AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸನ್ನ ಗಾಂವ್ಕರ್​

ಪ್ರಸನ್ನ ಗಾಂವ್ಕರ್​

ಹಿರಿಯ ವರದಿಗಾರ - TV9 Kannada

prasanna.gaonkar@tv9.com

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow On:
2 ಮುಹೂರ್ತ ಮಿಸ್, ಈ ಬಾರಿ ತಪ್ಪಲ್ಲ: ಯತೀಂದ್ರಗೆ ಡಿಕೆಶಿ ಆಪ್ತರ ಟಾಂಗ್

2 ಮುಹೂರ್ತ ಮಿಸ್, ಈ ಬಾರಿ ತಪ್ಪಲ್ಲ: ಯತೀಂದ್ರಗೆ ಡಿಕೆಶಿ ಆಪ್ತರ ಟಾಂಗ್

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಪುತ್ರ ಯತೀಂದ್ರ, ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೇಳಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರು ತಿರುಗೇಟು ನೀಡಲು ಶುರು ಮಾಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಹ ಮಾರ್ಮಿಕವಾಗಿ ಮಾತನಾಡಿದ್ದಾರೆ.

ಸಿದ್ದರಾಮಯ್ಯ Vs ಡಿ.ಕೆ. ಶಿವಕುಮಾರ್​​: ಎಐಸಿಸಿ ನಾಯಕರ ಮೌನದ ಬಗ್ಗೆ ‘ಕೈ ‘ ಶಾಸಕರಲ್ಲೇ ಬೇಸರ!

ಸಿದ್ದರಾಮಯ್ಯ Vs ಡಿ.ಕೆ. ಶಿವಕುಮಾರ್​​: ಎಐಸಿಸಿ ನಾಯಕರ ಮೌನದ ಬಗ್ಗೆ ‘ಕೈ ‘ ಶಾಸಕರಲ್ಲೇ ಬೇಸರ!

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಗೊಂದಲ ಮತ್ತೆ ಭುಗಿಲೇಳುವ ಸಾಧ್ಯತೆ ಇದೆ. ಹೈಕಮಾಂಡ್ ಮೌನದಿಂದ ಶಾಸಕರು ಸಿಎಂ ಮತ್ತು ಡಿಸಿಎಂ ನಡುವೆ ಸಿಲುಕಿ ಅಡಕತ್ತರಿ ಸ್ಥಿತಿ ಎದುರಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿದ್ದರೂ ನಾಯಕತ್ವ ಬದಲಾವಣೆ ಕುರಿತ ಗೊಂದಲಕ್ಕೆ ಉತ್ತರ ಸಿಗದ ಕಾರಣ, ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರ ಮೌನದ ಬಗ್ಗೆ ಸ್ವಪಕ್ಷದ ಶಾಸಕರೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ಆಂತರಿಕ ಕಚ್ಚಾಟ ಪಕ್ಷಕ್ಕೆ ಹಾನಿಕರವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಗೃಹ ಸಚಿವ ಪರಮೇಶ್ವರ್​​ ನೇತೃತ್ವದಲ್ಲಿ ಕಾಂಗ್ರೆಸ್​​ SC, ST ನಾಯಕರ ಸಭೆ

ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಗೃಹ ಸಚಿವ ಪರಮೇಶ್ವರ್​​ ನೇತೃತ್ವದಲ್ಲಿ ಕಾಂಗ್ರೆಸ್​​ SC, ST ನಾಯಕರ ಸಭೆ

ದಲಿತ ಸಿಎಂ ಬೇಡಿಕೆ ಕುರಿತಾಗಿ ಸಮುದಾಯದಿಂದ ಹೈಕಮಾಂಡ್ ಮುಂದೆ ಹಕ್ಕು ಮಂಡನೆ ಬಗ್ಗೆ SC, ST ಸಚಿವರು, ಶಾಸಕರು ಹಾಗೂ ವಿಧಾನಪರಿಷತ್​ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮುದಾಯದ 20ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದು, SCSP-TSP ಅನುದಾನ ವಿಚಾರ ಸೇರಿ ಹಲವು ಪ್ರಮುಖ ವಿಷಯಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಆ ಕುರಿತ ಮಾಹಿತಿ ಇಲ್ಲಿದೆ.

