ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.
ಪುರುಷರು ರಾತ್ರಿ ಮಲಗುವ ಮುನ್ನ ಕಡ್ಡಾಯವಾಗಿ 2 ಹುರಿದ ಖರ್ಜೂರ ಸೇವನೆ ಮಾಡಬೇಕು ಯಾಕೆ ಗೊತ್ತಾ?
ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ಈ ಸಮಯದಲ್ಲಿ ದೇಹವನ್ನು ಒಳಗಿನಿಂದ ಬೆಚ್ಚಗಿರಿಸುವ ಆಹಾರಗಳ ಸೇವನೆ ಮಾಡಬೇಕಾಗುತ್ತದೆ. ಇಂತಹ ಆಹಾರಗಳಲ್ಲಿ ಖರ್ಜೂರವು ಒಂದು. ಅದರಲ್ಲಿಯೂ ಈ ಋತುವಿನಲ್ಲಿ ಇದರ ಸೇವನೆಯಿಂದ ಹಲವು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅದರಲ್ಲಿಯೂ ರಾತ್ರಿ ಮಲಗುವ ಮುನ್ನ ಹುರಿದ ಖರ್ಜೂರ ಸೇವನೆ ಮಾಡುವುದರಿಂದ ನಾನಾ ರೀತಿಯ ಆರೋಗ್ಯಕರ ಲಾಭಗಳಿವೆ. ಹಾಗಾದರೆ ಇದು ಯಾರಿಗೆ ಒಳ್ಳೆಯದು? ಯಾರು ಸೇವನೆ ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.
- Preethi Bhat Gunavante
- Updated on: Dec 26, 2025
- 6:33 pm
ಮೊಳಕೆಯೊಡೆದ ಈರುಳ್ಳಿಯನ್ನು ಎಸೆಯುತ್ತಿದ್ದೀರಾ? ಈ ತಪ್ಪನ್ನು ಎಂದಿಗೂ ಮಾಡಬೇಡಿ
ಮನೆಯಲ್ಲಿ ದೀರ್ಘಕಾಲ ಸಂಗ್ರಹಿಸಿಟ್ಟ ಈರುಳ್ಳಿ ಮೊಳಕೆಯೊಡೆಯುವುದು ತುಂಬಾ ಸಾಮಾನ್ಯ. ಆದರೆ ಕೆಲವರು ಇಂತಹ ಈರುಳ್ಳಿಗಳು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಎಸೆಯುತ್ತಾರೆ. ನೀವು ಕೂಡ ಈ ತಪ್ಪು ಮಾಡುತ್ತಿದ್ದೀರಾ? ಹಾಗಾದರೆ ಈ ಅಭ್ಯಾಸವನ್ನು ಇವತ್ತಿಗೆ ನಿಲ್ಲಿಸಿಬಿಡಿ. ಏಕೆಂದರೆ ಮೊಳಕೆಯೊಡೆದ ಈರುಳ್ಳಿ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ಹೇಳುತ್ತಾರೆ. ಹೌದು, ಇದು ಕೇಳುವುದಕ್ಕೆ ಸ್ವಲ್ಪ ಆಶ್ಚರ್ಯ ಹುಟ್ಟಿಸಬಹುದು ಆದರೆ ಸತ್ಯ. ಹಾಗಾದಲ್ಲಿ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು? ಯಾಕಾಗಿ ಸೇವನೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 26, 2025
- 4:05 pm
ಮುಟ್ಟು ನಿಲ್ಲುವ ಅವಧಿಯಲ್ಲಿ ಮಹಿಳೆಯರು ತಪ್ಪದೆ ಈ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುತ್ತಾರೆ ಡಾ. ಸಂಹಿತಾ
