AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್​, ಗುಣವಂತೆ

Author - TV9 Kannada

preetibhat802@gmail.com

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow On:
ಡಯಾಬಿಟಿಸ್ ಇರುವವರು ಮಾತ್ರವಲ್ಲ, ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೂ ಐಸ್‌ಕ್ರೀಂ ತಿನ್ನುವುದು ಒಳ್ಳೆಯದಲ್ಲ!

ಡಯಾಬಿಟಿಸ್ ಇರುವವರು ಮಾತ್ರವಲ್ಲ, ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೂ ಐಸ್‌ಕ್ರೀಂ ತಿನ್ನುವುದು ಒಳ್ಳೆಯದಲ್ಲ!

ಬೇಸಿಗೆಯಲ್ಲಿ ಅನೇಕರು ಐಸ್‌ಕ್ರೀಂ ತಿನ್ನಲು ಇಷ್ಟಪಡುತ್ತಾರೆ. ಅದರಲ್ಲಿಯೂ ಮಧುಮೇಹ ರೋಗಿಗಳು ಇದನ್ನು ಸೀಮಿತ ಪ್ರಮಾಣದಲ್ಲಿ ತಿನ್ನಲು ಸಲಹೆ ನೀಡಲಾಗುತ್ತದೆ, ಆದರೆ ಇತರ ಕೆಲವು ಆರೋಗ್ಯ ಸಮಸ್ಯೆಗಳಲ್ಲಿ, ಐಸ್‌ಕ್ರೀಂ ತಿನ್ನುವುದು ಸಹ ಹಾನಿಕಾರಕವಾಗಿದೆ. ಹಾಗಾದರೆ ಯಾವ ಆರೋಗ್ಯ ಸಮಸ್ಯೆ ಇದ್ದಾಗ ಐಸ್‌ಕ್ರೀಂ ತಿನ್ನುವುದು ಒಳ್ಳೆಯದಲ್ಲ, ಐಸ್‌ಕ್ರೀಂ ಬದಲು ಯಾವ ಆಹಾರವನ್ನು ಪರ್ಯಾಯವಾಗಿ ಸೇವನೆ ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯೂರಿನ್ ಇನ್ಫೆಕ್ಷನ್ ಯಾವಾಗ ಅಪಾಯಕಾರಿಯಾಗಬಹುದು ಗೊತ್ತಾ? ಈ ಸೋಂಕಿನಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ಯೂರಿನ್ ಇನ್ಫೆಕ್ಷನ್ ಯಾವಾಗ ಅಪಾಯಕಾರಿಯಾಗಬಹುದು ಗೊತ್ತಾ? ಈ ಸೋಂಕಿನಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ಯೂರಿನ್ ಇನ್ಫೆಕ್ಷನ್‌ ಇತ್ತೀಚಿನ ದಿನಗಳಲ್ಲಿ ಒಂದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದು ದೀರ್ಘಕಾಲದವರೆಗೆ ಮುಂದುವರಿದರೆ, ಗಂಭೀರ ಆರೋಗ್ಯ ಸಮಸ್ಯೆಯಾಗಬಹುದು. ಹಾಗಾಗಿ ಮೂತ್ರನಾಳದ ಸೋಂಕು ಏಕೆ ಕಂಡುಬರುತ್ತದೆ ಮತ್ತು ಅವು ಯಾವಾಗ ಅಪಾಯಕಾರಿಯಾಗಬಹುದು ಜೊತೆಗೆ ಸೋಂಕಿನಿಂದ ರಕ್ಷಿಸಿಕೊಳ್ಳುವುದು ಹೇಗೆ ಎಂಬುದನ್ನುತಿಳಿದುಕೊಂಡಿರಬೇಕಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಹಳೆಯ ನೋವು ಮುಂದೆ ಆರ್ಥ್ರೈಟಿಸ್‌ಗೆ ಕಾರಣವಾಗುತ್ತದೆಯೇ? ಏನ್ ಹೇಳ್ತಾರೆ ತಜ್ಞರು

