ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.
RSS ಎನ್ನುವುದು ಏನು? ಉತ್ತರಿಸುವಂತೆ ಬಿಜೆಪಿ ನಾಯಕರಿಗೆ ಬಿಕೆ ಹರಿಪ್ರಸಾದ್ ಸವಾಲು
ಪ್ರಧಾನಿ ಮೋದಿಯವರು ಆರ್ಎಸ್ಎಸ್ ಶ್ಲಾಘಿಸಿದ್ದನ್ನು ಕಾಂಗ್ರೆಸ್ ನಾಯಕರು ವಿರೋಧಿಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರು ಆರ್ಎಸ್ಎಸ್ ಭಾರತದ ತಾಲಿಬಾನ್ ಎಂದಿದ್ದಾರೆ. ಬಿಕೆ ಹರಿಪ್ರಸಾದ್ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಖಂಡಿಸಿದ್ದಾರೆ. ಈ ಸಂಬಂಧ ಇಬ್ಬರು ನಾಯಕರ ನಡುವೆ ಟ್ವೀಟ್ ವಾರ ನಡೆಯುತ್ತಿದೆ. ಬಿವೈ ವಿಜಯೇಂದ್ರ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ ಮಾಡಿದ್ದಾರೆ.
- Prasanna Gaonkar
- Updated on: Aug 17, 2025
- 6:21 pm
ಕರ್ನಾಟಕದಲ್ಲಿ ಅಪಘಾತದಲ್ಲಿ ಪ್ರತಿ ದಿನ ಸಾಯುವವರ ಸಂಖ್ಯೆ ಎಷ್ಟು? ಅಂಕಿ-ಸಂಖ್ಯೆ ನೋಡಿದ್ರೆ ದಿಗ್ಭ್ರಾಂತರಾಗುತ್ತೀರಿ!
ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ರಸ್ತೆ ಅಪಘಾತದಲ್ಲಿ ಪ್ರತಿದಿನ ಸಾವು, ನೋವುಗಳು ಸಂಭವಿಸುತ್ತವೆ. ಕರ್ನಾಟಕ ಸಂಭವಿಸುತ್ತಿರುವ ರಸ್ತೆ ಅಪಘಾತಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಬುಧವಾರ ಚರ್ಚೆ ನಡೆಯಿತು. ರಾಜ್ಯದಲ್ಲಿ ಸಂಭವಿಸುತ್ತಿರುವ ಅಪಘಾತಗಳ ಬಗ್ಗೆ ವಿಧಾನಪರಿಷತ್ನಲ್ಲಿ ಸದಸ್ಯ ಕೆ.ಎಸ್.ನವೀನ್ ಪ್ರಶ್ನೆ ಕೇಳಿದರು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉತ್ತರ ನೀಡಿದ್ದಾರೆ.
- Prasanna Gaonkar
- Updated on: Aug 13, 2025
- 4:24 pm
ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!
ಮಾಜಿ ಸಚಿವ ಕೆಎನ್ ರಾಜಣ್ಣ ಅವರು ತಮ್ಮದೇ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರು. ಇದು ಸಹಜವಾಗಿ ಪಕ್ಷದ ನಾಯಕರು ಮುಜುಗುರಕ್ಕೆ ಒಳಗಾಗುವಂತೆ ಮಾಡುತ್ತಿತ್ತು. ಇತ್ತೀಚಿಗೆ, ಮತ ಕಳ್ಳತನಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮಾಡಿದ್ದ ಆರೋಪದ ವಿರುದ್ಧ ಕೆಎನ್ ರಾಜಣ್ಣ ಹೇಳಿಕೆಗಳನ್ನು ನೀಡಿದ್ದರು. ಇದು, ಕೆಎನ್ ರಾಜಣ್ಣ ಅವರಿಗೆ ಮುಳುವಾಗಿ ಪರಿಣಮಿಸಿದ್ದು, ಅವರನ್ನು ಸಂಪುಟದಿಂದ ಕೈ ಬಿಡುವಂತೆ ಮಾಡಿದೆ.
