ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ
ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ
ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ
ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್
ಆಡೊ ಹವ್ಯಾಸ ಇದೆ.
ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಫೈರಿಂಗ್: ನಾಲ್ವರ ವಿರುದ್ಧ FIR ದಾಖಲು
ಮಧ್ಯರಾತ್ರಿ ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಮಧ್ಯೆ ರಿಕ್ಕಿ ರೈ ಕಾರು ಚಾಲಕ ಬಸವರಾಜ್ ದೂರು ಆಧರಿಸಿ ನಾಲ್ವರ ವಿರುದ್ಧ ಬಿಡದಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
- Prashantha B
- Updated on: Apr 19, 2025
- 11:13 am
Gun Firing on Rikki Rai: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್: ಮೂಗು, ಕೈಗೆ ತಾಕಿದ ಗುಂಡು
ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ರಾಮನಗರ ಜಿಲ್ಲೆಯ ಬಿಡದಿ ಬಳಿ ದುಷ್ಕರ್ಮಿ ಗುಂಡಿನ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ರಿಕ್ಕಿ ರೈ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ದುಷ್ಕರ್ಮಿ ಗುಂಡು ಹಾರಿಸಿದ್ದು, ಮೂಗು ಮತ್ತು ಕೈಗೆ ಗಂಭೀರ ಗಾಯಗಳಾಗಿವೆ. ಸದ್ಯ ಬಿಡದಿ ಪೊಲೀಸರು ತನಿಖೆ ನಡೆಸಿದ್ದಾರೆ.
- Prashantha B
- Updated on: Apr 19, 2025
- 9:21 am
ಮೊಬೈಲ್ ಬಿಡಿ, ಪುಸ್ತಕ ಹಿಡಿ: ರಾಮನಗರದ ಶಿಕ್ಷಕರೊಬ್ಬರಿಂದ ವಿನೂತನ ಅಭಿಯಾನ
ಡ್ರಗ್ಸ್, ಮದ್ಯಪಾನದ ಚಟಕ್ಕಿಂತಲೂ ಇತ್ತೀಚೆಗೆ ಮಕ್ಕಳಿಗೆ ಮೊಬೈಲ್ ಗೀಳು ಹೆಚ್ಚಾಗಿದೆ. ಅತಿಯಾದ ಮೊಬೈಲ್ ವೀಕ್ಷಣೆ ಮಕ್ಕಳಲ್ಲಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ. ಈ ಬಗ್ಗೆ ರಾಮನಗರದ ಶಿಕ್ಷಕರೊಬ್ಬರು ಹೊಸ ಅಭಿಯಾನ ಆರಂಭಿಸಿದ್ದಾರೆ. ಮೊಬೈಲ್ ಬಿಡಿ, ಪುಸ್ತಕ ಹಿಡಿ ಎಂಬ ವಿನೂತನ ಅಭಿಯಾನದ ಮೂಲಕ ಮಕ್ಕಳು ಹಾಗೂ ಪೋಷಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
- Prashantha B
- Updated on: Apr 10, 2025
- 3:02 pm
ಮಂಡ್ಯದಲ್ಲಿ ಮತ್ತೆ ಹನುಮ ಧ್ವಜ ದಂಗಲ್ ಮುನ್ನೆಲೆಗೆ: ಮತ್ತೊಂದು ಹೋರಾಟಕ್ಕೆ ಮುಂದಾದ ಹಿಂದೂ ಸಂಘಟನೆಗಳು
ಕಳೆದ ವರ್ಷ ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದ 108 ಅಡಿ ಎತ್ತರದ ಕಂಬದ ಮೇಲೆ ಹಾರಾಡುತ್ತಿದ್ದ ಹನುಮಧ್ವಜವನ್ನು ಕೆಳಗಿಳಿಸಿ ತಿರಂಗ ಧ್ವಜ ಹಾರಿಸಲಾಗಿತ್ತು. ಇದು ರಾಜ್ಯದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೆ ಹನುಮ ಧ್ವಜ ದಂಗಲ್ ಮುನ್ನೆಲೆಗೆ ಬಂದಿದೆ.
