ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.
ಕೋಮಾದಿಂದ ಹೊರಬರುವ ಸಮಯ ಪ್ರತಿಯೊಬ್ಬರಲ್ಲಿಯೂ ಭಿನ್ನವಾಗಿರುವುದಕ್ಕೆ ಕಾರಣವೇನು?
ಕೋಮಾ ಎನ್ನುವುದು ವ್ಯಕ್ತಿಯ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವ ಗಂಭೀರ ವೈದ್ಯಕೀಯ ಸ್ಥಿತಿ. ನಿಮಗೆ ತಿಳಿದಿರಬಹುದು ಕೋಮಾ ಎಂದರೆ ವ್ಯಕ್ತಿ ದೀರ್ಘಕಾಲದ ವರೆಗೆ ಅಚೇತನ ಸ್ಥಿತಿಯಲ್ಲಿ ಇರುವ ಗಂಭೀರ ಆರೋಗ್ಯ ಪರಿಸ್ಥಿತಿ. ಆದರೆ ನೀವು ಎಂದಾದರೂ ಗಮನಿಸಿದ್ದೀರಾ, ಕೋಮಾದಿಂದ ಹೊರಬರುವ ಸಮಯ ಪ್ರತಿ ರೋಗಿಯಲ್ಲೂ ವಿಭಿನ್ನವಾಗಿರುತ್ತದೆ. ಇದಕ್ಕೆ ಕಾರಣವೇನು? ಪ್ರತಿಯೊಬ್ಬರೂ ಕೂಡ ಈ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಕುರಿತು ಡಾ. ದಲ್ಜೀತ್ ಸಿಂಗ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ತಿಳಿಯಲು ಸ್ಟೋರಿ ಓದಿ.
- Preethi Bhat Gunavante
- Updated on: Mar 16, 2026
- 7:06 pm
ದೇಹದಲ್ಲಿ ಪದೇಪದೇ ದದ್ದುಗಳು ಕಂಡುಬರುತ್ತಿದ್ದರೆ ನಿರ್ಲಕ್ಷಿಸಬೇಡಿ! ಇದು ಈ ರೋಗ ಬರುವ ಮುನ್ಸೂಚನೆ
ಅನೇಕರಿಗೆ ದೇಹದ ಮೇಲೆ ಪದೇ ಪದೇ ದದ್ದುಗಳು ಕಾಣಿಸಿಕೊಳ್ಳುವ ಸಮಸ್ಯೆ ಇರುತ್ತದೆ. ಇದನ್ನು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷಿಸಬಾರದು, ಏಕೆಂದರೆ ಇದು ಅನೇಕ ರೋಗಗಳ ಸಂಕೇತವೂ ಆಗಿರಬಹುದು. ಈ ಬಗ್ಗೆ ಡಾ. ಸೌಮ್ಯ ಸಚ್ದೇವ ಅವರು ಕೆಲವು ವಿಷಯಗಳನ್ನು ಹಂಚಿಕೊಂಡಿದ್ದು, ಯಾವ ಕಾರಣಕ್ಕೆ ದದ್ದುಗಳು ಕಂಡುಬರುತ್ತವೆ? ಯಾರಲ್ಲಿ ಈ ಅಪಾಯ ಹೆಚ್ಚಾಗಿ ಕಂಡುಬರುತ್ತದೆ ಮತ್ತು ಅದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ಹೇಳಿದ್ದಾರೆ. ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Mar 14, 2026
- 6:13 pm
ಹರೀಶ್ ರಾಣಾ ಪ್ರಕರಣದ ಬೆನ್ನಲ್ಲೇ ಹೊಸ ಚರ್ಚೆ: ಕೋಮಾ ಮತ್ತು ಬ್ರೈನ್ ಡೆಡ್ಗೂ ಏನೆಲ್ಲಾ ವ್ಯತ್ಯಾಸ?
