ಪ್ರಸನ್ನ ಗಾಂವ್ಕರ್​

ಪ್ರಸನ್ನ ಗಾಂವ್ಕರ್​

ಹಿರಿಯ ವರದಿಗಾರ - TV9 Kannada

prasanna.gaonkar@tv9.com

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow On:
ಜಮೀರ್​ ಅಹ್ಮದ್​ಗೆ ನ್ಯಾಯಾಂಗ ನಿಂದನೆ ಸಂಕಷ್ಟ, ಹೈಕೋರ್ಟ್​ಗೆ ಅರ್ಜಿ

ಜಮೀರ್​ ಅಹ್ಮದ್​ಗೆ ನ್ಯಾಯಾಂಗ ನಿಂದನೆ ಸಂಕಷ್ಟ, ಹೈಕೋರ್ಟ್​ಗೆ ಅರ್ಜಿ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್​ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿದೆ. ಸಚಿವ ಜಮೀರ್ ಅಹಮ್ಮದ್ ಖಾನ್ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡುವ ಭರದಲ್ಲಿ ಹೈಕೋರ್ಟ್​ ಆದೇಶದ ಬಗ್ಗೆ ಲಘುವಾಗಿ ಮಾತನಾಡಿದ್ದು, ಇದೀಗ ಅವರಿಗೆ ಸಂಕಷ್ಟ ತಂದಿಟ್ಟಿದೆ.

ಮಾಹಿತಿ ಸೋರಿಕೆ: ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಪತ್ರ

ಮಾಹಿತಿ ಸೋರಿಕೆ: ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಪತ್ರ

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಪತ್ರ ಸಂಘರ್ಷ ತಾರಕಕ್ಕೇರಿದೆ. ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ಲೋಕಾಯುಕ್ತರು ಕಾನೂನು ಕ್ರಮ ಮತ್ತು ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಬರೆದಿದ್ದ ಮನವಿ ಪತ್ರ ಸೋರಿಕೆಯಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ವಿಚಾರವಾಗಿ ಮಹತ್ವದ ಬೆಳವಣಿಗೆ ನಡೆದಿದೆ.

ಮುಡಾ ಹಗರಣ ತನಿಖೆಗೆ ಸಿಬಿಐ ಎಂಟ್ರಿ ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್!

ಮುಡಾ ಹಗರಣ ತನಿಖೆಗೆ ಸಿಬಿಐ ಎಂಟ್ರಿ ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್!

ಮುಡಾ ಹಗರಣದಲ್ಲಿ ದೂರುದಾರರು ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಮೊರೆ ಹೋಗಬಹುದು ಎಂಬ ಸುಳಿವು ದೊರೆತ ಬೆನ್ನಲ್ಲೇ ಆ ವಿಚಾರದಲ್ಲಿ ಕರ್ನಾಟಕ ಸಚಿವ ಸಂಪುಟ ರಕ್ಷಣಾತ್ಮಕ ಕ್ರಮ ಕೈಗೊಂಡಿದೆ. ಸಿಬಿಐ ತನಿಖೆಗೆ ಇದ್ದ ಮುಕ್ತ ಅವಕಾಶದ ಅಧಿಸೂಚನೆಯನ್ನೇ ಹಿಂಪಡೆಯಲು ಸಚಿವ ಸಂಪುಟ ಮುಂದಾಗಿದೆ. ಇದು ಸಿಎಂ ಸಿದ್ದರಾಮಯ್ಯಗೆ ಸಿಬಿಐ ತನಿಖೆಯ ಭೀತಿ ಇರುವುದನ್ನು ಸ್ಪಷ್ಟಪಡಿಸಿದೆ.

ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್ ಅಹ್ಮದ್ ಖಾನ್

ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್ ಅಹ್ಮದ್ ಖಾನ್

ಹೈಕೋರ್ಟ್ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್​, ನ್ಯಾಯಾಲಯದ ಬಗ್ಗೆ ಗೌರವವಿದೆ, ಬಾಯಿತಪ್ಪಿ ಬಂದಿರಬಹುದು ಅಷ್ಟೇ. ಪೊಲಿಟಿಕಲ್ ಬೆನಿಫಿಟ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದೆ ಅಷ್ಟೇ ಎಂದಿದ್ದಾರೆ. ಆ ಮೂಲಕ ನ್ಯಾಯಾಂಗ ನಿಂದನೆ ತೂಗುಗತ್ತಿಯಿಂದ ಎಚ್ಚೆತ್ತುಕೊಂಡಿದ್ದಾರೆ.

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ

ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಿಸುವ ನಿಟ್ಟಿನಲ್ಲಿ ಕಸ್ತೂರಿ ರಂಗನ್​ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಭಾರಿ ವಿರೋಧ ಮಧ್ಯೆ ಇಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. 

ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ

ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ

ವಿಧಾನಸೌಧದಲ್ಲಿ ಇಂದು ಸಂಪುಟ ಸಭೆ ನಡೆದಿದ್ದು, ಹಲವು ವಿಚಾರಗಳು ಚರ್ಚೆ ಮಾಡಲಾಗಿದೆ. ಅದರಲ್ಲಿ ಪ್ರಮುಖವಾಗಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಎಚ್​​​ಎಂಟಿಗೆ ಅರಣ್ಯ ಭೂಮಿ ಅಕ್ರಮ ಪರಭಾರೆ ಆರೋಪ: ಹಿರಿಯ ಅಧಿಕಾರಿಗಳಿಗೂ ಸಚಿವ ಈಶ್ವರ ಖಂಡ್ರೆ ನೋಟಿಸ್

ಎಚ್​​​ಎಂಟಿಗೆ ಅರಣ್ಯ ಭೂಮಿ ಅಕ್ರಮ ಪರಭಾರೆ ಆರೋಪ: ಹಿರಿಯ ಅಧಿಕಾರಿಗಳಿಗೂ ಸಚಿವ ಈಶ್ವರ ಖಂಡ್ರೆ ನೋಟಿಸ್

ಎಚ್​​​ಎಂಟಿಗೆ ಅರಣ್ಯ ಭೂಮಿ ಪರಭಾರೆ ಸಂಬಂಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹಾಗೂ ಕರ್ನಾಟಕ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಡುವೆ ವಾಕ್ಸಮರ ನಡೆದಿತ್ತು. ಎಚ್​ಎಂಟಿ ಪರ ವಹಿಸಿದ್ದ ಕುಮಾರಸ್ವಾಮಿ ರಾಜ್ಯ ಸರ್ಕಾರ ಹಾಗೂ ಖಂಡ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಪ್ರಕರಣ ಮತ್ತೊಂದು ಹಂತಕ್ಕೆ ಹೋಗಿದೆ. ವಿವರ ಇಲ್ಲಿದೆ.

ಹೈಕೋರ್ಟ್​ ತೀರ್ಪು ಬಳಿಕ ಸಿಎಂ ಟೆನ್ಷನ್​​: ಶಾಸಕಾಂಗ ಪಕ್ಷ, ಸಚಿವ ಸಂಪುಟ ಸಭೆ ಕರೆದ ಸಿದ್ದರಾಮಯ್ಯ

ಹೈಕೋರ್ಟ್​ ತೀರ್ಪು ಬಳಿಕ ಸಿಎಂ ಟೆನ್ಷನ್​​: ಶಾಸಕಾಂಗ ಪಕ್ಷ, ಸಚಿವ ಸಂಪುಟ ಸಭೆ ಕರೆದ ಸಿದ್ದರಾಮಯ್ಯ

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ಹೈಕೋರ್ಟ್​ ಎತ್ತಿ ಹಿಡಿದಿದೆ. ಈ ತೀರ್ಪಿನಿಂದ ಗೊಂದಲಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷ ಮತ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಕೆಐಎಡಿಬಿ ಭೂಮಿ ಹಂಚಿಕೆ ಪ್ರಕರಣ: ಖರ್ಗೆ ಕುಟುಂಬಕ್ಕೂ ಬಿಸಿಮುಟ್ಟಿಸಲು ಮುಂದಾದ ರಾಜ್ಯಪಾಲರು

ಕೆಐಎಡಿಬಿ ಭೂಮಿ ಹಂಚಿಕೆ ಪ್ರಕರಣ: ಖರ್ಗೆ ಕುಟುಂಬಕ್ಕೂ ಬಿಸಿಮುಟ್ಟಿಸಲು ಮುಂದಾದ ರಾಜ್ಯಪಾಲರು

ಒಂದೆಡೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟು ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ರಾಜ್ಯಪಾಲ ಥಾವರ್​​ ಚಂದ್ ಗೆಹ್ಲೋಟ್ ಇದೀಗ ಇನ್ನಿಬ್ಬರು ಸಚಿವ ವಿರುದ್ಧವೂ ತನಿಖೆಗೆ ಅನುಮತಿ ಕೊಟ್ಟು ಸರ್ಕಾರವನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಲಿದ್ದಾರೆಯೇ ಎಂಬ ಅನುಮಾನ ಈಗ ಮೂಡಿದೆ. ಇದಕ್ಕೆ ಕಾರಣ, ನಡೆದಿರುವ ಬೆಳವಣಿಗೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ರಾಜ್ಯಪಾಲರ ನಡೆ ವಿರುದ್ದ ಕೈ ಪಡೆ ಕೆಂಡಾಮಂಡಲ:  ರಾಷ್ಟ್ರಪತಿಗೆ ದೂರು ನೀಡಲು ಚಿಂತನೆ!