ಸರ್ಕಾರ, ಸಚಿವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್

ಸರ್ಕಾರ, ಸಚಿವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್

ಕರ್ನಾಟಕ ಗುತ್ತಿಗೆದಾರರ ಸಂಘದೊಳಗೇ ಭ್ರಷ್ಟಾಚಾರದ ಗಂಭೀರ ಆರೋಪ ಕೇಳಿಬಂದಿದೆ. ಸಂಘದ ಪದಾಧಿಕಾರಿಗಳು ಸಣ್ಣ ಗುತ್ತಿಗೆದಾರರಿಂದ ಟೆಂಡರ್ ಪ್ರಕ್ರಿಯೆಗೆ ಕಮಿಷನ್ (ಶೇ 2.5-3) ಕೇಳಿ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ಆಡಿಯೋ ವೈರಲ್ ಆಗಿದೆ. ಅಲ್ಲದೆ, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ರಾಷ್ಟ್ರತಿಗಳ ಅಂಗಳ ತಲುಪಿದ ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲರು ಕೊಟ್ಟ ಕಾರಣಗಳೇನು ಗೊತ್ತೇ?

ರಾಷ್ಟ್ರತಿಗಳ ಅಂಗಳ ತಲುಪಿದ ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲರು ಕೊಟ್ಟ ಕಾರಣಗಳೇನು ಗೊತ್ತೇ?

Hate Speech Bill: ಕರ್ನಾಟಕ ದ್ವೇಷ ಭಾಷಣ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ. ಮಸೂದೆಯ ವ್ಯಾಖ್ಯಾನ ಅಸ್ಪಷ್ಟ, ದುರುಪಯೋಗದ ಭೀತಿ, ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಇತ್ಯಾದಿ 29 ಪ್ರಮುಖ ಕಾರಣಗಳನ್ನು ರಾಜ್ಯಪಾಲರು ನೀಡಿದ್ದಾರೆ. ಸಹಿ ನಿರಾಕರಿಸಿದ್ದಕ್ಕೆ ರಾಜ್ಯಪಾಲರು ನೀಡಿರುವ ಕಾರಣಗಳು ಇಲ್ಲಿವೆ.

ಅಧಿವೇಶನ ಭಾಷಣ, ಗದ್ದಲ ಬಗ್ಗೆ ರಾಷ್ಟ್ರಪತಿಗೆ ರಾಜ್ಯಪಾಲ ವರದಿ: ಏನೆಲ್ಲಾ ಅಂಶಗಳಿವೆ?

ಅಧಿವೇಶನ ಭಾಷಣ, ಗದ್ದಲ ಬಗ್ಗೆ ರಾಷ್ಟ್ರಪತಿಗೆ ರಾಜ್ಯಪಾಲ ವರದಿ: ಏನೆಲ್ಲಾ ಅಂಶಗಳಿವೆ?

ಕರ್ನಾಟಕ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರ ಸಿದ್ಧಪಡಿಸಿದ ಭಾಷಣ ಓದಲು ನಿರಾಕರಿಸಿ ತಾವೇ ಬರೆದುಕೊಂಡು ಬಂದಿದ್ದ ಎರಡು ವಾಕ್ಯವನ್ನು ಓದಿ ತೆರಳಿದ್ದು, ಇದು ಕಾಂಗ್ರೆಸ್​ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೇನು ರಾಜ್ಯಪಾಲರು ಸದನದಿಂದ ಆಚೆ ಹೋಗಬೇಕಿರುವಾಗ ದೊಡ್ಡ ಹೈಡ್ರಾಮವೇ ನಡೆದಿದ್ದು, ರಾಜ್ಯಪಾಲರನ್ನು ಅಡ್ಡಿಗಟ್ಟಿ ತಡೆಯುವ ಯತ್ನ ಸಹ ನಡೆದಿದೆ. ಇನ್ನು ಈ ಎಲ್ಲಾ ಬೆಳವಣಿಗೆಗಳ ಕುರಿತು ಲೋಕಭವನ, ರಾಷ್ಟ್ರಪತಿ ಅವರಿಗೆ ವರದಿ ಕಳುಹಿಸಿದೆ. ಹಾಗಾದ್ರೆ, ರಾಜ್ಯಪಾಲರ ವರದಿಯಲ್ಲಿ ಏನೆಲ್ಲಾ ಅಂಶಗಳು ಇವೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ಶಾಕ್ ಮೇಲೆ ಶಾಕ್, ಕೋರ್ಟ್​​ ಬಳಿಕ ಪಕ್ಷದಿಂದ ಶಾಸ್ತಿ

ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ಶಾಕ್ ಮೇಲೆ ಶಾಕ್, ಕೋರ್ಟ್​​ ಬಳಿಕ ಪಕ್ಷದಿಂದ ಶಾಸ್ತಿ

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪಾರಾಯುಕ್ತೆ ಅಮೃತಾ ಅವರಿಗೆ ಕಾಂಗ್ರೆಸ್ ಮುಖಂಡ ಧಮ್ಕಿ ಹಾಕಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಸದ್ಯ ಪೊಲೀಸರಿಂದ ತಲೆಮರೆಸಿಕೊಂಡಿರುವ ರಾಜೀವ್ ಗೌಡಗೆ ಸಂಕಷ್ಟ ಮೇಲೆ ಸಂಕಷ್ಟು ಎದುರಾಗುತ್ತಿವೆ. ಕೇಸ್ ರದ್ದುಕೋರಿದ್ದ ರಾಜೀವ್​​​ಗೆ ಹೈಕೋಟ್ ಶಾಕ್ ಕೊಟ್ಟಿತ್ತು. ಇದೀಗ ಕಾಂಗ್ರೆಸ್ ಪಕ್ಷ ಸಹ ಬಿಗ್ ಶಾಕ್ ಕೊಟ್ಟಿದೆ.

ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡದಿದ್ರೆ ಸುಪ್ರೀಂ ಮೊರೆ ಹೋಗಲು ರಾಜ್ಯ ಸರ್ಕಾರ ಸಿದ್ಧತೆ!

ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡದಿದ್ರೆ ಸುಪ್ರೀಂ ಮೊರೆ ಹೋಗಲು ರಾಜ್ಯ ಸರ್ಕಾರ ಸಿದ್ಧತೆ!

ಕರ್ನಾಟಕ ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಸರ್ಕಾರದ ಭಾಷಣ ಓದಲು ನಿರಾಕರಿಸಿದ್ದು, 11 ಪ್ಯಾರಾಗಳ ತಿದ್ದುಪಡಿಗೆ ಸೂಚಿಸಿದ್ದಾರೆ. ಸರ್ಕಾರ ಈ ಸಲಹೆಯನ್ನು ತಿರಸ್ಕರಿಸಿ, ರಾಜ್ಯಪಾಲರು ಮೂಲ ಭಾಷಣವನ್ನೇ ಓದುವಂತೆ ಒತ್ತಾಯಿಸಿದೆ. ರಾಜ್ಯಪಾಲರು ಅಧಿವೇಶನಕ್ಕೆ ಬರದಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸರ್ಕಾರ ಸಿದ್ಧತೆ ನಡೆಸಿದೆ, ಅಡ್ವೊಕೇಟ್ ಜನರಲ್ ದೆಹಲಿಗೆ ತೆರಳಿದ್ದಾರೆ.

ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಪರೋಕ್ಷವಾಗಿ ಸಿಎಂಗೆ ಟಾಂಗ್ ಕೊಟ್ರಾ ಡಿಕೆ ಸುರೇಶ್!

ಮಾತು ಕೊಟ್ಟಿದ್ದೀರಿ, ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಪರೋಕ್ಷವಾಗಿ ಸಿಎಂಗೆ ಟಾಂಗ್ ಕೊಟ್ರಾ ಡಿಕೆ ಸುರೇಶ್!

ಡಿ.ಕೆ. ಸುರೇಶ್ ಅವರು ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ನಿಷ್ಠೆಯನ್ನು ಉಲ್ಲೇಖಿಸಿ, ಅಧಿಕಾರ ಹಂಚಿಕೆ ಕುರಿತು ಮಾರ್ಮಿಕ ಮಾತುಗಳನ್ನಾಡಿದ್ದಾರೆ. ಪಂಚಾಯಿತಿ ಚೇರ್ಮನ್‌ ಸ್ಥಾನಗಳ ಉದಾಹರಣೆ ನೀಡಿ, ಆರಂಭದಲ್ಲಿ ಅಧಿಕಾರ ಬೇಡವೆಂದರೂ ಸಿಕ್ಕಾಗ ಬಿಡಲು ಕಷ್ಟಪಡುತ್ತಾರೆ ಎಂದಿದ್ದು, ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರಾ ಎಂಬ ಪ್ರಶ್ನೆ ಮೂಡಿದೆ.

