ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.
ನನಗೆ ಬೇರೆ ಮಾರ್ಗವಿಲ್ಲ, ಸಿದ್ದರಾಮಯ್ಯ ಬೆನ್ನಿಗೆ ನಿಂತು ಬೆಂಬಲಿಸುತ್ತೇನೆ: ಡಿಕೆ ಶಿವಕುಮಾರ್
‘ಐದು ವರ್ಷ ನಾನೇ ಸಿಎಂ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ನಂದಿಗಿರಿಧಾಮದಲ್ಲಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ತಮಗೆ ಬೇರೆ ಆಯ್ಕೆಗಳಿಲ್ಲ. ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕು ಎಂದು ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೀಡಿರುವ ಈ ಹೇಳಿಕೆಗಳು ಕುತೂಹಲ ಮೂಡಿಸಿವೆ.
- Prasanna Gaonkar
- Updated on: Jul 2, 2025
- 2:12 pm
ಶಾಸಕರ ಮುನಿಸಿಗೆ ಮದ್ದರೆಯಲು ಸುರ್ಜೇವಾಲ ಸಂಧಾನ ಸೂತ್ರ: 40 ಶಾಸಕರಿಗೆ ಬುಲಾವ್, 7 ಶಾಸಕರಿಂದ ಅಭಿಪ್ರಾಯ ಸಂಗ್ರಹ
ಕಳೆದೆರಡು ವಾರದಿಂದ ರಾಜ್ಯ ಸರ್ಕಾರದ ವಿರುದ್ಧ, ಸಚಿವರ ವಿರುದ್ಧ ಕತ್ತಿ ಮಸೆಯುತ್ತಿದ್ದ ಕಾಂಗ್ರೆಸ್ ಶಾಸಕರು ಸೋಮವಾರ ಹೈಕಮಾಂಡ್ ಮುಂದೆ ತಮ್ಮ ಅತೃಪ್ತಿಯನ್ನು ಹೊರಹಾಕಿದ್ದಾರೆ. ಕಾಂಗ್ರೆಸ್ ಮನೆಯ ಅಸಮಾಧಾನದ ಬೆಂಕಿ ಹೈಕಮಾಂಡ್ ಅಂಗಳ ತಲುಪಿದೆ. ಕೆಲವು ಮಂದಿ ಶಾಸಕರ ಜತೆ ಮಾತುಕತೆ ನಡೆಸಿರುವ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಸಿಡಿದೆದ್ದ ಶಾಸಕರ ಮುನಿಸಿಗೆ ಮದ್ದರೆಯಲು ಸಂಧಾನ ಸೂತ್ರ ಅಳವಡಿಸಿದ್ದು, ಇಂದು 40 ಶಾಸಕರಿಗೆ ಬುಲಾವ್ ಕಳುಹಿಸಿದ್ದಾರೆ.
- Prasanna Gaonkar
- Updated on: Jul 1, 2025
- 7:22 am
ಕಾಂಗ್ರೆಸ್ ಶಾಸಕರಿಗೆ ಕೇಳಲು 6 ಪ್ರಶ್ನೆ ಸಿದ್ಧ ಮಾಡಿಕೊಂಡ ಸುರ್ಜೇವಾಲ! ಸೆಪ್ಟೆಂಬರ್ ಕ್ರಾಂತಿಗೆ ಸಿದ್ಧವಾಗ್ತಿದೆಯಾ ವೇದಿಕೆ?