ರಾಜ್ಯಪಾಲರ ನಡೆ ವಿರುದ್ದ ಕೈ ಪಡೆ ಕೆಂಡಾಮಂಡಲ: ರಾಷ್ಟ್ರಪತಿಗೆ ದೂರು ನೀಡಲು ಚಿಂತನೆ!

ಹಿಂದೆ ನಡೆದಿದೆ ಎನ್ನಲಾದ ಹಗರಣದ ದಾಖಲೆ, ಆರೋಪಕ್ಕೆ ಸ್ಪಷ್ಟನೆ ಸೇರಿದಂತೆ ಹಲವು ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರು ಮೇಲಿಂದ ಮೇಲೆ ಪತ್ರ ಬರೆಯುತ್ತಿದ್ದಾರೆ.‌ ಒಂದು ರೀತಿಯಲ್ಲಿ ಸರ್ಕಾರಕ್ಕೆ ಮಗ್ಗಲುಮುಳ್ಳಾಗಿರುವ ರಾಜ್ಯಪಾಲರ ವಿರುದ್ಧ ಕೈ ಪಡೆ ಸಮರ ಸಾರುತ್ತಿದೆ. ಕರುನಾಡಲ್ಲಿ ಇದೀಗ ರಾಜ್ಯ ಸರ್ಕಾರ ವರ್ಸಸ್ ರಾಜಭವನ ಅನ್ನುವಂತಾಗಿದೆ.

ಮುನಿರತ್ನಗೆ ಬಿಗ್ ಶಾಕ್: ಶಾಸಕ ಸ್ಥಾನದಿಂದ ಅಮಾನತುಗೊಳಿಸುವಂತೆ ಸ್ಪೀಕರ್​ಗೆ ಕಾನೂನು ಸಚಿವ ಪತ್ರ

ಮುನಿರತ್ನಗೆ ಬಿಗ್ ಶಾಕ್: ಶಾಸಕ ಸ್ಥಾನದಿಂದ ಅಮಾನತುಗೊಳಿಸುವಂತೆ ಸ್ಪೀಕರ್​ಗೆ ಕಾನೂನು ಸಚಿವ ಪತ್ರ

ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸಂಕಷ್ಟಗಳ ಮೇಲೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ಜಾತಿ ನಿಂದನೆ, ಬೆದರಿಕೆ ಆರೋಪದ ಮೇಲೆ ಜೈಲು ಸೇರಿದ್ದ ಮುನಿರತ್ನ ಜಾಮೀನುನ ಮೇಲೆ ಬಿಡುಗಡೆಯಾಗಿದ್ದರು. ಆದ್ರೆ, ಇದೀಗ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲು ಸೇರಿದ್ದು, ಈಗ ಸದನದ ಸದಸ್ಯತ್ವದಿಂದ ಮುನಿರತ್ನ ಅವರನ್ನ ಅಮಾನತು ಮಾಡುವಂತೆ ಸ್ಪೀಕರ್​ಗೆ ಪತ್ರ ಬರೆಯಲಾಗಿದೆ.

ದಸರಾ ಆನೆಗಳೊಂದಿಗೆ ಫೋಟೋ ಶೂಟ್, ರೀಲ್ಸ್‌ಗೆ ಬ್ರೇಕ್‌: ಅಧಿಕಾರಿಗಳಿಗೆ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ

ದಸರಾ ಆನೆಗಳೊಂದಿಗೆ ಫೋಟೋ ಶೂಟ್, ರೀಲ್ಸ್‌ಗೆ ಬ್ರೇಕ್‌: ಅಧಿಕಾರಿಗಳಿಗೆ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ

ಮೈಸೂರು ಅರಮನೆ ಆವರಣದಲ್ಲಿ ಧನಂಜಯ ಹಾಗೂ ಕಂಜನ್‌ ಆನೆಗಳ ಕಾದಾಟವಾಗಿದ್ದು, ಇದು ಆತಂಕಕ್ಕೆ ಕಾರಣವಾಗಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಖಡಕ್ ಸಂದೇಶವನ್ನು ರವಾನಿಸಿದ್ದಾರೆ. ದಸರಾ ಆನೆಗಳೊಂದಿಗೆ ಫೋಟೋ ಶೂಟ್‌ ಹಾಗೂ ವಿಡಿಯೋ, ರೀಲ್ಸ್​​ ಮಾಡದಂತೆ ಈಶ್ವರ ಖಂಡ್ರೆ ಖಡಕ್​ ಸೂಚನೆ ನೀಡಿದ್ದಾರೆ.