ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.
ಬಿಡದಿ ಟೌನ್ಶಿಪ್ ಯೋಜನೆ: ಭೂಸ್ವಾಧೀನಕ್ಕೆ ಭೂಮಿ ಕೊಡುವ ರೈತರ ಮೇಲೆ ವಂಚಕರ ಕಣ್ಣು; ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ರೂ. ಪೀಕಲು ಯತ್ನ
ರಾಮನಗರದ ಬಿಡದಿ ಟೌನ್ಶಿಪ್ ಯೋಜನೆಯ ಭೂಸ್ವಾಧೀನಕ್ಕೆ ಭೂಮಿ ನೀಡುವ ರೈತರ ನಕಲಿ ದಾಖಲೆ ಸೃಷ್ಟಿಸಿ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ 5 ಕೋಟಿಗೂ ಅಧಿಕ ಪರಿಹಾರದ ಹಣ ಪೀಕಲು ಯತ್ನಿಸಿದ ಜಾಲ ಪತ್ತೆಯಾಗಿದೆ. ದಾಖಲೆಗಳ ಪ್ರಾಥಮಿಕ ಭೌತಿಕ ಪರಿಶೀಲನೆ ವೇಳೆ ಅಧಿಕಾರಿಗಳಿಗೆ ಅನುಮಾನ ಮೂಡಿದ್ದು, ಸೆಪ್ಟೆಂಬರ್ 3ರಂದು GBDA ಅಧಿಕಾರಿಗಳು ಪರಿಶೀಲನೆಗಾಗಿ ರಾಮನಗರ ತಹಶೀಲ್ದಾರ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Prashantha B
- Updated on: Sep 6, 2026
- 10:02 am
ರಾಮನಗರದಲ್ಲಿ ಖೋಟಾನೋಟು ಜಾಲ ಪತ್ತೆ: ಕಿಂಗ್ಪಿನ್ ಸೇರಿ ಮತ್ತೆ ಮೂವರ ಬಂಧನ
ಇತ್ತೀಚೆಗೆ ರಾಮನಗರದಲ್ಲಿ ಖೋಟಾ ನೋಟು ತಯಾರಿಕಾ ಜಾಲವೊಂದು ಪತ್ತೆ ಆಗಿತ್ತು. ಈ ಪ್ರಕರಣ ಸಾಕಷ್ಟು ಚರ್ಚೆ ಮತ್ತು ಆತಂಕ್ಕೆ ಕಾರಣವಾಗಿತ್ತು. ಈಗಾಗಲೇ 7 ಆರೋಪಿಳನ್ನು ಬಂಧಿಸಿರುವ ಪೊಲೀಸರು ಇದೀಗ ಕಿಂಗ್ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದಾರೆ. ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Prashantha B
- Updated on: Sep 3, 2026
- 4:05 pm
ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಬಂದಿಲ್ಲ; ಜಿಲ್ಲಾಧಿಕಾರಿ ಹೇಳಿಕೆ
ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಸ್ನಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋಗೆ ಸೆಟ್ ಹಾಕಲಾಗಿದೆ. ಆದರೆ ಶೋ ನಡೆಸಲು ಬೇಕಿರುವ ಅಗತ್ಯ ಅನುಮತಿಗಳನ್ನು ಆಯೋಜಕರು ಇನ್ನೂ ಪಡೆದಿಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Prashantha B
- Updated on: Sep 1, 2026
- 4:45 pm
ರಾಮನಗರದಲ್ಲಿ ಖೋಟಾ ನೋಟು ಜಾಲ ಪತ್ತೆ: ನಿರ್ಮಾಣ ಹಂತದ ಮನೆಯಲ್ಲಿ ನಡೆಯುತ್ತಿದ್ದ ದಂಧೆ
Fake currency Ramanagara: ರಾಮನಗರದಲ್ಲಿ 200 ಮತ್ತು 500 ರೂ. ಮುಖಬೆಲೆಯ ಖೋಟಾ ನೋಟು ಮುದ್ರಣ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ನಿರ್ಮಾಣ ಹಂತದ ಮನೆಯಲ್ಲಿ ಕೆಮಿಕಲ್ ಬಳಸಿ ನಕಲಿ ನೋಟುಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು. ಸದ್ಯ ಐಜೂರು ಠಾಣೆ ಪೊಲೀಸರು ಐವರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.