ಮಹಿಳೆಯರ ಜೀವನದಲ್ಲಿ ಮೆನೋಪಾಸ್ ಅಥವಾ ಋತುಬಂಧ ಎನ್ನುವಂತದ್ದು ಒಂದು ಸಹಜ ಹಾಗೂ ಬಹುಮುಖ್ಯ ಶಾರೀರಿಕ ಹಂತ. ಇದು ಮಹಿಳೆಯರಲ್ಲಿ ಋತುಚಕ್ರ ಸಂಪೂರ್ಣವಾಗಿ ನಿಲ್ಲುವ ಒಂದು ಪ್ರಕ್ರಿಯೆ. ಈ ಸಮಯದಲ್ಲಿ ಆಗುವ ಹಾರ್ಮೋನ್ ಗಳ ಬದಲಾವಣೆಗಳಿಂದ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಸ್ಥಿತಿಗಳಲ್ಲಿ ಹಲವು ಪರಿವರ್ತನೆಗಳು ಕಂಡುಬರುತ್ತದೆ. ಈ ಬಗ್ಗೆ, ಬೆಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಸಂಹಿತಾ ಸಿದ್ಧಾಂತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಂಹಿತಾ ಉಲ್ಲೋಡು ಅವರು ಟಿವಿ9 ಕನ್ನಡ ಜೊತೆ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Dec 26, 2025
- 3:15 pm
ಗರ್ಭಿಣಿಯರೇ… ನೀವು ಚಳಿಗಾಲದಲ್ಲಿ ಮಾಡುವ ಈ ಒಂದು ತಪ್ಪು ಮಗುವಿನ ತೂಕದ ಮೇಲೆ ಪರಿಣಾಮ ಬೀರುತ್ತೆ
ಚಳಿಗಾಲದಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅನಿವಾರ್ಯ. ಅದರಲ್ಲಿಯೂ ಇತ್ತೀಚಿನ ಸಂಶೋಧನೆಯೊಂದು ಕಡಿಮೆ ತಾಪಮಾನವು ನವಜಾತ ಶಿಶುಗಳ ಜನನ ತೂಕದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿಕೊಂಡಿದೆ. ಹೌದು, ಗರ್ಭಾವಸ್ಥೆಯಲ್ಲಿ ಪರಿಸರದ ಉಷ್ಣತೆಯು ಮಗುವಿನ ದೈಹಿಕ ಬೆಳವಣಿಗೆಗೆ ಸಂಬಂಧಿಸಿದ ಪ್ರಮುಖ ಅಂಶವಾಗಬಹುದು ಎಂದು ಸಂಶೋಧಕರು ಹೇಳುತ್ತಿದ್ದು ಈ ಬಗೆಗಿನ ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.
- Preethi Bhat Gunavante
- Updated on: Dec 25, 2025
- 6:25 pm
ಜಿಗಣೆಯಿಂದ ಕಚ್ಚಿಸಿಕೊಳ್ಳುವುದರಿಂದ ಕ್ಯಾನ್ಸರ್ ಅನ್ನು ಗುಣಪಡಿಸಬಹುದೇ? ಇಲ್ಲಿದೆ ತಜ್ಞರ ಅಭಿಪ್ರಾಯ
ಜಿಗಣೆ ಥೆರಪಿ ವಿವಿಧ ರೀತಿಯ ಕಾಯಿಲೆಗಳಿಗೆ ಅದರಲ್ಲಿಯೂ ಕೀಲು ನೋವು, ಚರ್ಮದ ಕಿರಿಕಿರಿ ಸೇರಿದಂತೆ ಇತ್ಯಾದಿ ಸಮಸ್ಯೆಗಳಿಗೆ ರಾಮಬಾಣವಾಗಿದೆ. ಇದು ರಕ್ತದಿಂದ ಕಲ್ಮಶಗಳನ್ನು ತೆಗೆದುಹಾಕಲು, ಉರಿಯೂತ ಮತ್ತು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದರೆ ಇದು ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವೇ ಎಂಬ ಅನುಮಾನ ಹಲವರನ್ನು ಕಾಡುವುದು ಸುಳ್ಳಲ್ಲ. ಹಾಗಾಗಿ ಈ ಬಗ್ಗೆ ಸರಿಯಾದ ಮಾಹಿತಿ ಪಡೆಯುವುದು ಅನಿವಾರ್ಯ. ಅದರ ಜೊತೆಗೆ ಜಿಗಣೆ ಚಿಕಿತ್ಸೆ ಹೇಗೆ ನಡೆಯುತ್ತದೆ? ಯಾವ ಕಾಯಿಲೆಗಳಿಗೆ ಪ್ರಯೋಜನಕಾರಿ ಎಂಬುದನ್ನು ತಿಳಿದುಕೊಳ್ಳಿ ಸಂಪೂರ್ಣ ಮಾಹಿತಿ ಇಲ್ಲಿದೆ.
- Preethi Bhat Gunavante
- Updated on: Dec 25, 2025
- 2:45 pm
ಟೀಯನ್ನು ಪದೇ ಪದೇ ಬಿಸಿ ಮಾಡಿ ಕುಡಿಯುವ ಒಂದು ಸಣ್ಣ ಅಭ್ಯಾಸ ಆರೋಗ್ಯದ ಮೇಲೆ ಬಹುದೊಡ್ಡ ಪರಿಣಾಮ ಬೀರಬಹುದು ಎಚ್ಚರ!
ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಬಿಸಿ ಚಹಾ ಕುಡಿಯುವುದು ಹಲವರ ಅಭ್ಯಾಸ. ಚಹಾ ಕೇವಲ ಪಾನೀಯವಲ್ಲ, ಅದು ಒಂದು ಭಾವನೆ. ಆದರೆ ಚಹಾ ತಣ್ಣಗಾಯ್ತು ಅಂತಾ ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯುವುದು ಒಳ್ಳೆಯದಲ್ಲ. ಈ ಅಭ್ಯಾಸ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂದು ತಿಳಿದರೆ ನೀವೆಂದೂ ಈ ಕೆಲಸ ಮಾಡುವುದಿಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಆರೋಗ್ಯಕ್ಕೆ ಯಾವ ರೀತಿಯ ಸಮಸ್ಯೆಗಳಾಗುತ್ತದೆ, ಯಾಕೆ ಈ ಅಭ್ಯಾಸ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 25, 2025
- 10:36 am
ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ನಿಂಬೆ ನೀರು ಕುಡಿಯುವುದು ಒಳ್ಳೆಯದೇ… ಇಲ್ಲಿದೆ ತಜ್ಞರ ಅಭಿಪ್ರಾಯ
ಅಧಿಕ ರಕ್ತದೊತ್ತಡವು ಅನೇಕ ರೀತಿಯ ಗಂಭೀರ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಈ ರೀತಿಯ ಪರಿಸ್ಥಿತಿಯಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಅನೇಕರು ನಿಂಬೆ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ. ಈ ನಿಂಬೆಹಣ್ಣುಗಳು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳನ್ನು ಹೊಂದಿರುತ್ತವೆ, ಇದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಇದು ನಿಜವಾಗಿಯೂ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದೇ... ಈ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯವೇನು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 24, 2025
- 7:35 pm
