ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.
ಪದೇ ಪದೇ ಶೀತವಾಗುತ್ತಾ, ಕೆಮ್ಮು ಒಮ್ಮೆ ಶುರುವಾದರೆ ಕಡಿಮೆನೇ ಆಗ್ತಾ ಇಲ್ವಾ? ಇದಕ್ಕೆ ಕಾರಣ ಏನು ಗೊತ್ತಾ?
ಚಳಿಗಾಲದಲ್ಲಿ, ಶೀತ, ಕೆಮ್ಮು ಮತ್ತು ಸಣ್ಣಪುಟ್ಟ ಸೋಂಕುಗಳು ಕಂಡುಬರುವುದು ಸಾಮಾನ್ಯ. ಆದರೆ ಪದೇ ಪದೇ ಈ ರೀತಿಯಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ. ಅನೇಕರು ಈ ರೀತಿಯ ಲಕ್ಷಣಗಳು ಹವಾಮಾನದಿಂದ ಕಂಡುಬರುವ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡುವುದು ಸರಿಯಲ್ಲ ಎನ್ನುತ್ತಾರೆ. ಹಾಗಾದರೆ ರೋಗನಿರೋಧಕ ಶಕ್ತಿ ಕುಂಠಿತಗೊಳ್ಳುವುದಕ್ಕೆ ಕಾರಣವೇನು, ಈ ರೀತಿ ಸಮಸ್ಯೆಯನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 11, 2026
- 8:25 pm
ನಿರಂತರವಾಗಿ ಕಂಡುಬರುವ ಮಲಬದ್ಧತೆ ಸಮಸ್ಯೆ ಹೊಟ್ಟೆಯ ಕ್ಯಾನ್ಸರ್ ಗೆ ಕಾರಣವಾಗಬಹುದೇ?
ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಕ್ಯಾನ್ಸರ್ ಗೆ ಸಂಬಂಧಪಟ್ಟ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಇಂತಹ ಸಂದರ್ಭಗಳಲ್ಲಿ, ಈ ಸಮಸ್ಯೆ ಕಂಡುಬರುವುದಕ್ಕೆ ಕಾರಣಗಳನ್ನು ಅರ್ಥಮಾಡಿಕೊಳ್ಳುವುದು ಮುಖ್ಯ. ಇದರ ಜೊತೆಗೆ, ಅನೇಕರು ಮಲಬದ್ಧತೆಯ ಸಮಸ್ಯೆಯಿಂದ ಬಳಲುತ್ತಿರುವುದನ್ನು ನೀವು ನೋಡಿರಬಹುದು, ಇದು ಕೂಡ ಹೊಟ್ಟೆಯ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾದರೆ ಹೊಟ್ಟೆಯ ಕ್ಯಾನ್ಸರ್ ಗೂ ಮಲಬದ್ಧತೆಗೂ ಸಂಬಂಧವಿದೆಯೇ, ಈ ಸಮಸ್ಯೆ ಕಂಡುಬರುವುದಕ್ಕೆ ಕಾರಣವೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 11, 2026
- 6:30 pm
ಈ ಮೂರು ಲಕ್ಷಣಗಳು ಕಂಡು ಬಂದ್ರೆ ನಿರ್ಲಕ್ಷ್ಯ ಮಾಡಬೇಡಿ; ಇದು ಥೈರಾಯ್ಡ್ ಸಮಸ್ಯೆ ಬರುವ ಮುನ್ಸೂಚನೆಯಾಗಿರಬಹುದು
ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರಲ್ಲಿ ಥೈರಾಯ್ಡ್ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಅದರ ಆರಂಭಿಕ ಲಕ್ಷಣಗಳನ್ನು ಸಮಯಕ್ಕೆ ಸರಿಯಾಗಿ ಅರ್ಥಮಾಡಿಕೊಂಡು ಅದನ್ನು ಗುರುತಿಸುವುದು ಬಹಳ ಮುಖ್ಯವಾಗುತ್ತದೆ. ಹಾಗಾದರೆ ಥೈರಾಯ್ಡ್ ಕಂಡು ಬರುವ ಮೊದಲು ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ? ಯಾವಾಗ ವೈದ್ಯರ ಸಲಹೆ ಪಡೆಯಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 11, 2026
