ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.
ವಿವಾದದ ನಡುವೆಯೇ ಬಿಡದಿ ಟೌನ್ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್ಶಿಪ್ ಯೋಜನೆ ಪರವಾಗಿರುವ ರೈತರು ರಾಮನಗರದ ಕಂದಾಯ ಭವನದಲ್ಲಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ) ಕಚೇರಿಗೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಬನ್ನಿಗಿರಿ, ಹೊಸೂರು, ಅರಳಾಳುಸಂದ್ರ, ಕೆ.ಜಿ. ಗೊಲ್ಲರಪಾಳ್ಯ ಸೇರಿದಂತೆ ಹಲವು ಗ್ರಾಮಗಳ ರೈತರು ತಮ್ಮ ಜಮೀನುಗಳ ದಾಖಲೆಗಳನ್ನು ಒದಗಿಸುತ್ತಿದ್ದು, ಪ್ರತಿ ಎಕರೆಗೆ 2 ರಿಂದ 2.17 ಕೋಟಿ ರೂ. ಪರಿಹಾರ ಪಡೆಯಲು ಮುಂದಾಗಿದ್ದಾರೆ.
- Prashantha B
- Updated on: Jul 17, 2026
- 6:34 pm
ಬಿಡದಿ ಟೌನ್ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
Bidadi Township Row: ಬಿಡದಿ ಟೌನ್ಶಿಪ್ ಯೋಜನೆ ಜಟಾಪಟಿ ಮುಂದುವರೆದಿದೆ. ಯೋಜನೆ ವಿರುದ್ಧ ಹೆಚ್ಡಿ ದೇವೇಗೌಡರು ಟೊಂಕ ಕಟ್ಟಿ ನಿಂತಿದ್ದಾರೆ. ಇದೆಲ್ಲದರ ಮಧ್ಯೆ ಇದೀಗ ರಾಜ್ಯ ಸರ್ಕಾರ ಎರಡನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಆ ಮೂಲಕ 2,550 ಎಕರೆ ಜಮೀನನ್ನು ಈ ಯೋಜನೆಗಾಗಿ ಸ್ವಾಧೀನಪಡಿಸಿಕೊಳ್ಳಲು ಆದೇಶ ಹೊರಡಿಸಲಾಗಿದೆ.
- Prashantha B
- Updated on: Jul 15, 2026
- 4:40 pm
ರಾಮನಗರದಲ್ಲಿ ಭುಗಿಲೆದ್ದ ಟೌನ್ಶಿಪ್ ಕಿಚ್ಚು: ಸರ್ವೆಗೆ ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ
ಬಿಡದಿ ಟೌನ್ಶಿಪ್ ಯೋಜನೆಗೆ ವಿರೋಧಿಸಿ ರೈತರಿಂದ ಪ್ರತಿಭಟನೆಗಳು ಮುಂದುವರೆದಿವೆ. ಈ ವಿರೋಧದ ಮಧ್ಯೆ ಸರ್ವೆಗೆ ಬಂದಿದ್ದ ಅಧಿಕಾರಿಗಳ ವಿರುದ್ಧ ಪ್ರತಿಭಟನಾನಿರತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊರಕೆ ಸೇವೆ ಮಾಡಿದ್ದಾರೆ. ಎರಡು ಕಾರುಗಳನ್ನ ಹಾನಿಗೊಳಿಸಿರುವ ಘಟನೆ ರಾಮನಗರ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ನಡೆದಿದೆ.
- Prashantha B
- Updated on: Jul 13, 2026
- 5:48 pm
ಚನ್ನಪಟ್ಟಣ ತಹಶೀಲ್ದಾರ್ ಮೇಲೆ ಹಲ್ಲೆ, ವಿವಸ್ತ್ರಗೊಳಿಸಿ 10 ಲಕ್ಷ ರೂ.ಗೆ ಬ್ಲಾಕ್ಮೇಲ್: ರೌಡಿಶೀಟರ್ ಬಂಧನ
ಚನ್ನಪಟ್ಟಣ ತಹಶೀಲ್ದಾರ್ ಬಿಎನ್ ಗಿರೀಶ್ ಮೇಲೆ ರೌಡಿಶೀಟರ್ಗಳು ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ 10 ಲಕ್ಷ ರೂಪಾಯಿಗೆ ಬ್ಲಾಕ್ಮೇಲ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಜೂನ್ 29ರಂದು ಅವರ ಸರ್ಕಾರಿ ವಸತಿಗೃಹದಲ್ಲೇ ರೌಡಿಶೀಟರ್ಗಳಾದ ಅನುಷ್, ಶೋಭರಾಜ್, ನವೀನ್ ಕೃತ್ಯ ಎಸಗಿದ್ದು, ಅನುಷ್ನನ್ನು ಬಂಧಿಸಲಾಗಿದೆ.
