ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.
ಅಪೆಕ್ಸ್ ಬ್ಯಾಂಕ್ ಜಟಾಪಟಿ: ರಾಜಣ್ಣ ಭೇಟಿ ಮಾಡಿದ್ದ ಡಿಕೆ ಶಿವಕುಮಾರ್ಗೆ ಚೆಕ್ಮೇಟ್ ಕೊಟ್ಟ ಸಿದ್ದರಾಮಯ್ಯ!
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿದೆ. ತಮ್ಮ ಹೆಚ್ಚುವರಿ ಕಾರ್ಯದರ್ಶಿ ಜಿಯಾವುಲ್ಲಾರನ್ನೇ ಅಪೆಕ್ಸ್ ಬ್ಯಾಂಕ್ ಆಡಳಿತಾಧಿಕಾರಿಯನ್ನಾಗಿ ಸಿದ್ದರಾಮಯ್ಯ ನೇಮಕ ಮಾಡಿದ್ದಾರೆ. ಮತ್ತೊಂದೆಡೆ, ಡಿಕೆ ಶಿವಕುಮಾರ್ ಸಂಬಂಧಿಯಾಗಿರುವ ಎಂಎಲ್ಸಿ ರವಿ ಕೂಡ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಇದರಿದ ಆಯ್ಕೆ ಪ್ರಕ್ರಿಯೆ ಮತ್ತಷ್ಟು ಜಟಿಲವಾಗುವ ಸಾಧ್ಯತೆ ಇದೆ.
- Prasanna Gaonkar
- Updated on: Dec 24, 2025
- 6:58 am
ರಾಹುಲ್ ಗಾಂಧಿಗೆ ಮತ್ತೊಂದು ಪತ್ರ ಬರೆದ ಮಾಜಿ ಸಚಿವ ಕೆ.ಎನ್. ರಾಜಣ್ಣ: ಮಹತ್ವದ ವಿಷಯಗಳ ಉಲ್ಲೇಖ
ರಾಹುಲ್ ಗಾಂಧಿಗೆ ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿದ್ದ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಲೆಟರ್ ಬರೆದಿದ್ದಾರೆ.ಈ ಪತ್ರದಲ್ಲಿ ತಮ್ಮ 'ವೋಟ್ ಚೋರಿ' ಹೇಳಿಕೆಯ ಹಿಂದಿನ ಉದ್ದೇಶವನ್ನು ಅವರು ಸ್ಪಷ್ಟಪಡಿಸಿದ್ದಾರೆ. ತಮ್ಮ ಹೇಳಿಕೆ ಹಿಂದಿನ ಅರ್ಥ ಏನಾಗಿತ್ತು ಎಂದು ಸಂಭಾಷಣೆ ಸಮೇತ ಅವರು ಉಲ್ಲೇಖಿಸಿದ್ದು, ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಿದವರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಜೊತೆಗೆ ರಾಹುಲ್ ಗಾಂಧಿ ಅವರ ಭೇಟಿಗೂ ಸಮಯ ಕೇಳಿದ್ದಾರೆ.
- Prasanna Gaonkar
- Updated on: Dec 23, 2025
- 11:45 am
ಕಾಂಗ್ರೆಸ್ ಹೈಕಮಾಂಡೇ ‘ಕೈ’ ಚೆಲ್ಲಿ ಕೂತಿತಾ? ಮಲ್ಲಿಕಾರ್ಜುನ ಖರ್ಗೆ ‘ಲೋಕಲ್ ಸೂತ್ರ’ವನ್ನು ಸುತಾರಂ ಒಪ್ಪದ ಸಿಎಂ ಸಿದ್ದರಾಮಯ್ಯ!
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಗೊಂದಲ ತೀವ್ರಗೊಂಡಿದ್ದು, ರಾಜ್ಯ ನಾಯಕರೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ. ಆದರೆ, ರಾಹುಲ್ ಗಾಂಧಿ ನಿರ್ಧಾರಕ್ಕೆ ಬದ್ಧ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತೆ ಚೆಂಡನ್ನು ಹೈಕಮಾಂಡ್ ಅಂಗಳಕ್ಕೆ ಎಸೆದಿದ್ದಾರೆ. ಈನಡುವೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವುದು ಕುತೂಹಲ ಮೂಡಿಸಿದೆ.
- Prasanna Gaonkar
- Updated on: Dec 23, 2025
- 6:56 am
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ಎಐಸಿಸಿ ಕಾರ್ಯಕಾರಿಣಿ ಸಭೆಯ ನೆಪದಲ್ಲಿ ಅದಕ್ಕೂ ಮುನ್ನ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಕುರ್ಚಿ ಬದಲಾವಣೆಯ ಕುರಿತು ಮಾತುಕತೆ ನಡೆಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಪರ ಹೈಕಮಾಂಡ್ ಇದೆ ಎಂಬ ಹೇಳಿಕೆಗಳ ನಡುವೆ, ದೆಹಲಿಯಲ್ಲಿ ನಡೆಯಲಿರುವ ಈ ಸಭೆ ಎಲ್ಲರ ಗಮನ ಸೆಳೆದಿದೆ.