- 5:15 pm
ಹೃದಯ ಚೆನ್ನಾಗಿರಬೇಕು ಅಂದ್ರೆ ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ಈ 3 ಆಹಾರಗಳನ್ನು ಸೇವಿಸಬೇಡಿ
ಚಳಿಗಾಲದಲ್ಲಿ ಹೃದಯದ ಆರೋಗ್ಯ ಎಲ್ಲಕಿಂತ ಮುಖ್ಯವಾದದ್ದು. ಹಾಗಾಗಿ ಈ ಋತುವಿನಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ. ಏಕೆಂದರೆ ಅನಾರೋಗ್ಯಕರ ಆಹಾರ ಪದ್ಧತಿಗಳು ಹೃದಯದ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಜನರು ಚಳಿಗಾಲದಲ್ಲಿ ಹೆಚ್ಚು ಎಣ್ಣೆಯುಕ್ತ ಮತ್ತು ಹೊಟ್ಟೆ ಬಿರಿಯುವಷ್ಟು ಆಹಾರ ಸೇವನೆ ಮಾಡಿದರೆ, ಇದು ಹೃದಯದ ಮೇಲಿನ ಹೊರೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ, ಚಳಿಗಾಲದಲ್ಲಿ ಆಹಾರ ಪದ್ಧತಿಯಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳುವ ಮೂಲಕ ಹೃದಯವನ್ನು ಆರೋಗ್ಯಕರವಾಗಿಟ್ಟುಕೊಳ್ಳಬೇಕು. ಅದರ ಜೊತೆಗೆ ಯಾವ ಆಹಾರಗಳು ನಿಮ್ಮ ಹೃದಯವನ್ನು ದುರ್ಬಲಗೊಳಿಸಬಹುದು ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Jan 11, 2026
- 7:25 pm
ಟೊಮೆಟೊ ಫ್ರಿಡ್ಜ್ ನಲ್ಲಿಟ್ಟರೆ ಏನಾಗುತ್ತೆ ಗೊತ್ತಾ? ಈ ವಿಷಯ ತಿಳಿದ್ರೆ ನಿಜವಾಗಲೂ ಶಾಕ್ ಆಗುತ್ತೆ!
ಟೊಮೆಟೊ ಇಲ್ಲದೆ ಯಾವುದೇ ಅಡುಗೆಯಾಗಲಿ ಅದು ಪೂರ್ಣವಾಗುವುದಿಲ್ಲ. ಚಟ್ನಿಯಿಂದ ಸಾಂಬಾರ್ ವರೆಗೆ, ಪ್ರತಿಯೊಂದು ಖಾದ್ಯಕ್ಕೂ ಟೊಮೆಟೊ ಬೇಕಾಗುತ್ತದೆ. ಆದರೆ, ಮಾರುಕಟ್ಟೆಯಿಂದ ಖರೀದಿಸಿ ತಂದ ಟೊಮೆಟೊಗಳನ್ನು ನೇರವಾಗಿ ಫ್ರಿಡ್ಜ್ನಲ್ಲಿ ಇಡುತ್ತೇವೆ. ಇದು ನಮಗೆ ತಿಳಿಯದಂತೆ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹೌದು, ಈ ರೀತಿಯ ಅಭ್ಯಾಸ ಅನಾರೋಗ್ಯವನ್ನು ನಾವಾಗಿಯೇ ಕರೆದುಕೊಂಡು ಬಂದ ಹಾಗೆ ಆಗಬಹುದು. ಈ ವಿಷಯ ಕೆಲವರಿಗೆ ತಿಳಿದಿರುವುದಿಲ್ಲ. ಹಾಗಾದರೆ ಟೊಮೆಟೊಗಳು ಹಾಳಾಗದಂತೆ ಸರಿಯಾಗಿ ಸಂಗ್ರಹಿಸುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 9, 2026
- 8:46 pm
ತಡರಾತ್ರಿ ಊಟ ಮಾಡುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟ ಹೆಚ್ಚಾಗುತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ
ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಜನರ ಆಹಾರ ಪದ್ಧತಿಯಲ್ಲಿ ಅಡಚಣೆ ಉಂಟಾಗುತ್ತಿದೆ. ಹೀಗಾಗಿ ಅನೇಕರು ಊಟ ತಿಂಡಿಯನ್ನು ಸರಿಯಾದ ಸಮಯಕ್ಕೆ ಮಾಡುವುದನ್ನು ಮರೆತಿದ್ದಾರೆ ಅಷ್ಟು ಮಾತ್ರವಲ್ಲ, ಕೆಲವರು ರಾತ್ರಿ ತಡವಾಗಿ ಊಟ ಮಾಡುವುದನ್ನು ರೂಢಿಸಿಕೊಂಡಿದ್ದು ಇದನ್ನು ಸಾಮಾನ್ಯ ಅಭ್ಯಾಸವೆಂದು ತಿಳಿದುಕೊಂಡಿದ್ದಾರೆ, ಆದರೆ ಇದರ ಪರಿಣಾಮ ತಕ್ಷಣವೇ ಗಮನಕ್ಕೆ ಬರದಿದ್ದರೂ ಕೂಡ ಕ್ರಮೇಣ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಹಾಗಾದರೆ ತಡರಾತ್ರಿ ಊಟ ಮಾಡುವುದರಿಂದ ನಿಜವಾಗಿಯೂ ರಕ್ತದಲ್ಲಿನ ಗ್ಲೂಕೋಸ್ ಮಟ್ಟ ಹೆಚ್ಚಾಗುತ್ತದೆಯೇ, ಈ ರೀತಿಯಾಗುವುದಕ್ಕೆ ಕಾರಣವೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 9, 2026
- 7:01 pm
ಕಿತ್ತಳೆಯ ಏಳು ಪಟ್ಟು ಪ್ರಯೋಜನ 100 ಗ್ರಾಂ ನುಗ್ಗೆ ಸೊಪ್ಪಿನಲ್ಲಿದೆ ಎಂದ್ರೆ ನಂಬುತ್ತೀರಾ?
ನುಗ್ಗೆ ಸೊಪ್ಪು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಗಣಿ ಎಂದರೆ ತಪ್ಪಾಗಲಾರದು. ಇದರಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳಿದ್ದು ಆರೋಗ್ಯ ಕಾಪಾಡಿಕೊಳ್ಳಲು ಪ್ರಯೋಜನಕಾರಿಯಾಗಿದೆ. ಅದಕ್ಕಾಗಿಯೇ ಅವುಗಳನ್ನು ನಿಯಮಿತವಾಗಿ ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಬಹುತೇಕ ಎಲ್ಲಾ ಋತುಗಳಲ್ಲಿ ಲಭ್ಯವಿರುವ ನುಗ್ಗೆ ಸೊಪ್ಪು ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಜೀವಸತ್ವ, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಹಾಗಾದರೆ ಇದರ ಸೇವನೆಯಿಂದ ಯಾವ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು? ಯಾವ ಸಮಸ್ಯೆಗೆ ರಾಮಬಾಣ ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Jan 9, 2026
- 4:06 pm
ಅತಿಯಾಗಿ ಸ್ವೀಟ್ ತಿನ್ನುವ ಬಯಕೆಯನ್ನು ನಿಯಂತ್ರಿಸಲು ಇಲ್ಲಿದೆ ಸಿಂಪಲ್ ಐಡಿಯಾ
