AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್​, ಗುಣವಂತೆ

Author - TV9 Kannada

preetibhat802@gmail.com

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow On:
ಊಟ ಮಾಡುವಾಗ ಬೆವರು ಬರುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಲಕ್ಷಣ?

ಊಟ ಮಾಡುವಾಗ ಬೆವರು ಬರುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಲಕ್ಷಣ?

ಊಟ ಮಾಡುತ್ತಿರುವಾಗ ಬೆವರು ಬರುವುದು ಸಾಮಾನ್ಯ. ಹವಾಮಾನ ಯಾವುದೇ ಇರಲಿ ಈ ರೀತಿಯಾಗುವುದು ಸಾಮಾನ್ಯ. ಆದರೆ ಒಬ್ಬ ವ್ಯಕ್ತಿ ಊಟ ಮಾಡುವಾಗ ಬೆವರುವುದಕ್ಕೆ ಕಾರಣವೇನು ಎಂಬುದನ್ನು ಎಂದಾದರೂ ಯೋಚಿಸಿದ್ದೀರಾ? ಇದು ಅನಾರೋಗ್ಯದ ಸಂಕೇತವೇ ಎಂಬ ಗೊಂದಲ ನಿಮಗೂ ಇದ್ದಲ್ಲಿ ಅಥವಾ ಈ ರೀತಿ ಅನುಭವ ನಿಮಗೂ ಆಗಿದ್ದಲ್ಲಿ ನೀವು ಈ ವಿಷಯಗಳ ಬಗ್ಗೆ ತಿಳಿದುಕೊಳ್ಳಲೇಬೇಕು. ಈ ವಿಷಯವಾಗಿ ತಜ್ಞರು ಹಂಚಿಕೊಂಡಿರುವ ಮಾಹಿತಿ ಇಲ್ಲಿದೆ.

World Cancer day: ಕ್ಯಾನ್ಸರ್ ರೋಗಕ್ಕೆ ಯಾವ ಅಂಶಗಳು ಕಾರಣವಾಗುತ್ತೆ ಗೊತ್ತಾ?

World Cancer day: ಕ್ಯಾನ್ಸರ್ ರೋಗಕ್ಕೆ ಯಾವ ಅಂಶಗಳು ಕಾರಣವಾಗುತ್ತೆ ಗೊತ್ತಾ?

ಫೆಬ್ರವರಿ 4 ರಂದು ವಿಶ್ವದಾದ್ಯಂತ ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತಿದೆ. ಜನರಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಅಷ್ಟು ಮಾತ್ರವಲ್ಲ, ಜನರಲ್ಲಿ ಈ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ತೆಗೆದು ಹಾಕಿ, ಕಾಯಿಲೆಗೆ ಯಾವ ರೀತಿಯ ಚಿಕಿತ್ಸೆಗಳು ಸಿಗುತ್ತವೆ ಎಂಬುದರ ಬಗ್ಗೆ ಅರಿವು ಮೂಡಿಸುವುದು ಮುಖ್ಯವಾಗುತ್ತದೆ. ಕ್ಯಾನ್ಸರ್ ರೋಗಕ್ಕೆ ಹಲವು ಅಂಶಗಳು ಕಾರಣವಾಗಿದ್ದರೂ ಕೂಡ ಅದನ್ನು ತಿಳಿದು ಈ ಮಹಾಮಾರಿ ಕಾಯಿಲೆಯನ್ನು ತಡೆಗಟ್ಟುವ ಬಗ್ಗೆ ತಿಳಿಯುವುದು ಈ ಸಮಯದಲ್ಲಿ ಬಹಳ ಮಹತ್ವದ್ದಾಗಿದೆ.

