AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್​ ಬಿ.

ಪ್ರಶಾಂತ್​ ಬಿ.

Author - TV9 Kannada

prashantha.basavarajaiah@tv9.com

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ
ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ
ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ
ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್
ಆಡೊ ಹವ್ಯಾಸ ಇದೆ.

Read More
ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ವಾಹನ ಪಲ್ಟಿ, ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ  ಭೀಕರ ದೃಶ್ಯ ಸೆರೆ

ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ವಾಹನ ಪಲ್ಟಿ, ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ಭೀಕರ ದೃಶ್ಯ ಸೆರೆ

ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಳನೀರು ತುಂಬಿಕೊಂಡು ಹೋಗುತ್ತಿದ್ದ ಪಿಕ್ಅಪ್ ವಾಹನ ಏಕಾಏಕಿ ಪಲ್ಟಿಯಾಗಿದೆ. ಅತೀಯಾದ ಲೋಡ್, ಜೊತೆಗೆ ಅತೀಯಾದ ಬಿಸಿಲಿನ ವಾತಾವರಣದಿಂದ ಪಿಕ್ಅಪ್ ವಾಹನದ ಟೈಯರ್ ಸ್ಪೋಟಗೊಂಡಿದೆ. ಪರಿಣಾಮ ಪಿಕ್ ಅಪ್ ವಾಹನದ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಎಳನೀರು ಹೆದ್ದಾರಿಯಲ್ಲಿ ಚೆಲ್ಲಿದೆ. ಅತೀ ವೇಗವಾಗಿ ಬರುತ್ತಿದ್ದ ಇತರ ವಾಹನಗಳು ಸಹ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ. ಈ ಘಟನೆಯ ದೃಶ್ಯ ಕಾರಿನ ಡ್ಯಾಶ್ ಕ್ಯಾಮ್​​ನಲ್ಲಿ ಸೆರೆಯಾಗಿದೆ.

ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚಿಸುತ್ತೇವೆ: ಸ್ವ ಪಕ್ಷದ ಸಚಿವರ ವಿರುದ್ಧ ಗುಡುಗಿದ ಕೈ ಶಾಸಕ‌

ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚಿಸುತ್ತೇವೆ: ಸ್ವ ಪಕ್ಷದ ಸಚಿವರ ವಿರುದ್ಧ ಗುಡುಗಿದ ಕೈ ಶಾಸಕ‌

ಕೆಲ ದಿನಗಳ ಹಿಂದೆ‌ ಮಂಡ್ಯ ಸೇರಿದಂತೆ ರಾಜ್ಯದ ಹೊಸ ವಿವಿಗಳನ್ನ ಮುಚ್ಚುವ ಬಗ್ಗೆ ಉನ್ನತ್ತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಪ್ರಸ್ತಾಪ ಮಾಡಿದ್ದರು. . ಆದರೆ ಮಂಡ್ಯಕ್ಕೆ ಪ್ರತ್ಯೇಕ ವಿಶ್ವವಿದ್ಯಾಲಯ ಬೇಕು ಎಂದು ಹಲವು ವರ್ಷಗಳಿಂದ ಹೋರಾಟ ನಡೆದಿತ್ತು. ಅದಾದ ಬಳಿಕ ಕಳೆದ ಸರ್ಕಾರದ ಅವಧಿಯಲ್ಲಿ ಮಂಡ್ಯ ವಿವಿ ಘೋಷಣೆಯಾಗಿತ್ತು. ಆದ್ರೆ ಹಣಕಾಸ ವಿಚಾರದಿಂದ ಮಂಡ್ಯ ವಿವಿ ಮುಚ್ಚುವ ಪ್ರಸ್ತಾವನೆ ಸರ್ಕಾರದ ಮುಂದಿಡಲಾಗಿತ್ತು. ಇದಕ್ಕೆ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಇದೀಗ ಸ್ವಪಕ್ಷದ ಶಾಸಕ ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ. : ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್

ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ. : ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡುತ್ತಿದ್ದ ಕಿರಣ್

ರಾಮನಗರದಲ್ಲಿ ಮಾಟಮಂತ್ರದ ಹೆಸರಿನಲ್ಲಿ ಯುವತಿಗೆ ₹30 ಲಕ್ಷ ಆಮಿಷವೊಡ್ಡಿ, ಬೆತ್ತಲೆ ಪೂಜೆಗೆ ಒತ್ತಾಯಿಸಿದ ಘಟನೆ ಬೆಳಕಿಗೆ ಬಂದಿದೆ. ಇದೇ ರೀತಿಯಲ್ಲಿ ಬೆಂಗಳೂರಿನಲ್ಲಿ ಜ್ಯೋತಿಷಿಯೊಬ್ಬ ಬ್ಯೂಟಿಷಿಯನ್ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳುವ ಜಾಲದ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ. ಇಂತಹ ವಂಚನೆಗಳಿಂದ ಸಮಾಜ ಜಾಗೃತಿ ವಹಿಸುವುದು ಅನಿವಾರ್ಯ.

