ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.
ಒಕ್ಕಲಿಗರಲ್ಲಿ ಬಡವರಿಲ್ವಾ? ಲಿಂಗಾಯತರಲ್ಲಿ ಬಡವರಿಲ್ವಾ: ಜಾತಿ ಗಣತಿ ಚರ್ಚೆ ವೇಳೆ ಏರು ಧ್ವನಿಯಲ್ಲಿ ಪ್ರಶ್ನಿಸಿದ ಡಿಕೆ ಶಿವಕುಮಾರ್
ಜಾತಿ ವರ್ಗೀಕರಣಕ್ಕೆ ಡಿಕೆ ಶಿವಕುಮಾರ್ ಅಸಮಾಧಾನ: ಜಾತಿ ಗಣತಿ ವಿಚಾರವಾಗಿ ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ ಒಕ್ಕಲಿಗ ಹಾಗೂ ಲಿಂಗಾಯತ ಸಚಿವರ ತೀವ್ರ ವಿರೋಧಕ್ಕೆ ಸಾಕ್ಷಿಯಾಯಿತು. ಇದೇ ವೇಳೆ, ಡಿಸಿಎಂ ಡಿಕೆ ಶಿವಕುಮಾರ್ ಜಾತಿ ವರ್ಗೀಕರಣ ವಿಚಾರವಾಗಿ ಜೋರಾದ ದನಿಯಲ್ಲಿ ಮಾತನಾಡಿದರು.
- Prasanna Gaonkar
- Updated on: Apr 18, 2025
- 9:00 am
ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಕೋಲಾಹಲ: ಸಚಿವರ ಏರು ಧ್ವನಿ, ಇಲ್ಲಿದೆ ಇನ್ಸೈಡ್ ಡಿಟೇಲ್ಸ್
ಇವತ್ತು ಇಡೀ ರಾಜ್ಯದ ಚಿತ್ತ ಸಿಎಂ ಸಿದ್ದರಾಮಯ್ಯ ನೇತೃತ್ವದ ಕ್ಯಾಬಿನೆಟ್ ಮೇಲೆ ನೆಟ್ಟಿತ್ತು. ಜಾತಿ ಗಣತಿ ವರದಿಯನ್ನ ಅನುಷ್ಠಾನ ಮಾಡೇ ಬಿಡುತ್ತಾರಾ? ಅಥವಾ ತಿರಸ್ಕಾರ ಮಾಡುತ್ತಾರಾ ಎನ್ನುವುದು ಕುತೂಹಲ ಎಲ್ಲರಲ್ಲೂ ಕೆರಳಿತ್ತು. ನಿಗದಿಯಂತೆ ಕ್ಯಾಬಿನೆಟ್ ಸಭೆಯೂ ಆರಂಭವಾಯ್ತು. ಆದ್ರೆ, ಅಲ್ಲಾಗಿದ್ದೇ ಬೇರೆ. ಕ್ಯಾಬಿನೆಟ್ನಲ್ಲಿ ಯಾವುದೇ ನಿರ್ಧಾರಕ್ಕೆ ಬಾರದೇ ಸಂಪುಟ ಸಭೆಯನ್ನ ಮುಂದೂಡಲಾಗಿದೆ. ಇನ್ನು ಸಚಿವ ಸಂಪುಟ ಸಭೆಯಲ್ಲಿ ನಾನಾ ರೀತಿಯ ಚರ್ಚೆಗಳು ಆಗಿದ್ದು, ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.
- Prasanna Gaonkar
- Updated on: Apr 17, 2025
- 8:55 pm
ಜಾತಿ ಗಣತಿ ವರದಿ ಜ್ವಾಲೆ: ಲಿಂಗಾಯತ ಸಚಿವರ ಸಭೆಯಲ್ಲಿ ಮಹತ್ವದ ನಿರ್ಣಯ
ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗದ 2015ರ ಜಾತಿ ಗಣತಿ ವರದಿ ಜಾರಿಯ ಕುರಿತು ರಾಜಕೀಯ ಚರ್ಚೆಗಳು ತೀವ್ರಗೊಂಡಿವೆ. ಜಾತಿ ಗಣತಿ ವರದಿ ಜಾರಿ ವಿಚಾರವಾಗಿ ಮುಖ್ಯಮಂತ್ರಿಗಳು ವಿಶೇಷ ಸಚಿವ ಸಂಪುಟ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಸಚಿವ ಸಂಪುಟ ಸಭೆಗೂ ಮುನ್ನ ಲಿಂಗಾಯತ ಸಚಿವರು ಪ್ರತ್ಯೇಕ ಸಭೆ ನಡೆಸಿದ್ದು, ಮಹತ್ವದ ನಿರ್ಣಯವನ್ನು ಕೈಗೊಂಡಿದ್ದಾರೆ.
