ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.
ಬೆಂಗಳೂರು ಪ್ರವೇಶಕ್ಕೂ ಮುನ್ನ ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಕ್ಷ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಬೆಂಗಳೂರು ಪ್ರವೇಶಕ್ಕೂ ಮುನ್ನವೇ ಪೊಲೀಸರು ತಡೆದಿದ್ದಾರೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿದ್ದ ಈ ಪಾದಯಾತ್ರೆಯನ್ನು ತಡೆದ ಕಾರಣ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ವಾಗ್ವಾದ, ತಳ್ಳಾಟ-ನೂಕಾಟಗಳು ನಡೆದಿವೆ. ಈ ವೇಳೆ ಎಸ್ಪಿ ಕೈ ಬೆರಳಿಗೂ ಗಾಯವಾದ ಪ್ರಸಂಗ ನಡೆದಿದೆ.
- Prashantha B
- Updated on: Aug 10, 2026
- 5:18 pm
ಬಿಡದಿ ಟೌನ್ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ರಾಜ್ಯ ಸರ್ಕಾರದ ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಪಾದಯಾತ್ರೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭಾಗವಹಿಸಿದರು. 'ದೇಹಕ್ಕಷ್ಟೇ ವಯಸ್ಸಾಗಿದೆ, ಬುದ್ಧಿಗಲ್ಲ' ಎಂದ ಅವರು, ರೈತರ ಪರ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವೆ. ಪ್ರಾಯಶ್ಚಿತ್ತ ಯಾರಿಗೆ ಆಗಲಿದೆ ಎಂಬುದಾಗಿ ಕಾದು ನೋಡಿ ಎಂದು ಕಾಂಗ್ರೆಸ್ಗೆ ತಿರುಗೇಟು ನೀಡಿದರು.
- Prashantha B
- Updated on: Aug 10, 2026
- 1:55 pm
ಬಿಡದಿ ಟೌನ್ಶಿಪ್ ಕಿಚ್ಚು: ಮೊದಲ ದಿನದ ಜೆಡಿಎಸ್ ಪಾದಯಾತ್ರೆ ಅಂತ್ಯ; ಎಲ್ಲರಿಗೂ ಧನ್ಯವಾದ ಹೇಳಿದ ನಿಖಿಲ್
JDS Padayatra: ಬಿಡದಿ ಟೌನ್ಶಿಪ್ ವಿರೋಧಿಸಿ ಇಂದಿನಿಂದ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಆರಂಭಿಸಿವೆ. ಬೆಳಿಗ್ಗೆ ಬೈರಮಂಗಲ ಗ್ರಾಮದಿಂದ ಆರಂಭವಾಗಿದ್ದ ಪಾದಯಾತ್ರೆ, ಇದೀಗ ಬಿಡದಿಯಲ್ಲಿ ಮುಕ್ತಾಯಗೊಂಡಿದೆ. ಆ ಮೂಲಕ ಮೊದಲ ದಿನದ ಪಾದಯಾತ್ರೆ ಯಶಸ್ವಿಯಾಗಿ ನೆರವೇರಿದೆ. ನಾಳೆ ನೈಸ್ ರಸ್ತೆವರೆಗೂ ಪಾದಯಾತ್ರೆ ಮುಂದುವರೆಯಲಿದೆ.
- Prashantha B
- Updated on: Aug 9, 2026
- 8:21 pm
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆಗೆ ಚಾಲನೆ: ಯಾರೆಲ್ಲ ಭಾಗಿ?
ರಾಜ್ಯ ಸರ್ಕಾರದ ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ 'ನಮ್ಮ ಭೂಮಿ ನಮ್ಮ ಹಕ್ಕು' ಎಂಬ ಘೋಷಣೆಯಡಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಬೃಹತ್ ಪಾದಯಾತ್ರೆಗೆ ರಾಮನಗರ ಜಿಲ್ಲೆಯ ಬೈರಮಂಗಲ ಗ್ರಾಮದಲ್ಲಿ ಚಾಲನೆ ನೀಡಲಾಗಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಆರ್. ಅಶೋಕ್ ಪಾದಯಾತ್ರೆಗೆ ಹಸುರು ನಿಶಾನೆ ತೋರಿದ್ದು, ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂಪಾರ್ಕ್ವರೆಗೂ ಪಾದಯಾತ್ರೆ ನಡೆಯಲಿದೆ.
- Prashantha B
- Updated on: Aug 9, 2026
- 2:03 pm
HM ರೇವಣ್ಣ ಬದಲು HD ರೇವಣ್ಣ ಎಂದು ಹೇಳಿದ ಕಾಂಗ್ರೆಸ್ ಮುಖಂಡ, ಮುಂದೇನಾಯ್ತು?
