ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.
ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡಬಹುದೇ? ತಜ್ಞರು ಹೇಳುವುದೇನು?
ಇತ್ತೀಚಿನ ದಿನಗಳಲ್ಲಿ, ಆಂಟಿಬಯೋಟಿಕ್ ಔಷಧಿಗಳ ಬಳಕೆ ತುಂಬಾ ಹೆಚ್ಚಾಗಿದೆ. ಆದರೆ ಅನೇಕರು ಅವುಗಳನ್ನು ಅಗತ್ಯವಿಲ್ಲದೆ ಅಥವಾ ವೈದ್ಯರ ಸಲಹೆಯಿಲ್ಲದೆ ತೆಗೆದುಕೊಳ್ಳುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಆಂಟಿಬಯೋಟಿಕ್ ಅತಿಯಾದ ಬಳಕೆಯು ಕರುಳಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆಯೇ ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ಹಾಗಾದರೆ ಆಂಟಿಬಯೋಟಿಕ್ಗಳು ಕರುಳಿನ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ, ಈ ರೀತಿ ಸಮಸ್ಯೆಗಳನ್ನು ತಡೆಯಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jun 5, 2026
- 9:06 pm
ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಸಮಸ್ಯೆಗೆ ಆಹಾರ ಮಾತ್ರವಲ್ಲ, ನಿಮ್ಮ ಈ ಅಭ್ಯಾಸಗಳು ಕಾರಣವಾಗಿರಬಹುದು!
ಹೊಟ್ಟೆಯಲ್ಲಿ ಗ್ಯಾಸ್ ಆಗುವುದು ಅನೇಕರು ಅನುಭವಿಸುತ್ತಿರುವ ಸಾಮಾನ್ಯ ಸಮಸ್ಯೆಗಳಲ್ಲಿ ಒಂದಾಗಿದ್ದು ಉಬ್ಬುವುದು, ಭಾರವಾಗುವುದು ಮತ್ತು ಅಸ್ವಸ್ಥತೆಯಂತಹ ಲಕ್ಷಣಗಳು ಕಂಡುಬರಬಹುದು. ಅನೇಕರು ಈ ರೀತಿಯಾಗುವುದಕ್ಕೆ ಆಹಾರ ಮತ್ತು ಪಾನೀಯಗಳು ಮಾತ್ರ ಕಾರಣ ಎಂದು ಅಂದುಕೊಳ್ಳುತ್ತಾರೆ. ಆದರೆ ಹಲವು ಬಾರಿ ನಮ್ಮ ದೈನಂದಿನ ಅಭ್ಯಾಸಗಳು ಸಹ ಇದಕ್ಕೆ ಕಾರಣವಾಗಿರಬಹುದು. ಹಾಗಾದರೆ ಯಾವ ಅಭ್ಯಾಸಗಳು ಗ್ಯಾಸ್ಟ್ರಿಕ್ ಸಮಸ್ಯೆಗೆ ಕಾರಣವಾಗುತ್ತದೆ, ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಸಮಸ್ಯೆಯಿಂದ ದೂರವಿರಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jun 5, 2026
- 7:03 pm
ಗ್ಯಾಸ್ ಸ್ಟೋವ್ ಮನೆಯೊಳಗಿನ ಗಾಳಿಯನ್ನು ಮಾಲಿನ್ಯಗೊಳಿಸಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾ?