- Prasanna Gaonkar
- Updated on: Aug 11, 2025
- 6:40 pm
ಇಂದಿನಿಂದ 2 ವಾರ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ, ಜೆಡಿಎಸ್ ರಣತಂತ್ರ
ವಿಧಾನಮಂಡಲದ ಮಳೆಗಾಲದ ಅಧಿವೇಶನಕ್ಕೆ ಇಂದಿನಿಂದ ಚಾಲನೆ ಸಿಗಲಿದೆ. ರಾಹುಲ್ ಗಾಂಧಿ ಹಾಗೂ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿಯ ಬಳಿಕ ಪ್ರಾರಂಭವಾಗುತ್ತಿರುವ ಅಧಿವೇಶನದಲ್ಲಿ ಈ ಬಾರಿ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ದೊಡ್ಡ ಸಮರ ಏರ್ಪಡುವ ಸಾಧ್ಯತೆ ಇದೆ. ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ, ಜೆಡಿಎಸ್ ರಣತಂತ್ರ ರೂಪಿಸಿವೆ.
- Prasanna Gaonkar
- Updated on: Aug 11, 2025
- 6:54 am
ಮತಗಳ್ಳತನ ಆರೋಪ: ಸಂಸದ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್
ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಕಳ್ಳತನದ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಆರೋಪಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಆಯೋಗ ಸೂಚಿಸಿದೆ. ರಾಹುಲ್ ಗಾಂಧಿ ಆಗಸ್ಟ್ 7 ರಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದರು.
- Prasanna Gaonkar
- Updated on: Aug 10, 2025
- 8:44 pm
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 16 ಸ್ಥಾನ ಗೆಲ್ಲಬೇಕಿತ್ತು, ಮತಗಳ್ಳತನದಿಂದ 9 ಗೆದ್ದಿದ್ದೇವೆ ಎಂದ ಸಿಎಂ
ಮತಗಳ್ಳತನ ವಿಚಾರವಾಗಿ ರಾಹುಲ್ ಇಂದು ಬೆಂಗಳೂರಲ್ಲಿ ಪ್ರತಿಭಟನೆಯ ಕಹಳೆ ಮೊಳಗಿಸಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ16 ಸ್ಥಾನ ಗೆಲ್ಲಬೇಕಿತ್ತು, ಆದರೆ ಮತಗಳ್ಳತನದಿಂದ 9 ಗೆದ್ದಿದ್ದೇವೆ ಎಂದಿದ್ದಾರೆ.
- Prasanna Gaonkar
- Updated on: Aug 8, 2025
- 2:20 pm
ಮತಗಟ್ಟೆಗಳ ದೃಶ್ಯಾವಳಿ ನೀಡಿದ್ರೆ ಮತಗಳ್ಳತನ ಸಾಬೀತು ಮಾಡುವೆ: ಚುನಾವಣೆ ಆಯೋಗಕ್ಕೆ ರಾಹುಲ್ ಸವಾಲ್
ದೊಡ್ಡ ಮಟ್ಟದಲ್ಲಿ ಮತಗಳ್ಳತನ ಮಾಡಿ ಮೋದಿ ಪ್ರಧಾನಿಯಾಗಿದ್ದಾರೆ ಅಂತಾ ಚುನಾವಣಾ ಅಧಿಕಾರಿ ವಿರುದ್ಧ ಸಮರ ಸಾರಿರುವ ರಾಹುಲ್ ಗಾಂಧಿ ಇಂದು ಬೆಂಗಳೂರಿಗೆ ಎಂಟ್ರಿ ಕೊಟ್ಟು ಮತ್ತೆ ಗುಡುಗಿದ್ದಾರೆ. ಮತಗಟ್ಟೆಗಳ ದೃಶ್ಯಾವಳಿ ನೀಡಿದರೆ ಮತಗಳ್ಳತನ ಸಾಬೀತು ಮಾಡುವೆ ಎಂದು ಚುನಾವಣೆ ಆಯೋಗಕ್ಕೆ ಸವಾಲ್ ಹಾಕಿದ್ದಾರೆ.