ಸಾಮಾನ್ಯವಾಗಿ ಚಳಿಗಾಲದಲ್ಲಿ ಜನರ ಆಹಾರ ಪದ್ಧತಿ ಬದಲಾಗುತ್ತದೆ. ಸಿಹಿತಿಂಡಿ ಅಥವಾ ವಿವಿಧ ಭಕ್ಷ್ಯಗಳಿಗೆ ಮನಸ್ಸು ವಾಲುತ್ತದೆ. ಅದರಲ್ಲಿಯೂ ಸ್ವೀಟ್ ಸೇರಿದಂತೆ ಕರಿದ ತಿನಿಸುಗಳ ಸವಿಯುವ ಒಲವು ಹೆಚ್ಚಾಗುತ್ತದೆ. ಎಲ್ಲರಂತೆ ಮಧುಮೇಹ ರೋಗಿಗಳು ಸಹ ಸಿಹಿತಿನ್ನಲು ಬಯಸುತ್ತಾರೆ. ಹಾಗಾಗಿ ಇಂತಹ ಸಂದರ್ಭಗಳಲ್ಲಿ, ಆಹಾರ ಕ್ರಮದಲ್ಲಿ ಯಾವ ರೀತಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕಾಗುತ್ತದೆ. ಹಾಗಾದರೆ ಸ್ವೀಟ್ ತಿನ್ನಬೇಕು ಎನಿಸಿದಾಗ ಏನು ಮಾಡಬೇಕು, ಈ ರೀತಿ ಬಯಕೆಯನ್ನು ತಡೆಯುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 8, 2026
- 6:25 pm
ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ?
ಚಳಿಗಾಲದಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವುದು ಉತ್ತಮ. ಆರೋಗ್ಯ ಕಾಪಾಡಿಕೊಳ್ಳಲು ಇದೊಂದು ಉತ್ತಮ ಅಭ್ಯಾಸ. ಇದರಿಂದ ದೇಹಕ್ಕೆ ಹಲವು ರೀತಿಯ ಪ್ರಯೋಜನಗಳಿವೆ. ಅದರಲ್ಲಿಯೂ ಇಂತಹ ವಾತಾವರಣದಲ್ಲಿ ಈ ಅಭ್ಯಾಸ ನಮ್ಮ ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇದು ಜೀರ್ಣಕ್ರಿಯೆಯಿಂದ ಹಿಡಿದು ರೋಗನಿರೋಧಕ ಶಕ್ತಿಯವರೆಗೆ ಎಲ್ಲದಕ್ಕೂ ಒಳ್ಳೆಯದು. ಹಾಗಾದರೆ ಪ್ರತಿನಿತ್ಯ ಎಷ್ಟು ಲೀಟರ್ ನೀರು ಕುಡಿಯುವುದು ಸೂಕ್ತ, ಯಾರಿಗೆ ಒಳ್ಳೆಯದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 8, 2026
- 5:25 pm
ಶೇಂಗಾ ತಿಂದ್ರೆ ತೂಕ ಕಡಿಮೆಯಾಗುತ್ತಾ ಅಥವಾ ಹೆಚ್ಚಾಗುತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ
ಕಡಲೆಕಾಯಿ ಚಳಿಗಾಲದ ಸೂಪರ್ಫುಡ್. ಈ ಸಮಯದಲ್ಲಿ ಯಥೇಚ್ಛವಾಗಿ ಸೇವನೆ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಆದರೆ ಕಡಲೆಕಾಯಿ ತಿನ್ನುವುದರಿಂದ ತೂಕ ಹೆಚ್ಚಾಗುತ್ತದೆ ಎಂಬುದು ಕೆಲವರ ನಂಬಿಕೆ, ಇನ್ನು ಕೆಲವರು ಇದು ತೂಕ ಕಡಿಮೆಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎನ್ನುತ್ತಾರೆ. ಇವೆರಡರಲ್ಲಿ ಯಾವುದು ಸತ್ಯ? ಇದು ತೂಕ ಹೆಚ್ಚಾಗುವುದಕ್ಕೆ ಸಹಾಯ ಮಾಡುತ್ತದೆಯೋ ಅಥವಾ ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆಯೋ, ಜೊತೆಗೆ ಯಾರು ಇದನ್ನು ಸೇವನೆ ಮಾಡಬಾರದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Jan 8, 2026
- 3:56 pm
ನಿಮಗೂ ಪದೇ ಪದೇ ತಲೆ ನೋವಿನ ಜೊತೆಗೆ ಕಣ್ಣು ನೋವು ಬರುತ್ತಾ? ಇದಕ್ಕೆ ಕಾರಣ ಏನ್ ಗೊತ್ತಾ?
