ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.
ಕೆಳಹೊಟ್ಟೆಯ ನೋವನ್ನು ನಿರ್ಲಕ್ಷಿಸಬೇಡಿ; ಇದು ಗಂಭೀರ ಕಾಯಿಲೆಗಳ ಸೂಚನೆಯಾಗಿರಬಹುದು
ಮಹಿಳೆಯರಿಗೆ ಕೆಲವೊಮ್ಮೆ ಹೊಟ್ಟೆಯ ಕೆಳಭಾಗದಲ್ಲಿ ನೋವು ಕಂಡುಬರುತ್ತದೆ, ಈ ಸಮಸ್ಯೆ ಮಾಸಿಕ ಚಕ್ರದ ಸಮಯದಲ್ಲಿ ಕಾಣಿಸಿಕೊಳ್ಳಬಹುದು. ಆದರೆ ಪೀರಿಯಡ್ಸ್ ಇಲ್ಲದ ಸಮಯದಲ್ಲೂ ನಿರಂತರವಾಗಿ ನೋವು ಕಾಣಿಸಿದರೆ ಅದನ್ನು ಲಘುವಾಗಿ ತೆಗೆದುಕೊಳ್ಳುವುದು ಅಪಾಯಕಾರಿ ಎಂದು ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ಈ ರೀತಿಯಾಗುವುದು ಯಾವ ಕಾಯಿಲೆ ಬರುವ ಮುನ್ಸೂಚನೆ, ಈ ಆರೋಗ್ಯ ಸಮಸ್ಯೆ ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 25, 2026
- 9:27 pm
ಬೇಸಿಗೆಯಲ್ಲಿ ಬಿಪಿ ಸಾಮಾನ್ಯವಾಗಿದ್ದರೂ ಹೃದಯಕ್ಕೆ ಅಪಾಯ: ಮಾಸ್ಕ್ಡ್ ಹೈಪರ್ಟೆನ್ಷನ್ ಬಗ್ಗೆ ವೈದ್ಯರ ಎಚ್ಚರಿಕೆ
ರಕ್ತದ ಒತ್ತಡ ನಾವು ತಿಳಿದಂತಲ್ಲ. ಇದನ್ನು ಯಾವಾಗಲೂ ನಿರ್ಲಕ್ಸ್ಯ ಮಾಡುವುದು ಸರಿಯಲ್ಲ. ಏಕೆಂದರೆ ಸಣ್ಣ ವ್ಯತ್ಯಾಸ ಕೂಡ ಜೀವಕ್ಕೆ ಅಪಾಯಕಾರಿಯಾಗಬಹುದು. ಅದರಲ್ಲಿಯೂ ತಜ್ಞರು ಬೇಸಿಗೆಯಲ್ಲಿ ಹೆಚ್ಚುತ್ತಿರುವ ಮಾಸ್ಕ್ಡ್ ಹೈಪರ್ಟೆನ್ಷನ್ ಬಗ್ಗೆ ಎಚ್ಚರಿಕೆ ನೀಡುತ್ತಿದ್ದು ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ತಡೆಗಟ್ಟುವ ಕ್ರಮಗಳನ್ನು ಅನುಸರಿಸಬೇಕಾಗಿದೆ. ಏಕೆಂದರೆ ಈ ಸ್ಥಿತಿಯಲ್ಲಿ ಬಿಪಿ ಸಾಮಾನ್ಯವಾಗಿದ್ದರೂ ಕೂಡ ಹೃದಯಕ್ಕೆ ಅಪಾಯ ಇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Apr 25, 2026
- 5:51 pm
ಬೇಸಿಗೆಯಲ್ಲಿ ಖಾಲಿ ಹೊಟ್ಟೆಯಲ್ಲಿ ವಾಕ್ ಮಾಡುವ ಅಭ್ಯಾಸವಿದ್ಯಾ? ತಜ್ಞರು ಈ ಬಗ್ಗೆ ಏನ್ ಹೇಳ್ತಾರೆ ನೋಡಿ
