ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.
ಸಾಮಾಜಿಕ ಬಹಿಷ್ಕಾರ ಹಾಕುವ ಮುನ್ನ ಜೋಕೆ!: ಹೊಸ ಕಾನೂನು ತರಲು ಮುಂದಾಗಿದೆ ರಾಜ್ಯ ಸರ್ಕಾರ
ಸಾಮಾಜಿಕ ಬಹಿಷ್ಕಾರ ತಡೆಗಟ್ಟಲು ಹೊಸ ಕಾನೂನು ತರಲು ಕರ್ನಾಟಕ ಸರ್ಕಾರ ಸಿದ್ಧತೆ ನಡೆಸಿದೆ. 'ಕರ್ನಾಟಕ ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ ವಿಧೇಯಕ-2025'ಕ್ಕೆ ಸಚಿವ ಸಂಪುಟದ ಅನುಮೋದನೆ ಸಿಗುವ ಸಾಧ್ಯತೆ ಇದೆ. ಈ ಕಾನೂನಿನಡಿ ಏನೆಲ್ಲ ವಿಷಯಗಳು ಬರಲಿವೆ? ಶಿಕ್ಷೆ ಏನಿರಲಿದೆ? ಎನ್ನುವ ಮಾಹಿತಿ ಇಲ್ಲಿದೆ.
- Prasanna Gaonkar
- Updated on: Dec 4, 2025
- 3:21 pm
ಗುಂಪುಗಾರಿಕೆ ಇಲ್ಲ ಎನ್ನುತ್ತಲೇ ಗೇಮ್ ಪ್ಲ್ಯಾನ್: ಕರ್ನಾಟಕ ಕಾಂಗ್ರೆಸ್ ಬಗ್ಗೆ ದೆಹಲೀಲಿ ಸೋನಿಯಾ, ರಾಹುಲ್ ಚರ್ಚೆ?
ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ‘ಕೊಟ್ಟ ಮಾತು’ ಕುರಿತ ವಿವಾದ ತೀವ್ರಗೊಂಡಿದೆ. ಹೈಕಮಾಂಡ್ಗೆ ಬಿಸಿತುಪ್ಪವಾಗಿರುವ ಈ ಚರ್ಚೆ, 2023ರ ಸಿಎಂ ಆಯ್ಕೆ ವೇಳೆ ನಡೆದ ಒಪ್ಪಂದದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ದೆಹಲಿಯಲ್ಲಿ ಸೋನಿಯಾ, ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
- Prasanna Gaonkar
- Updated on: Dec 2, 2025
- 11:12 am
ಪಟ್ಟಕ್ಕಾಗಿ ಫೈಟ್: ಡಿಕೆಶಿ ಅಸ್ತ್ರಕ್ಕೆ ಸಿದ್ದರಾಮಯ್ಯ ಬಣದಿಂದ ‘ಅಹಿಂದ’ ಬ್ರಹ್ಮಾಸ್ತ್ರ
ಸಿಎಂ ಕುರ್ಚಿ ವಿಚಾರಕ್ಕೆ ರಾಜ್ಯ ಕಾಂಗ್ರೆಸ್ನಲ್ಲಿ ತಿಕ್ಕಾಟ ಜೋರಾಗಿದೆ. ಇರೋ ಹುದ್ದೆಯನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೋಡುತಿದ್ದರೆ, ಶತಾಯ ಗತಾಯ ಆ ಸ್ಥಾನ ಪಡೆಯಲೇ ಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಯತ್ನ ಮಾಡುತ್ತಿದ್ದಾರೆ. ಈ ನಡುವೆ ಡಿಕೆಶಿ ಅಸ್ತ್ರಕ್ಕೆ ಸಿದ್ದರಾಮಯ್ಯ ಬಣ ಪ್ರಬಲ ಬ್ರಹ್ಮಾಸ್ತ್ರವೊಂದನ್ನ ಸಿದ್ಧಪಡಿಸಿದೆ. ಹೈಕಮಾಂಡ್ ಮೇಲೂ ಇದನ್ನೇ ಬಳಸಿ ಒತ್ತಡ ತರುವ ತಂತ್ರ ಹೆಣೆದಿದೆ.