ಕರ್ನಾಟಕ ಕಾಂಗ್ರೆಸ್ ಆಂತರಿಕ ಕಲಹ ಮತ್ತು ಗೊಂದಲಗಳ ಮಧ್ಯೆ ಶಾಸಕರ ಜತೆ ಚರ್ಚಿಸಲು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೂರು ದಿನಗಳ ಕಾಲ ಶಾಸಕರೊಂದಿಗೆ ಸಭೆ ನಡೆಸಿ, ಅವರ ಅಭಿಪ್ರಾಯಗಳನ್ನು ಸಂಗ್ರಹಿಸಿ ಹೈಕಮಾಂಡ್ಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಶಾಸಕರ ಜತೆ ಸುರ್ಜೇವಾಲ ಏನೇನು ಚರ್ಚೆ ನಡೆಸಬಹುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
- Prasanna Gaonkar
- Updated on: Jun 30, 2025
- 10:48 am
ಕರ್ನಾಟಕ ಕಾಂಗ್ರೆಸ್ ಗೊಂದಲ, ಬಿಕ್ಕಟ್ಟು ಶಮನಕ್ಕೆ ಇಂದು ಬೆಂಗಳೂರಿಗೆ ಸುರ್ಜೇವಾಲ
ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನದ ಅಲೆ ಹೆಚ್ಚುತ್ತಿರುವುದರ ಮಧ್ಯೆ ಪಕ್ಷದ ರಾಜ್ಯ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಬೆಂಗಳೂರಿಗೆ ಬರುತ್ತಿದ್ದಾರೆ. ಗೊಂದಲ, ಬಿಕ್ಕಟ್ಟು ಶಮನಕ್ಕೆ ಅವರು ಶಾಸಕರೊಂದಿಗೆ ವೈಯಕ್ತಿಕ ಸಮಾಲೋಚನೆ ನಡೆಸಲಿದ್ದಾರೆ. ಸುರ್ಜೇವಾಲ ಸುಮಾರು 100 ಶಾಸಕರೊಂದಿಗೆ ಕಾಂಗ್ರೆಸ್ ಕಚೇರಿಯಲ್ಲಿ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದು, ರಾಜಣ್ಣ ಅವರ ‘ಸೆಪ್ಟೆಂಬರ್ ಕ್ರಾಂತಿ’ ಹೇಳಿಕೆಗೂ ಇದಕ್ಕೂ ಸಂಬಂಧ ಇರಬಹುದಾ ಎಂಬ ಕುತೂಹಲ ಮೂಡಿದೆ.
- Prasanna Gaonkar
- Updated on: Jun 30, 2025
- 7:16 am
ತಮಗೆ ಬೇಕಾದವರಿಗೆ ಟೆಂಡರ್ ನೀಡಲು ಸಿಎಂ ಆದೇಶವನ್ನೇ ಧಿಕ್ಕರಿಸಿದ ಅಧಿಕಾರಿಗಳು!
ವಸತಿ ಯೋಜನೆಯ ಮನೆಗಳನ್ನ ಹಂಚಿಕೆ ಮಾಡುವುದಕ್ಕೆ ಹಣ ಪಡೆದಿರುವ ಆರೋಪ ರಾಜ್ಯ ರಾಜಕಾರಣದಲ್ಲಿ ಹೊಸದೊಂದು ಚರ್ಚೆಗೆ ಗ್ರಾಸವಾಗಿದೆ. ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆರೋಪಗಳು ಕೇಳಿಬಂದಿದ್ದವು. ಇದಕ್ಕೆ ಸಾಕ್ಷಿಯೆಂಬಂತೆ ಕೆಲವೆಡೆ ಹಣ ಪಡೆದು ಮನೆ ನೀಡಿರುವುದು ಬೆಳಕಿಗೆ ಬಂದಿತ್ತು. ಇದೀಗ ರಾಜ್ಯ ವಸತಿ ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ದೂರು ನೀಡಲಾಗಿದೆ.
- Prasanna Gaonkar
- Updated on: Jun 27, 2025
- 11:26 am
ಕಾಂಗ್ರೆಸ್ ಶಾಸಕರ ಅಸಮಾಧಾನದ ಬೆಂಕಿಗೆ ತುಪ್ಪ ಸುರಿದ ಕೆಎನ್ ರಾಜಣ್ಣ: ಕ್ರಾಂತಿ, ಪವರ್ ಸೆಂಟರ್ ಹೇಳಿಕೆಯಿಂದ ಸಂಚಲನ
ಕರ್ನಾಟಕ ರಾಜಕೀಯದಲ್ಲಿ ಸಚಿವ ಕೆಎನ್ ರಾಜಣ್ಣ ಅವರ ‘‘ಸೆಪ್ಟೆಂಬರ್ ಕ್ರಾಂತಿ’’ ಹಾಗೂ ‘‘ಪವರ್ ಸೆಂಟರ್’’ ಹೇಳಿಕೆ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಶಾಸಕರ ಅಸಮಾಧಾನ, ಅನುದಾನದ ಕೊರತೆ ಮತ್ತು ಸಚಿವರ ನಿರ್ಲಕ್ಷ್ಯದ ಆರೋಪಗಳು ಹೈಕಮಾಂಡ್ವರೆಗೂ ತಲುಪಿರುವ ಸಂದರ್ಭದಲ್ಲೇ ಸಚಿವರಿಂದಲೇ ಬಹಿರಂಗ ಹೇಳಿಕೆ ಮೂಡಿಬಂದಿರುವುದು ಚರ್ಚೆಗೆ ಗ್ರಾಸವಾಗಿದೆ.