ಬಿಸಿಲಿನ ತಾಪಮಾನ ಎಲ್ಲಾ ಕಡೆಯಲ್ಲಿಯೂ ಹೆಚ್ಚಾಗುತ್ತಿರುವುದರಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಬೆಳಗಿನ ವಾಕ್ ಮಾಡುವವರು ಕೆಲವು ಸಲಹೆಗಳನ್ನು ಅನುಸರಿಸುವುದು ಅನಿವಾರ್ಯವಾಗಿದೆ. ಹಾಗಾದರೆ ಖಾಲಿ ಹೊಟ್ಟೆಯಲ್ಲಿ ವಾಕ್ ಮಾಡುವುದು ಸುರಕ್ಷಿತವೇ, ಆರೋಗ್ಯ ತಜ್ಞರ ಅಭಿಪ್ರಾಯವೇನು, ಯಾರು ಹೆಚ್ಚು ಅಪಾಯದಲ್ಲಿದ್ದಾರೆ, ಹೀಗೆ ಮತ್ತಷ್ಟು ಮಾಹಿತಿಯನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 25, 2026
- 3:35 pm
ಎಷ್ಟೇ ಇಷ್ಟವಾದರೂ ಕೂಡ ಈ ಆರೋಗ್ಯ ಸಮಸ್ಯೆ ಇದ್ದಲ್ಲಿ ಕಬ್ಬಿನ ಜ್ಯೂಸ್ ಕುಡಿಯಬೇಡಿ!
ಈ ಬೇಸಿಗೆಯಲ್ಲಿ ಜನ ಶುಗರ್ ಕೆನ್ ಜ್ಯೂಸ್ ಕುಡಿಯಲು ಇಷ್ಟಪಡುತ್ತಾರೆ. ಇದು ಆರೋಗ್ಯಕ್ಕೂ ಪ್ರಯೋಜನಕಾರಿ, ಆದರೆ ಎಲ್ಲರಿಗೂ ಇದು ಒಳ್ಳೆಯದಲ್ಲ ಎಂಬುದು ತಿಳಿದಿದೆಯೇ? ಹೌದು, ಕೆಲವು ಆರೋಗ್ಯ ಸಮಸ್ಯೆ ಇರುವವರು ಈ ಜ್ಯೂಸ್ ನಿಂದ ದೂರವಿರುವುದು ಬಹಳ ಉತ್ತಮ. ಹಾಗಾದರೆ ಕಬ್ಬಿನ ರಸ ಯಾರಿಗೆ ಒಳ್ಳೆಯದಲ್ಲ, ಯಾವ ರೀತಿಯ ಆರೋಗ್ಯ ಸಮಸ್ಯೆ ಉಲ್ಬಣಕ್ಕೆ ಕಾರಣವಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Apr 24, 2026
- 7:31 pm
ಉಪ್ಪನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಕ್ಯಾಲ್ಸಿಯಂ ಕೊರತೆ ಉಂಟಾಗುತ್ತದೆಯೇ?
ಉಪ್ಪು ಸೇವನೆ ನಮ್ಮ ದೈನಂದಿನ ಆಹಾರದ ಒಂದು ಭಾಗವಾಗಿದೆ, ಆದರೆ ಅದನ್ನು ಅತಿಯಾಗಿ ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ ಎಂಬುದು ತಿಳಿದಿರಬಹುದು. ಅದಲ್ಲದೆ ಹೆಚ್ಚು ಉಪ್ಪು ಸೇವಿಸುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಹೆಚ್ಚಾಗಬಹುದು ಎಂದು ಹೇಳೆಲಾಗುತ್ತಿದೆ. ಹಾಗಾದರೆ ಉಪ್ಪು ಮತ್ತು ಕ್ಯಾಲ್ಸಿಯಂ ನಡುವೆ ಇರುವ ಸಂಬಂಧವೇನು, ಯಾರಿಗೆ ಹೆಚ್ಚು ಅಪಾಯ ಮತ್ತು ಇಂತಹ ಸಮಸ್ಯೆಯನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 24, 2026
- 6:18 pm
ಡೆಲಿವರಿ ನಂತರ ಮಹಿಳೆಯರಲ್ಲಿ ಕಾಣಿಸಿಕೊಳ್ಳಬಹುದಾದ 5 ಆರೋಗ್ಯ ಸಮಸ್ಯೆಗಳು ಯಾವುದು ಗೊತ್ತಾ?