ಹರೀಶ್ ರಾಣಾ ಸುಮಾರು 13 ವರ್ಷಗಳಿಂದ ಹಾಸಿಗೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದರು. ಈಗ ಸುಪ್ರೀಂ ಕೋರ್ಟ್ ಅವರಿಗೆ ದಯಾಮರಣಕ್ಕೆ ಅನುಮತಿ ನೀಡಿದೆ. ಆದರೆ ಈ ಪ್ರಕರಣವು ಕೆಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕೋಮಾ ಮತ್ತು ಬ್ರೈನ್ ಡೆಡ್ ನಡುವಿನ ವ್ಯತ್ಯಾಸವೇನು, ಕೋಮಾದಲ್ಲಿ ಏನಾಗುತ್ತದೆ ಮತ್ತು ಅದು ಮೆದುಳು ನಿಷ್ಕ್ರಿಯವಾಗುವುದಕ್ಕಿಂತ ಹೇಗೆ ಭಿನ್ನವಾಗಿದೆ? ಈ ಎರಡು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಹಾಗೂ ಕಾನೂನು ನಿರ್ಧಾರಗಳು ಏಕೆ ಬೇರೆಬೇರೆ ಆಗಿರುತ್ತವೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Mar 14, 2026
- 5:02 pm
ಚಿಕ್ಕ ವಯಸ್ಸಿನವರಲ್ಲಿ ಹೆಚ್ಚುತ್ತಿದೆ ಬ್ರೇನ್ ಸ್ಟ್ರೋಕ್: ವೈದ್ಯರಿಂದ 3 ಪ್ರಮುಖ ಕಾರಣಗಳು ಬಹಿರಂಗ
ಇತ್ತೀಚಿನ ದಿನಗಳಲ್ಲಿ ಬ್ರೈನ್ ಸ್ಟ್ರೋಕ್ ಪ್ರಕರಣಗಳು ಹಿಂದಿಗಿಂತಲೂ ಹೆಚ್ಚಾಗಿ ಕಂಡುಬರುತ್ತಿದೆ. ಅಷ್ಟು ಮಾತ್ರವಲ್ಲ ಇದು 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚುತ್ತಿರುವುದು ವೈದ್ಯ ಲೋಕಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ. ಯುವಕರಲ್ಲಿ ಧೂಮಪಾನ, ಒತ್ತಡ ಮತ್ತು ಜೀವನಶೈಲಿಯಲ್ಲಿ ಮಾಡಿಕೊಳ್ಳುತ್ತಿರುವ ಅನಾರೋಗ್ಯಕರ ಬದಲಾವಣೆಗಳು ಹೆಚ್ಚುತ್ತಿರುವುದರಿಂದ ಬ್ರೇನ್ ಸ್ಟ್ರೋಕ್ ಅಪಾಯದಲ್ಲಿ ಏರಿಕೆ ಕಂಡುಬಂದಿರಬಹುದು. ಹಾಗಾಗಿ ಪ್ರತಿಯೊಬ್ಬರೂ ಕೂಡ ಇವುಗಳ ಲಕ್ಷಣಗಳ ಬಗ್ಗೆ ತಿಳಿದುಕೊಂಡಿರುವುದು ಬಹಳ ಒಳ್ಳೆಯದು ಏಕೆಂದರೆ ಅವುಗಳನ್ನು ತಕ್ಷಣ ಗುರುತಿಸುವುದರಿಂದ ಅಪಾಯವನ್ನು ತಡೆಯಬಹುದಾಗಿದೆ.
- Preethi Bhat Gunavante
- Updated on: Mar 13, 2026
- 8:45 pm
ಒತ್ತಡ, ಸ್ಕ್ರೀನ್ ಸಮಯದ ಹೆಚ್ಚಳದಿಂದ ಉಂಟಾಗುತ್ತಿದೆ ನಿದ್ರೆ ಸಮಸ್ಯೆ: ನಗರದ ಜನರಿಗೆ ವೈದ್ಯರ ಎಚ್ಚರಿಕೆ
ಮನುಷ್ಯ ನಿದ್ರೆ ಸರಿಯಾಗಿ ಮಾಡದಿದ್ದರೆ ಅವನ ಆರೋಗ್ಯ ಹದಗೆಡುತ್ತದೆ. ಆಹಾರ ಪದ್ಧತಿ ಎಷ್ಟು ಮುಖ್ಯವಾಗುತ್ತದೆಯೋ ನಿದ್ರೆಯೂ ಕೂಡ ಅಷ್ಟೇ ಮಹತ್ವದ್ದಾಗಿದೆ. ಆದರೆ ಈ ಬಗ್ಗೆ ಯಾರೂ ಕೂಡ ಅಷ್ಟಾಗಿ ಯೋಚಿಸುವುದಿಲ್ಲ. ಕೆಲಸದ ಒತ್ತಡ, ಅತಿಯಾಗಿ ಮೊಬೈಲ್, ಟಿವಿ, ಲ್ಯಾಪ್ ಟಾಪ್ ನೋಡುವುದು ಹೀಗೆ ನಾನಾ ರೀತಿಯ ಕಾರಣಗಳಿಂದ ನಗರಗಳಲ್ಲಿ ವಾಸ ಮಾಡುವವರು ನಿದ್ರೆ ಸರಿಯಾಗಿ ಮಾಡುವುದಿಲ್ಲ. ಆದರೆ ಈ ರೀತಿ ಮಾಡಬಾರದು. ಅಷ್ಟು ಮಾತ್ರವಲ್ಲ, ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಸಮಸ್ಯೆಗಳಾಗುತ್ತವೆ, ಇದನ್ನು ತಡೆಯಲು ಏನು ಮಾಡಬಹುದು ಎಂಬುದರ ಬಗ್ಗೆ ತಿಳಿಯಬೇಕಾಗುತ್ತದೆ.