- Prasanna Gaonkar
- Updated on: Jun 27, 2025
- 6:45 am
ಮಾವು ಬೆಳೆಗಾರರಿಗೆ, ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ
ಮಾವಿಗೆ ಬೆಂಬಲ ಬೆಲೆ ಆಗ್ರಹಿಸಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ರೈತರು ನಡೆಸಿದ ಹೋರಾಟ ಮತ್ತು ಸರ್ಕಾರಿ ಶಾಲೆ ಮಕ್ಕಳಿಗೆ ಇನ್ನೂವರೆಗೂ ರಾಜ್ಯ ಶಿಕ್ಷಣ ಇಲಾಖೆ ಶೂ ಮತ್ತು ಸಾಕ್ಸ್ ವಿತರಣೆ ಮಾಡದಿರುವ ಬಗ್ಗೆ ಟಿವಿ9 ಡಿಜಿಟಲ್ ನಿರಂತರವಾಗಿ ವರದಿ ಮಾಡಿತ್ತು. ಈ ವರದಿಯಿಂದ ಎಚ್ಚೆತ್ತ ರಾಜ್ಯ ಸರ್ಕಾರ ಮಾವು ಅಭಿವೃದ್ಧಿ ಮಂಡಳಿಗೆ ಹಣ ಬಿಡುಗಡೆ ಮಾಡಿದೆ. ಅಲ್ಲದೆ, ಶೂ ಮತ್ತು ಸಾಕ್ಸ್ ಖರೀದಿಗೂ ಹಣ ಬಿಡುಗಡೆ ಮಾಡಿದೆ.
- Prasanna Gaonkar
- Updated on: Jun 25, 2025
- 11:03 pm
ಕಚೇರಿಯಲ್ಲಿ ಇನ್ನುಂದೆ ಕನ್ನಡದ ಕಂಪು: ಎಲ್ಲಾ ಇಲಾಖೆಗಳಲ್ಲೂ ಕನ್ನಡ ಬಳಸುವಂತೆ ಸುತ್ತೋಲೆ
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿರಬೇಕು. ಸರ್ಕಾರಿ ಆಡಳಿತ ಕನ್ನಡದಲ್ಲೇ ನಡೆಯಬೇಕು ಎಂದು ಸಾಕಷ್ಟು ಸರ್ಕಾರಿ ಆದೇಶಗಳು ಹೊರಬಿದ್ದಿವೆ. ಆದರೆ ಪರಭಾಷೆ ವ್ಯಾಮೋಹದಿಂದ ಇಂದಿಗೂ ಕನ್ನಡವನ್ನು ನಿರ್ಲಕ್ಷಿಸಲಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಸುತ್ತೋಲೆ ಹೊರಡಿಸಿದ್ದು, ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸೂಚಿಸಿದೆ. ಹಾಗಾದ್ರೆ, ಸುತ್ತೋಲೆಯಲ್ಲಿ ಏನಿದೆ ಎನ್ನುವ ವಿವರ ಇಲ್ಲಿದೆ.