ಪದೇ ಪದೇ ಗಂಟಲು ನೋವು ಬರುವುದಕ್ಕೆ ಕಾರಣವೇನು? ಇದು ಯಾವ ರೋಗದ ಮುನ್ಸೂಚನೆ ತಿಳಿದುಕೊಳ್ಳಿ

ಪದೇ ಪದೇ ಗಂಟಲು ನೋವು ಬರುವುದಕ್ಕೆ ಕಾರಣವೇನು? ಇದು ಯಾವ ರೋಗದ ಮುನ್ಸೂಚನೆ ತಿಳಿದುಕೊಳ್ಳಿ

ಗಂಟಲು ನೋವನ್ನು ಗಂಭೀರವಾಗಿ ಪರಿಗಣಿಸುವುದು ತೀರಾ ಕಡಿಮೆ. ಆದರೆ ಆರೋಗ್ಯ ತಜ್ಞರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸಬಾರದು ಎಂದು ಹೇಳುತ್ತಾರೆ. ಏಕೆಂದರೆ ಅದು ಅನಾರೋಗ್ಯದ ಸಂಕೇತವಾಗಿರಬಹುದು. ಈ ಬಗ್ಗೆ ಡಾ. ರವಿ ಮಹಾರ್ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು, ಗಂಟಲು ನೋವು ಕಂಡುಬರುವುದಕ್ಕೆ ಕಾರಣವೇನು, ಈ ರೀತಿ ಸಮಸ್ಯೆ ಕಂಡು ಬಂದಾಗ ಅದನ್ನು ತಡೆಯಲು ಯಾವ ರೀತಿ ಸಲಹೆಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ವಿವರವಾದ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ಖರ್ಜೂರ ಅಥವಾ ಬಾದಾಮಿ; ಈ ಋತುಮಾನಕ್ಕೆ ಯಾವುದರ ಸೇವನೆ ಆರೋಗ್ಯಕರ?

ಖರ್ಜೂರ ಅಥವಾ ಬಾದಾಮಿ; ಈ ಋತುಮಾನಕ್ಕೆ ಯಾವುದರ ಸೇವನೆ ಆರೋಗ್ಯಕರ?

ಚಳಿಗಾಲದಲ್ಲಿ ಪದೇ ಪದೇ ಆರೋಗ್ಯ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಆದರೆ ದೇಹವನ್ನು ಅನಾರೋಗ್ಯದಿಂದ ದೂರವಿಟ್ಟುಕೊಳ್ಳಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ದೇಹವನ್ನು ಒಳಗಿನಿಂದ ಬೆಚ್ಚಗಿಡುವ ಆಹಾರ ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ನಿಯಮಿತವಾಗಿ ಖರ್ಜೂರ ಮತ್ತು ಬಾದಾಮಿಯಂತಹ ಒಣ ಹಣ್ಣುಗಳ ತಿನ್ನಿ ಎಂದು ಸಲಹೆ ನೀಡುತ್ತಾರೆ. ಇವೆರಡೂ ಆರೋಗ್ಯಕರ, ಆದರೆ ಅವುಗಳ ಪ್ರಯೋಜನಗಳು ವಿಭಿನ್ನವಾಗಿರುತ್ತದೆ. ಹಾಗಾದರೆ ಇವೆರಡರಲ್ಲಿ ಯಾವುದು ಒಳ್ಳೆಯದು, ಇವುಗಳ ಸೇವನೆಯಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ನಿಮ್ಮ ದೇಹದಲ್ಲಿ ಪ್ರೋಟೀನ್ ಕಡಿಮೆ ಇದೆ ಎಂಬುದನ್ನು ದೇಹ ನೀಡುವ ಈ 6 ಲಕ್ಷಣಗಳ ಮೂಲಕ ತಿಳಿಯಬಹುದು!

ನಿಮ್ಮ ದೇಹದಲ್ಲಿ ಪ್ರೋಟೀನ್ ಕಡಿಮೆ ಇದೆ ಎಂಬುದನ್ನು ದೇಹ ನೀಡುವ ಈ 6 ಲಕ್ಷಣಗಳ ಮೂಲಕ ತಿಳಿಯಬಹುದು!

