ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.
ಚುನಾವಣೆ ಮುಗೀತಿದ್ದಂತೆಯೇ ಕಾಂಗ್ರೆಸ್ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಸಚಿವ ಸ್ಥಾನಕ್ಕಾಗಿ ಶಾಸಕರ ದೆಹಲಿ ಯಾತ್ರೆ ಶುರು
ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್ ರಚನೆಯ ಕೂಗು ಕೇಳಿಬರುತ್ತಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಏಪ್ರಿಲ್ 12 ರ ಭಾನುವಾರ ದೆಹಲಿಗೆ ತೆರಳಲಿದ್ದಾರೆ. ಅಶೋಕ್ ಪಟ್ಟಣ್ ನೇತೃತ್ವದಲ್ಲಿ ಹೈಕಮಾಂಡ್ ಭೇಟಿ ಮಾಡಲಿರುವ ಶಾಸಕರು, ತಮಗೂ ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರಲಿದ್ದಾರೆ.
- Prasanna Gaonkar
- Updated on: Apr 11, 2026
- 9:13 am
ಸರ್ಕಾರಿ ವಸತಿ ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಚಿವ ಮಹದೇವಪ್ಪ ಮಹತ್ವದ ಘೋಷಣೆ
ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ದಾಖಲೆ ರಿಸಲ್ಟ್ ಇದಾಗಿದೆ. ರಾಜ್ಯ ಸರ್ಕಾರಿ ವಸತಿ ಶಾಲೆಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ.97.22 ದಾಖಲೆಯ ಉತ್ತೀರ್ಣತೆ ಸಾಧಿಸಿವೆ. ಸಮಾಜಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಈ ಯಶಸ್ಸನ್ನು ಶ್ಲಾಘಿಸಿದ್ದು, ಗ್ರಾಮೀಣ ಹಾಗೂ ಹೆಣ್ಣು ಮಕ್ಕಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ. JEE, NEET, KCET ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ಭರವಸೆ ನೀಡಿದ್ದಾರೆ.
- Prasanna Gaonkar
- Updated on: Apr 10, 2026
- 5:12 pm
ರೋಗಿಗಳಿಗೆ ಔಷಧಿ ಕೊರತೆ ಆತಂಕ: ಆರೋಗ್ಯ ಸಚಿವರಿಗೆ ಫಾರ್ಮಾಸ್ಯುಟಿಕಲ್ಸ್ ಕಂಪನಿ ಪತ್ರ
ಯುದ್ಧದ ಕರಿನೆರಳು ಮತ್ತು ಎಲ್ಪಿಜಿ ಗ್ಯಾಸ್ ಕೊರತೆಯು ದೇಶದಲ್ಲಿ ಔಷಧ ತಯಾರಿಕೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ವಿದೇಶದಿಂದ ಬರಬೇಕಿದ್ದ ಡ್ರಗ್ಸ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಇದರಿಂದ ಉತ್ಪಾದನೆ ಕಷ್ಟವಾಗುತ್ತಿದೆ ಎಂದು ಫಾರ್ಮಾಸ್ಯುಟಿಕಲ್ ಕಂಪನಿಗಳು ಆರೋಗ್ಯ ಸಚಿವರಿಗೆ ಪತ್ರ ಬರೆದಿವೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಔಷಧಿಗಳ ಕೊರತೆ ಎದುರಾಗುವ ಭೀತಿ ಇದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
- Prasanna Gaonkar
- Updated on: Apr 9, 2026
- 3:48 pm
ಚಾರಣಿಗರ ಸುರಕ್ಷತೆಗೆ ಸರ್ಕಾರದ ಮಾಸ್ಟರ್ ಪ್ಲಾನ್: ಕಡ್ಡಾಯವಾಗಲಿದೆ ಟ್ರ್ಯಾಕಿಂಗ್ ಆ್ಯಪ್, ವಿಮೆ ! ಸಚಿವ ಈಶ್ವರ ಖಂಡ್ರೆ ಸೂಚನೆ
ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆ್ಯಪ್, ವಿಮೆ ಜಾರಿ ಸೇರಿದಂತೆ ಹೊಸ SOP ಜಾರಿಗೆ ಅರಣ್ಯ ಇಲಾಖೆ ನಿರ್ಧರಿಸಿದೆ. ತಡಿಯಂಡಮೋಳ್ನ ಶರಣ್ಯ ನಾಪತ್ತೆ, ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆಯಾದಂಥ ಪ್ರಕರಣಗಳನ್ನು ತಡೆಯಲು ಸಚಿವ ಈಶ್ವರ ಖಂಡ್ರೆ ಈ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಸ್ತಾವಿತ ಎಸ್ಒಪಿಯಲ್ಲಿ ಏನೇನಿದೆ ಎಂಬ ವಿವರ ಇಲ್ಲಿದೆ.