ಚಳಿಗಾಲದಲ್ಲಿ ಹೃದಯಾಘಾತವಾಗಬಾರದು ಎಂದ್ರೆ ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ
ಈಗ ಚಳಿಗಾಲವಾದ್ದರಿಂದ, ಈ ಸಮಯದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ಅದರಲ್ಲಿಯೂ ಹೃದಯಾಘಾತ ಮತ್ತು ಹೃದಯ ವೈಫಲ್ಯದ ಅಪಾಯ ಹೆಚ್ಚಾಗಿ ಕಂಡುಬರುತ್ತದೆ. ಈ ರೀತಿಯ ಸಮಸ್ಯೆಯನ್ನು ತಡೆಯಲು ಮತ್ತು ಹೃದಯ ಸಂಬಂಧಿ ಕಾಯಿಲೆಗಳನ್ನು ಸಕಾಲಿಕವಾಗಿ ಪತ್ತೆಹಚ್ಚಲು ಕೆಲವು ಪರೀಕ್ಷೆಗಳನ್ನೂ ಮಾಡಿಸುವುದು ಬಹಳ ಮುಖ್ಯ. ಇದಕ್ಕಾಗಿ, ಡಾ. ವರುಣ್ ಬನ್ಸಾಲ್ ಮೂರು ಸಾಮಾನ್ಯ ಪರೀಕ್ಷೆಗಳ ಬಗ್ಗೆ ತಿಳಿಸಿದ್ದು ನೀವು ಕೂಡ ಈ ಪರೀಕ್ಷೆ ಮಾಡಿಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
- Preethi Bhat Gunavante
- Updated on: Dec 24, 2025
- 4:25 pm
ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಕೈ ಕಾಲು ಮರಗಟ್ಟುವಿಕೆಗೆ ನರದ ಸಮಸ್ಯೆ ಕಾರಣವೇ; ಈ ಬಗ್ಗೆ ತಜ್ಞರು ಏನನ್ನುತ್ತಾರೆ
ಚಳಿಗಾಲದಲ್ಲಿ, ಕೈ ಮತ್ತು ಕಾಲುಗಳಲ್ಲಿ ಮರಗಟ್ಟಿದ ಅನುಭವವಾಗುತ್ತಾ? ಇದಕ್ಕೆ ಚಳಿ ಕಾರಣವೋ ಅಥವಾ ಇದು ನರಗಳ ಸಮಸ್ಯೆಯ ಆರಂಭಿಕ ಲಕ್ಷಣವೋ ಎಂದು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಈ ಬಗ್ಗೆ ಡಾ. ಸುಭಾಷ್ ಗಿರಿ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು ಈ ಸಮಸ್ಯೆಗೆ ಕಾರಣವೇನು? ಈ ರೀತಿಯಾಗುವುದನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ತಿಳಿಸಿದ್ದಾರೆ. ನಿಮಗೂ ಈ ರೀತಿಯಾಗುತ್ತಿದ್ದು, ನಿರ್ಲಕ್ಷ್ಯ ಮಾಡುತ್ತಿದ್ದರೆ ಈ ಸ್ಟೋರಿಯಲ್ಲಿ ನೀಡಲಾದ ಸಲಹೆಗಳನ್ನು ಪಾಲಿಸಿ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಿರಿ.
- Preethi Bhat Gunavante
- Updated on: Dec 23, 2025
- 6:26 pm
ಊಟ ಮಾಡುವಾಗ, ಮಾಡಿದ ನಂತರದ ಈ ಕೆಲವು ತಪ್ಪುಗಳು ಗಂಭೀರ ಸಮಸ್ಯೆಯನ್ನು ಉಂಟುಮಾಡಬಹುದು