- Prasanna Gaonkar
- Updated on: Dec 22, 2025
- 8:03 am
ಡಿಕೆ ಶಿವಕುಮಾರ್ ಭೇಟಿ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಡಿ.ಕೆ. ಶಿವಕುಮಾರ್ ಭೇಟಿ ಕುರಿತು ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಯಾರನ್ನಾದರೂ ಭೇಟಿ ಮಾಡಬಹುದು. ಅದರಲ್ಲಿ ಯಾವುದೇ ರಾಜಕೀಯವಿಲ್ಲ, ಪಕ್ಷ ಸಂಘಟನೆ ಕುರಿತು ಚರ್ಚಿಸಲಾಯಿತು ಎಂದು ರಾಜಣ್ಣ ತಿಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.
- Prasanna Gaonkar
- Updated on: Dec 21, 2025
- 11:27 am
ಸದನದಲ್ಲಿ ಚರ್ಚೆ ಬೆನ್ನಲ್ಲೇ ಶಕ್ತಿ ಯೋಜನೆ ಹಣ ಬಾಕಿ ರಿಲೀಸ್: ಯಾವ ನಿಗಮಕ್ಕೆ ಎಷ್ಟು?
ಶಕ್ತಿ ಯೋಜನೆ ಮೂಲಕ ಲಕ್ಷಾಂತರ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದರೂ, ಇದು ರಾಜ್ಯ ಸಾರಿಗೆ ನಿಗಮಗಳಿಗೆ ಆರ್ಥಿಕ ಸಂಕಷ್ಟ ತಂದಿದೆ. ಈ ಬಗ್ಗೆ ಸದನದಲ್ಲೂ ಚರ್ಚೆ ಬೆನ್ನಲ್ಲೇ ಇದೀಗ ನವೆಂಬರ್ ತಿಂಗಳ ಅನುದಾನವಾಗಿ 441 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ ಶಕ್ತಿ ಯೋಜನೆಯ ಬಾಕಿ 4006 ಕೋಟಿ ರೂ. ಹಣ ಹಾಗೆಯೇ ಉಳಿದಿದೆ.
- Prasanna Gaonkar
- Updated on: Dec 18, 2025
- 4:15 pm
ಡಿಕೆಶಿಗೆ ಸತೀಶ್ ಸೆಡ್ಡು: ಡಿನ್ನರ್ ಮೀಟಿಂಗ್ ನೆಪದಲ್ಲಿ ಸಿಎಂ ಬಣದಿಂದಲೂ ಶಕ್ತಿ ಪ್ರದರ್ಶನ
ಬೆಳಗಾವಿ ಅಧಿವೇಶನದ ನಡುವೆ ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿವಾದ ಮತ್ತೆ ತೀವ್ರಗೊಂಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಆಯೋಜಿಸಿದ ಡಿನ್ನರ್ ಮೀಟಿಂಗ್ಗೆ ಪ್ರತಿಯಾಗಿ, ಸಿಎಂ ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಹೊಳಿ ಮತ್ತೊಂದು ಸಭೆ ನಡೆಸಿದ್ದಾರೆ. ಈ ಡಿನ್ನರ್ ರಾಜಕೀಯವು ಸಿದ್ದರಾಮಯ್ಯ-ಡಿಕೆಶಿ ಬಣಗಳ ನಡುವಿನ ಆಂತರಿಕ ಕಲಹ ಮತ್ತು ಶಕ್ತಿ ಪ್ರದರ್ಶನಕ್ಕೆ ಹಿಡಿದ ಕೈಗನ್ನಡಿಯಂತಿದೆ.
- Prasanna Gaonkar
- Updated on: Dec 18, 2025
- 11:47 am
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಸಾರಿಗೆ ನಿಗಮಗಳಿಗೆ ಶಕ್ತಿ ಅಲ್ಲ, ಶಾಪ! 4 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತ ಬಾಕಿ
ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳು ಲಾಭದಲ್ಲಿವೆ ಎಂದು ಸಿಎಂ ಹಾಗೂ ಸಾರಿಗೆ ಸಚಿವರು ಹೇಳಿದ್ದರು. ಆದರೆ, ಶಕ್ತಿ ಯೋಜನೆ ಜಾರಿಯಿಂದ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳು ನಷ್ಟಕ್ಕೆ ಸಿಲುಕಿರುವುದನ್ನು ಅಂಕಿಅಂಶಗಳೇ ದೃಢಪಡಿಸಿವೆ. ರಾಜ್ಯ ಸರ್ಕಾರ 4,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತ ಬಾಕಿ ಉಳಿಸಿಕೊಂಡಿದ್ದು, ಸಾರಿಗೆ ನಿಗಮಗಳನ್ನು ಸಂಕಷ್ಟಕ್ಕೆ ಈಡುಮಾಡಿದೆ.
- Prasanna Gaonkar
- Updated on: Dec 18, 2025
- 10:57 am
ಮೂರು ದಿನ ದೆಹಲಿಯಲ್ಲಿಯೇ ಉಳಿಯಲಿರುವ ಡಿಸಿಎಂ ಡಿಕೆ ಶಿವಕುಮಾರ್: ವರಿಷ್ಠರ ಅಂಗಳದಲ್ಲಿ ನಡೆಯುತ್ತಾ ಕುರ್ಚಿ ಕದನದ ಚರ್ಚೆ?