ಹಳೆಯ ನೋವು ಮುಂದೆ ಆರ್ಥ್ರೈಟಿಸ್‌ಗೆ ಕಾರಣವಾಗುತ್ತದೆಯೇ? ಏನ್ ಹೇಳ್ತಾರೆ ತಜ್ಞರು

ಸಾಮಾನ್ಯವಾಗಿ ಹಳೆಯ ಗಾಯ ಅಥವಾ ನೋವನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚು. ಆದರೆ ಇದು ಮುಂದೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಅಲ್ಲದೆ ಸರಿಯಾಗಿ ಚಿಕಿತ್ಸೆ ಪಡೆಯದೇ ಇದ್ದರೆ, ಮುಂದಿನ ದಿನಗಳಲ್ಲಿ ಆರ್ಥ್ರೈಟಿಸ್‌ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಅದರಲ್ಲಿಯೂ ಹಲವರು ಗಾಯವಾದ ನಂತರ ಕೆಲ ದಿನ ವಿಶ್ರಾಂತಿ ಪಡೆದು ಮತ್ತೆ ಸಾಮಾನ್ಯ ಚಟುವಟಿಕೆಗೆ ಮರಳುತ್ತಾರೆ. ಆದರೆ ಒಳಗಿರುವ ಹಾನಿ ಸಂಪೂರ್ಣವಾಗಿ ಗುಣವಾಗದಿದ್ದರೆ, ಸಂಧಿಗಳಲ್ಲಿ ನಿಧಾನವಾಗಿ ಘರ್ಷಣೆ ಹೆಚ್ಚಾಗಿ ನೋವು ಮತ್ತು ಊತ ಉಂಟಾಗಬಹುದು.

ಉಪ್ಪಿನಂಶವಿರುವ ಆಹಾರ ಸೇವನೆಯನ್ನು ಕಡಿಮೆ ಮಾಡಿದ್ರೆ ನಮ್ಮ ಕಿಡ್ನಿ ಆರೋಗ್ಯವಾಗಿರುತ್ತಾ?

ಉಪ್ಪಿನಂಶವಿರುವ ಆಹಾರ ಸೇವನೆಯನ್ನು ಕಡಿಮೆ ಮಾಡಿದ್ರೆ ನಮ್ಮ ಕಿಡ್ನಿ ಆರೋಗ್ಯವಾಗಿರುತ್ತಾ?

ಇತ್ತೀಚಿನ ದಿನಗಳಲ್ಲಿ ಕಿಡ್ನಿಯ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ದೊಡ್ಡ ಸವಾಲಾಗಿದೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ತಡೆಗಟ್ಟಲು ಕೆಲವು ಆರೋಗ್ಯಕರ ಸಲಹೆಗಳನ್ನು ಅನುಸರಿಸುವುದು ಬಹಳ ಅನಿವಾರ್ಯವಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಬೆಂಗಳೂರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಸಲಹೆಗಾರರಾದ ಡಾ. ಮೊಹಮ್ಮದ್ ಯೂಸುಫ್ ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ ಅವರು ಹೆಚ್ಚಿನ ಮಾಹಿತಿ ನೀಡಿದ್ದಾರೆ.

ಫುಲ್ ಬಾಡಿ ಚೆಕ್‌ಅಪ್ ಯಾವಾಗ ಮಾಡಿಸಬೇಕು? ಯಾರಿಗೆ ಇದರ ಅಗತ್ಯ ಇದೆ ಗೊತ್ತಾ?

ಫುಲ್ ಬಾಡಿ ಚೆಕ್‌ಅಪ್ ಯಾವಾಗ ಮಾಡಿಸಬೇಕು? ಯಾರಿಗೆ ಇದರ ಅಗತ್ಯ ಇದೆ ಗೊತ್ತಾ?

ಪೂರ್ಣ ದೇಹದ ತಪಾಸಣೆ ಅಂದರೆ ಫುಲ್ ಬಾಡಿ ಚೆಕ್‌ಅಪ್‌ ಮಾಡಿಸುವುದು ಬಹಳ ಮುಖ್ಯವಾದದ್ದು. ಏಕೆಂದರೆ ಇದರ ಮೂಲಕ ದೇಹದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಸಮಯಕ್ಕೆ ಸರಿಯಾಗಿ ಪತ್ತೆಹಚ್ಚಬಹುದು. ಇದು ರೋಗಗಳ ಆರಂಭಿಕ ಪತ್ತೆ ಮತ್ತು ಚಿಕಿತ್ಸೆಯನ್ನು ಸುಲಭಗೊಳಿಸುತ್ತದೆ. ಆದರೆ ಯಾವ ವಯಸ್ಸಿನಲ್ಲಿ ಫುಲ್ ಬಾಡಿ ಚೆಕ್‌ಅಪ್ ಮಾಡಿಸಿಕೊಳ್ಳಬೇಕು, ಯಾರಿಗೆ ಇದರ ಅವಶ್ಯಕತೆ ಹೆಚ್ಚಾಗಿರುತ್ತದೆ ಎಂಬುದು ತಿಳಿದಿದೆಯೇ? ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಮಕ್ಕಳು ಪ್ರೊಸೆಸ್ಡ್ ಫುಡ್ ಇಷ್ಟಪಟ್ಟು ತಿನ್ನುತ್ತಾರೆ ಎಂದು ಕೊಡುವುದಕ್ಕಿಂತ ಮುಂಚೆ ಈ ವಿಷಯ ತಿಳಿದುಕೊಳ್ಳಿ