- Prashantha B
- Updated on: Jul 8, 2026
- 9:07 am
ಹಾಲಿನ ದರ ಹೆಚ್ಚಳಕ್ಕೆ ರಾಮನಗರದಲ್ಲಿ ರಣಕಹಳೆ: ಹಸುಗಳೊಂದಿಗೆ ಡಿಸಿ ಕಚೇರಿ ಮುಂದೆ ರೈತರ ವಿನೂತನ ಪ್ರತಿಭಟನೆ!
ಹಾಲಿನ ಉತ್ಪಾದನಾ ವೆಚ್ಚ ಹೆಚ್ಚಳ ಹಾಗೂ ಬರಗಾಲದ ಹಿನ್ನೆಲೆಯಲ್ಲಿ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ರೂ. ಏರಿಸುವಂತೆ ಆಗ್ರಹಿಸಿ ರಾಮನಗರದಲ್ಲಿ ಹಾಲು ಉತ್ಪಾದಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಸುಗಳನ್ನು ತಂದು, ಹಾಲು ಕರೆಯುವ ಮೂಲಕ ವಿನೂತನವಾಗಿ ಆಕ್ರೋಶ ಹೊರಹಾಕಿದ ರೈತರು, ಸರ್ಕಾರ ನೀಡುವ ಪ್ರೋತ್ಸಾಹಧನವನ್ನು 10 ರೂಪಾಯಿಗೆ ಹೆಚ್ಚಿಸುವಂತೆ ಹಾಗೂ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸುವಂತೆ ಸಿಎಂ ಡಿ.ಕೆ ಶಿವಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
- Prashantha B
- Updated on: Jul 7, 2026
- 4:03 pm
ಎಲ್ಲರೂ ಧರ್ಮದಲ್ಲಿ ಇರಬೇಕು, ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು: ಡಿಕೆಶಿ
ಎಲ್ಲರೂ ಧರ್ಮದಲ್ಲಿ ಇರಬೇಕು. ರಾಜಕೀಯದಲ್ಲೂ ಧರ್ಮ ಇಟ್ಟುಕೊಂಡು ಕೆಲಸ ಮಾಡಬೇಕು. ಶಿವಾಲ ಮೂರ್ತಿ ಬೆಟ್ಟದಲ್ಲಿ ನನ್ನ ತಂದೆ-ತಾಯಿ ಹರೆಕೆ ಹೊತ್ತಿದ್ದರು. ಬಳಿಕ ನಾನು ಹುಟ್ಟಿದವನು. ಹೀಗಾಗಿ ನಾನು ನನ್ನ ಸೇವೆಯನ್ನು ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ ಶ್ರೀ ಶ್ರೀ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ತ್ರಿವಿಧ ದಾಸೋಹಿ ಮಹಾಸ್ವಾಮಿಗಳ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
- Prashantha B
- Updated on: Jul 3, 2026
- 4:47 pm
ಅಕ್ಕಪಕ್ಕ ಕುಳಿತರೂ ಬಿಎಸ್ವೈ-ಸೋಮಣ್ಣ ಸೈಲೆಂಟ್: ಡಿಕೆಶಿ ಬರ್ತಿದ್ದಂತೆಯೇ ಎದ್ದು ನಿಂತು ಸ್ವಾಗತಿಸಿದ ನಾಯಕರು
ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ ಶ್ರೀ ಶ್ರೀ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ತ್ರಿವಿಧ ದಾಸೋಹಿ ಮಹಾಸ್ವಾಮಿಗಳ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಇದಕ್ಕೂ ಮುನ್ನ ಡಿಕೆ ಶಿವಕುಮಾರ್ ಅವರು ವೇದಿಕೆ ಮೇಲೆ ಆಗಮಿಸುತ್ತಿದ್ದಂತೆಯೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರು ಎದ್ದು ನಿಂತು ಸ್ವಾಗತ ಮಾಡಿದರು. ಇನ್ನು ಇದೇ ವೇಳೆ ಸೋಮಣ್ಣ ಅವರು ಡಿಕೆ ಶಿವಕುಮಾರ್ ಅವರಿಗೆ ಹೂಗುಚ್ಚ ನೀಡಿದರು. ಬಳಿಕ ಡಿಕೆಶಿ, ವೇದಿಕೆ ಮೇಲಿದ್ದ ಎಲ್ಲಾ ಸ್ವಾಮೀಜಿಗಳಿಗೆ ನಮಸ್ಕರಿಸಿದರು.ಇನ್ನೊಂದಡೆ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ಅವರು ವೇದಿಕೆಯಲ್ಲಿ ಅಕ್ಕಪಕ್ಕದಲ್ಲಿ ಕುಳಿತರೂ ಸಹ ಮಾತನಾಡದೆ ಸೈಲೆಂಟ್ ಆಗಿದ್ದರು.