ನಾವು ನಮ್ಮ ಕೆಲಸಗಳಲ್ಲಿ ಎಷ್ಟೇ ನಿರತರಾಗಿದ್ದರೂ ಕೂಡ, ನಮ್ಮ ದೇಹವು ಆಂತರಿಕವಾಗಿ ನಿರಂತರವಾಗಿ ತನ್ನನ್ನು ತಾನೇ ಸರಿಪಡಿಸಿಕೊಳ್ಳುತ್ತದೆ. ಈ ರೀತಿ ದುರಸ್ತಿ ಕೆಲಸಕ್ಕೆ ಅಗತ್ಯವಿರುವ ಎಲ್ಲವನ್ನೂ ನಾವು ಆಹಾರದ ರೂಪದಲ್ಲಿ ಒದಗಿಸಬೇಕಾಗುತ್ತದೆ. ಅವುಗಳಲ್ಲಿ ಅತ್ಯಂತ ಮುಖ್ಯವಾದದ್ದು ಪ್ರೋಟೀನ್. ದೇಹವನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ಪ್ರೋಟೀನ್ ಅಗತ್ಯವಿದೆ. ಆದರೆ ನಮ್ಮಲ್ಲಿ ಅನೇಕರು ಪ್ರೋಟೀನ್‌ಗಿಂತ ಕಾರ್ಬೋಹೈಡ್ರೇಟ್‌ಗಳು ಮತ್ತು ಕೊಬ್ಬಿನಿಂದ ಸಮೃದ್ಧವಾಗಿರುವ ಆಹಾರಗಳಿಗೆ ಆದ್ಯತೆ ನೀಡುತ್ತಾರೆ. ಹಾಗಾಗಿ ದೇಹದಲ್ಲಿ ಪ್ರೋಟೀನ್ ಕಡಿಮೆ ಆದಾಗ ಕಂಡುಬರುವ ಲಕ್ಷಣಗಳನ್ನು ಸರಿಯಾಗಿ ಗುರುತಿಸಿ ಆಹಾರಕ್ರಮಗಳನ್ನು ಬದಲಾಯಿಸಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ.

ಬಾಯಿಯ ಆರೋಗ್ಯಕ್ಕೂ ಹೃದಯಕ್ಕೂ ಸಂಬಂಧವಿದೆಯೇ; ಈ ಬಗ್ಗೆ ಮಾಹಿತಿ ನೀಡಿದ್ದಾರೆ ಡಾ. ಅನುಪಮಾ ವಿ. ಹೆಗ್ಡೆ

ಬಾಯಿಯ ಆರೋಗ್ಯಕ್ಕೂ ಹೃದಯಕ್ಕೂ ಸಂಬಂಧವಿದೆಯೇ; ಈ ಬಗ್ಗೆ ಮಾಹಿತಿ ನೀಡಿದ್ದಾರೆ ಡಾ. ಅನುಪಮಾ ವಿ. ಹೆಗ್ಡೆ

ಬಾಯಿ ಮತ್ತು ಹೃದಯಕ್ಕೂ ನಿಕಟ ಸಂಬಂಧವಿದೆ ಎಂಬುದು ಹಲವರಿಗೆ ತಿಳಿದಿಲ್ಲ. ಬಾಯಿಯ ನೈರ್ಮಲ್ಯ ಸರಿಯಾಗಿ ಇಲ್ಲದಿದ್ದರೆ ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಮಧುಮೇಹದಂತಹ ಇತರ ಆರೋಗ್ಯ ಸಮಸ್ಯೆಗಳು ಬರಲು ದಾರಿಯಾಗುತ್ತದೆ. ವಸಡಿನ ಸೋಂಕು, ಹಾನಿಕಾರಕ ರೋಗಾಣುಗಳು ಆಹಾರದ ಮೂಲಕ ದೇಹವನ್ನು ಪ್ರವೇಶಿಸುತ್ತದೆ. ಈ ರೋಗಾಣುಗಳು ನಂತರ ಹೃದಯರಕ್ತನಾಳದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಈ ವಿಷಯದ ಕುರಿತು ಬೆಂಗಳೂರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ಹೃದ್ರೋಗ ವಿಭಾಗದ ಹಿರಿಯ ಸಲಹೆಗಾರರಾಗಿರುವ ಡಾ. ಅನುಪಮಾ ವಿ. ಹೆಗ್ಡೆ ಅವರು ಮಾತನಾಡಿದ್ದು ಹೆಚ್ಚಿನ ಮಾಹಿತಿ ಪಡೆಯಲು ವಿಡಿಯೋ ನೋಡಿ.