ಸಾಮಾನ್ಯವಾಗಿ ದಿನನಿತ್ಯದ ಅಡುಗೆ ಮಾಡಲು ಗ್ಯಾಸ್ ಸ್ಟೌವ್ ಬಳಸುವುದು ಸಹಜ. ಆದರೆ ಅಡುಗೆ ಮಾಡುವಾಗ ಒಳಾಂಗಣ ಗಾಳಿಯ ಗುಣಮಟ್ಟ ಕಡಿಮೆಯಾಗಬಹುದು. ಇದು ಆರೋಗ್ಯಕ್ಕೆ ಬಹಳ ಮುಖ್ಯವಾಗಿರುವುದರಿಂದ ಈ ರೀತಿಯ ಪರಿಸ್ಥಿತಿಯಲ್ಲಿ, ಗ್ಯಾಸ್ ಸ್ಟೌವ್ಗಳು ಮನೆಯಲ್ಲಿ ಗಾಳಿಯನ್ನು ಕಲುಷಿತಗೊಳಿಸಬಹುದೇ ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ಹಾಗಾದರೆ ಇದು ಯಾವ ರೀತಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಮನೆಯೊಳಗಿನ ಗಾಳಿ ಹರಿವನ್ನು ಸ್ವಚ್ಛವಾಗಿಡಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ
- Preethi Bhat Gunavante
- Updated on: Jun 4, 2026
- 8:24 pm
ಮಕ್ಕಳಲ್ಲಿ ಯೂರಿನ್ ಟೆಸ್ಟ್ ಮಾಡಿ ಆಟಿಸಂ ಲಕ್ಷಣಗಳನ್ನು ಪತ್ತೆಹಚ್ಚಬಹುದೇ? ಏನ್ ಹೇಳುತ್ತೆ ಅಧ್ಯಯನ?
ಆಟಿಸಂ ಬಗ್ಗೆ ನಿಮಗೆ ತಿಳಿದಿರಬಹುದು. ಇದು ನರಮಂಡಲದ ಬೆಳವಣಿಗೆಯಲ್ಲಿನ ನ್ಯೂನತೆಯಿಂದ ಉಂಟಾಗುವ ಕಾಯಿಲೆಯಾಗಿದ್ದು ವ್ಯಕ್ತಿಯ ಸಾಮಾಜಿಕ ಸಂವಹನ, ಆಸಕ್ತಿ ಮತ್ತು ನಡವಳಿಕೆಯ ಮೇಲೆ ಪ್ರಭಾವ ಬೀರುತ್ತದೆ. ಇದಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲದಿದ್ದರೂ, ಆರಂಭಿಕ ತಪಾಸಣೆ ಮತ್ತು ಚಿಕಿತ್ಸೆಯಿಂದ ಮಕ್ಕಳ ಜೀವನದ ಗುಣಮಟ್ಟವನ್ನು ಗಣನೀಯವಾಗಿ ಸುಧಾರಿಸಬಹುದಾಗಿತ್ತು. ಆದರೆ ಹೊಸ ಅಧ್ಯಯನವೊಂದು ಮೂತ್ರ ಪರೀಕ್ಷೆ ಮಾಡುವ ಮೂಲಕ, 2 ವರ್ಷ ವಯಸ್ಸಿನ ಮಕ್ಕಳಲ್ಲಿಯೇ ಆಟಿಸಂಗೆ ಸಂಬಂಧಿಸಿದ ಸಂಭಾವ್ಯ ಲಕ್ಷಣಗಳನ್ನು ಗುರುತಿಸಬಹುದು ಎಂದು ಹೇಳಿದೆ. ಹಾಗಾದರೆ ಆಟಿಸಂ ಅನ್ನು ಆರಂಭದಲ್ಲೇ ಗುರುತಿಸುವುದು ಯಾಕೆ ಮುಖ್ಯ, ಈ ಅಧ್ಯಯನದಿಂದ ಯಾವ ರೀತಿ ಲಾಭವಿದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jun 4, 2026
- 5:58 pm
ಮಹಿಳೆಯರೇ… ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ವರ್ಷಕ್ಕೊಮ್ಮೆ ತಪ್ಪದೆ ಈ ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ
ಮಹಿಳೆಯರ ದೇಹವು ಕಾಲಕಾಲಕ್ಕೆ ವಿವಿಧ ರೀತಿಯ ಬದಲಾವಣೆಗಳಿಗೆ ಒಳಗಾಗುತ್ತದೆ. ಅಂತಹ ಸಂದರ್ಭಗಳಲ್ಲಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತವಾಗಿ ತಪಾಸಣೆ ಮಾಡುವುದು ಬಹಳ ಮುಖ್ಯ. ಅದರಲ್ಲಿಯೂ ವರ್ಷಕ್ಕೊಮ್ಮೆ ತಪ್ಪದೆ ಕೆಲವು ಅಗತ್ಯ ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು. ರಕ್ತ ಪರೀಕ್ಷೆಗಳು ದೇಹದ ಒಳಗಿನ ಆರೋಗ್ಯ ಸ್ಥಿತಿಯನ್ನು ತಿಳಿಯಲು ಸಹಾಯ ಮಾಡುತ್ತವೆ. ಹಾಗಾದರೆ ವರ್ಷಕ್ಕೊಮ್ಮೆ ಮಾಡಿಸಬೇಕಾದ ರಕ್ತ ಪರೀಕ್ಷೆಗಳು ಯಾವವು ಮತ್ತು ಅದನ್ನು ಯಾಕೆ ಮಾಡಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jun 4, 2026
- 3:29 pm
ಫಿಟ್ನೆಸ್ ಕಾಪಾಡಿಕೊಳ್ಳಲು ಊಟ ಬಿಡುತ್ತಿದ್ದೀರಾ? ಹಾಗಿದ್ರೆ ನೀವು ಈ ಒಂದಿಷ್ಟು ವಿಚಾರಗಳನ್ನು ತಿಳಿದುಕೊಳ್ಳಲೇಬೇಕು
ನಾವು ನಿಯಮಿತವಾಗಿ ಊಟ ಬಿಡಲು ಆರಂಭಿಸಿದಾಗ, ದೇಹ ಶಕ್ತಿಯನ್ನು ಬಳಸುವ ಬದಲು ಅದನ್ನು ಸಂಗ್ರಹಿಸಲು ಆರಂಭಿಸುತ್ತದೆ. ಇದರಿಂದ ಮೆಟಾಬಾಲಿಸಂ ನಿಧಾನಗೊಳ್ಳುತ್ತದೆ ಮತ್ತು ವರ್ಕೌಟ್ ಮಾಡುವುದು ಹೆಚ್ಚು ಕಷ್ಟವಾಗುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಊಟ ಬಿಡುವುದು ಪರಿಹಾರವಲ್ಲ. ಬದಲಾಗಿ ಆರೋಗ್ಯಕರವಾಗಿ ತೂಕ ಕಡಿಮೆ ಮಾಡಿಕೊಳ್ಳಲು ಏನು ಮಾಡಬಹುದು ಎಂಬುದನ್ನು ತಿಳಿದುಕೊಂಡು ಆ ರೀತಿಯಾಗಿ ದಿನಚರಿಯನ್ನು ಅಳವಡಿಸಿಕೊಳ್ಳುವುದು ಉತ್ತಮ.
- Preethi Bhat Gunavante
- Updated on: Jun 3, 2026
- 8:28 pm
ಬೊಜ್ಜು ಹೃದಯಕ್ಕಷ್ಟೇ ಅಲ್ಲ, ಕಿಡ್ನಿಗೂ ಅಪಾಯಕಾರಿಯಾಗಬಹುದು! ಈ ಲಕ್ಷಣ ಕಂಡು ಬಂದಾಗ ನಿರ್ಲಕ್ಷಿಸಬೇಡಿ
ಬೊಜ್ಜು ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳು, ಅಧಿಕ ರಕ್ತದೊತ್ತಡ ಮತ್ತು ಮಧುಮೇಹಕ್ಕೆ ಕಾರಣವಾಗಬಹುದು ಎಂಬುದು ತಿಳಿದ ವಿಚಾರ. ಆದರೆ ಇದು ಮೂತ್ರಪಿಂಡದ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹಾಗಾದರೆ ನಮ್ಮ ಕಿಡ್ನಿಗೂ ಬೊಜ್ಜಿಗೂ ಏನು ಸಂಬಂಧ, ಯಾವ ರೀತಿಯ ಲಕ್ಷಣಗಳನ್ನು ಕಡೆಗಣಿಸಬಾರದು ಜೊತೆಗೆ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿಯ ಸಲಹೆಗಳನ್ನು ಪಾಲಿಸಬೇಕು ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Jun 3, 2026