ಮಕ್ಕಳು ಪ್ರೊಸೆಸ್ಡ್ ಫುಡ್ ಇಷ್ಟಪಟ್ಟು ತಿನ್ನುತ್ತಾರೆ ಎಂದು ಕೊಡುವುದಕ್ಕಿಂತ ಮುಂಚೆ ಈ ವಿಷಯ ತಿಳಿದುಕೊಳ್ಳಿ

ಕಳೆದ ಕೆಲವು ವರ್ಷಗಳಿಂದ, ಮಕ್ಕಳು ಅತಿಯಾಗಿ ಸಂಸ್ಕರಿಸಿದ ಆಹಾರವನ್ನು ಸೇವನೆ ಮಾಡುತ್ತಿದ್ದಾರೆ. ಈ ಪ್ರವೃತ್ತಿ ಗಮನಾರ್ಹವಾಗಿ ಹೆಚ್ಚಾಗಿರುವುದು ಆರೋಗ್ಯ ತಜ್ಞರನ್ನೇ ಬೆಚ್ಚಿಬಿಳಿಸಿದೆ. ಆದರೆ ಈ ರೀತಿಯ ಆಹಾರ ಆರೋಗ್ಯಕ್ಕೆ ಸಾಕಷ್ಟು ಅಪಾಯಕಾರಿಯಾಗಿದ್ದು ಆಸ್ತಮಾದ ಅಪಾಯವನ್ನು ಹೆಚ್ಚಿಸುತ್ತದೆ ಎಂಬುದು ಸಂಶೋಧನೆಯಿಂದ ಬಹಿರಂಗಗೊಂಡಿದೆ. ಇನ್ನಾದರೂ ಈ ವಿಚಾರದ ಬಗ್ಗೆ ಪೋಷಕರು ಹೆಚ್ಚಿನ ನಿಗಾ ವಹಿಸಿ ಮಕ್ಕಳ ಆರೋಗ್ಯ ಕಾಪಾಡುವುದು ಉತ್ತಮ.

ವಯಸ್ಸಾದವರು ಮನೆಯಲ್ಲಿದ್ದಾರಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆಗಳು ಬರದಂತೆ ಎಚ್ಚರಿಕೆ ವಹಿಸಿ

ವಯಸ್ಸಾದವರು ಮನೆಯಲ್ಲಿದ್ದಾರಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆಗಳು ಬರದಂತೆ ಎಚ್ಚರಿಕೆ ವಹಿಸಿ

ಕಳೆದ ಕೆಲವು ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಹವಾಮಾನ ನಿರಂತರವಾಗಿ ಬದಲಾಗುತ್ತಿದ್ದು, ಇದು ವೃದ್ಧರ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಅವರ ಆರೋಗ್ಯವನ್ನು ಹೇಗೆ ಕಾಳಜಿ ವಹಿಸಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಅದರಲ್ಲಿಯೂ ಮಧುಮೇಹ, ಹೈ ಬಿಪಿ, ಅಸ್ತಮಾ ಅಥವಾ ಹೃದಯ ಸಂಬಂಧಿ ಸಮಸ್ಯೆಗಳಿರುವ ಹಿರಿಯರು ಹೆಚ್ಚು ಜಾಗ್ರತೆ ವಹಿಸಬೇಕು ಎಂದು ವೈದ್ಯರು ಎಚ್ಚರಿಸಿದ್ದಾರೆ. ಹಾಗಿದ್ರೆ ಹಿರಿಯರ ಆರೋಗ್ಯ ಕಾಪಾಡಲು ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಲಗುವ ಮುನ್ನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದು ಒಳ್ಳೆಯದೋ ಅಲ್ಲವೋ ತಜ್ಞರು ನೀಡಿರುವ ಸಲಹೆ ಇಲ್ಲಿದೆ

