾರಿಗಳಿಗೆ ಹೊಸ ಜವಾಬ್ದಾರಿಗಳನ್ನು ವಹಿಸಲಾಗಿದೆ. ಇದರ ಜೊತೆಗೆ, ಪುರಸಭೆ ಆಡಳಿತ ನಿರ್ದೇಶಕರ ಕ್ಯಾಡರ್ ಹುದ್ದೆಗೆ ಸಮಾನವಾದ ಸ್ಥಾನಮಾನ ಮತ್ತು ಜವಾಬ್ದಾರಿಗಳನ್ನು ಹೊಂದಿರುವ ಕೆಲವು ಹುದ್ದೆಗಳನ್ನು ಐಎಎಸ್ (ವೇತನ) ನಿಯಮಗಳು–2016ರ ನಿಯಮ 12ರ ಅಡಿಯಲ್ಲಿ ಸಮಾನ ಹುದ್ದೆಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ.

ರಾಮಂದಿರ ದೇಣಿಗೆ ಲೂಟಿ ಕೇಸ್​​: 40 ಸಿಬ್ಬಂದಿಯಿಂದ್ಲೇ ಸಂಚು! SIT ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ರಾಮಂದಿರ ದೇಣಿಗೆ ಲೂಟಿ ಕೇಸ್​​: 40 ಸಿಬ್ಬಂದಿಯಿಂದ್ಲೇ ಸಂಚು! SIT ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಅಯೋಧ್ಯೆ ರಾಮಮಂದಿರ ದೇಣಿಗೆಯಲ್ಲಿನ ಅಕ್ರಮಗಳ ಕುರಿತು ಎಸ್‌ಐಟಿ ಪ್ರಾಥಮಿಕ ವರದಿಯು ಗಂಭೀರ ಭದ್ರತಾ ಲೋಪಗಳು ಮತ್ತು 40 ಜನರ ಪಾತ್ರವನ್ನು ಬಹಿರಂಗಪಡಿಸಿದೆ. ಇನ್ನು ಬೀದರ್‌ನ ಓರ್ವ ವ್ಯಕ್ತಿ ಶಾಸಕ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥರ ವಿರುದ್ಧವೂ ಹಣ ದುರುಪಯೋಗ ಆರೋಪ ಕೇಳಿಬಂದಿದ್ದು, ಎಸ್​ಐಟಿಗೆ ದೂರು ನೀಡಿದ್ದಾರೆ.

RSS ಬಗ್ಗೆ ಮತ್ತೆ ಪ್ರಿಯಾಂಕ್ ಖರ್ಗೆ​​ ಕಿಡಿ: ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಗೃಹ ಸಚಿವ

RSS ಬಗ್ಗೆ ಮತ್ತೆ ಪ್ರಿಯಾಂಕ್ ಖರ್ಗೆ​​ ಕಿಡಿ: ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಗೃಹ ಸಚಿವ

ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತನ್ನ ಚಟುವಟಿಕೆಗಳಿಗೆ ನೋಂದಣಿ ಮಾಡಿಸಿಕೊಳ್ಳಬೇಕೆಂದು ಮತ್ತೆ ಪುನರುಚ್ಛರಿಸಿರುವ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ, ನೋಂದಣಿಗೆ ಬೇಕಾದ ಎಲ್ಲ ಸಹಕಾರವನ್ನು ತಾವೇ ನೀಡುವುದಾಗಿ ಹೇಳಿದ್ದಾರೆ. ವಿಶ್ವದ ಅತಿ ದೊಡ್ಡ ಸಂಸ್ಥೆ ಆರ್‌ಎಸ್‌ಎಸ್‌ ಏಕೆ ನೋಂದಣಿ ಆಗಿಲ್ಲಎಂದು ಕೇಳೋದೇ ತಪ್ಪಾ? ಎಂದು ಪ್ರಶ್ನಿಸಿದ್ದಾರೆ.