- Prashantha B
- Updated on: Aug 31, 2026
- 8:03 pm
ಕೊನೆಗೂ ಕಾರ್ಯಕರ್ತರ ಆಸೆ ಈಡೇರಿತು: ರಾಮನಗರ ಕ್ಷೇತ್ರವನ್ನ ಮತ್ತೆ ಪಡೆಯಲು ದಳಪತಿಗಳ ಪ್ಲ್ಯಾನ್
ರಾಮನಗರ ವಿಧಾನಸಭಾ ಕ್ಷೇತ್ರ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ರಾಜಕೀಯ ಜನ್ಮ ನೀಡಿದ ಕ್ಷೇತ್ರ. ಕೆಲ ವರ್ಷಗಳ ಕೆಳಗೆ ಜೆಡಿಎಸ್ ಪ್ರಾಬಲ್ಯವಿದ್ದ ಕ್ಷೇತ್ರ. ಆದರೆ ಇದೀಗ ಕಾಂಗ್ರೆಸ್ ತೆಕ್ಕೆಯಲ್ಲಿದೆ. ಹೀಗಾಗಿ ಕ್ಷೇತ್ರವನ್ನ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ದಳಪತಿಗಳು ಮುಂದಾಗಿದ್ದಾರೆ. ಇದಕ್ಕೊಂದು ದಳಪತಿಗಳು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷಗಳು ಇವೆ. ಆಗಲೇ ಕುಮಾರಸ್ವಾಮಿ ರಣತಂತ್ರ ಹೆಣೆದಿದ್ದಾರೆ.
- Prashantha B
- Updated on: Aug 27, 2026
- 9:29 pm
ಚನ್ನಪಟ್ಟಣದ ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು ಪ್ರತ್ಯಕ್ಷ
ಚನ್ನಪಟ್ಟಣದ ನೇರಳೂರು ಗ್ರಾಮದ ಕಬ್ಬಿನ ತೋಟದಲ್ಲಿ ನಾಲ್ಕು ಜೀವಂತ ಚಿರತೆ ಮರಿಗಳು ಪತ್ತೆಯಾಗಿವೆ. ಕಬ್ಬು ಕಟಾವು ವೇಳೆ ಕಂಡುಬಂದ ಈ 4-5 ದಿನಗಳ ಮರಿಗಳನ್ನು ಅರಣ್ಯ ಇಲಾಖೆ ರಕ್ಷಿಸಿದೆ. ತಾಯಿ ಚಿರತೆಗಾಗಿ ಗ್ರಾಮಸ್ಥರಲ್ಲಿ ಭೀತಿ ಮನೆ ಮಾಡಿದೆ. ತಕ್ಷಣ ತಾಯಿ ಚಿರತೆಯನ್ನು ಸೆರೆಹಿಡಿಯಲು ಬೋನು ಇಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
- Prashantha B
- Updated on: Aug 27, 2026
- 7:35 am
ರೇಷ್ಮೆ ಬೆಳೆಗಾರರಿಗೆ ಸಿಹಿ ಸುದ್ದಿ: ದಿನಕ್ಕೆ 115 ಟನ್ ಗೂಡು ಮಾರಾಟ ಸಾಮರ್ಥ್ಯದ ಏಷ್ಯಾದ ಬೃಹತ್ ಮಾರುಕಟ್ಟೆ ಉದ್ಘಾಟನೆಗೆ ಸಜ್ಜು
ರಾಮನಗರದಲ್ಲಿ 75 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಏಷ್ಯಾದ ಅತಿದೊಡ್ಡ ಹೈಟೆಕ್ ರೇಷ್ಮೆ ಮಾರುಕಟ್ಟೆ ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ. ಪ್ರಸ್ತುತ 40-45 ಟನ್ ರೇಷ್ಮೆಗೂಡು ಮಾರಾಟವಾಗುತ್ತಿದ್ದರೆ, ಈ ನೂತನ ಮಾರುಕಟ್ಟೆ 110-115 ಟನ್ಗಳಷ್ಟು ವಹಿವಾಟು ನಡೆಸುವ ನಿರೀಕ್ಷೆಯಿದೆ. ಆಧುನಿಕ ಸೌಲಭ್ಯಗಳೊಂದಿಗೆ ರೈತರಿಗೆ ಉತ್ತಮ ಮಾರುಕಟ್ಟೆ ಒದಗಿಸಿ, ರೇಷ್ಮೆ ಬೆಳೆಗಾರರ ಆರ್ಥಿಕತೆಯನ್ನು ಹೆಚ್ಚಿಸುವ ಮಹತ್ವದ ಯೋಜನೆಯಿದು.
- Prashantha B
- Updated on: Aug 25, 2026
- 4:33 pm
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ: ಅಂಗಡಿ ತೆರವು ಕಾರ್ಯಾಚರಣೆಗೆ ವ್ಯಾಪಾರಿಗಳ ತೀವ್ರ ವಿರೋಧ
ರಾಮನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಅಂಗಡಿಗಳ ತೆರವು ಕಾರ್ಯಾಚರಣೆಯು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಯಾವುದೇ ಪೂರ್ವ ಸೂಚನೆ ಅಥವಾ ನ್ಯಾಯಾಲಯದ ಆದೇಶವಿಲ್ಲದೆ ತಮ್ಮ ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಆರೋಪಿಸಿ ವ್ಯಾಪಾರಿಗಳು ಪ್ರತಿಭಟಿಸಿದ್ದಾರೆ. ಹೀಗಾಗಿ ಸ್ಥಳದಲ್ಲಿ ಕೆಲ ಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದ ಪ್ರಸಂಗ ನಡೆದಿದೆ.