ಹೆರಿಗೆಯ ನಂತರ ಮಹಿಳೆಯರಿಗೆ ಹಲವಾರು ರೀತಿಯ ಕಾಯಿಲೆಗಳು ಕಂಡುಬರಬಹುದು. ಹಾಗಾಗಿ ಅಂತಹ ಸಮಯದಲ್ಲಿ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಅದು ಕಡಿಮೆಯಾಗುತ್ತದೆ. ಹಾಗಾಗಿ ಆದಷ್ಟು ಎಚ್ಚರಿಕೆ ವಹಿಸುವುದು ಬಹಳ ಅನಿವಾರ್ಯ. ಅದರ ಜೊತೆಗೆ ಯಾವ ರೀತಿಯ ಸಮಸ್ಯೆಗಳು ಕಂಡುಬರುತ್ತದೆ ಅದನ್ನು ತಡೆಯಲು ಏನು ಮಾಡಬಹುದು ಎಂಬುದರ ಬಗ್ಗೆಯೂ ತಿಳಿದುಕೊಂಡಿರಬೇಕಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Apr 24, 2026
- 5:02 pm
ಲಂಗ್ಸ್ ಡಿಟಾಕ್ಸ್ ನಿಜವಾಗಿಯೂ ಶ್ವಾಸಕೋಶವನ್ನು ಕ್ಲೀನ್ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ
ಆರೋಗ್ಯ ಚೆನ್ನಾಗಿ ಕಾಪಾಡಿಕೊಳ್ಳಬೇಕು ಅಂದರೆ ಶ್ವಾಸಕೋಶಗಳು ಸಹ ಸರಿಯಾಗಿ ಕಾರ್ಯ ನಿರ್ವಹಿಸುವುದು ಬಹಳ ಮುಖ್ಯವಾಗುತ್ತದೆ. ಇದಕ್ಕಾಗಿ, ಕೆಲವು ನಿರ್ದಿಷ್ಟ ವಿಷಯಗಳಿಗೆ ಗಮನ ಕೊಡುವುದು ಅವಶ್ಯಕ. ಶ್ವಾಸಕೋಶಗಳ ಆರೋಗ್ಯ ಕಾಪಾಡಲು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ಲಂಗ್ಸ್ ಡಿಟಾಕ್ಸ್” ಎಂಬ ಹೆಸರಿನಲ್ಲಿ ಹಲವು ಪಾನೀಯಗಳು ಮತ್ತು ಉತ್ಪನ್ನಗಳು ಪ್ರಚಾರವಾಗುತ್ತಿವೆ. ಆದರೆ ಇದು ನಿಜವಾಗಿಯೂ ಶ್ವಾಸಕೋಶವನ್ನು ಡಿಟಾಕ್ಸ್ ಮಾಡುತ್ತದೆಯೇ, ಈ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯವೇನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 23, 2026
- 8:33 pm
ಕಲ್ಲಂಗಡಿ ಹಣ್ಣು ಕಿಡ್ನಿಯನ್ನು ಕ್ಲೀನ್ ಮಾಡುತ್ತದೆಯೇ? ಬೇಸಿಗೆಯಲ್ಲಿ ಈ ಹಣ್ಣಿನ ಸೇವನೆ ಆರೋಗ್ಯಕರವೇ?