- Preethi Bhat Gunavante
- Updated on: Mar 13, 2026
- 6:45 pm
ಕಿಡ್ನಿ ಆರೋಗ್ಯವಾಗಿ ಇರಬೇಕು ಅಂದ್ರೆ ಆರೋಗ್ಯ ತಜ್ಞರು ಹೇಳಿದ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಲೇಬೇಕು!
ಇತ್ತೀಚಿನ ಕೆಲವು ವರ್ಷಗಳಲ್ಲಿ ಕಿಡ್ನಿ ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿದೆ. ಹಾಗಾಗಿ ಜನರಿಗೆ ಕಿಡ್ನಿ ಸಂಬಂಧಿತ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ. ವೈದ್ಯರು ಹೇಳುವಂತೆ, ದಿನನಿತ್ಯದ ಕೆಲವು ಸರಳ ಅಭ್ಯಾಸಗಳನ್ನು ಪಾಲಿಸಿದರೆ ಕಿಡ್ನಿಯನ್ನು ಆರೋಗ್ಯವಾಗಿಡಬಹುದು. ಈ ಬಗ್ಗೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಡಾ. ಹಿಮಾಂಶು ವರ್ಮಾ ಮಾತನಾಡಿದ್ದು ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ. ಮಿಸ್ ಮಾಡ್ದೆ ಈ ಸಲಹೆಗಳನ್ನು ಪಾಲಿಸಿ ಕಿಡ್ನಿಯ ಆರೋಗ್ಯವನ್ನು ಕಾಪಾಡಿಕೊಳ್ಳಿ.
- Preethi Bhat Gunavante
- Updated on: Mar 12, 2026
- 8:37 pm
ಮೆಟ್ಟಿಲು ಹತ್ತಿದ್ರೆ ಹೃದಯ ಬಡಿತ ವೇಗವಾಗುತ್ತಾ? ಈ ರೀತಿ ಆಗುವುದಕ್ಕೆ ಕಾರಣವೇನು ತಿಳಿದುಕೊಳ್ಳಿ
ನೀವು ನಡೆಯುವಾಗ ಅಥವಾ ಮೆಟ್ಟಿಲು ಹತ್ತುವಾಗ ಹೃದಯ ಬಡಿತ ಹೆಚ್ಚಾಗುತ್ತಿದ್ದರೆ, ಅದು ಕೇವಲ ಹೃದಯದ ಸಮಸ್ಯೆಯೇ ಅಥವಾ ಅದಕ್ಕೂ ಆತಂಕಕ್ಕೂ ಏನಾದರೂ ಸಂಬಂಧವಿದೆಯೇ ಎಂಬುದರ ಬಗ್ಗೆ ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ. ಏಕೆಂದರೆ ಕೆಲವರು ಇದನ್ನು ಉಸಿರಾಟದ ಸಮಸ್ಯೆ ಎಂದುಕೊಳ್ಳುತ್ತಾರೆ, ಇನ್ನೂ ಕೆಲವರು ಹೃದಯ ಸಂಬಂಧಿತ ಸಮಸ್ಯೆಯೆಂದು ಭಾವಿಸಿ ಚಿಕಿತ್ಸೆ ಪಡೆಯಲು ಪ್ರಯತ್ನಿಸುತ್ತಾರೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುವ ಬದಲು ಇವುಗಳ ಬಗ್ಗೆ ಸರಿಯಾಗಿ ತಿಳಿದು ತಡೆಗಟ್ಟುವುದು ಬಹಳ ಒಳ್ಳೆಯದು.