ಡಿಕೆಶಿಗೆ ನಿಂದನೆ ಆರೋಪ: ‘ಕೈ’ ಕಾರ್ಯಕರ್ತರಿಂದ ಜನಾರ್ದನ ರೆಡ್ಡಿ ಮನೆಗೆ ಮುತ್ತಿಗೆ ಯತ್ನ

ಡಿಕೆಶಿಗೆ ನಿಂದನೆ ಆರೋಪ: ‘ಕೈ’ ಕಾರ್ಯಕರ್ತರಿಂದ ಜನಾರ್ದನ ರೆಡ್ಡಿ ಮನೆಗೆ ಮುತ್ತಿಗೆ ಯತ್ನ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಜನಾರ್ದನ ರೆಡ್ಡಿ ಅವಹೇಳನಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರೇಸ್‌ಕೋರ್ಸ್ ರಸ್ತೆಯಲ್ಲಿರುವ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ಭಾರೀ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ. ಮನೋಹರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ರೆಡ್ಡಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ರಾಹುಲ್​ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ!

ಮಲ್ಲಿಕಾರ್ಜುನ ಖರ್ಗೆ, ರಾಹುಲ್​ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ!

ಸಂಕ್ರಾಂತಿ ಹಬ್ಬ ಮುಗಿದಿದೆ. ಕಾಂಗ್ರೆಸ್‌ನಲ್ಲಿ ಭುಗಿಲೆದ್ದಿರುವ ಕ್ರಾಂತಿ ಮಾತ್ರ ಮುಗಿಯುತ್ತಿಲ್ಲ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರಿಯುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಆದರೆ, ಡಿಸಿಎಂ ಡಿಕೆ ಶಿವಕುಮಾರ್ ಬಣ ಮಾತ್ರ ಕ್ರಾಂತಿಯ ನಿರೀಕ್ಷೆಯಲ್ಲಿದೆ. ದಕ್ಷಿಣಾಯಣದಿಂದ ಉತ್ತರಾಯಣ ಕಡೆಗೆ ಸೂರ್ಯ ಪಥ ಬದಲಿಸಿದಂತೆ ನಮ್ಮ ಪಥವೂ ದೆಹಲಿ ಕಡೆಗೆ ಬದಲಾಗಿದೆ ಎನ್ನುತ್ತಿರುವ ಡಿಕೆಶಿ ಬಣ ಪಟ್ಟ ಸಿಗುವ ನಿರೀಕ್ಷೆಯಲ್ಲಿದೆ.

ಇಂದಿನಿಂದ 2 ದಿನಗಳ ಕಾಲ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿಯಾಗ್ತಾರಾ, ಸಿಗುತ್ತಾ ಕುರ್ಚಿ ಅಭಯ?

ಇಂದಿನಿಂದ 2 ದಿನಗಳ ಕಾಲ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿಯಾಗ್ತಾರಾ, ಸಿಗುತ್ತಾ ಕುರ್ಚಿ ಅಭಯ?

ಡಿಸಿಎಂ ಡಿಕೆ ಶಿವಕುಮಾರ್ ಇಂದಿನಿಂದ 2 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಡಿಕೆಶಿ ದೆಹಲಿ ಯಾತ್ರೆ ಕುತೂಹಲ ಕೆರಳಿಸಿದೆ. ಅಸ್ಸಾಂ ಚುನಾವಣೆ ನೆಪವಾದರೂ ಕುರ್ಚಿ ಆಟದ್ದೇ ಜಪ ರಾಜ್ಯ ಕಾಂಗ್ರೆಸ್​​ನಲ್ಲಿ ಜೋರಾಗಿದೆ. ಇದೀಗ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಚಟುವಟಿಕೆಗಳು ಮತ್ತೆ ಗರಿಗೆದರಿವೆ.