ಸಾಮಾನ್ಯವಾಗಿ ಬೇಸಿಗೆಯಲ್ಲಿ ಜನ ಕಲ್ಲಂಗಡಿ ಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಇದು ದೇಹದ ನೀರಿನ ಕೊರತೆಯನ್ನು ನೀಗಿಸಲು ಸಹಾಯ ಮಾಡುತ್ತದೆ. ಕಲ್ಲಂಗಡಿಯಲ್ಲಿ ಗ್ಲೈಸೆಮಿಕ್ ಸೂಚ್ಯಂಕವೂ ಹೆಚ್ಚಿಲ್ಲ, ಆದರೆ ಕಲ್ಲಂಗಡಿ ಮೂತ್ರಪಿಂಡಗಳಿಗೆ ಪ್ರಯೋಜನಕಾರಿಯೇ ಅಥವಾ ಹಾನಿಕಾರವೇ ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಅದರಲ್ಲಿಯೂ ಕಿಡ್ನಿಗೆ ಸಂಬಂಧಿಸಿದ ಸಮಸ್ಯೆ ಇರುವವರು ಇದನ್ನು ಸೇವನೆ ಮಾಡಬಹುದೇ ಎಂದು ತಿಳಿಯುವುದು ಬಹಳ ಅವಶ್ಯಕವಾಗಿದೆ. ಇಲ್ಲವಾದಲ್ಲಿ ಇದು ಆರೋಗ್ಯ ಕಾಪಾಡುವ ಬದಲು ಹಾನಿಯುಂಟುಮಾಡಬಹುದು. ಹಾಗಾಗಿ ಈ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಿ.
- Preethi Bhat Gunavante
- Updated on: Apr 23, 2026
- 6:24 pm
ಬೇಸಿಗೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುತ್ತೆ 3 ಲಕ್ಷಣಗಳು
ಉಷ್ಣಾಂಶ ದಿನೇ ದಿನೇ ಏರುತ್ತಿರುವ ಹಿನ್ನೆಲೆ, ಹೀಟ್ ಸ್ಟ್ರೋಕ್ ಅಪಾಯ ಹೆಚ್ಚುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವವರು ಈ ಸಮಸ್ಯೆಗೆ ಹೆಚ್ಚು ಒಳಗಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಮಾತ್ರವಲ್ಲ, ಈ ರೀತಿಯಾಗುವ ಮುನ್ನ ಕಾಣಿಸಿಕೊಳ್ಳುವ 3 ಪ್ರಮುಖ ಲಕ್ಷಣಗಳ ಬಗ್ಗೆ ತಿಳಿಸಿದ್ದಾರೆ. ಇದನ್ನು ಸರಿಯಾಗಿ ತಿಳಿದುಕೊಂಡು ಈ ರೀತಿಯಾದಾಗ ತಕ್ಷಣ ಮುನ್ನೆಚ್ಚರಿಕೆ ವಹಿಸಿ ಆರೋಗ್ಯ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಹಾಗಾದರೆ ಈ ಲಕ್ಷಣಗಳು ಯಾವವು, ಈ ಸಮಸ್ಯೆ ತಡೆಗಟ್ಟುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 22, 2026
- 9:03 pm
ಕೃತಕ ಬಣ್ಣಗಳಿರುವ ಆಹಾರಕ್ಕಿಂತ ಈ ಫುಡ್ ಸೇವನೆ ಮಾಡುವುದು ಬೆಸ್ಟ್ ಅಂತಾರೆ ಡಾ. ಸಂಧ್ಯಾ ಸಿಂಗ್
ಕೃತಕ ಬಣ್ಣಗಳನ್ನು ಆಹಾರ, ಔಷಧ ಮತ್ತು ಸೌಂದರ್ಯವರ್ಧಕಗಳಿಗೆ ಆಕರ್ಷಕ ಕಲರ್ ನೀಡಲು ವ್ಯಾಪಕವಾಗಿ ಬಳಸಲಾಗುತ್ತದೆ. ರೆಸ್ಟೋರೆಂಟ್ ಗಳಲ್ಲಿ ನೀಡಲಾಗುವ ಸಾಮಾನ್ಯ ಆಹಾರದಲ್ಲೂ ಬಣ್ಣಗಳನ್ನು ಬಳಸಲಾಗುತ್ತಿದೆ. ಇವು ಆಹಾರವನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತದೆ, ಆದರೆ ಯಾವುದೇ ಪೌಷ್ಟಿಕ ಮೌಲ್ಯವನ್ನು ನೀಡುವುದಿಲ್ಲ. ಈ ಕುರಿತು, ಬೆಂಗಳೂರು ಅಪೋಲೋ ಆಸ್ಪತ್ರೆಯ ಎಚ್ಒಡಿ ಮತ್ತು ಮುಖ್ಯ ಕ್ಲಿನಿಕಲ್ ಡಯೆಟೀಶಿಯನ್ ಡಾ. ಸಂಧ್ಯಾ ಸಿಂಗ್ ಎಸ್ ಅವರು ಟಿವಿ9 ಕನ್ನಡ ಜೊತೆ ಮಾತನಾಡಿದ್ದು, ಈ ಬಗ್ಗೆ ಮತ್ತಷ್ಟು ಮಾಹಿತಿ ನೀಡಿದ್ದಾರೆ. ಈ ಬಗೆಗಿನ ಸಂಪೂರ್ಣ ವಿವರ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Apr 22, 2026
- 8:22 pm
ಪ್ರತಿದಿನ ಕಿತ್ತಳೆ ತಿಂದರೆ ಫ್ಯಾಟಿ ಲಿವರ್ ಕಡಿಮೆಯಾಗುತ್ತದೆಯೇ? ಅಧ್ಯಯನ ಏನು ಹೇಳುತ್ತದೆ?