ಚನ್ನಪಟ್ಟಣ ನಗರಕ್ಕೇ ನುಗ್ಗಿ ಒಂಟಿ ಸಲಗದ ದಾಂಧಲೆ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​!

ಚನ್ನಪಟ್ಟಣ ನಗರಕ್ಕೇ ನುಗ್ಗಿ ಒಂಟಿ ಸಲಗದ ದಾಂಧಲೆ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​!

ಇಷ್ಟು ದಿನಗಳ ಕಾಲ ಗ್ರಾಮೀಣ ಭಾಗದಲ್ಲಿ ದಾಂಧಲೆ ನಡೆಸುತ್ತಿದ್ದ ಕಾಡಾನೆಗಳು ಇದೀಗ ನಗರ ಪ್ರದೇಶಕ್ಕೇ ನುಗ್ಗತೊಡಗಿವೆ. ಚನ್ನಪಟ್ಟಣದ ಹೌಸಿಂಗ್ ಬೋರ್ಡ್ ಬಳಿಯೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಪೌಂಡ್​​ಗಳನ್ನು ಹಾರಿ ಎಲ್ಲೆಂದರಲ್ಲಿ ಓಡಾಡುತ್ತಿರುವ ಕಾಡಾನೆ ಹಲವೆಡೆ ವಾಹನಗಳನ್ನ ಡ್ಯಾಮೇಜ್ ಮಾಡಿದೆ. ಬಳ್ಳಾರಿ ಮೂಲದ ರಾಮಪ್ಪ ಎಂಬುವವರ ಗುಡಿಸಲನ್ನು ಒಂಟಿ ಸಲಗ ಧ್ವಂಸಗೊಳಿಸಿದ್ದು, ಗುಡಿಸಲಿನಲ್ಲಿದ್ದ ರಾಮಪ್ಪಗೆ ಗಾಯಗಳಾಗಿವೆ.

ಕನಕಪುರದಲ್ಲಿ ಕಾಡಾನೆ ದಾಳಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವ್ಯಕ್ತಿ ದಾರುಣ ಸಾವು: ಅತ್ತ ಚಾಮರಾಜನಗರದಲ್ಲಿಯೂ ಮುಂದುವರಿದ ಒಂಟಿ ಸಲಗದ ಕಾಟ

ಕನಕಪುರದಲ್ಲಿ ಕಾಡಾನೆ ದಾಳಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವ್ಯಕ್ತಿ ದಾರುಣ ಸಾವು: ಅತ್ತ ಚಾಮರಾಜನಗರದಲ್ಲಿಯೂ ಮುಂದುವರಿದ ಒಂಟಿ ಸಲಗದ ಕಾಟ

ರಾಜ್ಯದಲ್ಲಿ ಕಾಡಾನೆ ದಾಳಿಗೆ ಸಾವಿನ ಸರಣಿ ಮುಂದುವರಿದಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಕನಕಪುರ ‌ತಾಲೂಕಿನ ಚೀಲಂದವಾಡಿ ಗ್ರಾಮದಲ್ಲಿ ವ್ಯಕ್ತಿಯೋರ್ವರು ಉಸಿರು ಚೆಲ್ಲಿದ್ದಾರೆ. ಸಂಗಮ ಪ್ರದೇಶದಲ್ಲಿ ಮಹಿಳೆ ಮೇಲೆ ಇತ್ತೀಚೆಗೆ ಕಾಡಾನೆ ದಾಳಿ ನಡೆಸಿದ್ದು ಮಾಸುವ ಮುನ್ನವೇ ನಡೆದಿರುವ ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಅತ್ತ ಚಾಮರಾಜನಗರದಲ್ಲೂ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಒಂಟಿ ಸಲಗದ ದಾಂಧಲೆಗೆ ಮೆಕ್ಕೆಜೋಳ ಬೆಳೆ ಸಂಪೂರ್ಣ ಹಾಳಾಗಿದೆ.

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ, ಆಗಿದ್ದೇನು?

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ, ಆಗಿದ್ದೇನು?

