AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ಬಿ.

ಪ್ರಶಾಂತ್​ ಬಿ.

Author - TV9 Kannada

prashantha.basavarajaiah@tv9.com

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ
ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ
ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ
ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್
ಆಡೊ ಹವ್ಯಾಸ ಇದೆ.

Read More
ಕೊಟ್ಟ ಭರವಸೆ ಈಡೇರಿಸಿದ ಡಿಕೆಶಿ: ರಾಮನಗರ ಜನರ ಬಹುದಿನಗಳ ಕನಸು ನನಸು

ಕೊಟ್ಟ ಭರವಸೆ ಈಡೇರಿಸಿದ ಡಿಕೆಶಿ: ರಾಮನಗರ ಜನರ ಬಹುದಿನಗಳ ಕನಸು ನನಸು

ಬಿಎಂಟಿಸಿ ಬಸ್ ಎಂಬುದು ಬೆಂಗಳೂರಿಗರ ಅಚ್ಚುಮೆಚ್ಚಿನ ಸಂಚಾರ ಜೀವನಾಡಿ. ನಗರದ 40 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸಂಚಾರ ಮಾಡುತ್ತಿದ್ದ ಬಿಎಂಟಿಸಿ ಬಸ್​ಗಳು, ಇನ್ಮುಂದೆ ಬೆಂಗಳೂರು ನಗರದಿಂದ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರಿಸಲಿವೆ. ಇದರಿಂದ ಗ್ರಾಮಾಂತರ ಭಾಗದ ಪ್ರಯಾಣಿಕರಿಗೆ ತುಂಬಾ ಸಹಾಯ ಆಗಲಿದ್ದು, ಬಿಎಂಟಿಸಿಯ ಈ ನಿರ್ಧಾರದಿಂದ ಪ್ರಯಾಣಿಕರು ಕೂಡ ಸಂತಸಗೊಂಡಿದ್ದಾರೆ. ಇನ್ನು ಮೊದಲ ಹಂತದಲ್ಲೇ ರಾಮನಗರ ಜನರ ಬಹುದಿನಗಳ ಕನಸು ನನಸಾಗಿದೆ.

ಹಾಲು ಮಾರುವ ಕೆಲಸ ಕೊಟ್ಟದ್ದಾರೆ, ಮತ್ತೆ ಚುನಾವಣೆಗೆ ನಿಲ್ತೀನೋ ಇಲ್ವೋ ಗೊತ್ತಿಲ್ಲ: ಡಿ.ಕೆ.ಸುರೇಶ್

ಹಾಲು ಮಾರುವ ಕೆಲಸ ಕೊಟ್ಟದ್ದಾರೆ, ಮತ್ತೆ ಚುನಾವಣೆಗೆ ನಿಲ್ತೀನೋ ಇಲ್ವೋ ಗೊತ್ತಿಲ್ಲ: ಡಿ.ಕೆ.ಸುರೇಶ್

ಮಾಗಡಿಯ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ 'ಮುಂದೆ ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ' ಎಂದು ನೀಡಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. 115 ಕಿ.ಮೀ. ದೂರದಿಂದ ಕಾವೇರಿ ನೀರು ತಂದು ಮಾಗಡಿಯ 18 ಕೆರೆಗಳಿಗೆ ತುಂಬಿಸುವ ಈ ಮಹತ್ವದ ಯೋಜನೆಯ ಕುರಿತು ಮಾತನಾಡುತ್ತಾ, ಕೆಲಸ ಮಾಡಿ ತೋರಿಸುತ್ತೇವೆಂದು ವಿರೋಧ ಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.