- Prasanna Gaonkar
- Updated on: Apr 17, 2025
- 6:36 pm
ಚಿನ್ನದ ದರ ಏರಿಕೆಯಿಂದ ಹೆಣ್ಮಕ್ಕಳು ಮಾಂಗಲ್ಯ ಸರ ಕಟ್ಟಿಕೊಳ್ಳಲು ಆಗುತ್ತಿಲ್ಲ: ಡಿಕೆಶಿ
ಕೇಂದ್ರ ಸರ್ಕಾರದಿಂದ ಚಿನ್ನ ಮತ್ತು ಇತರ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಅವರು ಚಿನ್ನದ ಬೆಲೆ ಏರಿಕೆಯಿಂದ ಮಹಿಳೆಯರು ಮಾಂಗಲ್ಯ ಸರ ಕಟ್ಟಿಕೊಳ್ಳಲು ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದಲ್ಲದೆ, ಅಡುಗೆ ಅನಿಲ ಮತ್ತು ಇತರ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ಕೂಡಾ ಖಂಡಿಸಿದ್ದಾರೆ. ರಾಜ್ಯ ಸರ್ಕಾರ ರೈತರ ಹಿತದೃಷ್ಟಿಯಿಂದ ಹಾಲಿನ ಬೆಲೆಯನ್ನು ಏರಿಸಿದೆ ಎಂದೂ ಅವರು ಹೇಳಿದ್ದಾರೆ.
- Prasanna Gaonkar
- Updated on: Apr 17, 2025
- 3:02 pm
ಸಿಲಿಂಡರ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಬಿಜೆಪಿ ಜನಾಕ್ರೋಶ ಯಾತ್ರೆಗೆ ‘ಕೈ’ ಕೌಂಟರ್
Karnataka Congress Protest against Centre: ಒಂದೆಡೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದರೆ, ಮತ್ತೊಂದೆಡೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ‘ಕೈ’ ನಾಯಕರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಹಾಗೂ ಎಲ್ಪಿಜಿ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಲಾಯಿತು.
- Prasanna Gaonkar
- Updated on: Apr 17, 2025
- 12:58 pm
ಜಾತಿ ಗಣತಿ ವರದಿ: ಡಿಸಿಎಂ ಡಿಕೆ ಶಿವಕುಮಾರ್ಗೆ ಮಹತ್ವದ ಬೇಡಿಕೆ ಇಟ್ಟ ಒಕ್ಕಲಿಗ ಶಾಸಕರು
ಜಾತಿ ಜನಗಣತಿಯ ಜ್ವಾಲಾಮುಖಿ ನಿಧಾನವಾಗಿ ಸ್ಪೋಟಗೊಳ್ಳತೊಡಗಿದೆ. ಜನಗಣತಿಯ ಬಗ್ಗೆ ಭಾರೀ ಅನುಮಾನ ಇಟ್ಟುಕೊಂಡ ಒಕ್ಕಲಿಗ ಸಮುದಾಯ ಸಿಡಿದು ನಿಂತಿದೆ. ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಶಾಸಕರ ಅಭಿಪ್ರಾಯ ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಒಕ್ಕಲಿಗ ಶಾಸಕರ ಸಭೆ ಕರೆದಿದ್ದರು. ಈ ಸಭೆಯಲ್ಲಿ ಶಾಸಕರು ಜಾತಿ ಗಣತಿ ವರದಿಯ ಅಂಕಿಅಂಶಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಡಿಕೆ ಶಿವಕುಮಾರ್ ಮುಂದೆ ಹಲವು ಅಹವಾಲುಗಳನ್ನು ತೋಡಿಕೊಂಡಿದ್ದಾರೆ.