ಸಿಎಜಿ ವರದಿಯಲ್ಲಿ ಗೃಹಲಕ್ಷ್ಮೀ ಯೋಜನೆ ಕಳ್ಳಾಟ ಬಯಲು: ಲೋಪಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಸ್ಪಷ್ಟನೆ

ಸಿಎಜಿ ವರದಿಯಲ್ಲಿ ಗೃಹಲಕ್ಷ್ಮೀ ಯೋಜನೆ ಕಳ್ಳಾಟ ಬಯಲು: ಲೋಪಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಸ್ಪಷ್ಟನೆ

ಸಿಎಜಿ ವರದಿ ಬಹಿರಂಗಪಡಿಸಿದ ಗೃಹಲಕ್ಷ್ಮೀ ಯೋಜನೆಯ ಬ್ಯಾಂಕ್ ಖಾತೆ ಲೋಪಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸ್ಪಷ್ಟೀಕರಣ ನೀಡಿದೆ. ಒಂದೇ ಖಾತೆಗೆ ಬಹು ಫಲಾನುಭವಿಗಳ ಪಾವತಿ ಮತ್ತು ಒಂದೇ ಫಲಾನುಭವಿಗೆ ಬಹು ಖಾತೆಗಳಿಗೆ ಪಾವತಿಯಾದ ಬಗ್ಗೆ ಇಲಾಖೆ ವಿವರಣೆ ನೀಡಿದೆ.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೇ ಪಿಂಚಣಿ ಫಲಾನುಭವಿಗಳ ಸರ್ಜರಿಗೆ ಮುಂದಾದ ರಾಜ್ಯ ಸರ್ಕಾರ

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೇ ಪಿಂಚಣಿ ಫಲಾನುಭವಿಗಳ ಸರ್ಜರಿಗೆ ಮುಂದಾದ ರಾಜ್ಯ ಸರ್ಕಾರ

Pension Scheme Verification: ರಾಜ್ಯ ಸರ್ಕಾರವು ಅನರ್ಹ ಪಿಂಚಣಿದಾರರಿಗೆ ಬ್ರೇಕ್ ಹಾಕಲು ಮುಂದಾಗಿದ್ದು, 'ಸಂಯೋಜನೆ ಆ್ಯಪ್' ಮೂಲಕ ಪರಿಶೀಲನೆ ನಡೆಸಿ ಸೂಕ್ತ ದಾಖಲೆ ಸಲ್ಲಿಸದ 16.42 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಪಿಂಚಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸಂಬಂಧಪಟ್ಟ ತಹಶೀಲ್ದಾರ್ ಮೂಲಕ ಫಲಾನುಭವಿಗಳಿಗೆ ನೋಟಿಸ್ ಸಿಗಲಿದ್ದು, ಅಂತವರು 30 ದಿನದೊಳಗೆ ಅರ್ಹತಾ ದಾಖಲೆ ಸಲ್ಲಿಸಬೇಕು ಎಂದು ಕಂದಾಯ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆಗೆ ಜಲಸಂಪನ್ಮೂಲ ಸಚಿವರೇ ಗೈರು: ಸ್ಪಷ್ಟನೆ ನೀಡಿದ ರಾಮಲಿಂಗಾರೆಡ್ಡಿ

ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್​ ಗೇಟ್​​ಗಳ ಲೋಕಾರ್ಪಣೆಗೆ ಜಲಸಂಪನ್ಮೂಲ ಸಚಿವರೇ ಗೈರು: ಸ್ಪಷ್ಟನೆ ನೀಡಿದ ರಾಮಲಿಂಗಾರೆಡ್ಡಿ

Koppal News: ತುಂಗಭದ್ರಾ ಜಲಾಶಯಕ್ಕೀಗ ಹೊಸ ಕಳೆ ಬಂದಿದೆ. ಮೂರು ರಾಜ್ಯದ ಮುಖ್ಯಮಂತ್ರಿಗಳು ಇಂದು ನೂತನ ಕ್ರಸ್ಟ್ ಗೇಟ್ ಲೋಕಾರ್ಪಣೆ ಮಾಡಿದರು. ಇನ್ನು ಈ ಕಾರ್ಯಕ್ರಮಕ್ಕೆ ಹಾಜರಾಗಬೇಕಿದ್ದ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಗೈರಾಗಿದ್ದಾರೆ. ಈ ಬೆನ್ನಲ್ಲೇ ಮತ್ತೆ ಮುನಿಸಿಕೊಂಡರಾ ಎಂಬ ಮಾತುಗಳು ಕೇಳಿಬಂದಿವೆ. ಆದರೆ ಇದೀಗ ಈ ಬಗ್ಗೆ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

‘ಜೈಲಿಗೆ ಹೋಗಲು ಸಿದ್ಧರಾಗಿ’: ಮತ್ತೊಮ್ಮೆ ಶುರುವಾಯ್ತು ಹೆಚ್​ಡಿಕೆ ವಿರುದ್ಧ ಪೋಸ್ಟರ್ ವಾರ್!