- Preethi Bhat Gunavante
- Updated on: Mar 12, 2026
- 7:22 pm
ಅತಿಯಾಗಿ ಯೋಚಿಸುವವರಲ್ಲಿ ನೀವು ಒಬ್ಬರಾ? ಇದರಿಂದ ನಿಜವಾಗಿಯೂ ಆರೋಗ್ಯ ಹಾಳಾಗುತ್ತಾ?
ನೀವು ಗಮನಿಸಿರಬಹುದು, ಕೆಲವರು ಅಗತ್ಯಕ್ಕಿಂತ ಹೆಚ್ಚು ಅಂದರೆ ಅತಿಯಾಗಿ ಯೋಚಿಸುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಇದು ಅರಿವಿಲ್ಲದಂತೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ಸಾಮಾನ್ಯವೆಂದು ಪರಿಗಣಿಸಿ ಹಗುರವಾಗಿ ತೆಗೆದುಕೊಳ್ಳಬಾರದು. ಹಾಗಾದರೆ ಅತಿಯಾಗಿ ಯೋಚನೆ ಮಾಡುತ್ತಿದ್ದೇವೆ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ, ಇದನ್ನು ನಿಯಂತ್ರಿಸಲು ಏನು ಮಾಡಬಹುದು ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Mar 12, 2026
- 5:15 pm
ಪ್ರತಿದಿನ ಮಲ್ಟಿವಿಟಮಿನ್ ತೆಗೆದುಕೊಳ್ಳುವುದು ನಿಜವಾಗಿಯೂ ಒಳ್ಳೆಯದೇ? ಏನ್ ಹೇಳ್ತಾರೆ ವೈದ್ಯರು?
ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ, ಫಾಸ್ಟ್ ಫುಡ್ ಸೇವನೆ ಹೆಚ್ಚಾಗಿರುವುದರಿಂದ ಜನರ ಆಹಾರದಲ್ಲಿ ಅಗತ್ಯವಾದ ಪೋಷಕಾಂಶಗಳ ಕೊರತೆ ಕಾಣಿಸುತ್ತಿದೆ. ಇದರಿಂದ ಹಲವರು ವೈದ್ಯರ ಸಲಹೆ ಇಲ್ಲದೆ ಮಲ್ಟಿವಿಟಮಿನ್ ಸೇವಿಸಲು ಪ್ರಾರಂಭಿಸುತ್ತಾರೆ. ಕೆಲವರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ದಣಿವು ಕಡಿಮೆ ಮಾಡಲು ಅಥವಾ ದೇಹಕ್ಕೆ ಶಕ್ತಿ ನೀಡಲು ಸಹ ಮಲ್ಟಿವಿಟಮಿನ್ ಬಳಸುತ್ತಾರೆ. ಆದರೆ ಈ ರೀತಿ ಪ್ರತಿದಿನ ಮಲ್ಟಿವಿಟಮಿನ್ ಸೇವಿಸುವುದು ಸರಿಯೇ ಅಥವಾ ಅದು ಆರೋಗ್ಯಕ್ಕೆ ಹಾನಿ ಉಂಟುಮಾಡಬಹುದೇ ಎಂಬುದನ್ನು ತಿಳಿದುಕೊಳ್ಳುವುದು ಅಗತ್ಯ. ಈ ಬಗ್ಗೆ ಸ್ಪಷ್ಟ ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Mar 11, 2026
- 7:32 pm
ಕೂದಲಿಗೆ ಹೇರ್ ಡೈ ಹಚ್ಚುತ್ತೀರಾ? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ
ಇತ್ತೀಚಿನ ದಿನಗಳಲ್ಲಿ, ಅನೇಕರು ಹೇರ್ ಡೈ ಬಳಸುತ್ತಾರೆ. ಆದರೆ ನಿಮಗೆ ತಿಳಿದಿರಲಿ, ಇದು ಚರ್ಮದ ಮೇಲೂ ಪರಿಣಾಮ ಬೀರಬಹುದು, ಹಲವಾರು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು. ಅದರಲ್ಲಿಯೂ ಕೂದಲಿಗೆ ಡೈ ಹಾಕುವಾಗ ಕೆಲವೊಮ್ಮೆ ನೆತ್ತಿ, ಕಿವಿಗಳ ಸುತ್ತ ಮತ್ತು ಕುತ್ತಿಗೆಯ ಚರ್ಮದ ಸಂಪರ್ಕಕ್ಕೆ ಬರುತ್ತದೆ. ಇದರಿಂದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಯಾವ ರೀತಿಯ ಸಮಸ್ಯೆಗಳು ಬರುತ್ತದೆ, ಚರ್ಮವನ್ನು ರಕ್ಷಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Mar 10, 2026
- 8:28 pm
ಮೂತ್ರಕ್ಕೆ ಹೋಗದೆ ಹೆಚ್ಚು ಸಮಯ ಕಟ್ಟಿಕೊಂಡಿರುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಾಗುತ್ತೆ ಗೊತ್ತೆ?