- Prasanna Gaonkar
- Updated on: Aug 8, 2025
- 1:46 pm
ಜನೌಷಧಿ ಕೇಂದ್ರಗಳ ಸ್ಥಗಿತ: ಕೇಂದ್ರಕ್ಕೆ ಸ್ಪಷ್ಟನೆ ನೀಡಿದ ದಿನೇಶ್ ಗುಂಡೂರಾವ್
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮಾತ್ರ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ 1417 ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಸಕ್ರಿಯವಾಗಿವೆ. ಈ ನಿರ್ಧಾರವು ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ದೊರೆಯುವಂತೆ ಮಾಡುವುದು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ದುರುಪಯೋಗವನ್ನು ತಡೆಯಲು ತೆಗೆದುಕೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ
- Prasanna Gaonkar
- Updated on: Aug 6, 2025
- 8:58 pm
ಒಳ ಮೀಸಲಾತಿ ಜಾರಿ ಸಂದರ್ಭದಲ್ಲಿ ಒಗ್ಗಟ್ಟಾಗಿರಲು ದಲಿತ ಸಚಿವ, ಶಾಸಕರ ಸಭೆಯಲ್ಲಿ ನಿರ್ಧಾರ
ಕರ್ನಾಟಕದ ಒಳ ಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ಆಯೋಗದ ವರದಿಗಾಗಿ ದಲಿತ ಸಚಿವರು ಕಾಯುತ್ತಿದ್ದಾರೆ. ಆಯೋಗ ಶೀಘ್ರದಲ್ಲಿ ವರದಿ ಸಲ್ಲಿಸಲಿದೆ. ವರದಿಯ ನಂತರ ಯಾವುದೇ ವಿರೋಧಾಭಾಸಗಳನ್ನು ತಪ್ಪಿಸಲು ಮತ್ತು ಎಲ್ಲಾ ಸಮುದಾಯಗಳಿಗೆ ನ್ಯಾಯ ಒದಗಿಸಲು ದಲಿತ ಸಚಿವರು ಒಗ್ಗಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ.
- Prasanna Gaonkar
- Updated on: Aug 2, 2025
- 10:04 pm
ಮತ ಕಳ್ಳತನ ಆರೋಪ: ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನೆಗೆ ಸ್ಥಳ ನಿಗದಿಯೇ ದೊಡ್ಡ ತಲೆನೋವು
ಕಳೆದ ಲೋಕಸಭೆ ಚುನಾವಣೆ ವೇಳೆ ಬೆಂಗಳೂರಿನ ಮಹದೇವಪುರ, ರಾಜರಾಜೇಶ್ವರಿನಗರ ಸೇರಿ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬೃಹತ್ ಹೋರಾಟಕ್ಕೆ ಸಜ್ಜಾಗಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5ರಂದು ಬೆಂಗಳೂರಿನಲ್ಲಿ ಭಾರಿ ಪ್ರತಿಭಟನೆಗೆ ತೀರ್ಮಾನಿಸಲಾಗಿದೆ. ಆದರೆ, ಈ ಪ್ರತಿಭಟನೆಗೆ ಸ್ಥಳ ಆಯ್ಕೆ ಮಾಡಿಕೊಳ್ಳುವುದೇ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಇಂದು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಬರಲಿದ್ದಾರೆ.
- Prasanna Gaonkar
- Updated on: Jul 31, 2025
- 6:59 am
ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ: ಮತ್ತೆ ವಿವಾದ ಮೈಮೇಲೆ ಎಳೆದುಕೊಳ್ಳಲು ಮುಂದಾದ ಸರ್ಕಾರ
ಕರ್ನಾಟಕ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ನಿಧಿಯನ್ನು ಉಚಿತ ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಿದ್ದು ಕಳೆದ ವರ್ಷ ತೀವ್ರ ವಿವಾದಕ್ಕೆ ಗುರಿಯಾಗಿತ್ತು. ಇದೀಗ ಈ ವರ್ಷವೂ ಅಂಥದ್ದೇ ದುಃಸ್ಸಾಹಸಕ್ಕೆ ಸರ್ಕಾರ ಮುಂದಾಗಿದೆ. ಆಗಸ್ಟ್ 5 ರಂದು ಅಂತಿಮ ನಿರ್ಧಾರ ಪ್ರಕಟವಾಗುವ ನಿರೀಕ್ಷೆ ಇದೆ.
- Prasanna Gaonkar
- Updated on: Jul 28, 2025
- 9:30 am
ಕರ್ನಾಟಕದಲ್ಲಿ ಯೂರಿಯಾ ಗೊಬ್ಬರ ಅಭಾವ: ಜೆಪಿ ನಡ್ಡಾಗೆ ಸಿಎಂ ಸಿದ್ದರಾಮಯ್ಯ ಪತ್ರ
ಕರ್ನಾಟಕದಲ್ಲಿ ಯೂರಿಯಾ ಗೊಬ್ಬರದ ತೀವ್ರ ಕೊರತೆಯಿಂದ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಮುಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ಅಗತ್ಯವಾದ ಗೊಬ್ಬರದ ಕೊರತೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಎಂ ಸಿದ್ದರಾಮಯ್ಯ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದು ಗೊಬ್ಬರ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ.
- Prasanna Gaonkar
- Updated on: Jul 25, 2025
- 1:11 pm