- Prasanna Gaonkar
- Updated on: Apr 9, 2026
- 11:00 am
ಎಲ್ಪಿಜಿ ಕೊರತೆ: ರಾಜ್ಯ ಸರ್ಕಾರದಿಂದ ಆಟೋ ಚಾಲಕರಿಗೆ ಮಹತ್ವದ ಪ್ರಕಟಣೆ
ಗ್ಯಾಸ್ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೆ, ಆಟೋದವರ ಬದುಕು ಕೂಡಾ ಬೀದಿಗೆ ಬರ್ತಿದೆ. ಗಂಟೆಗಟ್ಟಲ್ಲೇ ಕ್ಯೂ ನಿಂತ್ರೂ ಆಟೋದವರಿಗೆ ಗ್ಯಾಸ್ ಸಿಗುತ್ತಿಲ್ಲ. ಹೀಗಿರುವಾಗಿ ರಾಜ್ಯದಲ್ಲಿ ಆಟೋ ಎಲ್ಪಿಜಿ ಸರಬರಾಜಿನ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ. ಸರಬರಾಜಿನಲ್ಲಿ ವ್ಯತ್ಯಾಸ ಕಂಡುಬಂದಿದ್ದರೂ ಯಾವುದೇ ತೊಂದರೆ ಇಲ್ಲ. ಆಟೋ ಚಾಲಕರಿಗೆ ಆತಂಕ ಬೇಡ ಎಂದಿದೆ.
- Prasanna Gaonkar
- Updated on: Apr 8, 2026
- 3:23 pm
SSLC ಪರೀಕ್ಷೆಯ ತೃತೀಯ ಭಾಷೆ ಅಂಕಕ್ಕೆ ಕೊಕ್: ನಿರ್ಧಾರ ಪರಿಶೀಲಿಸುವಂತೆ ಸಿಎಸ್ಗೆ ರಾಜ್ಯಪಾಲರ ಪತ್ರ
SSLC ತೃತೀಯ ಭಾಷೆಯ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ತೃತೀಯ ಭಾಷೆ ಭಾಷಾವೈವಿಧ್ಯತೆ ಮತ್ತು ಬೌದ್ಧಿಕ ಬೆಳವಣಿಗೆಗೆ ಮುಖ್ಯ. ಗ್ರೇಡಿಂಗ್ ಶೈಕ್ಷಣಿಕ ಪ್ರಾಮುಖ್ಯತೆ ಮತ್ತು ವಿದ್ಯಾರ್ಥಿಗಳ ಆಸಕ್ತಿಯ ಮೇಲೆ ಪರಿಣಾಮ ಬೀರಬಹುದು ಎಂಬ ಕಳವಳವನ್ನು ಅವರು ಪತ್ರಮುಖೇನ ವ್ಯಕ್ತಪಡಿಸಿದ್ದಾರೆ.
- Prasanna Gaonkar
- Updated on: Apr 3, 2026
- 11:40 am
ಬೆಂಗಳೂರು ಹೋಟೆಲ್ ಮಾಲೀಕರಿಗೆ ಗುಡ್ನ್ಯೂಸ್ ಕೊಟ್ಟ ಸಚಿವ ಮುನಿಯಪ್ಪ
ಬೆಂಗಳೂರಿನ ಹೋಟೆಲ್ಗಳಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ಸಮಸ್ಯೆಯನ್ನು ಪರಿಹರಿಸಲು ಸಚಿವ ಕೆ.ಹೆಚ್. ಮುನಿಯಪ್ಪ ಕ್ರಮ ಕೈಗೊಂಡಿದ್ದಾರೆ. ನಾಳೆ 17,500 ವಾಣಿಜ್ಯ ಸಿಲಿಂಡರ್ಗಳನ್ನು ಹೋಟೆಲ್ಗಳಿಗೆ ವಿತರಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ. ದೇಶೀಯ ಸಿಲಿಂಡರ್ ವಿತರಣೆಯಲ್ಲೂ ವಿಳಂಬವಾಗಿದ್ದು, ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
- Prasanna Gaonkar
- Updated on: Mar 30, 2026
- 3:46 pm
ಕೊನೆಗೂ ದಾವಣಗೆರೆ ಬಂಡಾಯ ಶಮನ: ಅಧಿಕೃತವಾಗಿ ತಮ್ಮ ನಿಲುವು ಘೋಷಿಸಿದ ಪೈಲ್ವಾನ್
ದಾವಣಗೆರೆ ಉಪ ಚುನಾವಣೆಯಲ್ಲಿ (Davanagere South By Election) ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಹಿರಿಯ ನಾಯಕರ ಸಂಧಾನದ ಬಳಿಕ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಸಕ್ಸಸ್ ಆಗಿದ್ದು, ಯಾವುದೇ ಷರತ್ತುಗಳಿಲ್ಲದೆ ಪಕ್ಷದ ಅಧಿಕೃತ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಪೈಲ್ವಾನ್ ಘೋಷಿಸಿದ್ದಾರೆ.