ಮಲಗುವ ಮುನ್ನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದು ಒಳ್ಳೆಯದೋ ಅಲ್ಲವೋ ತಜ್ಞರು ನೀಡಿರುವ ಸಲಹೆ ಇಲ್ಲಿದೆ

ಅನೇಕರು ಮಲಗುವ ಮುನ್ನ ನೀರು ಅಥವಾ ಇತರ ಪಾನೀಯಗಳನ್ನು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಅಂತಹ ಸಂದರ್ಭಗಳಲ್ಲಿ, ಈ ಅಭ್ಯಾಸ ಎಷ್ಟು ಸರಿಯಾಗಿದೆ ಮತ್ತು ರಾತ್ರಿಯಲ್ಲಿ ಎಷ್ಟು ದ್ರವ ಸೇವನೆ ಸೂಕ್ತವೆಂದು ಪರಿಗಣಿಸಲಾಗುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ದೇಹವನ್ನು ಹೈಡ್ರೇಟ್ ಇಟ್ಟುಕೊಳ್ಳುವುದು ಅಗತ್ಯವಾದರೂ, ರಾತ್ರಿ ವೇಳೆ ಅತಿಯಾಗಿ ನೀರು ಅಥವಾ ಇತರ ಪಾನೀಯಗಳನ್ನು ಸೇವಿಸುವುದು ಎಲ್ಲರಿಗೂ ಸೂಕ್ತವಲ್ಲ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಆರೋಗ್ಯ ಕಾಪಾಡುವುದು ಬಹಳ ಒಳ್ಳೆಯದು. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಹಂಟಾವೈರಸ್ ಈಗ ಕಂಡುಬಂದಿದ್ದಲ್ಲ; ಆರೋಗ್ಯ ತಜ್ಞರು ನೀಡಿರುವ ಮಾಹಿತಿಯಲ್ಲಿದೆ ಆತಂಕಕಾರಿ ಅಂಶ

ಹಂಟಾವೈರಸ್ ಈಗ ಕಂಡುಬಂದಿದ್ದಲ್ಲ; ಆರೋಗ್ಯ ತಜ್ಞರು ನೀಡಿರುವ ಮಾಹಿತಿಯಲ್ಲಿದೆ ಆತಂಕಕಾರಿ ಅಂಶ

ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಹಂಟಾವೈರಸ್ ಅಪಾಯ ಹೆಚ್ಚುತ್ತಿದೆ. ಕ್ರೂಸ್ ಹಡಗಿನಲ್ಲಿ ಈ ವೈರಸ್ ಹರಡಿತ್ತು. ಅಂದಿನಿಂದ, ಜನರು ಇದು ಹೊಸ ವೈರಸ್ ಎಂದು ಭಾವಿಸುತ್ತಿದ್ದಾರೆ, ಆದರೆ ಇದು ಹೊಸ ರೋಗವಲ್ಲ. ಈ ವೈರಸ್‌ನ ಹಲವಾರು ಪ್ರಕರಣಗಳು ಈ ಹಿಂದೆಯೂ ಕಂಡುಬಂದಿತ್ತು ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. ಹಾಗಾದರೆ ಅದು ಯಾವಾಗ, ಎಲ್ಲಿ ಕಂಡುಬಂದಿತ್ತು? ಎಷ್ಟು ಜನರಿಗೆ ಅಪಾಯ ಉಂಟುಮಾಡಿತ್ತು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪದೇಪದೇ ಹೊಟ್ಟೆ ನೋವು, ಗ್ಯಾಸ್ಟ್ರಿಕ್ ಸಮಸ್ಯೆ ಕಂಡುಬರುವುದು ಸಾಮಾನ್ಯವಲ್ಲ; ಗಂಭೀರ ಕಾಯಿಲೆಯ ಮುನ್ಸೂಚನೆಯಾಗಿರಬಹುದು ಎಚ್ಚರ!

ಪದೇಪದೇ ಹೊಟ್ಟೆ ನೋವು, ಗ್ಯಾಸ್ಟ್ರಿಕ್ ಸಮಸ್ಯೆ ಕಂಡುಬರುವುದು ಸಾಮಾನ್ಯವಲ್ಲ; ಗಂಭೀರ ಕಾಯಿಲೆಯ ಮುನ್ಸೂಚನೆಯಾಗಿರಬಹುದು ಎಚ್ಚರ!