ದೀರ್ಘಕಾಲದವರೆಗೆ ಮೂತ್ರ ವಿಸರ್ಜನೆ ಮಾಡದೆಯೇ ಅದನ್ನು ಹಿಡಿದಿಟ್ಟುಕೊಳ್ಳುವ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಲ್ಲ. ಆದರೆ ಜನ ಇದನ್ನು ನಿರ್ಲಕ್ಷಿಸುತ್ತಾರೆ. ನಿಮಗೆ ತಿಳಿದಿರಲಿ ಈ ಅಭ್ಯಾಸವು ದೇಹಕ್ಕೆ ಹಾನಿ ಮಾಡುತ್ತದೆ. ದೀರ್ಘಕಾಲ ಮೂತ್ರವನ್ನು ಕಟ್ಟಿಕೊಳ್ಳುವುದರಿಂದ ದೇಹದ ಸಹಜ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ದೇಹ ನೀಡುವ ಸೂಚನೆಗಳನ್ನು ನಿರ್ಲಕ್ಷಿಸುವುದು ಆರೋಗ್ಯದ ದೃಷ್ಟಿಯಿಂದ ಸರಿಯಲ್ಲ. ನಿಮಗೂ ಕೂಡ ಈ ರೀತಿಯ ಅಭ್ಯಾಸವಿದ್ಯಾ, ಹಾಗಾದರೆ ಇದರಿಂದ ಯಾವ ರೀತಿಯ ಸಮಸ್ಯೆಗಳಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Mar 10, 2026
- 6:46 pm
ಬಿಪಿ ನಿಯಂತ್ರಣದಲ್ಲಿಡಲು ಈ ಅಭ್ಯಾಸಗಳನ್ನು ತಪ್ಪದೆ ಅಳವಡಿಸಿಕೊಳ್ಳಿ! ಯಾವುದು ಗೊತ್ತಾ?
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಪ್ರತಿನಿತ್ಯ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಅದನ್ನು ನಿಯಂತ್ರಿಸಬಹುದು. ಹಿಂದೆ ಈ ಸಮಸ್ಯೆ ಹಿರಿಯರಲ್ಲಿ ಮಾತ್ರ ಕಂಡುಬರುತ್ತಿತ್ತು. ಆದರೆ ಈಗ ಯುವಕರಲ್ಲೂ ಇದು ಸಾಮಾನ್ಯವಾಗಿದೆ. ಹಾಗಾಗಿ ಈ ಸಮಸ್ಯೆಯನ್ನು ಹತೋಟಿಗೆ ತರುವುದು ಬಹಳ ಅವಶ್ಯಕವಾಗಿದ್ದು ಜೀವನಶೈಲಿಯಲ್ಲಿ ಕೆಲವು ಉತ್ತಮ ಬದಲಾವಣೆಗಳನ್ನು ಅಳವಡಿಸಿಕೊಂಡರೆ ಬಿಪಿಯನ್ನು ಸಮತೋಲನದಲ್ಲಿ ಇಡಲು ಸಹಾಯವಾಗುತ್ತದೆ.
- Preethi Bhat Gunavante
- Updated on: Mar 9, 2026
- 8:21 pm