- 6:53 pm
ಮಕ್ಕಳ ಎತ್ತರ ಹೆಚ್ಚಾಗುತ್ತಿಲ್ಲ ಎಂಬ ಚಿಂತೆ ಕಾಡುತ್ತಿದೆಯೇ? ಈ ಪೋಷಕಾಂಶಗಳ ಕೊರತೆ ಕಾರಣವಾಗಿರಬಹುದು
ಕೆಲವೊಮ್ಮೆ ಮಕ್ಕಳು ದೊಡ್ಡವರಾಗುತ್ತಾ ಅವರ ತೂಕ ಹೆಚ್ಚಳವಾಗುತ್ತದೆ ಆದರೆ ಎತ್ತರ ಸರಿಯಾಗಿ ಹೆಚ್ಚಾಗುವುದಿಲ್ಲ. ಇದು ಪೋಷಕರನ್ನು ಚಿಂತೆಗೀಡು ಮಾಡುತ್ತದೆ. ಅಂತಹ ಸಂದರ್ಭಗಳಲ್ಲಿ, ಇದರ ಹಿಂದಿನ ಕಾರಣಗಳ ಬಗ್ಗೆ ತಿಳಿದುಕೊಳ್ಳಬೇಕಾಗುತ್ತದೆ. ಸಾಮಾನ್ಯವಾಗಿ ಕೆಲವು ಅಗತ್ಯ ಪೋಷಕಾಂಶಗಳ ಕೊರತೆಯಿಂದ ಮಕ್ಕಳ ಬೆಳವಣಿಗೆಯ ಮೇಲೆ ಪರಿಣಾಮ ಬೀಳಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮಕ್ಕಳ ಬೆಳವಣಿಗೆಗೆ ಪೋಷಕಾಂಶಗಳು ಯಾಕೆ ಮುಖ್ಯವಾಗುತ್ತದೆ, ಎತ್ತರ ಹೆಚ್ಚಳಕ್ಕೆ ಸಹಾಯ ಮಾಡುವ ಪ್ರಮುಖ ಪೋಷಕಾಂಶಗಳು ಯಾವವು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jun 3, 2026
- 5:26 pm
ಆರೋಗ್ಯ ಕಾಪಾಡಿಕೊಳ್ಳಲು ಎಸಿ ಟೆಂಪರೇಚರ್ ಎಷ್ಟಿರಬೇಕು ಗೊತ್ತಾ?
ಅನೇಕರು ಅತಿಯಾಗಿ ಎಸಿ ಬಳಸುತ್ತಾರೆ. ಮಳೆಯಿರಲಿ, ಬಿಸಿಲಿರಲಿ ಏರ್ ಕಂಡೀಷನರ್ ಇಲ್ಲದೆ ದಿನಕಳೆಯುವುದಿಲ್ಲ ಎಂಬ ಸ್ಥಿತಿಯಲ್ಲಿರುತ್ತಾರೆ. ಆದರೆ ಆರೋಗ್ಯ ಕಾಪಾಡಿಕೊಳ್ಳಲು ಎಸಿ ತಾಪಮಾನ ಸರಿಯಾಗಿರುವುದು ಬಹಳ ಮುಖ್ಯ, ಏಕೆಂದರೆ ತುಂಬಾ ಕಡಿಮೆ ಅಥವಾ ತುಂಬಾ ಹೆಚ್ಚಿನ ತಾಪಮಾನವು ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಹಾಗಾದರೆ ಆರೋಗ್ಯ ಕಾಪಾಡಲು ಎಸಿಯ ಸರಿಯಾದ ತಾಪಮಾನ ಎಷ್ಟಿರಬೇಕು, ತುಂಬಾ ಕಡಿಮೆ ತಾಪಮಾನದಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಬರುತ್ತವೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jun 2, 2026
- 10:41 pm
ರಾತ್ರಿ ಪದೇ ಪದೇ ಎಚ್ಚರವಾಗಿ ನಿದ್ರೆ ಸರಿಯಾಗಿ ಬರದಿದ್ದರೆ ತಪ್ಪದೆ ಈ ವಿಟಮಿನ್ ಕೊರತೆಯಾಗಿದೆಯೇ ಪರೀಕ್ಷಿಸಿಕೊಳ್ಳಿ!