ಇನ್ನೇನು ಸರ್ಕಾರದ ವತಿಯಿಂದ ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರು ದಕ್ಷಿಣ ‌ಜಿಲ್ಲೆ ರಾಮನಗರದ ವಡೇರಹಳ್ಳಿ ಬಳಿ ನಡೆದಿದೆ. ವಿಶೇಷ ಚೇತನರಿಗೆ ನೀಡಲು ಸರ್ಕಾರದ CSR ಅನುದಾನದಡಿಯಲ್ಲಿ ಟೊಯೋಟಾ ಕಂಪನಿಯ 4 ಚಕ್ರದ 32 ವಾಹನಗಳನ್ನು ಖರೀದಿಸಿ ಭೋಜರಾಜ್ ಎಂಬವರಿಗೆ ಸೇರಿದ ಗೋದಾಮಿನಲ್ಲಿ ಇಡಲಾಗಿತ್ತು. ಆದ್ರೆ, ಇಂದು (ಏಪ್ರಿಲ್ 23) ಏಕಾಏಕಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 4 ಚಕ್ರದ 32 ವಾಹನಗಳ ಪೈಕಿ 10 ವಾಹನಗಳು ಸುಟ್ಟು ಭಸ್ಮವಾಗಿವೆ.

ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ: ಕುಡಿದ ಮತ್ತಿನಲ್ಲಿ ಚಾಲಕ-ಕಂಡಕ್ಟರ್ ಜೊತೆ ಕಿರಿಕ್

ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ: ಕುಡಿದ ಮತ್ತಿನಲ್ಲಿ ಚಾಲಕ-ಕಂಡಕ್ಟರ್ ಜೊತೆ ಕಿರಿಕ್

ರಾಮನಗರದ ಬಿಡದಿಯಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಿದ್ದಾನೆ. ಚಾಲಕನ ರ‌್ಯಾಶ್ ಡ್ರೈವಿಂಗ್‌ನಿಂದ ಬಸ್‌ನೊಳಗೆ ಬಿದ್ದು ಮೂಗಿಗೆ ಗಾಯವಾಗಿತ್ತು ಎಂದು ಆತ ಆರೋಪಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ವ್ಯಕ್ತಿ ಬಸ್‌ನ ಮುಂಭಾಗದ ಗ್ಲಾಸ್‌ಗೆ ಹಾನಿ ಮಾಡಿದ್ದಾನೆ. ಚಾಲಕ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅನ್ನ ಹಾಕಿದ ಅಜ್ಜಿ ಇನ್ನಿಲ್ಲ:ಮುಖದ ಮೇಲೆ ಮುಖ ಇಟ್ಟು ದುಃಖಿಸಿದ ಮೂಕಪ್ರಾಣಿ

ಅನ್ನ ಹಾಕಿದ ಅಜ್ಜಿ ಇನ್ನಿಲ್ಲ:ಮುಖದ ಮೇಲೆ ಮುಖ ಇಟ್ಟು ದುಃಖಿಸಿದ ಮೂಕಪ್ರಾಣಿ

ವೃದ್ಧೆ ಸಾವಿಗೆ ಕೋತಿಯೊಂದು ಮರುಗಿ, ಮೃತದೇಹದ ಮೇಲೆ ಮಲಗಿ ರೋಧನೆ ವ್ಯಕ್ತಪಡಿಸಿರುವ ವಿಚಿತ್ರ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ (Channapatna) ತಾಲೂಕಿನ ಬಿ.ವಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ 80 ವರ್ಷದ ಪಾರ್ವತಮ್ಮ ಮೃತದೇಹದ ಹತ್ತಿರ ಕಪಿರಾಯ ಕುಳಿತುಕೊಂಡು ಮನುಷ್ಯರ ರೀತಿ ಮುಖಕ್ಕೆ ಮುಖ ಕೊಡುತ್ತ ಕಣ್ಣೀರು ಹಾಕಿದ್ದಾನೆ. ಈ ದೃಶ್ಯ ನೋಡುಗರ ಕಣ್ಣಲ್ಲಿ ನೆರೆದಿದ್ದವರ ಕಣ್ಣಲ್ಲಿ ನೀರು ತರಿಸಿತು.

ಏಕಾಏಕಿ ಗ್ರಾಮಕ್ಕೆ ನುಗ್ಗಿದ ಕಾಡಾನೆ ಹಿಂಡು ಕಂಡು ಬೆಚ್ಚಿಬಿದ್ದ ಜನ

ಏಕಾಏಕಿ ಗ್ರಾಮಕ್ಕೆ ನುಗ್ಗಿದ ಕಾಡಾನೆ ಹಿಂಡು ಕಂಡು ಬೆಚ್ಚಿಬಿದ್ದ ಜನ

ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೊಗ್ಗೆದೊಡ್ಡಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರ ಕೂಗಾಟಕ್ಕೆ ಹೆದರಿ ಆನೆಗಳ ಹಿಂಡು ವಾಪಸ್ ತೆರಳಿವೆ. ಇವು ಸಂಗಮ ವನ್ಯಜೀವಿಧಾಮದಿಂದ ಬಂದಿವೆ ಎಂದು ಅಂದಾಜಿಸಲಾಗಿದೆ.

