AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್​, ಗುಣವಂತೆ

Author - TV9 Kannada

preetibhat802@gmail.com

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow On:
ನೀವು ಕೂಡ ಮುಖದವರೆಗೂ ಬ್ಲಾಂಕೆಟ್ ಹೊದ್ದು ಮಲಗ್ತೀರಾ ಈ ಅಭ್ಯಾಸ ಎಷ್ಟು ಡೇಂಜರ್ ನೋಡಿ!

ನೀವು ಕೂಡ ಮುಖದವರೆಗೂ ಬ್ಲಾಂಕೆಟ್ ಹೊದ್ದು ಮಲಗ್ತೀರಾ ಈ ಅಭ್ಯಾಸ ಎಷ್ಟು ಡೇಂಜರ್ ನೋಡಿ!

ಅನೇಕರು ಚಳಿಯಿಂದ ರಕ್ಷಣೆ ಪಡೆಯಲು, ಮಲಗುವಾಗ ಕಂಬಳಿ ಅಥವಾ ಬೆಡ್ ಶಿಟ್ ಅನ್ನು ಮುಖದವರೆಗೆ ಹೊದ್ದು ಮಲಗುತ್ತಾರೆ. ಈ ಅಭ್ಯಾಸ ದೇಹವನ್ನು ಬೆಚ್ಚಗಿಡುತ್ತದೆಯಾದರೂ ಕೂಡ ಇದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ. ಹೌದು, ಇದು ನಮ್ಮ ಶ್ವಾಸಕೋಶಗಳಿಗೆ ತುಂಬಾ ಹಾನಿಕಾರಕವಾಗಿದೆ. ಅಷ್ಟೇ ಅಲ್ಲ, ಚರ್ಮದ ಆರೋಗ್ಯಕ್ಕೂ ಒಳ್ಳೆಯದಲ್ಲ ಎನ್ನಲಾಗುತ್ತದೆ. ಹಾಗಾದರೆ ಇದು ಆರೋಗ್ಯದ ಮೇಲೆ ಯಾವ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹುಷಾರಿಲ್ಲ ಅಂತಾ ಆಸ್ಪತ್ರೆಗೆ ಹೋದ್ರೆ ಡಾಕ್ಟರ್ ನಾಲಿಗೆ ತೋರಿಸಿ ಎನ್ನುವುದಕ್ಕೆ ಕಾರಣ ಏನ್ ಗೊತ್ತಾ?

ಹುಷಾರಿಲ್ಲ ಅಂತಾ ಆಸ್ಪತ್ರೆಗೆ ಹೋದ್ರೆ ಡಾಕ್ಟರ್ ನಾಲಿಗೆ ತೋರಿಸಿ ಎನ್ನುವುದಕ್ಕೆ ಕಾರಣ ಏನ್ ಗೊತ್ತಾ?

ನಾಲಿಗೆಯ ಬಣ್ಣ ನಮ್ಮ ಆಂತರಿಕ ಆರೋಗ್ಯದ ಬಗ್ಗೆ ಹೇಳುತ್ತದೆ ಎಂಬುದನ್ನು ನಂಬುತ್ತೀರಾ? ಹೌದು, ಗುಲಾಬಿ ಬಣ್ಣ ಆರೋಗ್ಯಕರ ನಾಲಿಗೆಯನ್ನು ಸೂಚಿಸುತ್ತದೆ, ಆದರೆ ಬಿಳಿ ಲೇಪನ, ಕೆಂಪು, ಹಳದಿ, ಬೂದು ಅಥವಾ ಗಾಢ ಬಣ್ಣಗಳಿದ್ದರೆ ಅವು ಯಾವ ರೀತಿಯ ಆರೋಗ್ಯ ಸಮಸ್ಯೆಗಳ ಲಕ್ಷಣ ಎಂಬುದು ನಿಮಗೆ ತಿಳಿದಿದೆಯೇ? ಸಾಮಾನ್ಯವಾಗಿ ನಾಲಿಗೆಯ ಬಣ್ಣದಲ್ಲಿನ ಬದಲಾವಣೆಗಳು ವಿಟಮಿನ್ ಕೊರತೆ, ಸೋಂಕು, ಉರಿಯೂತ ಅಥವಾ ಹೃದಯ ಸಂಬಂಧಿತ ಸಮಸ್ಯೆಗಳನ್ನು ಹೇಳಬಹುದು. ಹಾಗಾದರೆ ಯಾವ ಬಣ್ಣ ಯಾವ ರೋಗವನ್ನು ಪ್ರತಿಬಿಂಬಿಸುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈ 7 ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಾರದು ಎಚ್ಚರ!