ಅನೇಕರಿಗೆ ರಾತ್ರಿ ಸರಿಯಾಗಿ ನಿದ್ರೆ ಬರುವುದಿಲ್ಲ. ಈ ರೀತಿ ಆಗುತ್ತಿದ್ದರೆ ಅದನ್ನು ಸಾಮಾನ್ಯ ಸಮಸ್ಯೆ ಎಂದು ಪರಿಗಣಿಸಿ ನಿರ್ಲಕ್ಷಿಸಬಾರದು. ಕೆಲವೊಂದು ಬಾರಿ ಈ ರೀತಿ ಆಗುವುದಕ್ಕೆ ದೇಹದಲ್ಲಿನ ಜೀವಸತ್ವಗಳ ಕೊರತೆಯೂ ಕಾರಣವಾಗಿರುತ್ತದೆ. ಹೌದು, ದೇಹದಲ್ಲಿ ಕೆಲವು ವಿಟಮಿನ್ ಕೊರತೆಯಾದಾಗಲೂ ಕೂಡ ಈ ರೀತಿ ಆಗುತ್ತದೆ. ಹಾಗಾದರೆ ಯಾವ ವಿಟಮಿನ್ ಕೊರತೆ ಈ ರೀತಿಯಾಗುವುದಕ್ಕೆ ಕಾರಣ, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jun 2, 2026
- 8:16 pm
ನಿಮ್ಮ ಚರ್ಮ ಮತ್ತು ಕೂದಲು ಡ್ಯಾಮೇಜ್ ಆಗುವುದಕ್ಕೆ ಹೈ ಬ್ಲಡ್ ಶುಗರ್ ಕಾರಣವೇ?
ಇತ್ತೀಚಿನ ದಿನಗಳಲ್ಲಿ ಅನೇಕರು ಹೈ ಬ್ಲಡ್ ಶುಗರ್ ಮತ್ತು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಪರಿಣಾಮ ದೇಹದ ಹಲವು ಭಾಗಗಳ ಮೇಲೆ ಕಂಡುಬರಬಹುದು. ಅಷ್ಟೇ ಅಲ್ಲ, ಹೆಚ್ಚಿದ ರಕ್ತದ ಸಕ್ಕರೆ ಮಟ್ಟವು ಚರ್ಮ ಮತ್ತು ಕೂದಲಿನ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಹೈ ಬ್ಲಡ್ ಶುಗರ್ ಚರ್ಮ ಮತ್ತು ಕೂದಲಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ, ಯಾವ ರೀತಿಯ ಲಕ್ಷಣ ಕಂಡು ಬಂದಾಗ ಪರೀಕ್ಷೆ ಮಾಡಿಸಬೇಕು, ಶುಗರ್ ಸಮಸ್ಯೆಯನ್ನು ಹೇಗೆ ತಡೆಗಟ್ಟಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jun 2, 2026
- 5:57 pm
ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ? ತಡೆಗಟ್ಟಲು ಏನು ಮಾಡಬಹುದು?
ಕಳೆದ ಕೆಲವು ದಿನಗಳಿಂದ, ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ನಿರಂತರ ಬದಲಾವಣೆಗಳು ಕಂಡುಬರುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಬಹಳ ಮುಖ್ಯವಾಗುತ್ತದೆ ಅದರಲ್ಲಿಯೂ ಕೀಲು ನೋವು ಮತ್ತು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹವಾಮಾನ ಬದಲಾದಾಗ ನೋವು ಮತ್ತು ಬಿಗಿತ ಹೆಚ್ಚಾಗಿ ಕಂಡುಬರುತ್ತಿದೆ. ಹಾಗಾದರೆ ಹವಾಮಾನ ಬದಲಾವಣೆಗೂ ಕೀಲು ನೋವಿಗೂ ಏನು ಸಂಬಂಧ, ಈ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jun 1, 2026
- 10:43 pm