ಕಿತ್ತಳೆ ತಿನ್ನುವುದರಿಂದ ದೇಹಕ್ಕೆ ಹಲವು ರೀತಿಯ ಪ್ರಯೋಜನಗಳಿವೆ ಎಂಬುದು ತಿಳಿದ ವಿಚಾರ. ಅವುಗಳಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಇರುತ್ತದೆ. ಕಿತ್ತಳೆ ಹಣ್ಣಿನಲ್ಲಿ ಫೈಬರ್ ಕೂಡ ಇರುತ್ತದೆ, ಆದರೆ ಕಿತ್ತಳೆ ಹಣ್ಣನ್ನು ಸೇವನೆ ಮಾಡುವುದರಿಂದ ಫ್ಯಾಟಿ ಲಿವರ್ ಸಮಸ್ಯೆಯನ್ನು ತಡೆಗಟ್ಟಬಹುದೇ? ಕೇಳುವುದಕ್ಕೆ ಸ್ವಲ್ಪ ವಿಚಿತ್ರ ಎನಿಸಿದರೂ ಕೂಡ ಇದರ ಬಗ್ಗೆ ಒಂದು ಅಧ್ಯಯನ ನಡೆದಿದೆ. ಹಾಗಾದರೆ ಅಧ್ಯಯನದಲ್ಲಿ ಹೇಳಿರುವುದೇನು, ಕಿತ್ತಳೆ ನಿಜವಾಗಿಯೂ ಲಿವರ್ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆಯೇ ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Apr 22, 2026
- 6:31 pm
ಮಾವು ತಿಂದರೆ ಶುಗರ್ ಹೆಚ್ಚಾಗುತ್ತಾ? ಮಧುಮೇಹಿಗಳು ಈ ಹಣ್ಣನ್ನು ಯಾವಾಗ ಸೇವನೆ ಮಾಡಬೇಕು?
ಬೇಸಿಗೆ ಆರಂಭವಾದಾಗ ಮಾವಿನ ಹಣ್ಣಿನ ಸೀಸನ್ ಕೂಡ ಆರಂಭವಾಗುತ್ತದೆ. ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ಮಾವು ಕೂಡ ಒಂದು. ಆದರೆ ಮಧುಮೇಹಿಗಳು ಮಾತ್ರ ಈ ಹಣ್ಣನ್ನು ಸೇವನೆ ಮಾಡುವುದಕ್ಕೆ ಹಿಂದೇಟು ಹಾಕುತ್ತಾರೆ. ಏಕೆಂದರೆ ಇದರ ಸೇವನೆಯಿಂದ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ ಎಂಬ ಭಯ ಹಲವರನ್ನು ಕಾಡುತ್ತದೆ. ಹಾಗಾದರೆ ನಿಜವಾಗಿಯೂ ಮಾವು ತಿಂದರೆ ಶುಗರ್ ಹೆಚ್ಚಾಗುತ್ತದೆಯೇ, ತಜ್ಞರು ಈ ಬಗ್ಗೆ ಏನು ಹೇಳುತ್ತಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Apr 21, 2026
- 9:50 pm