ಗರ್ಭಾವಸ್ಥೆಯಲ್ಲಿ ಖಿನ್ನತೆ ಕಂಡುಬರುವುದಕ್ಕೆ ಕಾರಣವೇನು? ತಡೆಗಟ್ಟಲು ಏನು ಮಾಡಬಹುದು ತಿಳಿದುಕೊಳ್ಳಿ

ಗರ್ಭಾವಸ್ಥೆಯಲ್ಲಿ ಖಿನ್ನತೆ ಕಂಡುಬರುವುದಕ್ಕೆ ಕಾರಣವೇನು? ತಡೆಗಟ್ಟಲು ಏನು ಮಾಡಬಹುದು ತಿಳಿದುಕೊಳ್ಳಿ

ಗರ್ಭಾವಸ್ಥೆಯಲ್ಲಿ ಮಹಿಳೆಯರಲ್ಲಿ ಕಂಡುಬರುವ ಮಾನಸಿಕ ಒತ್ತಡ ಹುಟ್ಟಲಿರುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆ. ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ಪ್ರಕಟಿಸಿದ ಸಂಶೋಧನೆಯಲ್ಲಿ ಈ ಮಾಹಿತಿ ಬೆಳಕಿಗೆ ಬಂದಿದ್ದು, ಗರ್ಭಾವಸ್ಥೆಯಲ್ಲಿ ಮಾನಸಿಕ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಹಾಗಾದರೆ ಗರ್ಭಾವಸ್ಥೆಯಲ್ಲಿ ಖಿನ್ನತೆ ಉಂಟಾಗುವುದಕ್ಕೆ ಕಾರಣವೇನು, ಖಿನ್ನತೆಯ ಲಕ್ಷಣಗಳು ಹೇಗಿರುತ್ತದೆ, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪದೇ ಪದೇ ಸೀನು ಬರುತ್ತಾ? ಇದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ?

ಪದೇ ಪದೇ ಸೀನು ಬರುತ್ತಾ? ಇದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ?

ಕಳೆದ ಕೆಲವು ತಿಂಗಳುಗಳಿಂದ, ದೇಶದ ಹಲವಾರು ರಾಜ್ಯಗಳಲ್ಲಿ ಹವಾಮಾನ ಬದಲಾಗುತ್ತಿದೆ. ಇಂತಹ ಸಮಯದಲ್ಲಿ ಅನೇಕರ ಆರೋಗ್ಯ ಹದಗೆಟ್ಟಿದೆ. ನೆಗಡಿ, ಜ್ವರ ಪದೇ ಪದೇ ಸೀನುವುದು ಹೀಗೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿದೆ. ಹಾಗಾದರೆ ಈ ರೀತಿ ಆಗುತ್ತಿರುವುದಕ್ಕೆ ಕಾರಣವೇನು? ಇದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ? ಈ ಬಗ್ಗೆ ಆರೋಗ್ಯ ತಜ್ಞರು ಏನು ಹೇಳುತ್ತಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕಿವಿಯಲ್ಲಿನ ವಾಕ್ಸ್ ತೆಗೆಯಲು ಸರಿಯಾದ ವಿಧಾನ ಯಾವುದು? ಆರೋಗ್ಯ ತಜ್ಞರು ಈ ಬಗ್ಗೆ ಏನ್ ಹೇಳ್ತಾರೆ ನೋಡಿ