- Prasanna Gaonkar
- Updated on: Nov 27, 2025
- 3:41 pm
ಅಧಿಕಾರ ಹಂಚಿಕೆ: ಸಿದ್ದರಾಮಯ್ಯ, ಡಿಕೆಶಿನ ದೆಹಲಿಗೆ ಕರೆಸಿ ಚರ್ಚೆ, ಮಹತ್ವದ ಅಪ್ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ಕಾಂಗ್ರೆಸ್ನಲ್ಲಿನ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿ ಮಹತ್ವದ ಹೇಳಿಕೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರನ್ನು ದೆಹಲಿಗೆ ಕರೆಸಿ ಚರ್ಚೆ ನಡೆಸುವ ಮೂಲಕ ಸಮಸ್ಯೆ ಬಗೆಹರಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಇದರೊಂದಿಗೆ, ಸಮಸ್ಯೆ ಇರುವುದು ನಿಜ ಎಂದು ‘ಕೈ’ ಕಮಾಂಡ್ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ.
- Prasanna Gaonkar
- Updated on: Nov 27, 2025
- 11:55 am
ಸಿದ್ದರಾಮಯ್ಯ ಪವರ್ ಬ್ಯಾಂಕ್ ಸತೀಶ್ ಜಾರಕಿಹೊಳಿಗೆ 2 ಬಿಗ್ ಆಫರ್ ಕೊಟ್ಟ ಡಿಕೆಶಿ
ನವೆಂಬರ್ 20 ಕಳೆದಿದ್ದೇ ಕಳಿದಿದ್ದು ಸಿಎಂ ಕುರ್ಚಿ ಸಂಬಂಧ ಕರ್ನಾಟಕ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಿದ್ದರಾಮಯ್ಯ ಮತ್ತು ಡಿಕೆ ನಡುವಿನ ಪವರ್ ಶೇರಿಂಗ್ ಜಟಾಪಟಿ ಹೊಸ ತಿರುವಿಗೆ ಸಾಕ್ಷಿಯಾಗಿದೆ. ಯಾಕಂದ್ರೆ, ಸಿಎಂ ಸ್ಥಾನ ಬೇಕು ಎಂದು ಪಣ ತೊಟ್ಟಂತೆ ಕಾಣಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಸೀದಾ ಸೀದಾ ಸಿದ್ದರಾಮಯ್ಯ ಬಣದ ನಾಯಕರ ಜೊತೆಗೆ ಮಾತುಕತೆಗೆ ಇಳಿದಿದ್ದು, ಸತೀಶ್ ಜಾರಕಿಹೊಳಿ ಜೊತೆ ರಹಸ್ಯ ಸಭೆ ನಡೆಸಿದ್ದಾರೆ. ಅಲ್ಲದೇ ಸಾಹುಕಾರ್ಗೆ ಡಿಕೆಶಿ ಬಿಗ್ ಆಫರ್ ಸಹ ನೀಡಿದ್ದಾರೆ.
- Prasanna Gaonkar
- Updated on: Nov 26, 2025
- 11:03 pm
ಅಧಿಕಾರ ಹಂಚಿಕೆ ಕದನದ ಹೊತ್ತಲ್ಲೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡೆ ನಿಗೂಢ! ಏನಿದರ ಗುಟ್ಟು?
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ಜೋರಾಗಿದೆ. ನಾಯಕರ ಪಟ್ಟುಗಳು, ದಾಳಗಳು ಅಂತರಂಗವಾಗಿಯೇ ಪ್ರಯೋಗವಾಗುತ್ತಿವೆ. ಆದರೆ ಇದೆಲ್ಲದರ ಕೇಂದ್ರ ಬಿಂದುವಾಗಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗ ನಡೆ ಮತ್ತು ಹೇಳಿಕೆಗಳು ನಿಗೂಢವಾಗಿಯೇ ಇವೆ. ಹಾಗಾದರೆ ಏನಿದು ನಿಗೂಢ ನಡೆ?
- Prasanna Gaonkar
- Updated on: Nov 25, 2025
- 7:01 am
ಸಿಎಂ ಸ್ಥಾನಕ್ಕಾಗಿ ಸಚಿವರಿಗೆ ಬಿಗ್ ಆಫರ್ ಕೊಟ್ರಾ ಡಿ.ಕೆ. ಶಿವಕುಮಾರ್?