- Prasanna Gaonkar
- Updated on: Mar 27, 2026
- 5:20 pm
ಉಪಚುನಾವಣೆ: ದಾವಣಗೆರೆ, ಬಾಗಲಕೋಟೆ ಗೆಲ್ಲಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್! ಸಚಿವರು, ಶಾಸಕರಿಗೆ ಜವಾಬ್ದಾರಿ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್, ಗೆಲುವಿಗಾಗಿ ವಿಶೇಷ ರಣತಂತ್ರ ರೂಪಿಸಿದೆ. ಸಿಎಲ್ಪಿ ಸಭೆಯಲ್ಲಿ ಸಚಿವರು ಮತ್ತು ಶಾಸಕರಿಗೆ ಕ್ಷೇತ್ರದಲ್ಲೇ ಮೊಕ್ಕಾಂ ಹೂಡಲು ಉಸ್ತುವಾರಿ ಸುರ್ಜೇವಾಲ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯವಾಗಿ ಅಲ್ಪಸಂಖ್ಯಾತ ಮತಗಳ ಭೇಟೆಗೆ ಜಮೀರ್ ಅಹ್ಮದ್ ಖಾನ್ ಮತ್ತು ತನ್ವೀರ್ ಸೇಠ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.
- Prasanna Gaonkar
- Updated on: Mar 26, 2026
- 7:26 am
ಅಧಿಕಾರಿಗಳಿಗೆ ನಾನು ಬಂಟ್ವಾಳ ಶಾಸಕ ಎಂದೇ ಗೊತ್ತಿಲ್ಲ, ರಮಾನಾಥ್ ರೈರನ್ನೇ ಸಚಿವ ಎಂದೇ ಭಾವಿಸಿದ್ದಾರೆ: ರಾಜೇಶ್ ನಾಯಕ್ ಆಕ್ರೋಶ
ವಿಧಾನಸಭೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಯ ವಿಷಯ ಭಾರಿ ಚರ್ಚೆಗೆ ಕಾರಣವಾಯಿತು. ಚುನಾಯಿತ ಶಾಸಕರನ್ನು ಕಡೆಗಣಿಸಿ ಅಧಿಕಾರಿಗಳು ಪರಾಜಿತ ಅಭ್ಯರ್ಥಿಗಳಿಗೆ ಪ್ರಾಮುಖ್ಯತೆ ನೀಡುತ್ತಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿಗಳ ಹಣ ಬಿಡುಗಡೆಗೆ ಮಾಜಿ ಶಾಸಕರ ಹೆಸರು ಬಳಸಲಾಗುತ್ತಿದ್ದು, ಇದು ಶಾಸಕರ ಹಕ್ಕುಚ್ಯುತಿ ಎಂದು ಸದನದಲ್ಲಿ ತೀವ್ರ ವಾಗ್ವಾದ ನಡೆಯಿತು. ಈ ಸಮಸ್ಯೆ ವ್ಯಾಪಕವಾಗಿದ್ದು, ಸರ್ಕಾರ ಮಧ್ಯಪ್ರವೇಶಿಸುವಂತೆ ಒತ್ತಾಯಿಸಲಾಯಿತು.
- Prasanna Gaonkar
- Updated on: Mar 24, 2026
- 9:28 pm
ಉಪ ಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ‘ಕೈ’ ಅಭ್ಯರ್ಥಿಗಳ ಹೆಸರು ಘೋಷಣೆ
ನಾಯಕರ ನಡುವಿನ ತೀವ್ರ ಜಿದ್ದಾ ಜಿದ್ದಿನ ಸ್ಪರ್ಧೆಯ ನಡುವೆ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅದಾಗಲೇ ಘೋಷಿಸಿದ್ದರೂ, ಕಾಂಗ್ರೆಸ್ ಮಾತ್ರ ಸಾಕಷ್ಟು ಅಳೆದು ತೂಗಿ ಕ್ಯಾಂಡಿಡೇಟ್ಗಳನ್ನು ಫೈನಲ್ ಮಾಡಿದೆ. ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.
- Prasanna Gaonkar
- Updated on: Mar 22, 2026
- 12:16 pm
ಉಪ ಚುನಾವಣೆ: ಕಾಂಗ್ರೆಸ್ನಲ್ಲಿ ಬಗೆಹರಿಯದ ಟಿಕೆಟ್ ಕಗ್ಗಂಟು; ಮುಂದುವರಿದ ಗೊಂದಲ
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬದೊಳಗೆ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆದಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತ ಸಮುದಾಯ ಮತ್ತು ಸಚಿವ ಮಲ್ಲಿಕಾರ್ಜುನ್ ಪುತ್ರನ ನಡುವೆ ಟಿಕೆಟ್ ಗುದ್ದಾಟ ಸೃಷ್ಟಿಯಾಗಿದೆ. ಅಭ್ಯರ್ಥಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಡುವೆಯೇ ಭಿನ್ನಾಭಿಪ್ರಾಯ ವ್ಯಕ್ತವಾಗುತ್ತಿರುವ ಕಾರಣ ಈವರೆಗೀ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ ಎನ್ನಲಾಗಿದೆ.
- Prasanna Gaonkar
- Updated on: Mar 19, 2026
- 11:39 am