ಕಿವಿಯಲ್ಲಿನ ವಾಕ್ಸ್ ತೆಗೆಯಲು ಸರಿಯಾದ ವಿಧಾನ ಯಾವುದು? ಆರೋಗ್ಯ ತಜ್ಞರು ಈ ಬಗ್ಗೆ ಏನ್ ಹೇಳ್ತಾರೆ ನೋಡಿ

ಕಿವಿಯ ಮೇಣವನ್ನು ಬೆರಳಿನಿಂದ ಅಥವಾ ಇನ್ನಾವುದೇ ವಸ್ತುವಿನಿಂದ ತೆಗೆಯುವುದು ಸರಿಯೇ? ಕಿವಿಯಲ್ಲಿ ಮೇಣ ಏಕೆ ಸಂಗ್ರಹವಾಗುತ್ತದೆ? ಬೀದಿ ಬದಿಯ ಕ್ಲೀನರ್‌ಗಳಿಂದ ನಿಮ್ಮ ಕಿವಿಗಳನ್ನು ಸ್ವಚ್ಛಗೊಳಿಸುವುದು ಎಷ್ಟು ಸೂಕ್ತ? ಎಂಬುದರ ಬಗ್ಗೆ ಡಾ. ರವಿ ಮೆಹ್ರಾ ಕೆಲವು ಮಾಹಿತಿ ಹಂಚಿಕೊಂಡಿದ್ದು ಪ್ರತಿಯೊಬ್ಬರೂ ಕೂಡ ಈ ವಿಷಯಗಳ ಕುರಿತು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ. ಈ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಬ್ರೊಕೊಲಿ vs ಹೂಕೋಸು vs ಎಲೆಕೋಸು: ಈ ಮೂರರಲ್ಲಿ ಆರೋಗ್ಯಕ್ಕೆ ಯಾವುದು ಒಳ್ಳೆಯದು?

ಬ್ರೊಕೊಲಿ vs ಹೂಕೋಸು vs ಎಲೆಕೋಸು: ಈ ಮೂರರಲ್ಲಿ ಆರೋಗ್ಯಕ್ಕೆ ಯಾವುದು ಒಳ್ಳೆಯದು?