ಇತ್ತೀಚಿನ ದಿನಗಳಲ್ಲಿ ಕಣ್ಣು ಮತ್ತು ಹಣೆಯ ಭಾಗದಲ್ಲಿ ಪದೇ ಪದೇ ನೋವು ಕಂಡುಬರುವುದು ಬಹಳ ಸಾಮಾನ್ಯವಾಗಿದೆ. ಆದರೆ ಇದನ್ನು ಆಯಾಸ ಎಂದು ಭಾವಿಸಿ ಜನ ನಿರ್ಲಕ್ಷ್ಯ ಮಾಡುತ್ತಾರೆ. ನಿಮಗೆ ಗೊತ್ತಾ? ಇದು ಕೆಲವು ಗಂಭೀರ ಕಾಯಿಲೆಗಳ ಲಕ್ಷಣವೂ ಆಗಿರಬಹುದು. ಈ ಬಗ್ಗೆ ಡಾ. ಸುಭಾಷ್ ಗಿರಿ ಅವರು ಒಂದಿಷ್ಟು ಮಾಹಿತಿ ಹಂಚಿಕೊಂಡಿದ್ದು ಕಣ್ಣು ಮತ್ತು ಹಣೆಯ ಭಾಗದಲ್ಲಿ ನೋವು ಕಂಡುಬರುವುದು ವಿವಿಧ ಕಾಯಿಲೆಗಳಿಗೆ ಸಂಬಂಧಿಸಿರಬಹುದು ಜೊತೆಗೆ ಅವುಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸುವುದು ಕೂಡ ಮುಖ್ಯವಾಗುತ್ತದೆ ಎಂದಿದ್ದಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Jan 7, 2026
- 7:27 pm
ನೀವು ಸೀಫುಡ್ ಪ್ರೀಯರೆ? ಇಷ್ಟಪಟ್ಟು ತಿನ್ನುವ ಆಹಾರದಲ್ಲಿರಬಹುದು ಮೈಕ್ರೋಪ್ಲಾಸ್ಟಿಕ್! ಹೇಗೆ ತಡೆಯುವುದು ತಿಳಿದುಕೊಳ್ಳಿ
ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ನಾವು ಆರೋಗ್ಯಕರ ಮತ್ತು ಶುದ್ಧ ಎಂದು ಸೇವನೆ ಮಾಡುವಂತಹ ಹಣ್ಣು, ತರಕಾರಿ, ಜೇನುತುಪ್ಪ ಎಲ್ಲದರಲ್ಲಿಯೂ ಬೆರಕೆ ಕಂಡುಬರುತ್ತಿದೆ. ಹೌದು, ಮೈಕ್ರೋಪ್ಲಾಸ್ಟಿಕ್ ಕಣಗಳು ದಿನನಿತ್ಯ ಬಳಸುವ ಉಪ್ಪಿನಿಂದ ಹಿಡಿದು ಕುಡಿಯುವ ನೀರಿನವರೆಗೆ ಎಲ್ಲದರಲ್ಲಿಯೂ ಕಂಡುಬರುತ್ತಿದೆ. ಹಾಗಾದರೆ ಮೈಕ್ರೋಪ್ಲಾಸ್ಟಿಕ್ ಕಣಗಳು ಹೇಗೆ ನಮ್ಮ ಆಹಾರದಲ್ಲಿ ಸೇರಿಕೊಳ್ಳುತ್ತದೆ, ಅವುಗಳಿಂದ ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ, ಅದನ್ನು ಹೇಗೆ ತಡೆಯಬಹುದು ಎಂಬುದರ ಬಗ್ಗೆ ತಿಳಿಯುವುದು ಬಹಳ ಅನಿವಾರ್ಯ. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Jan 7, 2026
- 4:19 pm