- Prashantha B
- Updated on: Jul 3, 2026
- 3:31 pm
ರಾಮನಗರ ಕಲ್ಲು ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು ಪ್ರಕರಣ: ಮೂವರು ಅರೆಸ್ಟ್
Ramanagara Quarry Tragedy: ಬೆಂಗಳೂರು ದಕ್ಷಿಣದ ಮಾದಪಟ್ಟಣ ಕಾವೇರಿ ಕ್ವಾರಿ ದುರಂತದಲ್ಲಿ 7 ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವರೆಕೆರೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಿರ್ಲಕ್ಷ್ಯದ ಆರೋಪದಡಿ ಕೇಸ್ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಕ್ರಷರ್ ಮುಖ್ಯ ಮಾಲೀಕರ ಪತ್ತೆಗೆ ತನಿಖೆ ಚುರುಕುಗೊಂಡಿದೆ.
- Prashantha B
- Updated on: Jul 3, 2026
- 10:47 am
ಕ್ವಾರಿ ದುರಂತ: ಐವರು ಕಾರ್ಮಿಕರ ಸ್ಥಿತಿ ಗಂಭೀರ, ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಮಾದಪಟ್ಟಣ ಕಾವೇರಿ ಕ್ರಷರ್ನಲ್ಲಿ ಸಂಭವಿಸಿದ ಬಂಡೆ ಕುಸಿತ ದುರಂತದಲ್ಲಿ ಐವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ದುರಂತದಲ್ಲಿ ಏಳು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದು, ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ತರಲಾಗಿದೆ. ಗಾಯಾಳುಗಳು ಉತ್ತರ ಭಾರತ ಮೂಲದವರು ಎಂದು ತಿಳಿದುಬಂದಿದೆ.
- Prashantha B
- Updated on: Jul 2, 2026
- 12:02 pm
ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ದುರಂತ: 7 ಮಂದಿ ಬಲಿ, ಐವರು ಕೂಲಿ ಕಾರ್ಮಿಕರಿಗೆ ಗಾಯ
Ramanagara Quarry Tragedy: ರಾಮನಗರದ ಮಾದಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ದಾರುಣವಾಗಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿಟಾಚಿಯಿಂದ ಕೆಲಸ ಮಾಡುತ್ತಿದ್ದಾಗ ಮುಂಜಾನೆ ಈ ಭೀಕರ ದುರಂತ ಸಂಭವಿಸಿದೆ. ಕಾವೇರಿ ಕ್ರಷರ್ನಲ್ಲಿ ಘಟನೆ ನಡೆದಿದ್ದು, ಈ ವೇಳೆ 10-15 ಜನ ಬಿಹಾರದವರು, 2-3 ಸ್ಥಳೀಯರು ಕೆಲಸ ಮಾಡುತ್ತಿದ್ದರು. ಹಿಟಾಚಿಯಿಂದ ಕೆಲಸ ಮಾಡುತ್ತಿದ್ದಾಗ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
- Prashantha B
- Updated on: Jul 2, 2026
- 10:55 am
ಚನ್ನಪಟ್ಟಣದ ದೇವರಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಬ್ಯಾನರ್ಗೆ ಬೆಂಕಿ: ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ
ನಾಡಪ್ರಭು ಕೆಂಪೇಗೌಡರ ಜಯಂತಿಯ ಆಚರಣೆಯ ನಂತರ ಚನ್ನಪಟ್ಟಣದ ದೇವರಹಳ್ಳಿ ಗ್ರಾಮದಲ್ಲಿ ಅವರ ಬ್ಯಾನರ್ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಈ ಘಟನೆ ಜೂನ್ 27ರ ತಡರಾತ್ರಿ ನಡೆದಿದೆ. ಈ ಕೃತ್ಯದಿಂದ ಗ್ರಾಮಸ್ಥರು ತೀವ್ರ ಆಕ್ರೋಶಗೊಂಡಿದ್ದು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ.
- Prashantha B
- Updated on: Jun 29, 2026
- 12:39 pm
ಬಿಡದಿ ಟೌನ್ಶಿಪ್ ವಿರೋಧಿಸಿ ಅಪ್ಪಿಕೋ ಚಳವಳಿ: ರಾಜ್ಯವ್ಯಾಪಿ ಜನಾಂದೋಲನಕ್ಕೆ ಹೆಚ್ಡಿ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್ಶಿಪ್ ಯೋಜನೆ ವಿರುದ್ಧ ರಾಮನಗರದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಅಪ್ಪಿಕೋ ಚಳುವಳಿ ಮೂಲಕ ಮರಗಳನ್ನು ಉಳಿಸಲು ಆಗ್ರಹಿಸಿದ ರೈತರು, ಸರ್ಕಾರದ ಗಮನ ಸೆಳೆದರು. ಈ ಮಧ್ಯೆ, ಕುಮಾರಸ್ವಾಮಿ ಯೋಜನೆಯಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದು,ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ರಾಜಕೀಯ ಸಮರ ತಾರಕಕ್ಕೇರಿದೆ.
- Prashantha B
- Updated on: Jun 28, 2026
- 9:11 pm