ಈ 7 ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಾರದು ಎಚ್ಚರ!

ನೀವು ಕೂಡ ಪ್ರತಿದಿನ ಬೆಳಿಗ್ಗೆ ಚಹಾದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸುತ್ತೀರಾ? ಹಾಗಾದರೆ ನೀವು ಬಹಳ ಜಾಗರೂಕರಾಗಿರಬೇಕು. ಹೌದು, ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ದೇಹದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅದರಲ್ಲಿಯೂ 7 ರೀತಿಯ ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎಂದಿಗೂ ಚಹಾ ಕುಡಿಯಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದಕ್ಕೆ ಕಾರಣವೇನು? ಈ ಅಭ್ಯಾಸದಿಂದ ಯಾವ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

40 ವರ್ಷ ದಾಟಿದ ಮಹಿಳೆಯರಲ್ಲಿ ಕೂದಲು ಉದುರುವಿಕೆಯ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇ ಇದು!

40 ವರ್ಷ ದಾಟಿದ ಮಹಿಳೆಯರಲ್ಲಿ ಕೂದಲು ಉದುರುವಿಕೆಯ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇ ಇದು!

ಮಹಿಳೆಯರಲ್ಲಿ ಕೂದಲು ಉದುರುವ ಸಮಸ್ಯೆ ಕಂಡುಬರುವುದು ಸಾಮಾನ್ಯ. ಅದರಲ್ಲಿಯೂ 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಇದರಿಂದ ಮಹಿಳೆಯರಿಗೆ ನಾನಾ ರೀತಿಯ ತೊಂದರೆಯಾಗುತ್ತದೆ. ನಿಮ್ಮ ಮನೆಯಲ್ಲಿಯೂ ಯಾರಿಗಾದರೂ ಈ ರೀತಿ ಸಮಸ್ಯೆ ಕಂಡು ಬಂದಿದ್ಯಾ, 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಹೆಚ್ಚಾಗಲು ಕಾರಣವೇನು ಎಂದು ಯೋಚಿಸಿದ್ದೀರಾ... ಅನಾರೋಗ್ಯದಿಂದ ಈ ರೀತಿಯಾಗುತ್ತದೆಯೇ ಇದನ್ನು ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ. ಈ ವಿಷಯವಾಗಿ ತಜ್ಞರು ನೀಡಿರುವ ಸಲಹೆ ಸ್ಟೋರಿಯಲ್ಲಿದೆ.

ನೀವು ಗರ್ಭಿಣಿಯಾಗಿದ್ದು ವಾಯುಮಾಲಿನ್ಯದಿಂದಾಗುವ ಸಮಸ್ಯೆಗಳಿಂದ ಮಗುವನ್ನು ಕಾಪಾಡಲು ಈ ಸಲಹೆಗಳನ್ನು ಪಾಲಿಸಿ

ನೀವು ಗರ್ಭಿಣಿಯಾಗಿದ್ದು ವಾಯುಮಾಲಿನ್ಯದಿಂದಾಗುವ ಸಮಸ್ಯೆಗಳಿಂದ ಮಗುವನ್ನು ಕಾಪಾಡಲು ಈ ಸಲಹೆಗಳನ್ನು ಪಾಲಿಸಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಮಾಲಿನ್ಯ ಮತ್ತು ಬೆಳಗಿನ ಮಂಜು ಎರಡೂ ಕೂಡ ಆರೋಗ್ಯಕ್ಕೆ ಅಪಾಯಕಾರಿ ಎಂದು ತಜ್ಞರು ಹೇಳುತ್ತಾರೆ. ಇದು ಎಲ್ಲರ ಆರೋಗ್ಯದ ಮೇಲೂ ಪರಿಣಾಮ ಬಿರುತ್ತದೆಯಾದರೂ ಹುಟ್ಟಲಿರುವ ಶಿಶುಗಳ ಮೇಲೆ ಹೆಚ್ಚಿನ ಹಾನಿಯನ್ನು ಮಾಡಬಹುದಾಗಿದೆ. ಹೌದು, ಇದು ಮಗುವಿನ ಮೆದುಳಿನ ಬೆಳವಣಿಗೆಯ ಮೇಲೂ ಪರಿಣಾಮ ಬೀರುತ್ತದೆ. ಅದಕ್ಕಾಗಿಯೇ ಗರ್ಭಿಣಿಯರು ಆದಷ್ಟು ಮಾಲಿನ್ಯವನ್ನು ತಪ್ಪಿಸುವುದು ಒಳ್ಳೆಯದು ಎನ್ನುತ್ತಾರೆ. ಹಾಗಾದರೆ ಗರ್ಭಿಣಿಯರು ತಮ್ಮನ್ನು ತಾವು ರಕ್ಸಿಸಿಕೊಳ್ಳಲು ಏನು ಮಾಡಬಹುದು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೆ ನುಗ್ಗೆಕಾಯಿ ಹತ್ತಿರಕ್ಕೂ ಹೋಗಬೇಡಿ

ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೆ ನುಗ್ಗೆಕಾಯಿ ಹತ್ತಿರಕ್ಕೂ ಹೋಗಬೇಡಿ

ನುಗ್ಗೆಕಾಯಿ ಜೀವಸತ್ವ, ಖನಿಜ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇವುಗಳ ನಿಯಮಿತ ಸೇವನೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತವೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಆದರೆ ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದರೂ, ಕೂಡ ನುಗ್ಗೆಕಾಯಿ ಕೆಲವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೌದು, ಇವುಗಳನ್ನು ಸೇವನೆ ಮಾಡಬೇಕೆ ಅಥವಾ ಬೇಡವೇ ಎಂಬುದು ವ್ಯಕ್ತಿಯ ಆರೋಗ್ಯ ಸ್ಥಿತಿಯನ್ನು ಅವಲಂಬಿಸಿರುತ್ತದೆ. ಹಾಗಾದರೆ ನುಗ್ಗೆಕಾಯಿ ಸೇವನೆ ಯಾರಿಗೆ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

30 ದಿನ ಮಾಂಸಾಹಾರ ಸೇವಿಸದಿದ್ದರೆ ಏನಾಗುತ್ತೆ ನೋಡಿ…

30 ದಿನ ಮಾಂಸಾಹಾರ ಸೇವಿಸದಿದ್ದರೆ ಏನಾಗುತ್ತೆ ನೋಡಿ…

ಮಾಂಸ ಪ್ರಿಯರು ಒಂದು ತಿಂಗಳು ಮಾಂಸಾಹಾರ ಸೇವನೆ ಮಾಡುವುದನ್ನು ಬಿಟ್ಟರೆ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ನೀವು ಕೂಡ ಈ ಚಾಲೆಂಚ್ ಮಾಡಲು ಸಿದ್ಧರಿದ್ದರೆ ಕೆಲವು ವಿಷಯಗಳನ್ನು ತಿಳಿಯುವುದು ಒಳ್ಳೆಯದು. ಏಕೆಂದರೆ 30 ದಿನಗಳ ಮಾಂಸಾಹಾರದ ವಿರಾಮ ನಿಮ್ಮ ಆರೋಗ್ಯದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ತಿಳಿದುಕೊಂಡಾಗ ಮಾತ್ರ ಅದರಿಂದ ಸಿಗುವ ಪ್ರಯೋಜನಗಳ ಅರಿವಾಗುತ್ತದೆ. ಹಾಗಾಗಿ ಈ ಸ್ಟೋರಿಯನ್ನು ತಪ್ಪದೆ ಓದಿ, ಚಾಲೆಂಜ್ ಗೆ ಸಿದ್ದವಾಗಿ.

ಮದ್ಯಪ್ರಿಯರೇ… ಬಿಯರ್ ಕುಡಿಯೋಕೆ ಈ ಟೈಮ್ ದಿ ಬೆಸ್ಟ್ ಅಂತೆ!

ಮದ್ಯಪ್ರಿಯರೇ… ಬಿಯರ್ ಕುಡಿಯೋಕೆ ಈ ಟೈಮ್ ದಿ ಬೆಸ್ಟ್ ಅಂತೆ!