- Prasanna Gaonkar
- Updated on: Jun 25, 2025
- 4:45 pm
ಅಮೆರಿಕಕ್ಕೆ ತೆರಳಲು ಪ್ರಿಯಾಂಕ್ ಖರ್ಗೆಗೆ ಕೊನೆಗೂ ಅನುಮತಿ: ಕೇಂದ್ರದ ಯೂಟರ್ನ್ ಎಂದು ವಾಗ್ದಾಳಿ ನಡೆಸಿದ ಸಚಿವ
ಸಚಿವ ಪ್ರಿಯಾಂಕ್ ಖರ್ಗೆಗೆ ಅಮೆರಿಕ ಪ್ರವಾಸಕ್ಕೆ ವಿಧಿಸಿದ್ದ ನಿರ್ಬಂಧವನ್ನು ಹಿಂಪಡೆದು ಕೇಂದ್ರ ಸರ್ಕಾರವು ಶನಿವಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಚಿವ ಖರ್ಗೆ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ. ಜೊತೆಗೆ ಕೇಂದ್ರ ಯೂಟರ್ನ್ ಹೊಡೆದಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಈ ವಿಚಾರ ಚರ್ಚೆಗೆ ಗ್ರಾಸವಾಗಿತ್ತು.
- Prasanna Gaonkar
- Updated on: Jun 21, 2025
- 2:43 pm
ಅಕ್ರಮ ಗಣಿಗಾರಿಕೆ ಕುರಿತು ಸಿಎಂಗೆ ಪತ್ರ ಬರೆದ ಸಚಿವ ಹೆಚ್ಕೆ ಪಾಟೀಲ್: ಕ್ರಮಕ್ಕೆ ಆಗ್ರಹ
ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಕ್ರಮ ಗಣಿಗಾರಿಕೆ ಕುರಿತು ಏಳು ಪುಟಗಳ ಪತ್ರ ಬರೆದಿದ್ದಾರೆ. ಆ ಮೂಲಕ ಅಕ್ರಮ ಗಣಿಗಾರಿಕೆ ಸಂಬಂಧ ಕ್ರಮ ಕೈಗೊಳ್ಳುವಂತೆ ಸಿಎಂಗೆ ಆಗ್ರಹಿಸಿದ್ದಾರೆ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯಕ್ಕೆ 1.5 ಲಕ್ಷ ಕೋಟಿ ರೂ ನಷ್ಟವಾದ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
- Prasanna Gaonkar
- Updated on: Jun 21, 2025
- 11:50 am
ಮನೆ ಹಂಚಿಕೆಗೆ ಲಂಚ ಪ್ರಕರಣ: ಆಡಿಯೋ ನಿಜ, ಲೀಕ್ ಮಾಡಿದ್ದು ಅನೈತಿಕವೆಂದ ಸರ್ಫರಾಜ್ ಖಾನ್
ವಸತಿ ಯೋಜನೆಯಲ್ಲಿ ಲಂಚದ ಆರೋಪದ ಕುರಿತು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಮತ್ತು ವಸತಿ ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಡುವಿನ ಆಡಿಯೋ ಸೋರಿಕೆಯಾಗಿರುವುದು ಕರ್ನಾಟಕ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ. ಸರ್ಫರಾಜ್ ಖಾನ್ ಈ ಆಡಿಯೋ ನಿಜ ಎಂದು ಒಪ್ಪಿಕೊಂಡಿದ್ದು, ಮೊಬೈಲ್ ಸಂಭಾಷಣೆಯನ್ನು ಸೋರಿಕೆ ಮಾಡಿದ್ದು ಅನೈತಿಕ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Prasanna Gaonkar
- Updated on: Jun 20, 2025
- 1:08 pm
ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿ, ಅಸ್ತ್ರಗಳೊಂದಿಗೆ ವಿಪಕ್ಷ ಸಜ್ಜು
ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗಾಗಲೇ ಎರಡು ವರ್ಷಗಳು ಪೂರೈಸಿದ್ದು, ಸಾಲು ಸಾಲು ಎಡವಟ್ಟುಗಳನ್ನು ಮಾಡಿಕೊಂಡಿದೆ. ಇದರ ನಡುವೆ ಇದೀಗ ಮುಂಗಾರ ಅಧಿವೇಶನಕ್ಕೆ ದಿನಾಂಕ ಫಿಕ್ಸ್ ಆಗಿದ್ದು, ಹಲವು ಅಸ್ತ್ರಗಳೊಂದಿಗೆ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬೀಳಲು ಸಜ್ಜಾಗಿವೆ.
- Prasanna Gaonkar
- Updated on: Jun 19, 2025
- 3:36 pm