‘ಜೈಲಿಗೆ ಹೋಗಲು ಸಿದ್ಧರಾಗಿ’: ಮತ್ತೊಮ್ಮೆ ಶುರುವಾಯ್ತು ಹೆಚ್​ಡಿಕೆ ವಿರುದ್ಧ ಪೋಸ್ಟರ್ ವಾರ್!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತೆ ಪೋಸ್ಟರ್ ಅಭಿಯಾನ ನಡೆಸಿದ್ದಾರೆ. ಬಿಡದಿ ಮತ್ತು ಬೈರಮಂಗಲ ಸುತ್ತಮುತ್ತಲ ಪ್ರದೇಶಗಳಲ್ಲಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪೋಸ್ಟರ್‌ಗಳನ್ನು ಹಾಕಲಾಗಿದೆ. ಈ ಪೋಸ್ಟರ್‌ಗಳಲ್ಲಿ ಹಲಗೆವಡೇರಹಳ್ಳಿ ಮತ್ತು ಕೇತಗಾನಹಳ್ಳಿ ಭೂ ಹಗರಣದಲ್ಲಿ ಭಾಗಿಯಾದ ಆರೋಪವನ್ನು ಮಾಡಲಾಗಿದ್ದು, "ಜೈಲಿಗೆ ಹೋಗಲು ಸಿದ್ಧರಾಗಿ" ಎಂಬ ಸಂದೇಶವನ್ನು ಪ್ರಮುಖವಾಗಿ ಪ್ರದರ್ಶಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬ್ರದರ್ ಕುಮಾರಸ್ವಾಮಿ ಎಂದು ಸಂಬೋಧಿಸುತ್ತಾ, ಪಂಚಾಯತಿಯಿಂದ ವಿಧಾನ ಪರಿಷತ್ ಚುನಾವಣೆಯವರೆಗೆ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಹೆಚ್.ಡಿ. ಕುಮಾರಸ್ವಾಮಿ ಎಂದು ಎಲ್ಲರಿಗೂ ಗೊತ್ತು ಎಂದೂ ಪೋಸ್ಟರ್‌ಗಳಲ್ಲಿ ಉಲ್ಲೇಖಿಸಲಾಗಿದೆ. ಪೋಸ್ಟರ್‌ಗಳಲ್ಲಿ ಹಾಸ್ಯ ಮಿಶ್ರಿತ ಸಂಭಾಷಣೆಯನ್ನೂ ಚಿತ್ರಿಸಲಾಗಿದೆ. ಈ ಪೋಸ್ಟರ್ ವಾರ್ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಕರ್ನಾಟಕ ಪ್ರವಾಸಿಗರಿಗೆ ಸಿಗಲಿದೆ ಸ್ಥಳೀಯ ಗೈಡ್​​​ಗಳು: ಗೈಡ್‌ಗಳನ್ನು ಆಯ್ಕೆ ಮಾಡುವುದು ಹೇಗೆ?

ಕರ್ನಾಟಕ ಪ್ರವಾಸಿಗರಿಗೆ ಸಿಗಲಿದೆ ಸ್ಥಳೀಯ ಗೈಡ್​​​ಗಳು: ಗೈಡ್‌ಗಳನ್ನು ಆಯ್ಕೆ ಮಾಡುವುದು ಹೇಗೆ?

Namma Guide App: ಕರ್ನಾಟಕ ಸರ್ಕಾರ 'ನಮ್ಮ ಗೈಡ್' ಎಂಬ ಆನ್‌ಲೈನ್ ವೇದಿಕೆ ಮೂಲಕ ರಾಜ್ಯದ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡುತ್ತಿದೆ. ಈ ಡಿಜಿಟಲ್ ಆ್ಯಪ್ ಮೂಲಕ ಪ್ರವಾಸಿಗರು ಅಧಿಕೃತ ಸ್ಥಳೀಯ ಗೈಡ್‌ಗಳನ್ನು ಸುಲಭವಾಗಿ ಕಾಯ್ದಿರಿಸಬಹುದು. ಇದು ಪ್ರವಾಸಿ ತಾಣಗಳ ಇತಿಹಾಸ ಮತ್ತು ಸಂಸ್ಕೃತಿಯನ್ನು ಪರಿಣಾಮಕಾರಿಯಾಗಿ ತಿಳಿಯಲು ಸಹಾಯ ಮಾಡುತ್ತದೆ. ಅಲ್ಲದೆ, ನೂರಾರು ನೋಂದಾಯಿತ ಗೈಡ್‌ಗಳಿಗೆ ನಿರಂತರ ಉದ್ಯೋಗಾವಕಾಶ ಒದಗಿಸಿ, ಸ್ಥಳೀಯ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ.

ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