ಒತ್ತಡ ಆಯಾಸದಿಂದ ಮುಕ್ತಿ ಪಡೆಯಲು ಕೆಲವರು ಬಿಯರ್ ಕುಡಿಯುತ್ತಾರೆ. ಆದರೆ ಇದನ್ನು ಕುಡಿಯುವ ಸಮಯ ಕೂಡ ಮುಖ್ಯವಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ... ಹೌದು, ಇದರಿಂದ ಪ್ರಯೋಜನ ಪಡೆಯಲು ನೀವು ಯಾವ ಸಮಯದಲ್ಲಿ ಸೇವನೆ ಮಾಡುತ್ತೀರಿ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಹಾಗಾದರೆ ಬಿಯರ್ ಕುಡಿಯಲು ಸರಿಯಾದ ಸಮಯ ಯಾವುದು, ಬೆಳಿಗ್ಗೆ ಅಥವಾ ರಾತ್ರಿ ಯಾವಾಗ ಕುಡಿಯಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈ ಆಯುರ್ವೇದ ಸಲಹೆಯಿಂದ ಮಗು ಹಾಸಿಗೆ ಒದ್ದೆ ಮಾಡುವುದನ್ನು ತಡೆಯಬಹುದು!

ಈ ಆಯುರ್ವೇದ ಸಲಹೆಯಿಂದ ಮಗು ಹಾಸಿಗೆ ಒದ್ದೆ ಮಾಡುವುದನ್ನು ತಡೆಯಬಹುದು!

ಹೆಚ್ಚಿನ ಮಕ್ಕಳು ರಾತ್ರಿ ಮಲಗುವಾಗ ಹಾಸಿಗೆ ಒದ್ದೆ ಮಾಡುತ್ತಾರೆ. 5 ವರ್ಷಕ್ಕಿಂತ ಮೊದಲು ಮಕ್ಕಳು ಈ ರೀತಿ ಮಾಡುವುದು ಸಹಜ. ಆದರೆ ನಂತರವೂ ಈ ರೀತಿಯ ಸಮಸ್ಯೆ ಕಂಡುಬಂದರೆ ಅದನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಈ ರೀತಿಯಾಗುವುದಕ್ಕೆ ಆರೋಗ್ಯ ಸಮಸ್ಯೆಯು ಕಾರಣವಾಗಿರಬಹುದು. ಹಾಗಾಗಿ ಪೋಷಕರು, ಈ ರೀತಿ ಆಗುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ತಿಳಿದುಕೊಳ್ಳಬೇಕಾಗುತ್ತದೆ. ಈ ಸ್ಟೋರಿ ಮೂಲಕ ಈ ರೀತಿ ಸಮಸ್ಯೆಗೆ ಕಾರಣವೇನು, ಇದನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ತಿಳಿದುಕೊಳ್ಳಿ.

ರಾತ್ರಿ ಮಲಗುವ ಮುನ್ನ ಒಂದು ಲವಂಗ ಸೇವನೆ ಮಾಡಿದ್ರೆ ಏನಾಗುತ್ತೆ ನೋಡಿ!

ರಾತ್ರಿ ಮಲಗುವ ಮುನ್ನ ಒಂದು ಲವಂಗ ಸೇವನೆ ಮಾಡಿದ್ರೆ ಏನಾಗುತ್ತೆ ನೋಡಿ!

ಲವಂಗವು ಕೇವಲ ಮಸಾಲೆ ಪದಾರ್ಥವಲ್ಲ. ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿರುವ ಔಷಧೀಯ ಗುಣಗಳ ನಿಧಿಯಾಗಿದೆ. ಮಲಗುವ ಮುನ್ನ ಲವಂಗ ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅಷ್ಟೇ ಅಲ್ಲ, ಶೀತ, ಕೆಮ್ಮು ಮತ್ತು ಬಾಯಿಯ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಹಾಗಾಗಿ ಮಲಗುವ ಮುನ್ನ ಒಂದು ಲವಂಗವನ್ನು ಸೇವಿಸುವುದರಿಂದ ಅಥವಾ ಲವಂಗದ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಉಂಟಾಗಬಹುದು. ಈ ಬಗೆಗಿನ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಮೆಟ್ಟಿಲು ಹತ್ತಿ ಇಳಿಯುವುದರಿಂದ ಎಷ್ಟು ಉಪಯೋಗ ಇದೆ ಅಂತ ತಿಳಿದ್ರೆ ನೀವು ಲಿಫ್ಟ್ ಬಳಸುವುದೇ ಇಲ್ಲ…