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಪಟ್ಟದ ಆಟ ಈಗ ಮತ್ತಷ್ಟು ಕುತೂಹಲಕಾರಿ ಘಟ್ಟ ತಲುಪಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ತಂತ್ರಗಾರಿಕೆಗಳ ಮೂಲಕ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಲೆಕ್ಕಾಚಾರಗಳನ್ನು ಹಾಕುತ್ತಿದ್ದಾರೆ. ಸಿಎಲ್ಪಿ (ಕಾಂಗ್ರೆಸ್ ಶಾಸಕಾಂಗ ಪಕ್ಷದ) ಸಭೆಯನ್ನು ಕರೆಯುವ ಸಂದರ್ಭ ಬಂದರೆ ಏನು ಮಾಡಬೇಕು ಎಂಬ ಪ್ಲ್ಯಾನ್ ಕೂಡ ಸಿದ್ಧವಾಗಿದ್ದು, ಮತ್ತೊಂದೆಡೆ ಹಾಲಿ ಮಂತ್ರಿಗಳಿಗೂ ಡಿಕೆಶಿ ಬಿಗ್ ಆಫರ್ ಕೊಟ್ಟಿದ್ದಾರೆ ಎನ್ನಲಾಗಿದೆ.
- Prasanna Gaonkar
- Updated on: Nov 24, 2025
- 12:26 pm
ರಾಹುಲ್ ಗಾಂಧಿ ಅಂಗಳಕ್ಕೆ ಕಾಂಗ್ರೆಸ್ ಕುರ್ಚಿ ಕಿತ್ತಾಟ: ಮಂಗಳವಾರವೇ ದೆಹಲಿಯಲ್ಲಿ ಖರ್ಗೆ, ರಾಹುಲ್ ಭೇಟಿ ಸಾಧ್ಯತೆ
ಕರ್ನಾಟಕ ಕಾಂಗ್ರೆಸ್ನಲ್ಲಿ ಇಷ್ಟು ದಿನ ಒಳಗೊಳಗೆ ಕುದಿಯುತ್ತಿದ್ದ ಅಧಿಕಾರ ಹಂಚಿಕೆಯ ಜ್ವಾಲಾಮುಖಿ ಸ್ಫೋಟಗೊಂಡಿದೆ. ಕಾಂಗ್ರೆಸ್ನ ದಿಗ್ಗಜ ನಾಯಕರಾದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ಕುರ್ಚಿ ಕಾಳಗಕ್ಕೆ ಖುದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಹೈರಾಣಾಗಿದ್ದಾರೆ. ಸದ್ಯ ಕುರ್ಚಿ ಕಿತ್ತಾಟದ ಚೆಂಡು ರಾಹುಲ್ ಗಾಂಧಿ ಅಂಗಳಕ್ಕೆ ತಲಪುತ್ತಿದೆ.
- Prasanna Gaonkar
- Updated on: Nov 24, 2025
- 12:56 pm
ಅಧಿಕಾರ ಹಂಚಿಕೆ ಜಟಾಪಟಿ: ಸಿದ್ದರಾಮಯ್ಯ, ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಬುಲಾವ್, ಎಲ್ಲರ ಚಿತ್ತ ಎಐಸಿಸಿ ಅಧ್ಯಕ್ಷರತ್ತ
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಕದನ ಕೋಲಾಹಲಕಾರಿ ತಿರುವು ಪಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಶಾಸಕರ ಬಲಾಬಲ ಪ್ರದರ್ಶನ ಶುರುವಾಗಿದೆ. ಈ ಮಧ್ಯೆ ಬೆಂಗಳೂರಿಗೆ ಬಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಹಾಗೂ ಡಿಸಿಎಂಗೆ ಬುಲಾವ್ ಕೊಟ್ಟಿದ್ದಾರೆ ಎನ್ನಲಾಗಿದ್ದು, ಗೊಂದಲಕ್ಕೆ ಅಂತ್ಯ ಹಾಡುತ್ತಾರಾ ಎಂಬ ಪ್ರಶ್ನೆ ಮೂಡಿದೆ.