- Prasanna Gaonkar
- Updated on: Apr 16, 2025
- 7:27 am
ಜಾತಿ ಗಣತಿ ವಿರುದ್ಧ ಸಿಡಿದೆದ್ದ ಒಕ್ಕಲಿಗರು, ಲಿಂಗಾಯತರು: ವರದಿ ಜಾರಿಯಾದರೆ ಸರ್ಕಾರ ಬೀಳಿಸುವ ಎಚ್ಚರಿಕೆ
ಸರ್ಕಾರದ ಜಾತಿ ಗಣತಿ ಜ್ವಾಲಾಮುಖಿಯಂತೆ ಸ್ಫೋಟಗೊಳ್ಳುವ ಮಹಾ ಮುನ್ಸೂಚನೆ ಸಿಕ್ಕಿದೆ. ಜಾತಿ ಗಣತಿ ವಿರುದ್ಧ ಸಿಡಿದೆದ್ದಿರುವ ಒಕ್ಕಲಿಗರು ರಸ್ತೆಗಿಳಿದು ಹೋರಾಟಕ್ಕೆ ಮುಂದಾಗಿದ್ದಾರೆ. ಜತೆಗೆ, ಹೋರಾಟಕ್ಕೆ ಬನ್ನಿ ಎಂದು ಲಿಂಗಾಯತ ಸೇರಿದಂತೆ ಇತರ ಸಮುದಾಯಗಳಿಗೂ ಕರೆ ನೀಡಿದ್ದಾರೆ. ಮತ್ತೊಂದೆಡೆ, ಜಾತಿ ಗಣತಿ ವರದಿ ಜಾರಿ ಆಗದೇ ಇದ್ದರೆ ಹೋರಾಟ ಮಾಡುತ್ತೇವೆ ಎಂದು ಶೋಷಿತ ಸಮುದಾಯದವರು ಗುಟುರು ಹಾಕುತ್ತಿದ್ದಾರೆ. ಸರ್ಕಾರಕ್ಕೆ ಈಗ ಅತ್ತ ದರಿ ಇತ್ತ ಪುಲಿ ಎಂಬಂತಾಗಿದೆ.
- Prasanna Gaonkar
- Updated on: Apr 16, 2025
- 10:56 am
ಜಾತಿಗಣತಿ ಜಟಾಪಟಿ: ನಾಳೆ ಒಕ್ಕಲಿಗ ಶಾಸಕರ ಸಭೆ ಕರೆದ ಡಿಕೆ ಶಿವಕುಮಾರ್, ಸಂಚಲನ ಮೂಡಿಸಿದ ಡಿಸಿಎಂ ನಡೆ
ಜಾತಿಗಣತಿ ವರದಿಯಲ್ಲಿ ಅನ್ಯಾಯವಾಗಿದೆ ಎಂದು ಅಸಮಾಧಾನ ಹಿನ್ನೆಲೆ, ಡಿಸಿಎಂ ಡಿಕೆ ಶಿವಕುಮಾರ್ ನಾಳೆ ಒಕ್ಕಲಿಗ ಶಾಸಕರ ಸಭೆ ಕೆರದಿದ್ದಾರೆ. ಡಿಕೆ ಶಿವಕುಮಾರ್ ನಿವಾಸದಲ್ಲಿ ಮೀಟಿಂಗ್ ನಡೆಯಲಿದ್ದು, ವರದಿ ಬಗ್ಗೆ ಸಾಧಕ, ಬಾಧಕಗಳನ್ನ ಚರ್ಚಿಸಲಾಗುತ್ತೆ. ಸದ್ಯ ಡಿಕೆ ಶಿವಕುಮಾರ್ ಸಭೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
- Prasanna Gaonkar
- Updated on: Apr 14, 2025
- 7:43 pm
ಕರ್ನಾಟಕದಲ್ಲಿ ಯಾವ ಜಾತಿಯ ಜನಸಂಖ್ಯೆ ಎಷ್ಟು? ಜಾತಿಗಣತಿಯ ಅಂಕಿ-ಅಂಶ ಬಹಿರಂಗ
ದೇಶಾದ್ಯಂತ ಜಾತಿಗಣತಿಯ ಪರ-ವಿರೋಧದ ಚರ್ಚೆ, ವಾಗ್ವಾದಗಳು ನಡೆಯುತ್ತಿದೆ. ಇದರ ಮಧ್ಯೆ ಕೊನೆಗೂ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವರದಿಯನ್ನು ಮಂಡನೆ ಮಾಡಿದೆ. 50 ಸಂಪುಟವಿರುವ ಈ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಅಥವಾ ಜಾತಿಗಣತಿಯನ್ನು ಏನಿದೆ? ಎಂಬ ಅಂಕಿ-ಅಂಶ ಟಿವಿ9ಗೆ ಲಭ್ಯವಾಗಿದೆ. ಆ ಕುರಿತಾದ ಮಾಹಿತಿ ಇಲ್ಲಿದೆ.