Mega Job Fair: ರಾಮನಗರದಲ್ಲಿ ಮಾ. 5ರಂದು ಬೃಹತ್ ಉದ್ಯೋಗ ಮೇಳ; ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ

Mega Job Fair: ರಾಮನಗರದಲ್ಲಿ ಮಾ. 5ರಂದು ಬೃಹತ್ ಉದ್ಯೋಗ ಮೇಳ; ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ

ಬೆಂಗಳೂರು ದಕ್ಷಿಣ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಬಂದಿದೆ. ರಾಮನಗರ ಜಿಲ್ಲಾಡಳಿತದ ವತಿಯಿಂದ ಮಾರ್ಚ್ 5 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 200ಕ್ಕೂ ಹೆಚ್ಚು ಕಂಪನಿಗಳಿಂದ 20,000ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಸೇರಿದಂತೆ ಎಲ್ಲಾ ವಿದ್ಯಾರ್ಹತೆಗಳಿಗೂ ಅವಕಾಶವನ್ನು ಕಲ್ಪಿಸಲಾಗಿದೆ.

ರಾಮನಗರ: ಹಲವು ಜಿಲ್ಲೆಯ ಪೊಲೀಸರ‌ ನಿದ್ದೆಗೆಡಿಸಿದ್ದ ಅಂತಾರಾಜ್ಯ ಬೈಕ್​​​​ ಕಳ್ಳರ ಬಂಧನ

ರಾಮನಗರ: ಹಲವು ಜಿಲ್ಲೆಯ ಪೊಲೀಸರ‌ ನಿದ್ದೆಗೆಡಿಸಿದ್ದ ಅಂತಾರಾಜ್ಯ ಬೈಕ್​​​​ ಕಳ್ಳರ ಬಂಧನ

ರಾಮನಗರ ಪೊಲೀಸರು ರಾಜ್ಯದಾದ್ಯಂತ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. ಸದ್ಯ 50 ಲಕ್ಷ ರೂ. ಮೌಲ್ಯದ 10 ಬೈಕ್, 3 ಕಾರು ಸೇರಿ ಹಲವು ವಾಹನಗಳು ಹಾಗೂ 4 ಲಕ್ಷ ರೂ ನಗದು ವಶಪಡಿಸಿಕೊಳ್ಳಲಾಗಿದ್ದು, ಜೊತೆಗೆ 13 ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ ಇಕ್ಬಾಲ್ ಹುಸೇನ್

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ ಇಕ್ಬಾಲ್ ಹುಸೇನ್

ಶಾಸಕ ಇಕ್ಬಾಲ್ ಹುಸೇನ್ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಧ್ಯಾನದಲ್ಲಿರುವ ಗುರುಗಳು ಎದ್ದ ಕೂಡಲೇ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಅಂತಿಮ ದಿನಾಂಕ ನೀಡಲಿದ್ದಾರೆ. ಈ ಭವಿಷ್ಯ ನಿಜವಾಗದಿದ್ದರೆ ತಮ್ಮ ರಾಜಕೀಯ ವೃತ್ತಿ ಬೇಡ ಎಂದು ಇಕ್ಬಾಲ್ ಸವಾಲು ಹಾಕಿದ್ದಾರೆ.

ಮದುವೆಗೆ ನಿರಾಕರಣೆ: ಮಾತನಾಡಲು ಕರೆದು ಜಿಮ್ ಟ್ರೈನರ್​ಗೆ ಚಾಕು ಹಾಕಿದ ಪ್ರೇಯಸಿ

ಮದುವೆಗೆ ನಿರಾಕರಣೆ: ಮಾತನಾಡಲು ಕರೆದು ಜಿಮ್ ಟ್ರೈನರ್​ಗೆ ಚಾಕು ಹಾಕಿದ ಪ್ರೇಯಸಿ

ಪ್ರೇಯಸಿಯಿಂದ ಜಿಮ್ ಟ್ರೈನರ್​​ಗೆ ಚಾಕು ಇರಿದಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ. ಇಬ್ಬರು ಒಂದು ವರ್ಷ ಪರಸ್ಪರ ಪ್ರೀತಿಸಿ ಇದೀಗ ಮದುವೆ ನಿರಾಕರಿಸಿದ ಹಿನ್ನೆಲೆ ಪ್ರೇಯಸಿ ಚಾಕುವಿನಿಂದ ಇರಿದ್ದಾಳೆ. ಸದ್ಯ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನ ಅರೆಸ್ಟ್​ ಮಾಡಲಾಗಿದೆ.