ಎಣ್ಣೆ ಪ್ರಿಯರೇ ಎಚ್ಚರ: ಅಧಿಕಾರಿಗಳ ನೇತೃತ್ವದಲ್ಲೇ ನಡೀತಿದೆ ಅವಧಿ ಮೀರಿದ ಮದ್ಯ ಮಾರಾಟ!

ಎಣ್ಣೆ ಪ್ರಿಯರೇ ಎಚ್ಚರ: ಅಧಿಕಾರಿಗಳ ನೇತೃತ್ವದಲ್ಲೇ ನಡೀತಿದೆ ಅವಧಿ ಮೀರಿದ ಮದ್ಯ ಮಾರಾಟ!

ರಾಮನಗರದಲ್ಲಿ ಅವಧಿ ಮೀರಿದ ಮದ್ಯ ಮಾರಾಟದ ಆಘಾತಕಾರಿ ಪ್ರಕರಣ ಬಯಲಾಗಿದೆ. ಕರ್ನಾಟಕ ರಾಜ್ಯ ಪಾನೀಯ ನಿಗಮದ ಅಧಿಕಾರಿಗಳೇ ಜಪ್ತಿ ಮಾಡಿದ್ದ ಅವಧಿ ಮೀರಿದ ಮದ್ಯವನ್ನು ಹಣದಾಸೆಗೆ ಗ್ರಾಮೀಣ ಭಾಗದಲ್ಲಿ ಮಾರಾಟ ಮಾಡಲು ಯತ್ನಿಸಿದ್ದರು. ಪ್ರಕರಣ ಸಂಬಂಧ ಸೂಪರ್‌ವೈಸರ್ ಬಂಧನವಾಗಿದೆ. ಈ ಅಕ್ರಮದ ಬಗ್ಗೆ ತನಿಖೆ ಮುಂದುವರಿದಿದೆ.

ಬಸ್ ಶೆಲ್ಟರ್ ನಿರ್ಮಾಣಕ್ಕೆ ಜೆಡಿಎಸ್ ಸೇರಿ ಇತರರ ವಿರೋಧ: ಗುದ್ದಲಿ ಪೂಜೆ ಮಾಡದೆ ತೆರಳಿದ ಕಾಂಗ್ರೆಸ್​ ಶಾಸಕ

ಬಸ್ ಶೆಲ್ಟರ್ ನಿರ್ಮಾಣಕ್ಕೆ ಜೆಡಿಎಸ್ ಸೇರಿ ಇತರರ ವಿರೋಧ: ಗುದ್ದಲಿ ಪೂಜೆ ಮಾಡದೆ ತೆರಳಿದ ಕಾಂಗ್ರೆಸ್​ ಶಾಸಕ

ರಾಮನಗರದಲ್ಲಿ ಇದೀಗ ನೂತನ ಬಸ್ ಶೆಲ್ಟರ್ ನಿರ್ಮಾಣ ವಿಚಾರ ವಿವಾದಕ್ಕೆ ಕಾರಣವಾಗಿದೆ. ನಗರದ ಐಜೂರು ವೃತ್ತದಲ್ಲಿ 20 ಲಕ್ಷ ರೂ ವೆಚ್ಚದಲ್ಲಿ ನೂತನ ಬಸ್ ಶೆಲ್ಟರ್ ನಿರ್ಮಾಣಕ್ಕೆ ಶಾಸಕ ಇಕ್ಬಾಲ್ ಹುಸೇನ್ ಗುದ್ದಲಿ ಪೂಜೆಗೆ ಬಂದಿದ್ದರು. ಆದರೆ ಯೋಜನೆಗೆ ವಿರೋಧ ವ್ಯಕ್ತವಾದ ಹಿನ್ನೆಲೆ, ಶಾಸಕರು ಪೂಜೆ ನೆರವೇರಿಸದೆ ವಾಪಸ್ ತೆರಳಿದ್ದಾರೆ.

ರಾಮನಗರ: ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ: ಸಂಕಲಗೆರೆ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಕೇರಳದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಎಂಬಲ್ಲಿ ಸೋಮಾರ ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೆನ್ಸಿಂಗ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು