ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.
ಸುಸ್ತಾಗುತ್ತೆ ಎಂದು ಮಲ್ಟಿವಿಟಮಿನ್ ಸೇವನೆ ಮಾಡುತ್ತೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ
ಇತ್ತೀಚಿನ ದಿನಗಳಲ್ಲಿ ಆಯಾಸ ಎಲ್ಲರಲ್ಲಿಯೂ ಹೆಚ್ಚಾಗುತ್ತಿದೆ. ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ಅನೇಕರು ವೈದ್ಯರನ್ನು ಸಂಪರ್ಕಿಸದೆ ಮಲ್ಟಿವಿಟಮಿನ್ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ಪ್ರತಿದಿನ ವಿಟಮಿನ್ ಮಾತ್ರೆಗಳನ್ನು ತೆಗೆದುಕೊಳ್ಳುವುದು ನಿಜವಾಗಿಯೂ ಸುರಕ್ಷಿತವೇ? ಎಂದಾದರೂ ಯೋಚಿಸಿದ್ದೀರಾ? ಅದರಲ್ಲಿಯೂ ವಿದ್ಯಾರ್ಥಿಗಳಲ್ಲಿ ಕಂಡುಬರುವ ಆಯಾಸ, ನಿದ್ರಾಹೀನತೆ ಸಮಸ್ಯೆಗೆ ಮಾತ್ರೆಗಳ ಬದಲು ಸರಳ ಸಲಹೆಯ ಮೂಲಕ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Jan 2, 2026
- 9:16 pm
ಹಗಲಿನಲ್ಲಿ ಮಲಗುವ ಅಭ್ಯಾಸ ನಿಮಗಿದ್ಯಾ? ಈ ಸಮಯಕ್ಕಿಂತ ಹೆಚ್ಚು ಮಲಗಿದ್ರೆ ಮಧುಮೇಹ ಬರಬಹುದು ಎಚ್ಚರ!
ಹಗಲಿನಲ್ಲಿ ನಿದ್ರೆ ಮಾಡುವುದು ಸಾಮಾನ್ಯ. ಆದರೆ, ಇತ್ತೀಚಿನ ಅಧ್ಯಯನವೊಂದು ಹಗಲಿನಲ್ಲಿ ಹೆಚ್ಚು ಹೊತ್ತು ಮಲಗುವುದರಿಂದ ಮಧುಮೇಹ ಬರುವ ಅಪಾಯ ಹೆಚ್ಚಾಗುತ್ತದೆ ಎಂದು ಬಹಿರಂಗಪಡಿಸಿದೆ. ಹೌದು, ದಿನಕ್ಕೆ 30 ನಿಮಿಷಕ್ಕಿಂತ ಹೆಚ್ಚು ಹೊತ್ತು ನಿದ್ರೆ ಮಾಡುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಾಗುತ್ತದೆ, ಈ ರೀತಿ ಅಭ್ಯಾಸದಿಂದ ಮಧುಮೇಹದ ಅಪಾಯ ಹೆಚ್ಚಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ. ಹಾಗಾದರೆ ಹಗಲಿನಲ್ಲಿ ಮಲಗುವುದರಿಂದ ನಿಜವಾಗಿಯೂ ಡಯಾಬಿಟಿಸ್ ಬರುತ್ತದೆಯೇ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 2, 2026
- 6:15 pm
ಅತಿಯಾದ ಆ್ಯಂಟಿಬಯಾಟಿಕ್ಸ್ ಸೇವನೆಯಿಂದ ಏನೆಲ್ಲ ಅಪಾಯವಿದೆ ಗೊತ್ತೇ? ಡಾ. ದೇವಿ ಪ್ರಸಾದ್ ಶೆಟ್ಟಿ ಕೊಟ್ಟ ಕಾರಣ ಇಲ್ಲಿದೆ
ಇತ್ತೀಚಿನ ದಿನಗಳಲ್ಲಿ ಆ್ಯಂಟಿಬಯಾಟಿಕ್ಸ್ ಇಲ್ಲದ ಮನೆಗಳೇ ಇಲ್ಲ ಎಂಬ ಪರಿಸ್ಥಿತಿ ಬಂದಿದೆ. ಸಣ್ಣ ಜ್ವರ, ಮೈಕೈ ನೋವು, ಕಫ ಹೀಗೆ ಏನಾದರೂ ಸಣ್ಣ ಬದಲಾವಣೆ ದೇಹದಲ್ಲಿ ಆದ ತಕ್ಷಣ ವೈದ್ಯರ ಸಲಹೆಯಿಲ್ಲದೆ ಆ್ಯಂಟಿಬಯೋಟಿಕ್ಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಎಷ್ಟೆಲ್ಲಾ ಸಮಸ್ಯೆಗಳಾಗಬಹುದು ಎಂಬುದರ ಬಗ್ಗೆ ಎಂದಾದರೂ ಯೋಚಿಸಿದ್ದೀರಾ? ಈ ವಿಷಯವಾಗಿ ಹೃದ್ರೋಗ ತಜ್ಞ ಡಾ. ದೇವಿ ಪ್ರಸಾದ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ರೋಗಿಯ ದೇಹದಲ್ಲಿ ಆ್ಯಂಟಿಬಯಾಟಿಕ್ಸ್ ಸರಿಯಾಗಿ ಕೆಲಸ ಮಾಡದಿರಲು ಕಾರಣವೇನು? ಹೀಗೆ ಮುಂದುವರಿದರೆ ಏನಾಗುತ್ತದೆ ಎಂಬುದರ ಬಗ್ಗೆ ವಿವರಿಸಿದ್ದಾರೆ.
- Preethi Bhat Gunavante
- Updated on: Jan 2, 2026
- 3:50 pm
ಚಳಿಗಾಲದಲ್ಲಿ ಐಸ್ ಕ್ರೀಮ್ ತಿಂದ್ರೆ ನಿಜವಾಗಿಯೂ ನೆಗಡಿ, ಕೆಮ್ಮು ಬರುತ್ತಾ? ಇಲ್ಲಿದೆ ತಜ್ಞರು ನೀಡಿದ ಅಚ್ಚರಿ ಮಾಹಿತಿ
ಐಸ್ ಕ್ರೀಮ್ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ? ಕೆಲವರಂತೂ ಮಳೆಯಾಗಲಿ, ಚಳಿಯಾಗಲಿ ಸಮಯವನ್ನು ಲೆಕ್ಕಿಸದೆಯೇ ಐಸ್ ಕ್ರೀಮ್ ತಿನ್ನುತ್ತಾರೆ. ಆದರೆ, ಮನೆಯಲ್ಲಿ ಹಿರಿಯರು ಮಾತ್ರ ಚಳಿಗಾಲದಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನೆಗಡಿ ಮತ್ತು ಕೆಮ್ಮು ಬರುತ್ತೆ ತಿನ್ನಬೇಡಿ ಎಂದು ಎಚ್ಚರಿಸುತ್ತಲೇ ಇರುತ್ತಾರೆ. ಹಾಗಾದರೆ, ಇದು ಎಷ್ಟು ನಿಜ! ಚಳಿಗಾಲದಲ್ಲಿ ತಣ್ಣನೆಯ ಆಹಾರ ಸೇವನೆ ಮಾಡುವುದರಿಂದ ನಿಜವಾಗಿಯೂ ಆರೋಗ್ಯ ಹಾಳಾಗುತ್ತದೆಯೇ... ಈ ಕುರಿತಂತೆ ತಜ್ಞರು ನೀಡಿದ ಅಚ್ಚರಿಯ ಮಾಹಿತಿ ಇಲ್ಲಿದೆ.
- Preethi Bhat Gunavante
- Updated on: Jan 1, 2026
- 8:20 pm
ಈ ಆರೋಗ್ಯ ಸಮಸ್ಯೆ ಇರುವವರು ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ವಾಕಿಂಗ್ ಹೋಗಬಾರದು!
ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆದರೆ ಆರೋಗ್ಯ ಕಾಪಾಡಿಕೊಳ್ಳಲು ವಾಕಿಂಗ್ ಮಾಡುವುದೇ ದೇಹಕ್ಕೆ ಹಾನಿಯುಂಟುಮಾಡಬಹುದು. ಹೌದು, ಇದು ಆಶ್ಚರ್ಯ ಎನಿಸಿದರೂ ಸತ್ಯ. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಬೆಳಗಿನ ನಡಿಗೆ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾದರೆ ವಾಕಿಂಗ್ ಮಾಡುವುದರಿಂದ ನಿಜವಾಗಿಯೂ ಹೃದಯಾಘಾತವಾಗುತ್ತದೆಯೇ? ಯಾರಲ್ಲಿ ಈ ಅಪಾಯ ಹೆಚ್ಚಾಗಿ ಕಂಡುಬರುತ್ತದೆ ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Jan 1, 2026
- 7:05 pm
ಹುಣಸೆಹಣ್ಣನ್ನು ಚಪ್ಪರಿಸಿ ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆಗಳು ಎಂದಿಗೂ ಬರುವುದಿಲ್ಲ
ಹುಣಸೆಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಅದರಲ್ಲಿಯೂ ಈಗ ಮಾರುಕಟ್ಟೆಯಲ್ಲಿ ಇದು ಯಥೇಚ್ಛವಾಗಿ ಲಭ್ಯವಿರುವುದರಿಂದ ಕೊಂಡು ತಂದು ಸೇವನೆ ಮಾಡಬಹುದಾಗಿದೆ. ಸಾಮಾನ್ಯವಾಗಿ ಹುಣಸೆಹಣ್ಣನ್ನು ಅದರ ಸುವಾಸನೆ ಮತ್ತು ಅದರಲ್ಲಿರುವ ರುಚಿಗೆ ಅನೇಕ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ. ಇದಿಲ್ಲದೆ ಕೆಲವು ಆಹಾರಗಳು ಅಪೂರ್ಣ ಎನಿಸಿಕೊಳ್ಳುತ್ತವೆ. ಹಾಗಾದರೆ ಹುಣಸೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು, ಯಾಕಾಗಿ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Jan 1, 2026
- 5:47 pm
ಹೊಸ ವರ್ಷಕ್ಕೆ ಹೊಸ ಚಾಲೆಂಜ್; 10 ದಿನ ಸಕ್ಕರೆ ತಿನ್ನದಿದ್ದರೆ ದೇಹದಲ್ಲಿ ಏನೆಲ್ಲಾ ಆಗುತ್ತೆ ನೋಡಿ
10 ದಿನ ಶುಗರ್ ಫ್ರೀ ಚಾಲೆಂಜ್: ಹೊಸವರ್ಷಕ್ಕೆ ಹೊಸ ಹೊಸ ಬಟ್ಟೆಗಳನ್ನು ಕೊಳ್ಳುವುದರ ಜೊತೆಗೆ ಆರೋಗ್ಯ ಕಾಪಾಡಲು 10 ದಿನ ಶುಗರ್ ಫ್ರೀ ಚಾಲೆಂಜ್ ಗೆ ಸಿದ್ದವಾಗಿ. ಇದನ್ನು ಸರಿಯಾಗಿ ಮಾಡಿದಲ್ಲಿ ನೀವು ನಂಬಲು ಸಾಧ್ಯವಾಗದ ಬದಲಾವಣೆಗಳು ನಿಮ್ಮ ದೇಹದಲ್ಲಿ ಕಂಡುಬರುತ್ತದೆ. ಮತ್ತೇಕೆ ತಡ ಹೊಸ ವರ್ಷದ ಹೊಸ್ತಿಲಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಚಾಲೆಂಜ್ ಅನ್ನು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳಿಸಿ ಅನಾರೋಗ್ಯದಿಂದ ದೂರವಾಗಿ ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಿ.
- Preethi Bhat Gunavante
- Updated on: Dec 31, 2025
- 9:36 pm
ಈ ಅಭ್ಯಾಸಗಳಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಹೆಚ್ಚು; ಈ ಬಗ್ಗೆ ಜಾಗೃತೆ ವಹಿಸಬೇಕು ಎನ್ನುತ್ತಾರೆ ಡಾ. ಸಂತೋಷ್
ಪಾರ್ಶ್ವವಾಯು ಅಥವಾ ಸ್ಟ್ರೋಕ್ ಬಗ್ಗೆ ಸರಿಯಾಗಿ ತಿಳಿದಿರುವುದು ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ವೈಟ್ ಫೀಲ್ಡ್ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್ ನ್ಯೂರೋಲಾಜಿಸ್ಟ್ ಆಗಿರುವ ಡಾ. ಸಂತೋಷ್ ಎನ್ ಎಸ್ ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ ಅವರು ಹೆಚ್ಚಿನ ಮಾಹಿತಿ ನೀಡಿದ್ದು ಸ್ಟ್ರೋಕ್ ಗಳಲ್ಲಿ ಕಂಡು ಬರುವ ವಿಧಗಳು ಮತ್ತು ಅವು ಕಂಡುಬರುವುದಕ್ಕೆ ಕಾರಣಗಳ ಬಗ್ಗೆ ತಿಳಿಸಿದ್ದು ಮತ್ತಷ್ಟು ಮಾಹಿತಿ ಪಡೆಯಲು ಈ ವಿಡಿಯೋ ನೋಡಿ.
- Preethi Bhat Gunavante
- Updated on: Dec 31, 2025
- 8:05 pm
ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ತಡೆಯಲು ಈ ಸಲಹೆ ಪಾಲಿಸುವುದನ್ನು ಮರೆಯಬೇಡಿ
ಕೀಲು ನೋವು ಚಳಿಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಅಷ್ಟೇ ಅಲ್ಲ ಇದು ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲಿಯೂ ಬೆಳಿಗ್ಗೆಯಿಂದ ಸಂಜೆವರೆಗೆ ಒಂದೇ ಜಾಗದಲ್ಲಿ ಕುಳಿತಲ್ಲಿಯೇ ಇದ್ದರೆ ಇಂತಹ ನೋವುಗಳು ಹೆಚ್ಚಾಗುತ್ತದೆ. ಜೊತೆಗೆ ಶೀತ ಹೆಚ್ಚಾದಂತೆ, ದೇಹದ ಚಟುವಟಿಕೆ ಕಡಿಮೆಯಾಗುವುದರಿಂದ, ಇದು ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಹಾಗಾಗಿ ಇಂತಹ ಸಮಯದಲ್ಲಿ ಕೀಲು ನೋವು ಏಕೆ ಹೆಚ್ಚಾಗುತ್ತದೆ, ಅದರ ಬಗ್ಗೆ ಯಾರು ಹೆಚ್ಚು ಜಾಗರೂಕರಾಗಿರಬೇಕು ಮತ್ತು ಅದನ್ನು ಹೇಗೆ ತಡೆಯಬಹುದು ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ.
- Preethi Bhat Gunavante
- Updated on: Dec 31, 2025
- 4:45 pm
ಚಳಿಗೆ ಬಿಸಿಬಿಸಿಯಾಗಿ ತಿನ್ನಬೇಕು ಅಂತಾ ಅನಿಸುತ್ತಾ? ಅಪ್ಪಿತಪ್ಪಿಯೂ ಸಂಜೆ 6 ಗಂಟೆಯ ನಂತರ ಈ ಆಹಾರಗಳನ್ನು ತಿನ್ನಬೇಡಿ
ಸಂಜೆ 6 ಗಂಟೆಯ ನಂತರ ಕೆಲವು ಆಹಾರಗಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ತೂಕ ಹೆಚ್ಚಾಗುತ್ತದೆ. ಸಮೋಸಾ, ಪಕೋಡಾಗಳು, ಜಂಕ್ ಫುಡ್ ಮತ್ತು ಸಿಹಿತಿಂಡಿಗಳು ಹೆಚ್ಚಿನ ಕೊಬ್ಬು ಮತ್ತು ಸಕ್ಕರೆಯನ್ನು ಹೊಂದಿರುತ್ತವೆ, ಇದು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾದರೆ ಸಂಜೆ ಮೇಲೆ ಯಾವ ರೀತಿಯ ಆಹಾರಗಳ ಸೇವನೆ ಮಾಡಬಾರದು ಮತ್ತು ಯಾಕೆ? ಇವುಗಳ ಬದಲು ಸಂಜೆ ತಿನ್ನಬಹುದಾದ ಆರೋಗ್ಯಕರ ತಿಂಡಿಗಳು ಯಾವವು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 30, 2025
- 6:35 pm
ನಿಮ್ಮ ಮಗುವಿನಲ್ಲಿ ಹಸಿವು ಕಡಿಮೆಯಾಗುವುದಕ್ಕೆ ನೀವು ಹೇಳಿಕೊಟ್ಟ ಈ ಅಭ್ಯಾಸವೇ ಕಾರಣ!
ಸಾಮಾನ್ಯವಾಗಿ ಬೆಳಿಗ್ಗೆ ಎದ್ದ ಕೂಡಲೇ ಅಥವಾ ಸಂಜೆಯಾಗುತ್ತಿದ್ದಂತೆ ಚಹಾ ಮತ್ತು ಕಾಫಿ ಕುಡಿಯುವುದು ಸಾಮಾನ್ಯ. ದೊಡ್ಡವರು ಚಹಾ ಅಥವಾ ಕಾಫಿ ಕುಡಿಯುವುದಲ್ಲದೆ ಮಕ್ಕಳಿಗೂ ಕುಡಿಯಲು ಕೊಡುತ್ತಾರೆ. ಆದರೆ ಇದು ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ, ಇಂತಹ ಅಭ್ಯಾಸ ತುಂಬಾ ಹಾನಿಕಾರಕ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದು ಮಕ್ಕಳ ಬೆಳವಣಿಗೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಹಾಗಾದರೆ ಮಕ್ಕಳು ಯಾಕೆ ಕಾಫಿ ಸೇವನೆ ಮಾಡಬಾರದು, ಒಂದು ಕಪ್ ಕಾಫಿ ಮಕ್ಕಳಲ್ಲಿ ಏನೆಲ್ಲಾ ಬದಲಾವಣೆ ಮಾಡುತ್ತೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 30, 2025
- 4:15 pm
ಚರ್ಮರೋಗ ಇದ್ಯಾ? ಚಳಿಗಾಲದಲ್ಲಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದ್ರೆ ಸಮಸ್ಯೆ ಉಲ್ಬಣವಾಗುವುದು ಗ್ಯಾರೆಂಟಿ
ಚಳಿಗಾಲದಲ್ಲಿ ಚರ್ಮ ರೋಗಗಳಿಂದ ಬಳಲುತ್ತಿರುವವರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಅದರಲ್ಲಿಯೂ ಸ್ನಾನ ಮಾಡುವಾಗ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ ಇಲ್ಲದಿದ್ದರೆ, ಸಮಸ್ಯೆ ಇನ್ನಷ್ಟು ಹದಗೆಡಬಹುದು. ಹಾಗಾಗಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಲು ಮತ್ತು ಅದು ಉಲ್ಬಣಗೊಳ್ಳುವುದನ್ನು ತಡೆಯಲು ಚಳಿಗಾಲದಲ್ಲಿ ತಮ್ಮ ದಿನಚರಿಯಲ್ಲಿ ಕೆಲವು ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ಆ ಮೂಲಕ ಸಮಸ್ಯೆಗಳು ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಹಾಗಾದರೆ ಚರ್ಮರೋಗಿಗಳು ಸ್ನಾನ ಮಾಡುವಾಗ ಯಾವ ರೀತಿ ಸಲಹೆಗಳನ್ನು ಅನುಸರಿಸಬೇಕು ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Dec 29, 2025
- 6:30 pm