ಸಚಿವ ಸ್ಥಾನ ಸಿಕ್ಕ ಬಳಿಕ ಎಚ್ಸಿ ಬಾಲಕೃಷ್ಣ ಅವರು ಮೊದಲ ಬಾರಿಗೆ ಸ್ವಕ್ಷೇತ್ರ ಮಾಗಡಿಗೆ ಆಗಮಿಸಿದ್ದು, ಈ ವೇಳೆ ಅವರ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಕೋರಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು H.M.ರೇವಣ್ಣ ಅನ್ನೋ ಬದಲು H.D.ರೇವಣ್ಣ ಎಂದು ಕರೆದಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಹೆಚ್ಎಂ ರೇವಣ್ಣ, ಅವನ ಹೆಸರು ಯಾಕೆ ಹೇಳುತ್ತೀಯಾ? ನಾನು ಮಾಗಡಿಯ ರೇವಣ್ಣ, ಹಾಗೆ ಇರುತ್ತೇನೆ ಎಂದಿದ್ದಾರೆ. ರೇವಣ್ಣನವರ ಮಾತಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನ ನಗೆಗಡಲಲ್ಲಿ ತೇಲಾಡಿದರು.
- Prashantha B
- Updated on: Aug 8, 2026
- 4:27 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು!
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನ ರಾಮನಗರ ತಾಲೂಕಿನ ಅವರಗೆರೆ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಸೈನ್ ಬೋರ್ಡ್ಗೆ ಡಿಕ್ಕಿ ಹೊಡೆದು ಕೇರಳದ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಿಡದಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ, ಸಂಚಾರ ಸುಗಮಗೊಳಿಸಿದ್ದಾರೆ.
- Prashantha B
- Updated on: Aug 8, 2026
- 9:16 am
ಬಿಡದಿ ಟೌನ್ಶಿಪ್ ವಿರುದ್ಧ ಸಮರಕ್ಕೆ ಬಿಜೆಪಿ, ಜೆಡಿಎಸ್ ಸಜ್ಜು: ಬೃಹತ್ ಪಾದಯಾತ್ರೆ ನಡೆಸಲು ನಿರ್ಧಾರ
ಬಿಡದಿ ಟೌನ್ಶಿಪ್ ಯೋಜನೆಯ ವಿರುದ್ಧದ ಹೋರಾಟದ ಕುರಿತು ಚರ್ಚಿಸಲು ಬಿಜೆಪಿ ನಾಯಕರು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದರು. ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಮತ್ತು ಪಿ.ಸಿ. ಮೋಹನ್ ಇದ್ದರು. ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಡುವ ಕಾರ್ಯತಂತ್ರ, ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆ ಹಾಗೂ ಹೋರಾಟದ ರೂಪರೇಷೆಗಳ ಬಗ್ಗೆ ಮಾತುಕತೆ ನಡೆಸಿದರು.
- Prashantha B
- Updated on: Aug 6, 2026
- 7:18 am
ಬಿಡದಿ ಟೌನ್ಶಿಪ್ ವಿರುದ್ಧ ಜೆಡಿಎಸ್ ರಣಕಹಳೆ: ದಳಪತಿಗಳ ಪಾದಯಾತ್ರೆಗೆ ಮರುದಿನಾಂಕ ಫಿಕ್ಸ್
ರಾಮನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಾದಯಾತ್ರೆಯ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಡದಿ ಟೌನ್ಶಿಪ್ ಯೋಜನೆ ವಿರುದ್ಧ ಆಗಸ್ಟ್ 9ರಿಂದ 11ರವರೆಗೆ ಪಾದಯಾತ್ರೆ ಘೋಷಿಸಿದ್ದಾರೆ.
- Prashantha B
- Updated on: Aug 2, 2026
- 3:11 pm
ವಿವಾದದ ನಡುವೆಯೇ ಬಿಡದಿ ಟೌನ್ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್ಶಿಪ್ ಯೋಜನೆ ಪರವಾಗಿರುವ ರೈತರು ರಾಮನಗರದ ಕಂದಾಯ ಭವನದಲ್ಲಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ) ಕಚೇರಿಗೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಬನ್ನಿಗಿರಿ, ಹೊಸೂರು, ಅರಳಾಳುಸಂದ್ರ, ಕೆ.ಜಿ. ಗೊಲ್ಲರಪಾಳ್ಯ ಸೇರಿದಂತೆ ಹಲವು ಗ್ರಾಮಗಳ ರೈತರು ತಮ್ಮ ಜಮೀನುಗಳ ದಾಖಲೆಗಳನ್ನು ಒದಗಿಸುತ್ತಿದ್ದು, ಪ್ರತಿ ಎಕರೆಗೆ 2 ರಿಂದ 2.17 ಕೋಟಿ ರೂ. ಪರಿಹಾರ ಪಡೆಯಲು ಮುಂದಾಗಿದ್ದಾರೆ.