ಕೆಲವೊಮ್ಮೆ ಹೊಟ್ಟೆ ನೋವು ಬರುವುದು ಸಹಜ, ಆದರೆ ಈ ಸಮಸ್ಯೆ ನಿರಂತರವಾಗಿ ಕಂಡುಬರುತ್ತಿದ್ದರೆ, ಅದನ್ನು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಅದರಲ್ಲಿಯೂ ಪದೇ ಪದೇ ಈ ರೀತಿಯಾಗುವುದಕ್ಕೆ ಕಾರಣ, ಯಾವ ರೀತಿ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು, ಹೊಟ್ಟೆ ಆರೋಗ್ಯ ಕಾಪಾಡಲು ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು ಎನ್ನುವುದನ್ನು ತಿಳಿದುಕೊಂಡರೆ ಬಹಳ ಒಳ್ಳೆಯದು. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಟೈಫಾಯ್ಡ್ ಪ್ರಕರಣಗಳ ಹೆಚ್ಚಳ: ಮಕ್ಕಳಲ್ಲಿ ಈ ಲಕ್ಷಣ ಕಂಡುಬಂದ್ರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ

ಟೈಫಾಯ್ಡ್ ಪ್ರಕರಣಗಳ ಹೆಚ್ಚಳ: ಮಕ್ಕಳಲ್ಲಿ ಈ ಲಕ್ಷಣ ಕಂಡುಬಂದ್ರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ

ಬೇಸಿಗೆ ಮತ್ತು ಮಳೆಯ ಮಿಶ್ರ ವಾತಾವರಣದಲ್ಲಿ ಮಕ್ಕಳಲ್ಲಿ ಟೈಫಾಯ್ಡ್ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡುಬರುತ್ತಿದೆ. ಆರಂಭದಲ್ಲಿ ಸಾಮಾನ್ಯ ಜ್ವರದಂತೆ ಕಾಣುವ ಈ ಸೋಂಕನ್ನು ಹಲವು ಪೋಷಕರು ಗುರುತಿಸಲು ವಿಫಲರಾಗುತ್ತಿದ್ದಾರೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಸಮಯಕ್ಕೆ ಚಿಕಿತ್ಸೆ ದೊರೆಯದಿದ್ದರೆ ಈ ಸಮಸ್ಯೆ ಗಂಭೀರ ರೂಪ ಪಡೆದುಕೊಳ್ಳುವ ಸಾಧ್ಯತೆಯೂ ಇದೆ. ಹಾಗಾದರೆ ಟೈಫಾಯ್ಡ್‌ ಕಂಡುಬರುವ ಮೊದಲು ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ, ಈ ರೀತಿ ಮಕ್ಕಳಿಗೆ ಟೈಫಾಯ್ಡ್ ಬಂದರೆ ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹಂಟಾವೈರಸ್ ವೈರಸ್ ಅಪಾಯ: ಭಾರತದಲ್ಲಿ ರೋಗ ಹರಡುವುದನ್ನು ತಡೆಯಲು 165 ಲ್ಯಾಬ್‌ಗಳು ಸಜ್ಜು

ಹಂಟಾವೈರಸ್ ವೈರಸ್ ಅಪಾಯ: ಭಾರತದಲ್ಲಿ ರೋಗ ಹರಡುವುದನ್ನು ತಡೆಯಲು 165 ಲ್ಯಾಬ್‌ಗಳು ಸಜ್ಜು

ಐಸಿಎಂಆರ್ ತನ್ನ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳನ್ನು ಸಕ್ರಿಯಗೊಳಿಸಿದೆ. ದೇಶಾದ್ಯಂತ ಐಸಿಎಂಆರ್‌ನ ಸುಮಾರು 165 ಅಂತಹ ಪ್ರಯೋಗಾಲಯಗಳಿದ್ದು ಇವು ಶಂಕಿತ ಹಂಟಾವೈರಸ್ ರೋಗಿಗಳ ಮಾದರಿಗಳನ್ನು ಪರೀಕ್ಷಿಸಲು ನೆರವಾಗುತ್ತವೆ. ಈ ರೀತಿಯಲ್ಲಿ ಹಂಟಾವೈರಸ್ ವೈರಸ್ ಅಪಾಯ ಹೆಚ್ಚಾಗದಂತೆ ತಡೆಯುವ ಕೆಲಸವನ್ನು ಮಾಡಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