ಮುನುಷ್ಯನ ದೇಹಕ್ಕೆ ಬೆಳಗಿನ ಉಪಾಹಾರ ಎಷ್ಟು ಮುಖ್ಯವೋ, ರಾತ್ರಿ ಸೇವಿಸುವ ಆಹಾರವೂ ಅಷ್ಟೇ ಮುಖ್ಯವಾಗಿರುತ್ತದೆ. ರಾತ್ರಿ ಊಟ ಮಾಡುವಾಗ ಮತ್ತು ಮಾಡಿದ ನಂತರ ಮಾಡುವ ತಪ್ಪುಗಳೇ ಆರೋಗ್ಯಕ್ಕೆ ಹಾನಿಕಾರಕ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಆ ತಪ್ಪುಗಳು ಯಾವವು, ಇದರಿಂದ ದೇಹಕ್ಕಾಗುವ ತೊಂದರೆಗಳು ಯಾವವು, ಆರೋಗ್ಯ ಕಾಪಾಡಿಕೊಳ್ಳಲು ಯಾವ ರೀತಿ ಬದಲಾವಣೆ ಮಾಡಿಕೊಳ್ಳಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 23, 2025
- 4:25 pm
ಮೂತ್ರದ ಬಣ್ಣದಿಂದ ಕ್ಯಾನ್ಸರ್ ಪತ್ತೆ ಹಚ್ಚಬಹುದೇ? ಏನನ್ನುತ್ತಾರೆ ತಜ್ಞರು
ನೀವು ಕೂಡ ಪ್ರಾಸ್ಟೇಟ್ ಕ್ಯಾನ್ಸರ್ ಬಗ್ಗೆ ಕೇಳಿರಬಹುದು. ಪುರುಷ ಮತ್ತು ಮಹಿಳೆ ಇಬ್ಬರಲ್ಲಿಯೂ ಗುಲಾಬಿ ಅಥವಾ ಕೆಂಪು ಬಣ್ಣದ ಮೂತ್ರ (ಹೆಮಟುರಿಯಾ) ಕಂಡುಬರುವುದು ಆರೋಗ್ಯಕರ ಲಕ್ಷಣವಲ್ಲ. ಅದರಲ್ಲಿಯೂ ಪುರುಷರಲ್ಲಿ, ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳಲು ಹಲವು ಕಾರಣಗಳಿರುತ್ತದೆ, ಆದರೆ ಈ ಸಮಸ್ಯೆ ಪದೇ ಪದೇ ಕಂಡುಬಂದರೆ ಅದು ಸಾಮಾನ್ಯವಲ್ಲ. ಇದು ಗಂಭೀರ ಕ್ಯಾನ್ಸರ್ನ ಸಂಕೇತವಾಗಿರಬಹುದು. ಹಾಗಾದರೆ ಇದು ಯಾರ ಮೇಲೆ ಪರಿಣಾಮ ಬೀರುತ್ತದೆ, ಲಕ್ಷಣಗಳು ಹೇಗಿರುತ್ತವೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 23, 2025
- 3:36 pm
ನೀವು ಕೂಡ ಮುಖದವರೆಗೂ ಬ್ಲಾಂಕೆಟ್ ಹೊದ್ದು ಮಲಗ್ತೀರಾ ಈ ಅಭ್ಯಾಸ ಎಷ್ಟು ಡೇಂಜರ್ ನೋಡಿ!
ಅನೇಕರು ಚಳಿಯಿಂದ ರಕ್ಷಣೆ ಪಡೆಯಲು, ಮಲಗುವಾಗ ಕಂಬಳಿ ಅಥವಾ ಬೆಡ್ ಶಿಟ್ ಅನ್ನು ಮುಖದವರೆಗೆ ಹೊದ್ದು ಮಲಗುತ್ತಾರೆ. ಈ ಅಭ್ಯಾಸ ದೇಹವನ್ನು ಬೆಚ್ಚಗಿಡುತ್ತದೆಯಾದರೂ ಕೂಡ ಇದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ ಎಂದು ಸಂಶೋಧನೆಯಿಂದ ತಿಳಿದುಬಂದಿದೆ. ಹೌದು, ಇದು ನಮ್ಮ ಶ್ವಾಸಕೋಶಗಳಿಗೆ ತುಂಬಾ ಹಾನಿಕಾರಕವಾಗಿದೆ. ಅಷ್ಟೇ ಅಲ್ಲ, ಚರ್ಮದ ಆರೋಗ್ಯಕ್ಕೂ ಒಳ್ಳೆಯದಲ್ಲ ಎನ್ನಲಾಗುತ್ತದೆ. ಹಾಗಾದರೆ ಇದು ಆರೋಗ್ಯದ ಮೇಲೆ ಯಾವ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- Preethi Bhat Gunavante
- Updated on: Dec 20, 2025
- 3:38 pm