ತರಕಾರಿಗಳು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯ. ಅವು ಜೀವಸತ್ವ, ಖನಿಜ ಮತ್ತು ನಾರಿನ ಶಕ್ತಿ ಕೇಂದ್ರಗಳಾಗಿವೆ. ಇಂತಹ ತರಕಾರಿಗಳಲ್ಲಿ ಹೂಕೋಸು, ಎಲೆಕೋಸು ಮತ್ತು ಬ್ರೊಕೊಲಿ ಕೂಡ ಸೇರಿಕೊಳ್ಳುತ್ತದೆ. ಇದು ಒಂದೇ ಕುಟುಂಬಕ್ಕೆ ಸೇರಿದ್ದು ಪೌಷ್ಟಿಕಾಂಶಗಳ ಗಣಿಯಾಗಿದೆ. ಆದರೂ ಕೂಡ ಇವುಗಳಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ ಎಂಬ ಅನುಮಾನ ಮೂಡುತ್ತದೆ. ಹಾಗಾದರೆ, ಆರೋಗ್ಯ ತಜ್ಞರ ಪ್ರಕಾರ ಇವುಗಳಲ್ಲಿ ಯಾವುದು ಆರೋಗ್ಯಕ್ಕೆ ಉತ್ತಮ, ಇವುಗಳ ಸೇವನೆಯಿಂದ ಸಿಗುವ ಲಾಭಗಳೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪುರುಷರು ಮಹಿಳೆಯರಿಗಿಂತ ಹೆಚ್ಚು ಗೊರಕೆ ಹೊಡೆಯುವುದಕ್ಕೆ ಕಾರಣವೇನು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಪುರುಷರು ಮಹಿಳೆಯರಿಗಿಂತ ಹೆಚ್ಚು ಗೊರಕೆ ಹೊಡೆಯುವುದಕ್ಕೆ ಕಾರಣವೇನು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಗೊರಕೆ ಸಾಮಾನ್ಯ ಸಮಸ್ಯೆಯಂತೆ ಕಾಣಿಸಬಹುದು, ಆದರೆ ಅದನ್ನು ಹಗುರವಾಗಿ ಪರಿಗಣಿಸಬಾರದು. ಇದು ದೇಹದಲ್ಲಿನ ಯಾವುದೋ ಅನಾರೋಗ್ಯದ ಸಂಕೇತವೂ ಆಗಿರಬಹುದು. ಅದರಲ್ಲಿಯೂ ಈ ಸಮಸ್ಯೆ ಮಹಿಳೆಯರಿಗಿಂತ ಪುರುಷರಲ್ಲಿ ಹೆಚ್ಚಾಗಿ ಕಂಡುಬರುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದಕ್ಕೆ ಕಾರಣವೇನು, ಯಾಕೆ ಪುರುಷರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ, ಇದನ್ನು ತಡೆಗಟ್ಟಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಕ್ಕಳ ಕಿವಿಗೆ ಎಣ್ಣೆ ಹಾಕುವ ಅಭ್ಯಾಸ ನಿಮಗಿದ್ಯಾ, ಇದರಿಂದ ಪ್ರಯೋಜನ ಸಿಗುತ್ತಾ? ಸ್ಟೋರಿಯಲ್ಲಿದೆ ಮಾಹಿತಿ

ಮಕ್ಕಳ ಕಿವಿಗೆ ಎಣ್ಣೆ ಹಾಕುವ ಅಭ್ಯಾಸ ನಿಮಗಿದ್ಯಾ, ಇದರಿಂದ ಪ್ರಯೋಜನ ಸಿಗುತ್ತಾ? ಸ್ಟೋರಿಯಲ್ಲಿದೆ ಮಾಹಿತಿ

ಮನೆಗಳಲ್ಲಿ ಮಕ್ಕಳನ್ನು ಕೆಲವು ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಲು ಅನೇಕ ರೀತಿಯ ಮನೆಮದ್ದುಗಳನ್ನು ಉಪಯೋಗ ಮಾಡುತ್ತಾರೆ. ಇವುಗಳಲ್ಲಿ ಕೆಲವು ಪರಿಣಾಮಕಾರಿಯಾಗಿದ್ದರೂ ಕೂಡ ಇನ್ನು ಕೆಲವು ಮಕ್ಕಳ ಆರೋಗ್ಯವನ್ನೇ ಹಾಳು ಮಾಡಬಹುದು. ಇಂತವುಗಳಲ್ಲಿ ಮಗುವಿನ ಕಿವಿಗೆ ಎಣ್ಣೆ ಹಾಕುವ ಪದ್ಧತಿಯೂ ಒಂದು. ಆದರೆ ಇದು ನಿಜವಾಗಿಯೂ ಸರಿಯೇ? ಈ ವಿಧಾನವನ್ನು ಬಹಳ ಸಾಮಾನ್ಯ ಎಂದು ನಾವೆಲ್ಲರೂ ತಿಳಿದುಕೊಂಡಿದ್ದೇವೆ ಆದರೆ, ಇದು ನಿಜವಾಗಿಯೂ ಕಿವಿ ನೋವನ್ನು ಕಡಿಮೆ ಮಾಡುತ್ತದೆಯೇ, ಇದರಿಂದ ಯಾವ ರೀತಿಯ ಪ್ರಯೋಜನಗಳಿವೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.