- Prasanna Gaonkar
- Updated on: Apr 12, 2025
- 8:19 pm
ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ: ತನಿಖೆಗೆ SIT ರಚಿಸಲು ಸಂಪುಟ ತೀರ್ಮಾನ
40% commission: ಕರ್ನಾಟಕದ ಬಿಜೆಪಿ ಸರ್ಕಾರದ ವಿರುದ್ಧದ 40% ಕಮಿಷನ್ಆ ರೋಪಗಳ ತನಿಖೆಗೆ ರಾಜ್ಯ ಸಚಿವ ಸಂಪುಟವು SIT ರಚಿಸಲು ನಿರ್ಧರಿಸಿದೆ. ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗದ ವರದಿಯನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಸ್ಐಟಿ ಎರಡು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಸಚಿವ ಸಂಪುಟ ಸಭೆಯಲ್ಲಿ ಇತರ ಅನೇಕ ವಿಷಯಗಳಿಗೂ ಅನುಮೋದನೆ ನೀಡಲಾಗಿದೆ.
- Prasanna Gaonkar
- Updated on: Apr 11, 2025
- 5:14 pm
Karnataka caste census: ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏ. 17ಕ್ಕೆ ಕರ್ನಾಟಕ ಸಚಿವ ಸಂಪುಟ ವಿಶೇಷ ಸಭೆ ನಿಗದಿ
ಕರ್ನಾಟಕ ಜಾತಿ ಗಣತಿ ವರದಿ: ಸಾಕಷ್ಟು ಪರ ವಿರೋಧ ಚರ್ಚೆಗೆ ಗ್ರಾಸವಾಗಿರುವ ಜಾತಿ ಗಣತಿ ವರದಿ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬಂದಿದೆ. ಜಾತಿ ಗಣತಿ ವರದಿ ಜಾರಿಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಈ ಹಿಂದೆ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ಭರವಸೆ ನೀಡಿದ್ದರು. ಇದೀಗ ಆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಮುಂದೇನಾಯಿತು? ತಿಳಿಯಲು ಓದಿ.
- Prasanna Gaonkar
- Updated on: Apr 11, 2025
- 2:10 pm
ಬೆಂಗಳೂರು 2ನೇ ಏರ್ಪೋರ್ಟ್: ಬಿಡದಿ ಔಟ್, ಈ ಎರಡು ಸ್ಥಳಗಳ ಬಗ್ಗೆ ಚರ್ಚೆ, ಜಟಾಪಟಿ!
Bengaluru 2nd Airport : ಕರ್ನಾಟಕದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಿದ್ಧತೆಗಳು ಆರಂಭವಾಗಿವೆ. ಬೆಂಗಳೂರಿನ ಎರಡನೇ ಏರ್ಪೋರ್ಟ್ಗೆ ಈಗಾಗಲೇ ಮೂರು ಸ್ಥಳಗಳನ್ನು ಗುರುತಿಸಲಾಗಿದೆ. ಆದರೆ ಆರಂಭದಲ್ಲೇ ವಿಘ್ನ ಎಂಬ ಹಾಗೆ ನೂತನ ಏರ್ಪೋರ್ಟ್ ಸ್ಥಳದ ವಿಚಾರದಲ್ಲಿ ಭಾರಿ ಚಟಾಪಟಿ ಶುರುವಾಗಿದೆ. ಹೊಸ ಏರ್ಪೋರ್ಟ್ ನಿರ್ಮಾಣ ವಿಚಾರದಲ್ಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯ ಎಂಬ ಕೂಗು ಎದ್ದಿದೆ.
- Prasanna Gaonkar
- Updated on: Apr 10, 2025
- 3:50 pm