ಮೆಟ್ಟಿಲು ಹತ್ತಿ ಇಳಿಯುವುದರಿಂದ ಎಷ್ಟು ಉಪಯೋಗ ಇದೆ ಅಂತ ತಿಳಿದ್ರೆ ನೀವು ಲಿಫ್ಟ್ ಬಳಸುವುದೇ ಇಲ್ಲ…

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ಸವಾಲಾಗಿ ಪರಿಣಮಿಸಿದೆ. ಹೆಸರೇ ಕೇಳಿರದ ಕಾಯಿಲೆಗಳು ಜನರನ್ನು ಕಾಡುತ್ತಿದೆ. ಆದರೆ ಇದರಿಂದ ಮುಕ್ತಿ ಪಡೆಯಲು ವೈದ್ಯರ ಬಳಿ ಅಥವಾ ಜಿಮ್‌ಗಳಿಗೆ ಹೋಗುವ ಅವಶ್ಯಕತೆ ಇಲ್ಲ. ಪ್ರತಿನಿತ್ಯ ವಾಕಿಂಗ್ ಅಥವಾ ಜಾಗಿಂಗ್ ಮಾಡಬೇಕಾಗಿಯೂ ಇಲ್ಲ. ಕೇವಲ ನಿಮ್ಮ ಮನೆಯ ಮೆಟ್ಟಿಲುಗಳನ್ನು 6 ನಿಮಿಷ ಹತ್ತಿ ಇಳಿದರೆ ಸಾಕು ನಿಮ್ಮ ಎಲ್ಲಾ ಆರೋಗ್ಯ ಸಮಸ್ಯೆಗೂ ಬಾಯ್ ಬಾಯ್ ಹೇಳಬಹುದು. ಹೌದು, ಕೇವಲ ಮೆಟ್ಟಿಲು ಹತ್ತಿ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಹೊಟ್ಟೆ ಮತ್ತು ಕರುಳನ್ನು ಪರೀಕ್ಷಿಸಲು ಮಾತ್ರೆಯಂತಹ ವಿಭಿನ್ನ ಸಾಧನವನ್ನು ಕಂಡುಹಿಡಿದ ವಿಜ್ಞಾನಿಗಳು

ಹೊಟ್ಟೆ ಮತ್ತು ಕರುಳನ್ನು ಪರೀಕ್ಷಿಸಲು ಮಾತ್ರೆಯಂತಹ ವಿಭಿನ್ನ ಸಾಧನವನ್ನು ಕಂಡುಹಿಡಿದ ವಿಜ್ಞಾನಿಗಳು

ಹೊಟ್ಟೆ ಮತ್ತು ಕರುಳನ್ನು ಪರೀಕ್ಷಿಸಲು ಸಾಮಾನ್ಯವಾಗಿ ಎಂಡೋಸ್ಕೋಪಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಇದು ರೋಗಿಗೆ ಬಹಳಷ್ಟು ನೋವು ಮತ್ತು ಅಸ್ವಸ್ಥತೆಯನ್ನು ಉಂಟುಮಾಡುತ್ತದೆ. ಆದರೆ ಇದರಿಂದ ಮುಕ್ತಿ ನೀಡಲು ಐಐಟಿ ದೆಹಲಿ ಮತ್ತು ಏಮ್ಸ್‌ನ ವಿಜ್ಞಾನಿಗಳು ಅಕ್ಕಿಯ ಧಾನ್ಯಕ್ಕಿಂತಲೂ ಚಿಕ್ಕದಾದ ಸಾಧನವನ್ನು ಅಭಿವೃದ್ಧಿಪಡಿಸಿದ್ದಾರೆ. ಅದು ಕರುಳಿನೊಳಗೆ ಹೋಗಿ ವ್ಯಕ್ತಿಯಿಂದ ಮಾದರಿಗಳನ್ನು ತೆಗೆದುಕೊಂಡು ಮಲದಿಂದ ಹೊರಬರುತ್ತದೆ. ಹಾಗಾಗಿ ಈ ಸಾಧನ ಆರೋಗ್ಯ ಕ್ಷೇತ್ರಕ್ಕೆ ಉತ್ತಮ ಕೊಡುಗೆಯಾಗಿದೆ. ಆದರೆ ಇದನ್ನು ಹೇಗೆ ಬಳಸುತ್ತಾರೆ, ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬಿತ್ಯಾದಿ ಮಾಹಿತಿಯನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