- Prashantha B
- Updated on: Apr 10, 2025
- 9:39 am
ರಾಮನಗರ: ಜಮೀನು ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕೇಸ್, 12 ಮಂದಿಗೆ ಜೀವಾವಧಿ ಶಿಕ್ಷೆ
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹುಣಸನಹಳ್ಳಿಯಲ್ಲಿ 2021ರ ಆಗಸ್ಟ್ 8 ರಂದು ನಡೆದ ಬಾರ್ ಮುಂದಿನ ಕೊಲೆ ಪ್ರಕರಣದಲ್ಲಿ 12 ಮಂದಿ ಆರೋಪಿಗಳಿಗೆ ಕನಕಪುರದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
- Prashantha B
- Updated on: Apr 10, 2025
- 3:07 pm
ವೈರಮುಡಿ ಉತ್ಸವ ವೈಭವ: ಚೆಲುವನಾರಾಯಣನ ವಜ್ರ ಕಿರೀಟ ಕಣ್ತುಂಬಿಕೊಂಡ ಭಕ್ತ ಗಣ
ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಸ್ಥಾನದ ವೈರಮುಡಿ ಬ್ರಹ್ಮೋತ್ಸವವು ಅದ್ಧೂರಿಯಾಗಿ ನೆರವೇರಿತು. ರಾಜ್ಯ ಮತ್ತು ನೆರೆ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ, ವಜ್ರಖಚಿತ ವೈರಮುಡಿ ಕಿರೀಟ ಧರಿಸಿದ ಸ್ವಾಮಿಯ ದರ್ಶನ ಪಡೆದು ಪುನೀತರಾದರು. ಉತ್ಸವದಲ್ಲಿ ವಿವಿಧ ಕಲಾ ಪ್ರದರ್ಶನಗಳು ಮತ್ತು ಭಕ್ತಿಪರಾಕಾಷ್ಠೆ ಕಂಡುಬಂದವು. ಕೇಂದ್ರ ಸಚಿವರು ಮತ್ತು ರಾಜಕೀಯ ಮುಖಂಡರು ಸಹ ಉತ್ಸವದಲ್ಲಿ ಪಾಲ್ಗೊಂಡರು.
- Prashantha B
- Updated on: Apr 8, 2025
- 10:30 pm
ಮಂಡ್ಯ: ವಿಸಿ ನಾಲೆಯಲ್ಲಿ ಬಿದ್ದು ಒಂದೇ ಕುಟುಂಬದ ಮೂವರು ಸಾವು
ಶ್ರೀರಂಗಪಟ್ಟಣದ ಬಳಿ ವಿ.ಸಿ. ನಾಲೆಯಲ್ಲಿ ಕಾಲು ಜಾರಿ ಬಿದ್ದು ಮೈಸೂರಿನ ಗೌಸಿಯಾನಗರದ ಸೋನು (17), ಸಿಮ್ರಾನ್ (16) ಮತ್ತು ಸಿದ್ದೇಶ್ (9) ಎಂಬ ಮೂವರು ಮಕ್ಕಳು ಮೃತಪಟ್ಟಿದ್ದಾರೆ. ಈ ಮೂವರು ಚಿಕ್ಕಾಯರಳ್ಳಿಯ ಮಾರಮ್ಮ ಜಾತ್ರೆಗೆ ತೆರಳಿದ್ದರು. ಸೋನು ಮತ್ತು ಸಿದ್ದೇಶ್ ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸಿಮ್ರಾನ್ಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ದುರ್ಘಟನೆ ಕೆಆರ್ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
- Prashantha B
- Updated on: Apr 7, 2025
- 8:13 pm
87 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2.53 ರೂ. ಕೋಟಿ ಹಣ ಉಳಿತಾಯ: ಚಲುವರಾಯಸ್ವಾಮಿ
ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2.53 ಕೋಟಿ ರೂಪಾಯಿಗಳ ಉಳಿತಾಯವಾಗಿದೆ. ಸರ್ಕಾರದಿಂದ ಬಿಡುಗಡೆಯಾದ 30 ಕೋಟಿ ರೂಪಾಯಿಗಳಲ್ಲಿ 29.65 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಉಳಿತಾಯವಾದ ಹಣವನ್ನು ಕನ್ನಡ ಭವನ ನಿರ್ಮಾಣಕ್ಕೆ ಬಳಸಲು ಯೋಜಿಸಲಾಗಿದೆ. ಸಮ್ಮೇಳನದ ಆಯೋಜನೆಯು ಪಾರದರ್ಶಕವಾಗಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
- Prashantha B
- Updated on: Apr 5, 2025
- 7:44 pm
ಮತ್ತೋರ್ವ ರಾಜಕಾರಣಿ ಪುತ್ರ ರಾಜಕೀಯಕ್ಕೆ ಎಂಟ್ರಿ: ನಿಖಿಲ್ನಂತೆ ಸಿನಿಮಾ ತೊರೆದು ಪಾಲಿಟಿಕ್ಸ್ಗೆ
ಸಚಿವ ಚಲುವರಾಯಸ್ವಾಮಿ ಅವರ ಪುತ್ರ ಸಚಿನ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ನಾಗಮಂಗಲ ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ತಮ್ಮ ರಾಜಕೀಯ ಪ್ರಯಾಣ ಆರಂಭಿಸಿದ್ದಾರೆ. ಇದು ಮುಂದಿನ ವಿಧಾನಸಭೆ ಅಥವಾ ಲೋಕಸಭಾ ಚುನಾವಣೆಗೆ ತಯಾರಿ ಎಂದು ಹೇಳಲಾಗುತ್ತಿದೆ.
- Prashantha B
- Updated on: Apr 4, 2025
- 3:17 pm
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐರಾವತ ಬಸ್ ಮತ್ತು ಕಾರು ಮಧ್ಯೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಈ ದುರ್ಘಟನೆ ನಡೆದಿದೆ. ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
- Prashantha B
- Updated on: Apr 3, 2025
- 3:42 pm
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ: ಪೊಲೀಸರಿಂದ ತೀವ್ರ ಶೋಧ
ಪಾಕಿಸ್ತಾನ ಪರ ಗೋಡೆ ಬರಹ ಪ್ರಕಟಿಸಿದ್ದವರ ಪರವಾಗಿ ಕರೆ ಮಾಡಿದ ದುಷ್ಕರ್ಮಿಗಳು, ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಸ್ಥಳದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
- Prashantha B
- Updated on: Mar 25, 2025
- 12:03 pm
ಏಕಾಏಕಿ ತೆರೆದ ಕೆಆರ್ಎಸ್ ಡ್ಯಾಂ ಗೇಟ್: ಸಾವಿರಾರು ಕ್ಯೂಸೆಕ್ ಕಾವೇರಿ ನದಿ ನೀರು ಪೋಲು
ಕಳೆದ ವರ್ಷ ಬೇಸಿಗೆಯಲ್ಲಿ ಬೆಂಗಳೂರು ಮತ್ತು ಹಳೇ ಮೈಸೂರು ಭಾಗದ ಜನರು ಕುಡಿಯುವ ನೀರು ಮತ್ತು ಗೃಹ ಬಳಕೆ ನೀರಿಗಾಗಿ ಸಾಕಷ್ಟು ಪರದಾಡುವಂತಾಗಿತ್ತು. ಇದಕ್ಕೆ ಕಾರಣ ಕೆಆರ್ಎಸ್ ಡ್ಯಾಂನಲ್ಲಿ ನೀರು ಸಂಗ್ರಹ ಭಾರಿ ಪ್ರಮಾಣದಲ್ಲಿ ಕುಸಿದಿತ್ತು. ಇದರಿಂದ ಕಾವೇರಿ ತೀರದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಕಹಿ ಘಟನೆಗಳನ್ನು ಮರೆಯುವ ಮುನ್ನವೇ ಕೆಆರ್ಎಸ್ ಡ್ಯಾಂನಲ್ಲಿ ಮತ್ತೊಂದು ಅಚಾತುರ್ಯ ನಡೆದಿದೆ. ಏನದು? ಇಲ್ಲಿದೆ ವಿವರ
- Prashantha B
- Updated on: Mar 25, 2025
- 9:14 am