- Prasanna Gaonkar
- Updated on: Nov 22, 2025
- 7:14 am
ಸಂಪುಟ ಪುನರ್ರಚನೆ ಗೊಂದಲ; ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಸಿದ್ದರಾಮಯ್ಯ ಇಟ್ಟ ಬೇಡಿಕೆಯೇನು?
ದೆಹಲಿಯಲ್ಲಿ 2 ದಿನಗಳಿಂದ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ರೌಂಡ್ಸ್ ಹಾಕಿದ್ದರು. ಈ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರ ಮುಂದೆ ಸಿದ್ದರಾಮಯ್ಯ ಇಟ್ಟಿರುವ ಬೇಡಿಕೆ ಹೊರಬಿದ್ದಿದೆ. ಶಾಸಕರಲ್ಲಿನ ಸಚಿವ ಸ್ಥಾನದ ಆಸೆ ಮತ್ತಷ್ಟು ಚಿಗುರಿದೆ. ಈ ಕುರಿತ ಮಾಹಿತಿ ಇಲ್ಲಿದೆ.
- Prasanna Gaonkar
- Updated on: Nov 18, 2025
- 8:37 pm
ದೆಹಲಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪವರ್ ಪ್ಲೇ? ಇಂದು ಸಿಎಂ ಮತ್ತೆ ದೆಹಲಿಗೆ
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗಲಿದೆ ಎಂದು ಕೆಲವು ನಾಯಕರು ಭವಿಷ್ಯ ಹೇಳುತ್ತಿದ್ದರು. ನವೆಂಬರ್ ಅರ್ಧ ತಿಂಗಳು ಮುಗಿದಿದೆ. ಬಿಹಾರ ಫಲಿತಾಂಶವೂ ಬಂದಿದೆ. ಇದೀಗ ದೆಹಲಿಯಲ್ಲಿ ಕ್ರಾಂತಿಗೆ ತಾಲೀಮು ಶುರುವಾದಂತೆ ಕಾಣಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪವರ್ ಪ್ಲೇ ಶುರುವಾಗಿದೆ.
- Prasanna Gaonkar
- Updated on: Nov 17, 2025
- 6:43 am
ಕರ್ನಾಟಕದ ಮೇಲೆ ಪ್ರಭಾವ ಬೀರುತ್ತಾ ಬಿಹಾರ ಫಲಿತಾಂಶ? ಮತ್ತಷ್ಟು ಸ್ಟ್ರಾಂಗ್ ಆಗ್ತಾರಾ ಸಿದ್ದರಾಮಯ್ಯ?
ನವೆಂಬರ್ ಕ್ರಾಂತಿ. ಕರ್ನಾಟಕ ರಾಜ್ಯ ರಾಜಕೀಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಉರಿ ಎಬ್ಬಿಸಿದೆ. ಬಿಹಾರದ ಚುನಾವಣೆ ಮೇಲೆ ರಾಷ್ಟ್ರೀಯ ಕಾಂಗ್ರೆಸ್ ನಾಯಕರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ಫಲಿತಾಂಶ ಕಾಂಗ್ರೆಸ್ಗೆ ಹೊಸ ಚೈತನ್ಯ ಕೊಡುತ್ತೆ ಎನ್ನುವ ಲೆಕ್ಕಾಚಾರದಲ್ಲಿದ್ದರು. ಕರ್ನಾಟಕದ ಕಾಂಗ್ರೆಸ್ ನಾಯಕತ್ವದ ಮೇಲು ಅದರ ಪರಿಣಾಮ ಬೀರಬಹುದು ಎಂಬ ಚರ್ಚೆಗಳು ಜೋರಾಗಿ ನಡೆದಿತ್ತು. ಆದ್ರೆ, ಎಲ್ಲ ಚರ್ಚೆಗಳಿಗೂ ಇತಿಶ್ರೀ ಹಾಕಿ ಬಿಹಾರದ ಫಲಿತಾಂಶ ಬೇರೆಯದ್ದೇ ಕಥೆ ಹೇಳುತ್ತಿದೆ.
- Prasanna Gaonkar
- Updated on: Nov 14, 2025
- 7:25 pm