- Prashantha B
- Updated on: Jul 17, 2026
- 6:34 pm
ಬಿಡದಿ ಟೌನ್ಶಿಪ್ ವಿವಾದ: ವಿರೋಧದ ಮಧ್ಯೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಬಿಡುಗಡೆ ಮಾಡಿದ ಸರ್ಕಾರ
Bidadi Township Row: ಬಿಡದಿ ಟೌನ್ಶಿಪ್ ಯೋಜನೆ ಜಟಾಪಟಿ ಮುಂದುವರೆದಿದೆ. ಯೋಜನೆ ವಿರುದ್ಧ ಹೆಚ್ಡಿ ದೇವೇಗೌಡರು ಟೊಂಕ ಕಟ್ಟಿ ನಿಂತಿದ್ದಾರೆ. ಇದೆಲ್ಲದರ ಮಧ್ಯೆ ಇದೀಗ ರಾಜ್ಯ ಸರ್ಕಾರ ಎರಡನೇ ಹಂತದ ಭೂಸ್ವಾಧೀನ ಪ್ರಕ್ರಿಯೆಯ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಆ ಮೂಲಕ 2,550 ಎಕರೆ ಜಮೀನನ್ನು ಈ ಯೋಜನೆಗಾಗಿ ಸ್ವಾಧೀನಪಡಿಸಿಕೊಳ್ಳಲು ಆದೇಶ ಹೊರಡಿಸಲಾಗಿದೆ.
- Prashantha B
- Updated on: Jul 15, 2026
- 4:40 pm
ರಾಮನಗರದಲ್ಲಿ ಭುಗಿಲೆದ್ದ ಟೌನ್ಶಿಪ್ ಕಿಚ್ಚು: ಸರ್ವೆಗೆ ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ
ಬಿಡದಿ ಟೌನ್ಶಿಪ್ ಯೋಜನೆಗೆ ವಿರೋಧಿಸಿ ರೈತರಿಂದ ಪ್ರತಿಭಟನೆಗಳು ಮುಂದುವರೆದಿವೆ. ಈ ವಿರೋಧದ ಮಧ್ಯೆ ಸರ್ವೆಗೆ ಬಂದಿದ್ದ ಅಧಿಕಾರಿಗಳ ವಿರುದ್ಧ ಪ್ರತಿಭಟನಾನಿರತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊರಕೆ ಸೇವೆ ಮಾಡಿದ್ದಾರೆ. ಎರಡು ಕಾರುಗಳನ್ನ ಹಾನಿಗೊಳಿಸಿರುವ ಘಟನೆ ರಾಮನಗರ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ನಡೆದಿದೆ.
- Prashantha B
- Updated on: Jul 13, 2026
- 5:48 pm
ಚನ್ನಪಟ್ಟಣ ತಹಶೀಲ್ದಾರ್ ಮೇಲೆ ಹಲ್ಲೆ, ವಿವಸ್ತ್ರಗೊಳಿಸಿ 10 ಲಕ್ಷ ರೂ.ಗೆ ಬ್ಲಾಕ್ಮೇಲ್: ರೌಡಿಶೀಟರ್ ಬಂಧನ
ಚನ್ನಪಟ್ಟಣ ತಹಶೀಲ್ದಾರ್ ಬಿಎನ್ ಗಿರೀಶ್ ಮೇಲೆ ರೌಡಿಶೀಟರ್ಗಳು ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ 10 ಲಕ್ಷ ರೂಪಾಯಿಗೆ ಬ್ಲಾಕ್ಮೇಲ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಜೂನ್ 29ರಂದು ಅವರ ಸರ್ಕಾರಿ ವಸತಿಗೃಹದಲ್ಲೇ ರೌಡಿಶೀಟರ್ಗಳಾದ ಅನುಷ್, ಶೋಭರಾಜ್, ನವೀನ್ ಕೃತ್ಯ ಎಸಗಿದ್ದು, ಅನುಷ್ನನ್ನು ಬಂಧಿಸಲಾಗಿದೆ.
- Prashantha B
- Updated on: Jul 8, 2026
- 9:07 am