ಕರ್ನಾಟಕ ಕಾಂಗ್ರೆಸ್ ನಾಯಕತ್ವದ ವಿಚಾರ ದಿನಕ್ಕೊಂದು ಮಹತ್ವ ಪಡೆದುಕೊಳ್ಳುತ್ತಿದೆ. ನಾಯಕರು ಒಳಗೊಳಗೆ ತಂತ್ರ ಪ್ರತಿತಂತ್ರ ಹೆಣೆಯುತ್ತಲೇ ಇದ್ದಾರೆ. ಈ ನಡುವೆ ರಾಜ್ಯ ಕಾಂಗ್ರೆಸ್ ಪಡೆ ದೆಹಲಿಗೆ ತೆರಳುತ್ತಿದ್ದು, ವೋಟ್ ಚೋರಿ ಅಭಿಯಾನದ ಜೊತೆಗೆ ಕುರ್ಚಿ ಚರ್ಚೆಯೂ ನಡೆಯಲಿದೆಯಾ ಎಂಬ ಸಂಶಯ ಮೂಡಿದೆ. ಡಿಸಿಎಂ ಡಿಕೆ ಶಿವಕುಮಾರ್ ಮೂರು ದಿನ ದೆಹಲಿಯಲ್ಲಿಯೇ ಉಳಿಯಲಿರುವುದು ಕುತೂಹಲ ಮೂಡಿಸಿದೆ.
- Prasanna Gaonkar
- Updated on: Dec 13, 2025
- 1:37 pm
ಕಾಂಗ್ರೆಸ್ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ? ಆಪ್ತರ ಬಳಿ ಸ್ಫೋಟಕ ಮಾಹಿತಿ ಹಂಚಿಕೊಂಡಿರುವ ಡಿಸಿಎಂ!
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲೇ ಕಾಂಗ್ರೆಸ್ ಮತ್ತೆ ಇಭ್ಭಾಗವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಪ್ರತ್ಯೇಕ ಡಿನ್ನರ್ ಮೀಟಿಂಗ್ ನಡೆಸಿದ ನಂತರ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಶಾಸಕರು ತಮ್ಮೊಂದಿಗಿದ್ದಾರೆ ಎಂದು ಆಪ್ತರ ಬಳಿ ಡಿಕೆ ಶಿವಕುಮಾರ್ ಹೇಳಿಕೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.
- Prasanna Gaonkar
- Updated on: Dec 12, 2025
- 12:28 pm
ಕಷ್ಟಪಟ್ಟಿದ್ದ ಡಿ.ಕೆ. ಶಿವಕುಮಾರ್ಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಬಗ್ಗೆ ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನದ ನಂತರ ಅವರಿಗೆ ಈ ಅವಕಾಶ ಸಿಗಲಿದೆ . ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನವಲ್ಲ, ಸೌಹಾರ್ದಯುತ ಭೋಜನಕೂಟ ಎಂದಿರುವ ಶಾಸಕ, ಕಾಂಗ್ರೆಸ್ ಪಕ್ಷದಲ್ಲಿ ವರಿಷ್ಠರ ನಿರ್ಧಾರವೇ ಅಂತಿಮ ಎಂದು ತಿಳಿಸಿದ್ದಾರೆ.
- Prasanna Gaonkar
- Updated on: Dec 12, 2025
- 12:13 pm
ಒಳ ಮೀಸಲಾತಿ ಬಡ್ತಿಗೆ ಒಪ್ಪಿಗೆ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿಸುವುದಕ್ಕೆ ಸಂಪುಟ ಅಸ್ತು
ಬೆಳಗಾವಿ ಅಧಿವೇಶನದ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಡಿಸೆಂಬರ್ 11) ಸುವರ್ಣ ಸೌಧದಲ್ಲೇ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ವಿಧೇಯಕಗಳ ಮಂಡನೆ ಬಗ್ಗೆ ಚರ್ಚೆ ಆಯ್ತು. ಅದರಲ್ಲೂ ಮುಖ್ಯವಾಗಿ ಒಳ ಮೀಸಲಾತಿ ಅಡಿಯಲ್ಲಿ ಬಡ್ತಿ ನೀಡಲು ಒಪ್ಪಿಗೆ ಸೂಚಿಸಿದೆ. ಅಷ್ಟೇ ಅಲ್ಲದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವುದಕ್ಕೆ ಸಂಪುಟ ಅಸ್ತು ಎಂದಿದೆ. ಆದ್ರೆ, ಕೆಲ ಷರತ್ತುಗಳನ್ನು ವಿಧಿಸಿದೆ. ಇನ್ನು ಸಂಪುಟ ಸಭೆ ತೆಗೆದುಕೊಂಡು ತೀರ್ಮಾನಗಳು ಈ ಕೆಳಗಿನಂತಿವೆ.
- Prasanna Gaonkar
- Updated on: Dec 11, 2025
- 10:49 pm