ಕೌಟುಂಬಿಕ ಕಲಹಕ್ಕೆ ಯುವಕ ಬಲಿ; ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಆತ್ಮಹತ್ಯೆಗೆ ಯತ್ನ!

ಕೌಟುಂಬಿಕ ಕಲಹಕ್ಕೆ ಯುವಕ ಬಲಿ; ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಆತ್ಮಹತ್ಯೆಗೆ ಯತ್ನ!

ಮರಿಗೌಡನದೊಡ್ಡಿ ಗ್ರಾಮದಲ್ಲಿ ಕೌಟುಂಬಿಕ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆಯಿಂದ 25 ವರ್ಷದ ವಿಶಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಸ್ತೆ ಅಪಘಾತದ ನಂತರ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು. ಮಗನ ಸಾವಿನಿಂದ ಆಘಾತಗೊಂಡ ತಾಯಿ ಗೌರಮ್ಮ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಲ್ಕು ವರ್ಷಗಳ ಹಿಂದೆ ವಿಶಾಲ್ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದು, ಇಡೀ ಕುಟುಂಬ ಶೋಕದಲ್ಲಿದೆ.

ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು! ಸಿಸಿ ಕ್ಯಾಮಾರದಲ್ಲಿ ದೃಶ್ಯ ಸೆರೆ

ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು! ಸಿಸಿ ಕ್ಯಾಮಾರದಲ್ಲಿ ದೃಶ್ಯ ಸೆರೆ

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಗ್ರಾಮದ ಬಳಿ ನಾಲ್ಕು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದೆ. ತಡರಾತ್ರಿ ಸಮಯದಲ್ಲಿ ಕಾಡಿನಿಂದ ನಾಡಿಗೆ ಬಂದ ಗಜಪಡೆ ಗ್ರಾಮದಲ್ಲಿ ಸಂಚರಿಸುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಗೊಂಡಿವೆ. ಈ ಆನೆಗಳ ಹಿಂಡು ಬನ್ನೇರಘಟ್ಟ ಅರಣ್ಯ ಪ್ರದೇಶದಿಂದ ಗ್ರಾಮ ಭಾಗಕ್ಕೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಗ್ರಾಮದಲ್ಲಿ ಹಾದುಹೋಗಿದ ಆನೆಗಳು ಹಾನಿ ಉಂಟುಮಾಡುವ ಸಾಧ್ಯತೆ ಇರುವುದರಿಂದ ರೈತರು ಆತಂಕದಲ್ಲಿದ್ದಾರೆ.

ಸರ್ಕಾರಿ ಶಾಲೆಗಳ ಉಳಿವಿಗೆ ಪಣತೊಟ್ಟ ತಹಶೀಲ್ದಾರ್: ರಜೆ ದಿನಗಳಲ್ಲಿ ಶಾಲೆಗಳಿಗೆ ಪೇಂಟಿಂಗ್

ಸರ್ಕಾರಿ ಶಾಲೆಗಳ ಉಳಿವಿಗೆ ಪಣತೊಟ್ಟ ತಹಶೀಲ್ದಾರ್: ರಜೆ ದಿನಗಳಲ್ಲಿ ಶಾಲೆಗಳಿಗೆ ಪೇಂಟಿಂಗ್

ಚನ್ನಪಟ್ಟಣದ ತಹಶೀಲ್ದಾರ್​​ ತಮ್ಮ ವಿನೂತನ ಕಾರ್ಯದಿಂದ ಜನರ ಮೆಚ್ಚುಗೆ ಗಳಿಸುತ್ತಿದ್ದಾರೆ. ರಜೆ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಖುದ್ಧು ತಾವೇ ಬಣ್ಣ ಹಚ್ಚುತ್ತಿದ್ದಾರೆ. ಆ ಮೂಲಕ ಸರ್ಕಾರಿ ಶಾಲೆಗಳ ಉಳಿವು ಜೊತೆಗೆ ಮಕ್ಕಳನ್ನ ಆಕರ್ಷಿಸುವ ಕೆಲಸ ಮಾಡುತ್ತಿದ್ದಾರೆ. ಇದರ ಜೊತೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನ ಕೂಡ ಕೈಗೊಂಡಿದ್ದಾರೆ.

ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ! ಎಲ್ಲವೂ ಸುಟ್ಟು ಭಸ್ಮ

ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ! ಎಲ್ಲವೂ ಸುಟ್ಟು ಭಸ್ಮ

ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ಆಕ್ರೋಶಗೊಂಡ ಮಾವನೊಬ್ಬ ಅಳಿಯನ ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ವಿನೋದ್ ಮತ್ತು ಕಾವ್ಯಾ ಮದುವೆಯಾಗಿದ್ದಕ್ಕೆ ತೀವ್ರ ಕೋಪಗೊಂಡ ಕಾವ್ಯಾ ತಂದೆ ಚನ್ನೇಗೌಡ ಈ ಕೃತ್ಯ ಎಸಗಿದ್ದಾರೆ. ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ಮತ್ತು ಇತರೆ ವಸ್ತುಗಳು ಸುಟ್ಟು ಹೋಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಪ್ರೀತಿ ಮದ್ವೆಯಾದವಳ ಶೀಲದ ಮೇಲೆಯೇ ಶಂಕೆ: ಪ್ರೀತಿಕೊಂದ ಕೊಲೆಗಾರ

ಪ್ರೀತಿ ಮದ್ವೆಯಾದವಳ ಶೀಲದ ಮೇಲೆಯೇ ಶಂಕೆ: ಪ್ರೀತಿಕೊಂದ ಕೊಲೆಗಾರ

ಆತ ಆಕೆಯನ್ನ ಬಣ್ಣ ಬಣ್ಣದ ಮಾತುಗಳನ್ನ ಆಡಿ, ತನ್ನ ಗಾಳಕ್ಕೆ ಬೀಳಿಸಿಕೊಂಡು ವಿವಾಹವಾಗಿದ್ದ. ನಿನ್ನನ್ನ ಜೀವನ ಪೂರ್ತಿ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಲವ್ ಮ್ಯಾರೇಜ್ ಆದವನು ನಾಲ್ಕನೇ ತಿಂಗಳಿಗೆ ಆಕೆಯ ಕಥೆಯನ್ನೇ ಮುಗಿಸಿದ್ದಾನೆ. ಪ್ರೀತಿಸಿ ಮದುವೆಯಾದವಳ ಶೀಲವನ್ನೇ ಶಂಕಿಸಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈದಿದ್ದಾನೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ರಾಮನಗರದ ಬಿಡದಿ ಬಳಿ ಹಳಿತಪ್ಪಿದ ಗೂಡ್ಸ್​​ ರೈಲು, ತಪ್ಪಿದ ಭಾರಿ ದುರಂತ

ರಾಮನಗರದ ಬಿಡದಿ ಬಳಿ ಹಳಿತಪ್ಪಿದ ಗೂಡ್ಸ್​​ ರೈಲು, ತಪ್ಪಿದ ಭಾರಿ ದುರಂತ

ವಾಹನ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 1 ಬೋಗಿ ಹಳಿ ತಪ್ಪಿರುವ ಘಟನೆ ಬೆಂಗಳೂರು- ಮೈಸೂರು ಮಾರ್ಗದ ಬಿಡದಿ ಸಮೀಪ ನಡೆದಿದೆ. ಬಿಡದಿ ರೈಲ್ವೆ ನಿಲ್ದಾಣ ದಾಟಿದ ಬಳಿಕ ಘಟನೆ ನಡೆದಿದ್ದು, ಈ ಭಾಗದಿಂದ ಸಂಚರಿಸಬೇಕಿದ್ದ ಟ್ರೇನ್​​ಗಳಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.