- Prashantha B
- Updated on: Aug 21, 2026
- 5:25 pm
ಹೇಳಿಕೆ ನೀಡಿ ಕುಮಾರಣ್ಣ ಸೈಲೆಂಟ್: ಇತ್ತ ನೈಸ್ ಟೋಲ್ ಸಿಬ್ಬಂದಿ-ಜನರ ಮಧ್ಯೆ ನಿತ್ಯ ಫೈಟ್!
ನೈಸ್ ರಸ್ತೆ ಟೋಲ್ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಟೋಲ್ ಕಟ್ಟಬೇಡಿ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಕೆಲ ವಾಹನ ಸವಾರರು ಟೋಲ್ ಪಾವತಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಟೋಲ್ ಸಿಬ್ಬಂದಿ ಹಾಗೂ ವಾಹನ ಸವಾರರ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ. ಮತ್ತೊಂದೆಡೆ ರೈತ ಸಂಘಗಳು ಕುಮಾರಸ್ವಾಮಿ ಹೇಳಿಕೆಗೆ ಬೆಂಬಲ ಸೂಚಿಸಿದ್ದು, ಜಮೀನು ಕಳೆದುಕೊಂಡ ರೈತರು ಮಾತ್ರ ತಮ್ಮ ಸಮಸ್ಯೆಗಳನ್ನು ಯಾರೂ ಕೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ನೈಸ್ ಆಡಳಿತ ಟೋಲ್ ಪಾವತಿಸದೇ ಸಂಚರಿಸುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.
- Prashantha B
- Updated on: Aug 20, 2026
- 9:38 pm
ರಾಮನಗರ: ವೃಷಭಾವತಿ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ ಜಿಲ್ಲೆಯ ವೃಷಭಾಪುರ ಗ್ರಾಮದ ಬಳಿಯ ವೃಷಭಾವತಿ ನದಿಯಲ್ಲಿ 20 ಕಂತೆಗಳ ನಕಲಿ 500 ರೂ ನೋಟುಗಳು ಪತ್ತೆಯಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಆರಂಭದಲ್ಲಿ ಅಸಲಿ ಎಂದು ಭಾವಿಸಿ ಜನ ಸೇರಿದ್ದರು. ಆದರೆ, ಅವು ನಕಲಿ ಎಂದು ತಿಳಿದ ಮೇಲೆ ಸ್ಥಳದಿಂದ ತೆರಳಿದರು. ದುಷ್ಕರ್ಮಿಗಳು ಈ ಕಂತೆಗಳನ್ನು ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.
- Prashantha B
- Updated on: Aug 19, 2026
- 4:37 pm
ನಕಲಿ ಔಷಧ ತಯಾರಿಸುತ್ತಿದ್ದ ಬೃಹತ್ ಜಾಲ ಪತ್ತೆ: ದೇಶದ ಹಲವು ರಾಜ್ಯಗಳಿಗೆ ಜಾಲ ವಿಸ್ತರಿಸಿರುವ ಶಂಕೆ!
Ramanagara Fake Medicine News: ಬಹುದೊಡ್ಡ ನಕಲಿ ಔಷಧಿ ಜಾಲವೊಂದು ಇದೀಗ ಬೆಂಗಳೂರಿನಲ್ಲಿ ಬಯಲಾಗಿದೆ. ಬರೋಬ್ಬರಿ 6 ಕೋಟಿಗೂ ಅಧಿಕ ಮೌಲ್ಯದ ನಕಲಿ ಔಷಧಿ ಜಾಲದ ಕರಾಳ ಮುಖವಾಡ ಕಳಚಿದೆ. ಆದರೆ ದೇಶದ ಹಲವು ರಾಜ್ಯಗಳಿಗೆ ಈ ಜಾಲ ವಿಸ್ತರಿಸಿರುವ ಶಂಕೆ ವ್ಯಕ್ತವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
- Prashantha B
- Updated on: Aug 19, 2026
- 4:06 pm
ನಕಲಿ ಔಷಧ ಜಾಲ ಪತ್ತೆಯಾಗಿದ್ದು ಹೇಗೆ? ರೋಚಕ ಮಾಹಿತಿ ಬಿಚ್ಚಿಟ್ಟ ರಾಮನಗರ ಎಸ್ಪಿ
ರಾಮನಗರದ ದೊಡ್ಡೇರಿ ಗ್ರಾಮದ ಫಾರ್ಮ್ಹೌಸ್ನಲ್ಲಿ ನಕಲಿ ಔಷಧ ತಯಾರಿಕೆ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪ್ರಶಾಂತ್ ವಿದೇಶದಲ್ಲಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸರು ಈಗಾಗಲೇ ಒಬ್ಬನನ್ನು ಬಂಧಿಸಿದ್ದು, ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ. ಜಾಲ ಪತ್ತೆಯಾಗಿದ್ದು ಹೇಗೆ ಎಂಬ ಬಗ್ಗೆ ಎಸ್ಪಿ ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ.
- Prashantha B
- Updated on: Aug 19, 2026
- 1:45 pm